Homeಮುಖಪುಟ"ಪ್ರತಿಯೊಬ್ಬ ನಟಿಯರದ್ದೂ ಒಂದೊಂದು ಕಥೆಯಿದೆ, ಅದು ಎಲ್ಲಾ ನಟರಿಗೆ ಗೊತ್ತಿದೆ": ರಾಧಿಕಾ ಶರತ್‌ ಕುಮಾರ್

“ಪ್ರತಿಯೊಬ್ಬ ನಟಿಯರದ್ದೂ ಒಂದೊಂದು ಕಥೆಯಿದೆ, ಅದು ಎಲ್ಲಾ ನಟರಿಗೆ ಗೊತ್ತಿದೆ”: ರಾಧಿಕಾ ಶರತ್‌ ಕುಮಾರ್

ತಮಿಳು ಸಿನಿರಂಗದಲ್ಲಿ ಮಹಿಳೆಯರ ಸಮಸ್ಯೆಗಳ ಕುರಿತು ಅಧ್ಯಯನಕ್ಕೆ ಆಗ್ರಹಿಸಿದ ಹಿರಿಯ ನಟಿ

- Advertisement -
- Advertisement -

ಮಲಯಾಳಂ ಸಿನಿಮಾ ರಂಗದಲ್ಲಿ ನಡೆದ ಮಹಿಳೆಯರ ಮೇಲಿನ ಲೈಂಗಿಕ ಮತ್ತು ಇತರ ದೌರ್ಜನ್ಯಗಳನ್ನು ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿ ಬಹಿರಂಗಪಡಿಸಿದ ಬಳಿಕ ತಮಿಳು, ತೆಲುಗು ಮತ್ತು ಕನ್ನಡ ಸಿನಿಮಾ ರಂಗದ ಕುರಿತು ಅಂತಹದ್ದೇ ವರದಿ ತಯಾರಿಸಬೇಕು ಎಂಬ ಒತ್ತಾಯಗಳು ಹೆಚ್ಚಾಗಿದೆ.

ಹೇಮಾ ಸಮಿತಿ ವರದಿಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದ ತಮಿಳು ನಟಿ ಕುಟ್ಟಿ ಪದ್ಮಿನಿ, ‘ತಮಿಳು ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳ ಮಿತಿ ಮೀರಿದೆ’ ಎಂದಿದ್ದರು. ಇದೀಗ ತಮಿಳಿನ ಮತ್ತೊಬ್ಬರು ಹಿರಿಯ ನಟಿ ರಾಧಿಕಾ ಶರತ್‌ಕುಮಾರ್ ಅವರು ಮಹಿಳೆಯರ ಸಮಸ್ಯೆಗಳ ಕುರಿತು ಮೌನ ಮುರಿಯುವಂತೆ ತನ್ನ ಸಹೋದ್ಯೋಗಿಗಳಿಗೆ ಆಗ್ರಹಿಸಿದ್ದಾರೆ.

ಹೇಮಾ ಸಮಿತಿಯ ವರದಿಯ ಕುರಿತು ನನಗೆ ಯಾವುದೇ ಮಾಹಿತಿಯಿಲ್ಲ ಎಂಬ ನಟ ರಜನಿಕಾಂತ್ ಅವರ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿರುವ ರಾಧಿಕಾ “ಅವರು ಗೊತ್ತಿಲ್ಲ ಅಂದರೆ ಗೊತ್ತಿಲ್ಲ, ಅಷ್ಟೇ” ಎಂದಿದ್ದಾರೆ.

