Homeಕರ್ನಾಟಕಗೌರಿ ಲಂಕೇಶ್ ನೆನಪು: ಹಲವರಿಂದ 'ಕಾವ್ಯ ನಮನ'

ಗೌರಿ ಲಂಕೇಶ್ ನೆನಪು: ಹಲವರಿಂದ ‘ಕಾವ್ಯ ನಮನ’

- Advertisement -
- Advertisement -

ಗೌರಿ ದಾರಿ

ತಮಂಧದ ಘನವು
ಜಗವ ಆವರಿಸುವಾಗ
ಲೋಕದುರಿಗೆ ತೆತ್ತುಕೊಂಡು..

ಬೇಯುತ್ತಾ ಬೇಯುತ್ತಾ
ಬೆಳಕಾದವಳಲ್ಲವೇ ಗೌರಿ…?

ಬಹಿರಂಗದ ಬೆಂಕಿಯಲ್ಲಿ
ಅಂತರಂಗದ ಹಿಮಕರಗಿದಾಗ
ಉಕ್ಕಿಹರಿದ ಮಮಕಾರದಲ್ಲಿ
ರೂಪುಗೊಂಡ
ರೂಹಲ್ಲವೇ ಗೌರಿ…?

ಹೊರಗಿನ ಬಿರುಗಾಳಿಗೆ
ಒಳಗಿನ ಸುಳಿಗಾಳಿಗೆ..

ಒಡಲ ಸೊಡರು ಆರದಂತೆ
ದೀಕ್ಷೆತೊಟ್ಟ
ದೀವಟಿಗೆಯಲ್ಲವೇ ಗೌರಿ?

ಸಿದ್ಧತೆಗೆ ತಕ್ಕಂತೆ
ಸಿದ್ಧಾಂತ ಹೊಸೆಯದೇ..

ಬೀದಿಯ ಜೊತೆ
ಬೆಸಗೊಂಡು
ಬೀದಿದೀಪವಾಗಿದ್ದಲ್ಲವೇ ಗೌರಿ?

ನಾನೆಂಬ ನಾಗರಕೆ
ಒಳದನಿಯ
ಪಿಸುಪುಂಗಿಯ ಕಾವಲಿಟ್ಟು…

ನಾನಳಿದು ತಾನುರಿದು
ನಮ್ಮೊಳಗೇ ನಾವಾಗಿ
ಸಿಕ್ಕವಳಲ್ಲವೇ ಗೌರಿ…?

ಕೆಂಪೊಳಗಿನ ನೀಲಿಯನ್ನು
ನೀಲಿಯೊಳಗಿನ ಕೆಂಪನ್ನು..

ಕಪ್ಪೊಳಗಿನ ಕೆಚ್ಚನ್ನು
ಬಿಳಿಯೊಳಗಿನ ಬಯಲನ್ನು..

ಅರಿತು ಕಲಿತು ಕಲೆತು
ಕಾಮನಬಿಲ್ಲಾದವಳಲ್ಲವೇ ಗೌರಿ…?

-ಶಿವಸುಂದರ್

——————————-

ಮೊನ್ನೆ ಮೊನ್ನೆಯಪ್ಪೇ
ನಮ್ಮ ಜೊತೆಯಿದ್ದ ಸಣಕಲು
ಗಟ್ಟಿಗಿತ್ತಿಯೊಬ್ಬಳನ್ನು
ಆಕೆ
ಬಡವರ, ಆದಿವಾಸಿಗಳ
ಅಲ್ಪಸಂಖ್ಯಾತರ, ಹಿಂದುಳಿದವರ
ದಲಿತರ ಪರವಾಗಿ ಮಾತನಾಡುತ್ತಾಳೆ
ಎನ್ನುವ ಕಾರಣಕ್ಕಾಗಿ ಕೊಲ್ಲಲಾಯಿತು
ಗುಂಡು ಹೊಡೆದು.

ಕೊಲೆಗಾರ ಅರೆಸ್ಟ್‌ ಆದಾಗ
ಅವನ ಮೋಬೈಲ್‌ ನಲ್ಲಿ ಸಿಕ್ಕವು
ಆಕೆಯ ಮೂರು ಸೆಲ್ಫಿಗಳು.

