Homeಕರ್ನಾಟಕಗೌರಿ ಲಂಕೇಶ್ ನೆನಪು: ಹಲವರಿಂದ 'ಕಾವ್ಯ ನಮನ'

ಗೌರಿ ಲಂಕೇಶ್ ನೆನಪು: ಹಲವರಿಂದ ‘ಕಾವ್ಯ ನಮನ’

- Advertisement -
- Advertisement -

ಗೌರಿ ದಾರಿ

ತಮಂಧದ ಘನವು
ಜಗವ ಆವರಿಸುವಾಗ
ಲೋಕದುರಿಗೆ ತೆತ್ತುಕೊಂಡು..

ಬೇಯುತ್ತಾ ಬೇಯುತ್ತಾ
ಬೆಳಕಾದವಳಲ್ಲವೇ ಗೌರಿ…?

ಬಹಿರಂಗದ ಬೆಂಕಿಯಲ್ಲಿ
ಅಂತರಂಗದ ಹಿಮಕರಗಿದಾಗ
ಉಕ್ಕಿಹರಿದ ಮಮಕಾರದಲ್ಲಿ
ರೂಪುಗೊಂಡ
ರೂಹಲ್ಲವೇ ಗೌರಿ…?

ಹೊರಗಿನ ಬಿರುಗಾಳಿಗೆ
ಒಳಗಿನ ಸುಳಿಗಾಳಿಗೆ..

ಒಡಲ ಸೊಡರು ಆರದಂತೆ
ದೀಕ್ಷೆತೊಟ್ಟ
ದೀವಟಿಗೆಯಲ್ಲವೇ ಗೌರಿ?

ಸಿದ್ಧತೆಗೆ ತಕ್ಕಂತೆ
ಸಿದ್ಧಾಂತ ಹೊಸೆಯದೇ..

ಬೀದಿಯ ಜೊತೆ
ಬೆಸಗೊಂಡು
ಬೀದಿದೀಪವಾಗಿದ್ದಲ್ಲವೇ ಗೌರಿ?

ನಾನೆಂಬ ನಾಗರಕೆ
ಒಳದನಿಯ
ಪಿಸುಪುಂಗಿಯ ಕಾವಲಿಟ್ಟು…

ನಾನಳಿದು ತಾನುರಿದು
ನಮ್ಮೊಳಗೇ ನಾವಾಗಿ
ಸಿಕ್ಕವಳಲ್ಲವೇ ಗೌರಿ…?

ಕೆಂಪೊಳಗಿನ ನೀಲಿಯನ್ನು
ನೀಲಿಯೊಳಗಿನ ಕೆಂಪನ್ನು..

ಕಪ್ಪೊಳಗಿನ ಕೆಚ್ಚನ್ನು
ಬಿಳಿಯೊಳಗಿನ ಬಯಲನ್ನು..

ಅರಿತು ಕಲಿತು ಕಲೆತು
ಕಾಮನಬಿಲ್ಲಾದವಳಲ್ಲವೇ ಗೌರಿ…?

-ಶಿವಸುಂದರ್

——————————-

ಮೊನ್ನೆ ಮೊನ್ನೆಯಪ್ಪೇ
ನಮ್ಮ ಜೊತೆಯಿದ್ದ ಸಣಕಲು
ಗಟ್ಟಿಗಿತ್ತಿಯೊಬ್ಬಳನ್ನು
ಆಕೆ
ಬಡವರ, ಆದಿವಾಸಿಗಳ
ಅಲ್ಪಸಂಖ್ಯಾತರ, ಹಿಂದುಳಿದವರ
ದಲಿತರ ಪರವಾಗಿ ಮಾತನಾಡುತ್ತಾಳೆ
ಎನ್ನುವ ಕಾರಣಕ್ಕಾಗಿ ಕೊಲ್ಲಲಾಯಿತು
ಗುಂಡು ಹೊಡೆದು.

ಕೊಲೆಗಾರ ಅರೆಸ್ಟ್‌ ಆದಾಗ
ಅವನ ಮೋಬೈಲ್‌ ನಲ್ಲಿ ಸಿಕ್ಕವು
ಆಕೆಯ ಮೂರು ಸೆಲ್ಫಿಗಳು.

