Homeಫ್ಯಾಕ್ಟ್‌ಚೆಕ್FACT CHECK : ತಂದೆ ಇಲ್ಲದ ಮಕ್ಕಳ ಖಾತೆಗೆ ವರ್ಷಕ್ಕೆ 24 ಸಾವಿರ ರೂ. ಸ್ಕಾಲರ್‌ಶಿಪ್...ವೈರಲ್...

FACT CHECK : ತಂದೆ ಇಲ್ಲದ ಮಕ್ಕಳ ಖಾತೆಗೆ ವರ್ಷಕ್ಕೆ 24 ಸಾವಿರ ರೂ. ಸ್ಕಾಲರ್‌ಶಿಪ್…ವೈರಲ್ ಸಂದೇಶದ ಸತ್ಯಾಸತ್ಯತೆ ಏನು?

- Advertisement -
- Advertisement -

“ತಂದೆ ಇಲ್ಲದ ಮಕ್ಕಳ ಖಾತೆಗೆ ಒಂದು ವರ್ಷ 24,000 ರೂ.ಗಳ ಸ್ಕಾಲರ್ ಶಿಪ್ ಸೌಲಭ್ಯವಿದ್ದು, ಆದುದರಿಂದ ತಮಗೆ ಗೊತ್ತಿರುವ ಯಾರಾದರೂ ತಂದೆ ಇಲ್ಲದ ಮಗು ಇದ್ದಲ್ಲಿ ಅವರ ಪೋಷಕರಿಗೆ ಕೂಡಲೇ ಅರ್ಜಿ ಸಲ್ಲಿಸಲು ತಿಳಿಸಿ. ಇದು ಆನ್ಲೈನ್ ಮೂಲಕ ಅಂದರೆ ಯಾವುದೇ ಸೈಬರ್ ಮೂಲಕ ಸಲ್ಲಿಕೆ ಇರುವುದಿಲ್ಲ. ಮಗುವಿಗೆ 18 ವರ್ಷಕ್ಕಿಂತ ಕಡಿಮೆ ವಯಸ್ಸು ಇರಬೇಕು. ಅರ್ಜಿ ಫಾರಂನ್ನು ಖುದ್ದಾಗಿ ಡಿಸಿ ಕಛೇರಿಯಿಂದ ತಂದು ಬೇಕಾಗುವ ದಾಖಲೆಗಳನ್ನು ಇಟ್ಟು ಶಾಲೆ ಅಥವಾ ಕಾಲೇಜು ಮುಖ್ಯೋಪಾಧ್ಯಾಯ/ ಪ್ರಾಂಶುಪಾಲರ ಸಹಿ ಮತ್ತು ಸೀಲ್ ಮಾಡಿದ ಮೇಲೆ ಪುನಃ ಡಿಸಿ ಆಫೀಸಿಗೆ ಸಲ್ಲಿಸಬೇಕು. ನಂತರ ಅವರ ಸಿಬ್ಬಂದಿಗಳು ಮನೆ ಭೇಟಿ ನೀಡಿ ಪರಿಶೀಲನೆ ಮಾಡಿದ ಮೇಲೆ ಯೋಜನೆ ಪ್ರಾರಂಭವಾಗುತ್ತದೆ”

ಈ ರೀತಿಯ ಸಂದೇಶವೊಂದು ವಿವಿಧ ಜಿಲ್ಲೆಗಳ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿಗಳ ಹೆಸರಿನಲ್ಲಿ ವಾಟ್ಸಾಪ್ ಗ್ರೂಪ್‌ಗಳಲ್ಲಿ ಹರಿದಾಡುತ್ತಿದೆ.

ಈ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ.

ಫ್ಯಾಕ್ಟ್‌ಚೆಕ್ : ಆರಂಭದಲ್ಲಿ ಉತ್ತರ ಕನ್ನಡ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿಯ ಹೆಸರಿನಲ್ಲಿರುವ ಸಂದೇಶ ನಮಗೆ ವಾಟ್ಸಾಪ್‌ನಲ್ಲಿ ಲಭ್ಯವಾಗಿತ್ತು. ಆದ್ದರಿಂದ ನಾವು ಉತ್ತರ ಕನ್ನಡ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸೋನಲ್ ಐಗಲ್ ಅವರಿಗೆ ಕರೆಮಾಡಿ ಮಾಹಿತಿ ಪಡೆದಿದ್ದೇವೆ.