ಒಂದರಲ್ಲಿ ಆಕೆ,
ಬಡವರೊಂದಿಗೆ ಧರಣಿ ಕೂತಿದ್ದಳು
ಮನುಷ್ಯರ ಆಹಾರದ ಹಕ್ಕಿಗಾಗಿ,
ಇನ್ನೊಂದರಲ್ಲಿ, ಸ್ವಚ್ಛ ಮಾಡುತ್ತಿದ್ದಳು
ಬುಡನ್‌ ಸೂಫಿಯ ಹಾದಿಯಲ್ಲಿ ಹಾಕಲಾಗಿದ್ದ
ಕಲ್ಲು ಮುಳ್ಳುಗಳನ್ನು ಕಿತ್ತು,

ಮೂರನೇಯದರಲ್ಲಿ
ಟಾರ್ಚ್‌ ಹಿಡಿದುಕೊಂಡು ನಿಂತಿದ್ದಳು
ಮುಚ್ಚಿದ ದೇವರ ಮನೆಯ ಬಾಗಿಲಲ್ಲಿ,

ಹಟಮಾರಿ ಹೆಂಗಸು
ಸುಮ್ಮನಿರಬೇಕಿತ್ತು ಮಮ್ಮಲ ಮರುಗಿದರು
ಕೆಲವು ಸಂತ ಗಂಡಸರು,

ಆದರೆ ಹೆಣ್ಣು ಮನಸ್ಸಿಗೆ
ಇದೆಲ್ಲ ಎಷ್ಟು ಅಸಹನೀಯ ಎನ್ನುವುದಕ್ಕೆ
ಸತ್ಯ ಪ್ರಮಾಣದಂತಿವೆ
ಅವಳ ಉದ್ದಿಗ್ನ ಸಿಗರೇಟಿನ
ಅಶಾಂತ ಬೂದಿಯಲ್ಲಿ
ಇನ್ನೂ ಉರಿಯುತ್ತಿರುವ, ಆರುತ್ತಿರುವ
ಸ್ಪಷ್ಟ, ಅಸ್ಪಷ್ಟ ದನಿಗಳು.