“ಸಿನಿಮಾ ರಂಗದ ಪುರುಷರೇ ನಿಮ್ಮ ಮೌನ ಸರಿಯಲ್ಲ. ನಾವ್ಯಾಕೆ ಮಾತನಾಡಬೇಕು? ಏನು ಮಾತನಾಡಬೇಕು? ಎಂದು ನಿಮಗನಿಸಿದ್ದರೆ, ನಾನು ಹೇಳುತ್ತೇನೆ ಇದು ಅಷ್ಟೊಂದು ಕಠಿಣ ವಿಷಯವಲ್ಲ. “ನಾನು ಮಹಿಳೆಯರ ಸುರಕ್ಷತೆಗೆ ಎಲ್ಲಾ ಸಹಕಾರ ನೀಡುತ್ತೇನೆ” ಎಂಬ ಒಂದು ಮಾತು ನೀವು ಹೇಳಿದರೆ ಸಾಕು, ಅದು ಸಂತ್ರಸ್ತ ಮಹಿಳೆಯರಿಗೆ ದೊಡ್ಡ ಸಾಂತ್ವನ ನೀಡುತ್ತದೆ, ಬಹುಶ ನಿಮಗೆ ಗೊತ್ತಿಲ್ಲ ಕಿರಿಯ ಕಲಾವಿದರು ಸೇರಿದಂತೆ” ಎಂದು ರಾಧಿಕಾ ಹೇಳಿದ್ದಾರೆ.

“ಈ ವ್ಯವಸ್ಥೆಯಲ್ಲಿ ಯಾವ ನಟಿಗೆ ಸಮಸ್ಯೆಯಾಗಿದೆ ಎಂದು ಎಲ್ಲಾ ನಟರಿಗೆ ಗೊತ್ತಿದೆ. ಕಲಾವಿದರು, ನಿರ್ದೇಶಕರಿಗೂ ಗೊತ್ತಿದೆ. ಈ ಬಗ್ಗೆ ಪುರುಷರು ಒಗ್ಗಟ್ಟಿನಿಂದ ಒಂದು ವಾಕ್ಯ ಹೇಳಿದರೆ, ಅದು ಎಲ್ಲಾ ಮಹಿಳೆಯರಿಗೆ ಆಶ್ವಾಸನೆ ನೀಡುತ್ತದೆ” ಎಂದು ರಾಧಿಕಾರ ತಿಳಿಸಿದ್ದಾರೆ.

ತಮಿಳು ಚಿತ್ರರಂಗದ ಅನೇಕ ನಟರು ರಾಜಕೀಯದಲ್ಲಿ ಆಕಾಂಕ್ಷೆಗಳನ್ನು ಹೊಂದಿದ್ದಾರೆ ಎಂದಿರುವ ರಾಧಿಕಾ ಅವರು “ನೀವೆಲ್ಲರೂ ಜನರ ಪರವಾಗಿ ನಿಂತು ಮಾತನಾಡಲು ಹಂಬಲಿಸುತ್ತಿದ್ದೀರಿ, ಅಲ್ಲವೇ? ನಿಮ್ಮ ಮಹಿಳಾ ಸಹೋದ್ಯೋಗಿಗಳ ಪರವಾಗಿ ನೀವು ಏಕೆ ಮಾತನಾಡುವುದಿಲ್ಲ? ಎಂದು ಪ್ರಶ್ನಿಸಿದ್ದಾರೆ.

ಚಿತ್ರೋದ್ಯಮದಲ್ಲಿನ ಪರಿಸ್ಥಿತಿಯು ‘ತೋರಿಕೆಗೆ’ ಸುಧಾರಿಸಿದೆ ಎಂದಿರುವ ರಾಧಿಕಾ ಅವರು, “ಮೊದಲಿನಂತೆ ಸಮಸ್ಯೆಗಳಿಲ್ಲ ಎಂದು ನಿಮಗೆ ಅನಿಸುತ್ತದೆ. ಆದರೆ, ಪರಿಸ್ಥಿತಿ ಶೋಚನೀಯವಾಗಿದೆ. ವಿಶೇಷವಾಗಿ ನೃತ್ಯಗಾರರು ಮತ್ತು ಪಾತ್ರ ಕಲಾವಿದರದ್ದು”ಎಂದಿದ್ದಾರೆ.