ಒಂದರಲ್ಲಿ ಆಕೆ,
ಬಡವರೊಂದಿಗೆ ಧರಣಿ ಕೂತಿದ್ದಳು
ಮನುಷ್ಯರ ಆಹಾರದ ಹಕ್ಕಿಗಾಗಿ,
ಇನ್ನೊಂದರಲ್ಲಿ, ಸ್ವಚ್ಛ ಮಾಡುತ್ತಿದ್ದಳು
ಬುಡನ್‌ ಸೂಫಿಯ ಹಾದಿಯಲ್ಲಿ ಹಾಕಲಾಗಿದ್ದ
ಕಲ್ಲು ಮುಳ್ಳುಗಳನ್ನು ಕಿತ್ತು,

ಮೂರನೇಯದರಲ್ಲಿ
ಟಾರ್ಚ್‌ ಹಿಡಿದುಕೊಂಡು ನಿಂತಿದ್ದಳು
ಮುಚ್ಚಿದ ದೇವರ ಮನೆಯ ಬಾಗಿಲಲ್ಲಿ,

ಹಟಮಾರಿ ಹೆಂಗಸು
ಸುಮ್ಮನಿರಬೇಕಿತ್ತು ಮಮ್ಮಲ ಮರುಗಿದರು
ಕೆಲವು ಸಂತ ಗಂಡಸರು,

ಆದರೆ ಹೆಣ್ಣು ಮನಸ್ಸಿಗೆ
ಇದೆಲ್ಲ ಎಷ್ಟು ಅಸಹನೀಯ ಎನ್ನುವುದಕ್ಕೆ
ಸತ್ಯ ಪ್ರಮಾಣದಂತಿವೆ
ಅವಳ ಉದ್ದಿಗ್ನ ಸಿಗರೇಟಿನ
ಅಶಾಂತ ಬೂದಿಯಲ್ಲಿ
ಇನ್ನೂ ಉರಿಯುತ್ತಿರುವ, ಆರುತ್ತಿರುವ
ಸ್ಪಷ್ಟ, ಅಸ್ಪಷ್ಟ ದನಿಗಳು.