-ಚಿದಂಬರ ನರೇಂದ್ರ

————————————–

ಗೌರಿ ಎಂಬ ಬೆಳಕು

ಆಗಾಗ ಅಂದುಕೊಳ್ಳುತ್ತೇನೆ
“ನಾನು ಮೊದಲು ಹೀಗಿರಲಿಲ್ಲ”
ಭಯವಿತ್ತು, ಭವಿಷ್ಯದ ಅಳುಕಿತ್ತು.
“ಜೋಕೆ, ಪ್ರಭುತ್ವ ನಿನ್ನ ಮುಕ್ಕಿ ತಿನ್ನುತ್ತೆ
ನೀನು ಬೆಳೆಯದಂತೆ ತುಳಿತಾರೆ,
ಜೈಲಿಗೆ ಹಾಕಿಸ್ತಾರೆ, ಕೊಲ್ತಾರೆ,
ಕಿರುಕುಳ ಕೊಡ್ತಾರೆ..ʼ
ತರಹೇವಾರಿ ಜನ ಹೇಳಿದ್ದು ಬುದ್ಧಿಮಾತೋ
ಬೆದರಿಸಿ ಬಾಯಿ ಮುಚ್ಚಿಸುವ ಸಂಚೋ-
ಎರಡೂ ಹೌದು.
ನಾನಂತೂ ಬಾಯಿ ತೆರೆಯದೆ ಇದ್ದೆ-
“ಮೊದಲು ನಾನು ಹೀಗಿರಲಿಲ್ಲ”
“ನೀನು ಪತ್ರಕರ್ತ
ಭಟ್ಟಂಗಿಗಳು, ಭಕ್ತರೇ ತುಂಬಿರುವ ವೃತ್ತಿಯಲ್ಲಿ
ನೀನು ಶೋಷಿತರ ಹುಡುಗ.
ದಲಿತ, ಮುಸ್ಲಿಂ, ಒಬಿಸಿ, ಆದಿವಾಸಿ ಎನ್ನಬೇಡ,
ಸಂಘಿಗಳ ಟೀಕಿಸಬೇಡ,
ನಿನ್ನ ಮೇಲೆ ಕಣ್ಣಿಡ್ತಾರೆ,
ತಳಿಯುತ್ತಾರೆ”
-ಅಬ್ಬಾ, ಎಷ್ಟೊಂದು ಮಾತು!
ಒಡಲಕಿಚ್ಚು ದಹಿಸುವಾಗ
ಹೊಟ್ಟೆಪಾಡಿಗೆ ಮುಚ್ಚಿಟ್ಟುಕೊಂಡೆ.
ಹೀಗೊಂದು ದಿನ ಗೌರಿಯಮ್ಮ ಸಿಕ್ಕಳು
ಅವಳಿಗೆ ತಾಕಿದ ಗುಂಡು
ನನ್ನೆದೆಯ ಹೊಕ್ಕು ನಾನು ಸಾಯಲಿಲ್ಲ
ಹುಟ್ಟಿದೆ, ಸಿಡಿದೆ,
ಚಿಮ್ಮಿದ ರಕ್ತ ಶಾಹಿಯಾಗಿ ಹೊಮ್ಮಿತ್ತು
ಗಟಾರದ ಕೊಚ್ಚೆ ನೀರ
ಭಾರೀ ಮಳೆಯೊಂದು ಕೊಚ್ಚಿತ್ತು
‘ನಾನುಗೌರಿ’ಯಾದೆ.
ಭವಿಷ್ಯದ ಭಯವೇ? ಯಾರ ಭವಿಷ್ಯ?
ದೇಶವಿರದೆ, ಪ್ರೀತಿಯಿರದೆ ಭವಿಷ್ಯವುಂಟೆ?
ಇರದುದ ಉಳಿಸಲು, ಆತಂಕ ಕರಗಿ
ಸತ್ಯದ ದಾರಿಯೊಂದು ತೆರೆದಿತ್ತು.
ಅರೆಹೊಟ್ಟೆ ಅಳುಕಲಿಲ್ಲ
ಅದಕೇಕೆ ಅಂಜಲಿ?
ನುಡಿ ಸತ್ಯ ನುಡಿ
ಹೊರಡು ನಿನ್ನ ಹಾದಿ ಇದುವೆ.
ಗೌರಿ ಎಂಬ ಬೆಳಕು ತೆರೆದಿತ್ತು
‘ನಾನುಗೌರಿ’ಯಾದಾಗ
ಎಷ್ಟೊಂದು ಧೈರ್ಯ!
ನಾನು ಏನೆಂದು ತಿಳಿದಾಯ್ತು.
ಬೆದರಿಸಿದವರು ಬೆಚ್ಚಿದರು
ಚುಚ್ಚಿದವರು ಕೊಚ್ಚಿ ಹೋದರು
ಗೌರಿ ಎಂದರೆ ಪ್ರೇಮದ ಸುಡುಸುಡು ಪಂಜು
ಗೌರಿ ಎಂದರೆ ಪ್ರಭುತ್ವಕ್ಕೆ ಸಿಡಿಮದ್ದು
ಗೌರಿ ಎಂದರೆ ನಿರ್ಭೀತ ಮಮತೆ
ಗೌರಿ ಸಾಯಲಿಲ್ಲ
ಕೊಂದವರೆದುರು ಹುಟ್ಟಿದಳು
ನಮ್ಮೆಲ್ಲರೆದೆರಲಿ.
ಆಲವ ಕಡಿಯ ಬಂದವರೆದುರು
ಸಹಸ್ರಾರು ಬೇರು
ಕಾಂಡ ಲಯವಾಗಿ ಹಬ್ಬಿದ ಬಿಳಲ ಕಂಡು
ಕೊಡಲಿಗಳಿಗೆ ಕಂಪನ.
‘ನಾನುಗೌರಿ’.
ಬೆಳಕು ತೆರೆದಾಗ
ಭಯವೇಕೆ?
‘ನಾವೆಲ್ಲ ಗೌರಿ’
ನೊಂದುಬೆಂದು ತಂಗಾಳಿ.

– ಯತಿರಾಜ್ ಬ್ಯಾಲಹಳ್ಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...