Homeಮುಖಪುಟ'ಗೋರಕ್ಷಕರಿಗೆ ಗುಂಡು ಹಾರಿಸುವ ಹಕ್ಕು ನೀಡಿದ್ಯಾರು..'; ಮೃತ ವಿದ್ಯಾರ್ಥಿ ತಂದೆಯ ಪ್ರಶ್ನೆ

‘ಗೋರಕ್ಷಕರಿಗೆ ಗುಂಡು ಹಾರಿಸುವ ಹಕ್ಕು ನೀಡಿದ್ಯಾರು..’; ಮೃತ ವಿದ್ಯಾರ್ಥಿ ತಂದೆಯ ಪ್ರಶ್ನೆ

- Advertisement -
- Advertisement -

ಫರಿದಾಬಾದ್‌ನಲ್ಲಿ ಗೋರಕ್ಷಕರು ಗುಂಡಿಕ್ಕಿ ಕೊಂದ ಹದಿಹರೆಯದ ಆರ್ಯನ್ ಮಿಶ್ರಾ ಅವರ ತಂದೆ, ಸಾವಿನ ಬಗ್ಗೆ ಹಲವು ಅನುಮಾನಗಳನ್ನು ವ್ಯಕ್ತಪಡಿಸಿದ್ದು, “ವಾಹನದಲ್ಲಿದ್ದ ಇತರ ಪ್ರಯಾಣಿಕರು ದಾಳಿಯಲ್ಲಿ ಗಾಯಗೊಂಡಿಲ್ಲ ಏಕೆ ಎಂದು ಪ್ರಶ್ನಿಸಿರುವ ಅವರು, ಗೋರಕ್ಷಕರಿಗೆ ಗುಂಡು ಹಾರಿಸುವ ಹಕ್ಕು ನೀಡಿದವರು ಯಾರು” ಎಂದು ಕೇಳಿದ್ದಾರೆ.

19 ವರ್ಷದ ಆರ್ಯನ್ ಮಿಶ್ರಾ ಆಗಸ್ಟ್ 23 ರ ಮಧ್ಯರಾತ್ರಿಯ ಸುಮಾರಿಗೆ ಹೆದ್ದಾರಿಯಲ್ಲಿ ಗುಂಡಿಕ್ಕಿ ಕೊಲ್ಲಲ್ಪಟ್ಟರು. ಸೌರಭ್, ಅನಿಲ್ ಕೌಶಿಕ್, ವರುಣ್, ಕೃಷ್ಣ ಮತ್ತು ಆದೇಶ್ ಎಂಬ ಸ್ವಯಂ ಘೋಷಿತ ಗೋ ರಕ್ಷಕರು ಕಾರನ್ನು ಹಿಂಬಾಲಿಸಿ ಗುಂಡು ಹಾರಿಸಿದ್ದಾರೆ ಎಂದು ಆರೋಪಿಸಿ ಆಗಸ್ಟ್ 28 ರಂದು ಬಂಧಿಸಲಾಯಿತು.

“ಫರಿದಾಬಾದ್‌ನಲ್ಲಿ ನನಗೆ ಏನೂ ಉಳಿದಿಲ್ಲದ ಕಾರಣ ಐದು ಜನರ ಬಂಧನದಿಂದ ನಾನು ತೃಪ್ತಿ ಹೊಂದಿದ್ದೇನೆ. ನಾನು ನನ್ನ ಸ್ವಂತ ಸ್ಥಳಕ್ಕೆ ಮರಳಲು ಬಯಸುತ್ತೇನೆ. ಆದರೆ ಜೊತೆಯಲ್ಲಿದ್ದವರು ಮಾತ್ರ ಉತ್ತರಿಸಬಹುದಾದ ಹಲವು ಪ್ರಶ್ನೆಗಳಿವೆ. ನನ್ನ ಮಗನನ್ನು ಆ ಕಡೆಗೆ ಕಾರಿನಲ್ಲಿ ಆ ಕಡೆಗೆ ಕರೆದೊಯ್ದಿದ್ಯಾಕೆ” ಎಂದು ಪ್ರಶ್ನಿಸಿದ್ದಾರೆ.

ತನ್ನ ಮಗನ ಮೇಲೆ ಗೋರಕ್ಷಕರು ನಿಜವಾಗಿಯೂ ಗುಂಡು ಹಾರಿಸಿದ್ದಾರೆಯೇ ಎಂದು ಪ್ರಶ್ನಿಸಿದ ಮಿಶ್ರಾ, “ಅವರಿಗೆ ಆ ಹಕ್ಕು ನೀಡಿದವರು ಯಾರು” ಎಂದಿದ್ದಾರೆ.

“ನನ್ನ ಮಗನನ್ನು ದನ ಕಳ್ಳಸಾಗಣೆದಾರ ಎಂದು ತಪ್ಪಾಗಿ ಭಾವಿಸಿ ಕೊಲ್ಲಲಾಗಿದೆ ಎಂದು ಅನಿಲ್ ಕೌಶಿಕ್ ಪೊಲೀಸರಿಗೆ ತಿಳಿಸಿದ್ದಾರೆ; ಅವನು ಹೇಳಿದ್ದು ಸರಿಯಿದ್ದರೆ, ಗೋರಕ್ಷಕರಿಗೆ ಯಾರನ್ನಾದರೂ ಗುಂಡು ಹಾರಿಸುವ ಹಕ್ಕನ್ನು ನೀಡಿದವರು ಯಾರು? ನನ್ನ ಮಗ ಹಿಂತಿರುಗುವುದಿಲ್ಲ. ಆದರೆ, ಈ ವಿಷಯದ ಕುರಿತು ಗಂಭೀರವಾಗಿ ತನಿಖೆ ನಡೆಸುವುದು ಅಗತ್ಯವಿದೆ” ಎಂದರು.