“ನಿರ್ಮಾಪಕರು ಮಹಿಳಾ ಕಲಾವಿದರ ಬಗ್ಗೆ ಗಮನ ಹರಿಸಬೇಕು. ಅವರಿಗೆ ಕೆಟ್ಟ ಅನುಭವವಾದರೆ ಬಂದು ದೂರು ದಾಖಲಿಸಲು ಹೇಳಬೇಕು. ಒಂದೈದು ವರ್ಷಗಳ ಬಳಿಕ ತಡವಾಗಿ ದೂರು ಕೊಟ್ಟರೆ, ಇಷ್ಟು ವರ್ಷ ಏಕೆ ತಡ ಮಾಡಿದ್ರು, ಮೊದಲೇ ಏಕೆ ದೂರು ನೀಡಿಲ್ಲ? ಎಂಬ ಸಾಮಾನ್ಯ ಪ್ರಶ್ನೆಯನ್ನು ಪುರುಷರು ಕೇಳುತ್ತಾರೆ” ಎಂದು ರಾಧಿಕಾ ಹೇಳಿದ್ದಾರೆ.

“ಹೆಣ್ಣಿನ ನೋವು ಯಾರಿಗೆ ಅರ್ಥವಾಗುತ್ತದೆ? ಆ ಐದು ವರ್ಷಗಳಲ್ಲಿ ಅವರು ಅನುಭವಿಸಿದ ನೋವು, ಕುಟುಂಬ ನಡೆಸುವ ಜವಾಬ್ದಾರಿಯನ್ನು ಯಾರು ಹೊತ್ತುಕೊಳ್ಳುತಾರೆ? ಸಿನಿಮಾ ರಂಗ ಮಾತ್ರವಲ್ಲ, ಮನೆ ಕೆಲಸದವರು, ಐಟಿ ವೃತ್ತಿಪರರು ಅಥವಾ ಉನ್ನತ ಬಾಣಸಿಗರು ಸೇರಿದಂತೆ ಎಲ್ಲಾ ಕೆಲಸದ ಸ್ಥಳಗಳಲ್ಲಿ ಮಹಿಳೆಯರು ಸುರಕ್ಷತೆಯನ್ನು ಹೊಂದಿರಬೇಕು” ಎಂದಿದ್ದಾರೆ.

“ಅನೇಕ ನಟರು ತಮ್ಮ ಮಾತುಗಳನ್ನು ತಪ್ಪಾಗಿ ಉಲ್ಲೇಖಿಸಬಹುದು ಅಥವಾ ಹೆಡ್‌ಲೈನ್‌ಗಾಗಿ ತಿರುಚಬಹುದು ಎಂಬ ಭಯದಿಂದ ಮಾಧ್ಯಮಗಳೊಂದಿಗೆ ಮಾತನಾಡಲು ಹಿಂಜರಿಯುತ್ತಾರೆ” ಎಂದು ರಾಧಿಕಾ ಹೇಳಿದ್ದಾರೆ.

ಕೆಲ ದಿನಗಳ ಹಿಂದೆ ಮಲಯಾಳಂ ಸಿನಿಮಾ ರಂಗದ ಹೇಮಾ ಸಮಿತಿಯ ವರದಿ ಕುರಿತು ಮಾತನಾಡಿದ್ದ ರಾಧಿಕಾ ಅವರು, “ಕ್ಯಾರವ್ಯಾನ್‌ಗಳಲ್ಲಿ ಹಿಡನ್‌ ಕ್ಯಾಮರಾ ಇಟ್ಟು ಮಹಿಳಾ ಕಲಾವಿದರು ಬಟ್ಟೆ ಬದಲಾಯಿಸುವ ದೃಶ್ಯ ಸೆರೆ ಹಿಡಿಯುತ್ತಿದ್ದರು” ಎಂಬ ಮಲಯಾಳಂ ಸಿನಿಮಾ ಸೆಟ್‌ನ ಕಹಿ ಅನುಭ ಹಂಚಿಕೊಂಡಿದ್ದರು.