-ಚಿದಂಬರ ನರೇಂದ್ರ

————————————–

ಗೌರಿ ಎಂಬ ಬೆಳಕು

ಆಗಾಗ ಅಂದುಕೊಳ್ಳುತ್ತೇನೆ
“ನಾನು ಮೊದಲು ಹೀಗಿರಲಿಲ್ಲ”
ಭಯವಿತ್ತು, ಭವಿಷ್ಯದ ಅಳುಕಿತ್ತು.
“ಜೋಕೆ, ಪ್ರಭುತ್ವ ನಿನ್ನ ಮುಕ್ಕಿ ತಿನ್ನುತ್ತೆ
ನೀನು ಬೆಳೆಯದಂತೆ ತುಳಿತಾರೆ,
ಜೈಲಿಗೆ ಹಾಕಿಸ್ತಾರೆ, ಕೊಲ್ತಾರೆ,
ಕಿರುಕುಳ ಕೊಡ್ತಾರೆ..ʼ
ತರಹೇವಾರಿ ಜನ ಹೇಳಿದ್ದು ಬುದ್ಧಿಮಾತೋ
ಬೆದರಿಸಿ ಬಾಯಿ ಮುಚ್ಚಿಸುವ ಸಂಚೋ-
ಎರಡೂ ಹೌದು.
ನಾನಂತೂ ಬಾಯಿ ತೆರೆಯದೆ ಇದ್ದೆ-
“ಮೊದಲು ನಾನು ಹೀಗಿರಲಿಲ್ಲ”
“ನೀನು ಪತ್ರಕರ್ತ
ಭಟ್ಟಂಗಿಗಳು, ಭಕ್ತರೇ ತುಂಬಿರುವ ವೃತ್ತಿಯಲ್ಲಿ
ನೀನು ಶೋಷಿತರ ಹುಡುಗ.
ದಲಿತ, ಮುಸ್ಲಿಂ, ಒಬಿಸಿ, ಆದಿವಾಸಿ ಎನ್ನಬೇಡ,
ಸಂಘಿಗಳ ಟೀಕಿಸಬೇಡ,
ನಿನ್ನ ಮೇಲೆ ಕಣ್ಣಿಡ್ತಾರೆ,
ತಳಿಯುತ್ತಾರೆ”
-ಅಬ್ಬಾ, ಎಷ್ಟೊಂದು ಮಾತು!
ಒಡಲಕಿಚ್ಚು ದಹಿಸುವಾಗ
ಹೊಟ್ಟೆಪಾಡಿಗೆ ಮುಚ್ಚಿಟ್ಟುಕೊಂಡೆ.
ಹೀಗೊಂದು ದಿನ ಗೌರಿಯಮ್ಮ ಸಿಕ್ಕಳು
ಅವಳಿಗೆ ತಾಕಿದ ಗುಂಡು
ನನ್ನೆದೆಯ ಹೊಕ್ಕು ನಾನು ಸಾಯಲಿಲ್ಲ
ಹುಟ್ಟಿದೆ, ಸಿಡಿದೆ,
ಚಿಮ್ಮಿದ ರಕ್ತ ಶಾಹಿಯಾಗಿ ಹೊಮ್ಮಿತ್ತು
ಗಟಾರದ ಕೊಚ್ಚೆ ನೀರ
ಭಾರೀ ಮಳೆಯೊಂದು ಕೊಚ್ಚಿತ್ತು
‘ನಾನುಗೌರಿ’ಯಾದೆ.
ಭವಿಷ್ಯದ ಭಯವೇ? ಯಾರ ಭವಿಷ್ಯ?
ದೇಶವಿರದೆ, ಪ್ರೀತಿಯಿರದೆ ಭವಿಷ್ಯವುಂಟೆ?
ಇರದುದ ಉಳಿಸಲು, ಆತಂಕ ಕರಗಿ
ಸತ್ಯದ ದಾರಿಯೊಂದು ತೆರೆದಿತ್ತು.
ಅರೆಹೊಟ್ಟೆ ಅಳುಕಲಿಲ್ಲ
ಅದಕೇಕೆ ಅಂಜಲಿ?
ನುಡಿ ಸತ್ಯ ನುಡಿ
ಹೊರಡು ನಿನ್ನ ಹಾದಿ ಇದುವೆ.
ಗೌರಿ ಎಂಬ ಬೆಳಕು ತೆರೆದಿತ್ತು
‘ನಾನುಗೌರಿ’ಯಾದಾಗ
ಎಷ್ಟೊಂದು ಧೈರ್ಯ!
ನಾನು ಏನೆಂದು ತಿಳಿದಾಯ್ತು.
ಬೆದರಿಸಿದವರು ಬೆಚ್ಚಿದರು
ಚುಚ್ಚಿದವರು ಕೊಚ್ಚಿ ಹೋದರು
ಗೌರಿ ಎಂದರೆ ಪ್ರೇಮದ ಸುಡುಸುಡು ಪಂಜು
ಗೌರಿ ಎಂದರೆ ಪ್ರಭುತ್ವಕ್ಕೆ ಸಿಡಿಮದ್ದು
ಗೌರಿ ಎಂದರೆ ನಿರ್ಭೀತ ಮಮತೆ
ಗೌರಿ ಸಾಯಲಿಲ್ಲ
ಕೊಂದವರೆದುರು ಹುಟ್ಟಿದಳು
ನಮ್ಮೆಲ್ಲರೆದೆರಲಿ.
ಆಲವ ಕಡಿಯ ಬಂದವರೆದುರು
ಸಹಸ್ರಾರು ಬೇರು
ಕಾಂಡ ಲಯವಾಗಿ ಹಬ್ಬಿದ ಬಿಳಲ ಕಂಡು
ಕೊಡಲಿಗಳಿಗೆ ಕಂಪನ.
‘ನಾನುಗೌರಿ’.
ಬೆಳಕು ತೆರೆದಾಗ
ಭಯವೇಕೆ?
‘ನಾವೆಲ್ಲ ಗೌರಿ’
ನೊಂದುಬೆಂದು ತಂಗಾಳಿ.

– ಯತಿರಾಜ್ ಬ್ಯಾಲಹಳ್ಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...