ಆರ್ಯನ್ ಅವರ ಸಹೋದರ ಹತ್ಯೆಯಲ್ಲಿ ನ್ಯಾಯ ಕೇಳಲು “ನ್ಯಾಯ್” ಎಂಬ ವಾಟ್ಸಾಪ್ ಗುಂಪನ್ನು ಪ್ರಾರಂಭಿಸಿದ್ದಾರೆ. ಮಂಗಳವಾರ ರಾತ್ರಿ ರಚಿಸಲಾದ ಗುಂಪಿಗೆ 1,000 ಕ್ಕೂ ಹೆಚ್ಚು ಜನರು ಸೇರಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ಆಗಸ್ಟ್ 23 ರ ರಾತ್ರಿ ಎರಡು ಎಸ್‌ಯುವಿಗಳನ್ನು ಚಾಲನೆ ಮಾಡುವ ಕೆಲವು ಶಂಕಿತ ಜಾನುವಾರು ಕಳ್ಳಸಾಗಣೆದಾರರು ನಗರದಲ್ಲಿ ವಿಹಾರ ನಡೆಸುತ್ತಿರುವ ಬಗ್ಗೆ ತಮಗೆ ಮಾಹಿತಿ ಸಿಕ್ಕಿತ್ತು ಎಂದು ಆರೋಪಿಗಳು ವಿಚಾರಣೆಯ ಸಮಯದಲ್ಲಿ ಹೇಳಿದ್ದಾರೆ.

ಅವರು ಆರ್ಯನ್ ಮತ್ತು ಅವರ ಸ್ನೇಹಿತರಾದ ಶಾಂಕಿ, ಹರ್ಷಿತ್ ಅವರನ್ನು ಜಾನುವಾರು ಕಳ್ಳಸಾಗಣೆದಾರರು ಎಂದು ತಪ್ಪಾಗಿ ಗ್ರಹಿಸಿದರು. ದೆಹಲಿ-ಆಗ್ರಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಗಧಪುರಿ ಟೋಲ್ ಬಳಿ ಸುಮಾರು 30 ಕಿಲೋಮೀಟರ್ ಅವರ ಕಾರನ್ನು ಹಿಂಬಾಲಿಸಿದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಅವರು ತಮ್ಮ ಕಾರನ್ನು ನಿಲ್ಲಿಸಲು ಹುಡುಗ ಮತ್ತು ಅವನ ಸ್ನೇಹಿತರನ್ನು ಕೇಳಿದಾಗ, ಚಾಲಕನು ವೇಗವಾಗಿ ಓಡಿಸಲು ಪ್ರಾರಂಭಿಸಿದನು, ಅದನ್ನು ಅನುಸರಿಸಿ ಅವರು ಗುಂಡು ಹಾರಿಸಿದರು ಮತ್ತು ಪಲ್ವಾಲ್‌ನ ಗಧಪುರಿ ಟೋಲ್ ಬಳಿ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದರು.

ಪೊಲೀಸರು ಆಗಸ್ಟ್ 28 ರಂದು ಐವರನ್ನು ಬಂಧಿಸಿ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದಾರೆ ಎಂದು ಸಹಾಯಕ ಪೊಲೀಸ್ ಕಮಿಷನರ್ (ಅಪರಾಧ) ಅಮನ್ ಯಾದವ್ ಮಂಗಳವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅಪರಾಧ ವಿಭಾಗದ ಡಿಸಿಪಿ ಹೇಮೇಂದ್ರ ಕುಮಾರ್ ಮೀನಾ ಮಾತನಾಡಿ, ಈ ಪ್ರಕರಣದ ಹಲವು ಅಂಶಗಳು ಇನ್ನೂ ಬಗೆಹರಿದಿಲ್ಲ, ಆರೋಪಿಗಳ ವಿಚಾರಣೆ ವೇಳೆ ಬೆಳಕಿಗೆ ಬಂದಿರುವ ಸಂಗತಿಗಳನ್ನು ಪರಿಶೀಲಿಸಲಾಗುತ್ತಿದೆ, ಪ್ರಕರಣವನ್ನು ಕೂಲಂಕುಷವಾಗಿ ತನಿಖೆ ನಡೆಸಲಾಗುತ್ತಿದ್ದು, ಏನಾದರೂ ಸರಿಯಾಗಿ ಹೇಳಲು ಮುಂದಾಗುವುದಿಲ್ಲ. ಈಗ ಪೊಲೀಸರು ಶೀಘ್ರದಲ್ಲೇ ಪ್ರಕರಣವನ್ನು ಬಹಿರಂಗಪಡಿಸುತ್ತಾರೆ ಎಂದರು.

ಇದನ್ನೂ ಒದಿ; ಹರ್ಯಾಣ: ದನ ಕಳ್ಳ ಸಾಗಣೆದಾರನೆಂದು ಭಾವಿಸಿ 12ನೇ ತರಗತಿ ವಿದ್ಯಾರ್ಥಿಯನ್ನು ಹತ್ಯೆಗೈದ ಗೋರಕ್ಷಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...