ಚಲನಚಿತ್ರ ಸೆಟ್‌ಗಳಲ್ಲಿ ಮಹಿಳಾ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕಾರ್ಪೋರೇಟ್‌ ಕಂಪನಿಗಳಂತೆ ಕಾನೂನು ಜಾರಿ ವೃತ್ತಿಪರರನ್ನು ಒಳಗೊಂಡಿರುವ ಸಮಿತಿ ರಚಿಸಬೇಕು. ಮಹಿಳೆಯರು ಅಸಹಾಯಕರಲ್ಲ, ಬಲಿಷ್ಠರು. ಅವರಿಗೆ ಕೆಲಸದ ಸ್ಥಳದಲ್ಲಿ ರಕ್ಷಣೆ ಒಗಿಸಬೇಕು ಎಂದು ರಾಧಿಕಾ ಆಗ್ರಹಿಸಿದ್ದಾರೆ.

ತಮಿಳು ಸಿನಿಮಾ ರಂಗದಲ್ಲಿ ಮಹಿಳೆಯರು ಲೈಂಗಿಕ ದೌರ್ಜನ್ಯ ಎದುರಿಸುತ್ತಿದ್ದಾರೆ ಎಂಬ ವಿಷಯದಲ್ಲಿ ಮಿಶ್ರ ಅಭಿಪ್ರಾಯವಿದೆ. ಇತ್ತೀಚೆಗೆ ಹೇಮಾ ಸಮಿತಿಯ ವರದಿ ಕುರಿತು ಪ್ರತಿಕ್ರಿಯಿಸಿದ್ದ ನಟ ಜೀವ ಅವರು, “ತಮಿಳು ಇಂಡಸ್ಟ್ರಿಯಲ್ಲಿ ಆ ರೀತಿಯ ಸಮಸ್ಯೆಗಳಿಲ್ಲ, ಮಲಯಾಳಂನಲ್ಲಿ ಮಾತ್ರ ಇದೆ ಎಂದಿದ್ದರು. ಇದೇ ವೇಳೆ ತಮಿಳು ಚಿತ್ರರಂಗದ ಕುರಿತು ಅಧ್ಯಯನ ನಡೆಸಲು ಸಮಿತಿ ರಚಿಸಬೇಕು ಎಂದು ನಟ ವಿಶಾಲ್ ಹೇಳಿದ್ದರು.

ತಮಿಳು ಚಿತ್ರರಂಗದ ಸ್ಟಾರ್ ನಟ ರಜನಿಕಾಂತ್ ಅವರು ಹೇಮಾ ಸಮಿತಿ ವರದಿಯ ಬಗ್ಗೆ ಗೊತ್ತಿಲ್ಲ ಎಂಬ ಹೇಳಿಕೆ ನೀಡಿದ್ದರು.

ತಮ್ಮ ಕಿರುಕುಳದ ಅನುಭವಗಳ ಬಗ್ಗೆ ಧ್ವನಿಯೆತ್ತಿರುವ ಗಾಯಕಿ ಚಿನ್ಮಯಿ ಶ್ರೀಪಾದ ಅವರು ತಮಿಳು ಚಿತ್ರರಂಗದಲ್ಲಿ ನಡೆಯುತ್ತಿರುವ ಸಮಸ್ಯೆಗಳನ್ನು ಸಾರ್ವಜನಿಕರಿಗೆ ತಿಳಿಸಲು. ಆ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದರು. ಹಲವಾರು ಮಹಿಳೆಯರಿಂದ ಕಿರುಕುಳದ ಆರೋಪ ಹೊತ್ತಿರುವ ಪ್ರಮುಖ ಗೀತರಚನೆಕಾರರು ಉದ್ಯಮದ ಪ್ರಬಲ ವ್ಯಕ್ತಿಗಳಿಂದ ರಕ್ಷಿಸಲ್ಪಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದರು.

Courtesy : indianexpress.com

ಇದನ್ನೂ ಓದಿ : ಹಿಂಸಾತ್ಮಕ ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುವ ಸ್ವಘೋಷಿತ ಗೋರಕ್ಷಕ ರಾಕಿ ರಾಣಾ : ಕ್ರಮಕ್ಕೆ ಆಗ್ರಹ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...