ಸೋನಲ್ ಐಗಲ್ ಅವರು ನೀಡಿರುವ ಮಾಹಿತಿ ಪ್ರಕಾರ, “ಕೇಂದ್ರ ಸರ್ಕಾರದ ಶೇ.60 ಅನುದಾನ ಮತ್ತು ರಾಜ್ಯ ಸರ್ಕಾರದ ಶೇ. 40 ಅನುದಾನೊಂದಿಗೆ ಪ್ರಾಯೋಜಕತ್ವ ಯೋಜನೆಯೊಂದು ಜಾರಿಯಲ್ಲಿದೆ. ಈ ಯೋಜನೆಯಡಿ ಅನಾಥ ಮಕ್ಕಳು, ಪೋಷಕರು ಜೈಲಿನಲ್ಲಿರುವ ಮಕ್ಕಳು, ಲೈಂಗಿಕ ಕಾರ್ಯಕರ್ತೆಯರು, ದೇವದಾಸಿ ಪದ್ದತಿಗೆ ಒಳಗಾಗಿರುವವ ಮಕ್ಕಳು, ಏಕ ಪೋಷಕ (ತಂದೆ ಅಥವಾ ತಾಯಿ) ಮಕ್ಕಳು, ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವ ಮಕ್ಕಳು, ಭಿಕ್ಷುಕರ ಮಕ್ಕಳು, ಆತ್ಮಹತ್ಯೆ ಮಾಡಿಕೊಂಡಿರುವ ರೈತರ ಮಕ್ಕಳು ಮತ್ತು ಶಿರೂರು ದುರಂತದಂತಹ ಪ್ರಕೃತಿ ವಿಕೋಪಕ್ಕೆ ತುತ್ತಾಗಿರುವವರ ಮಕ್ಕಳಿಗೆ ಧನ ಸಹಾಯ ನೀಡಲಾಗುತ್ತದೆ. ಮೇಲೆ ಉಲ್ಲೇಖಿಸಿದ ಮಕ್ಕಳ ಶಿಕ್ಷಣ, ಆರೋಗ್ಯ ಸುಧಾರಣೆ ಮತ್ತು ಅವರನ್ನು ಬಾಲ ಕಾರ್ಮಿಕ ಪದ್ದತಿಯಿಂದ ತಡೆಯುವ ಉದ್ದೇಶದಿಂದ ಈ ಪ್ರಾಯೋಜಕತ್ವ ಯೋಜನೆ ರೂಪಿಸಲಾಗಿದೆ.

ಗಮನಿಸಿ : ವೈರಲ್ ಸಂದೇಶದಲ್ಲಿ ‘ತಂದೆ ಇಲ್ಲದ ಮಕ್ಕಳಿಗೆ ‘ಎಂದು ಉಲ್ಲೇಖಿಸಲಾಗಿದೆ. ಆದರೆ, ಅದು ತಪ್ಪು ಮಾಹಿತಿ. ಈ ಯೋಜನೆಯ ಅರ್ಹರು ಯಾರೆಂದು ನಾವು ಮೇಲೆ ತಿಳಿಸಿದ್ದೇವೆ.   

ವಾರ್ಷಿಕ 24 ಸಾವಿರ ಸ್ಕಾಲರ್‌ ಶಿಪ್ ಸಿಗುತ್ತಿದೆ ಎಂದೂ ವೈರಲ್ ಸಂದೇಶದಲ್ಲಿದೆ. ಆದರೆ, ಅದು ತಪ್ಪು ಮಾಹಿತಿ, ಸೋನಲ್ ಐಗಲ್ ಅವರು ಹೇಳಿರುವಂತೆ ಮಾಸಿಕ 4 ಸಾವಿರ ರೂಪಾಯಿಯಂತೆ ವಾರ್ಷಿಕ 48 ಸಾವಿರ ರೂಪಾಯಿ ಧನ ಸಹಾಯ ಸಿಗುತ್ತದೆ. 18 ವರ್ಷದೊಳಗಿನ ಗಂಡು ಮತ್ತು ಹೆಣ್ಣು ಮಕ್ಕಳು ಈ ಯೋಜನೆಗೆ ಅರ್ಹರು. ಅರ್ಹರು ಅವರಾಗಿಯೇ ಅರ್ಜಿ ಸಲ್ಲಿಸಬಹುದು ಅಥವಾ ಸಿಬ್ಬಂದಿಯ ಮೂಲಕ ಇಲಾಖೆಯೇ ಅರ್ಹರನ್ನು ಪತ್ತೆ ಮಾಡುತ್ತದೆ.

ಅರ್ಜಿಗಳನ್ನು ನೇರವಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿಗೆ ಸಲ್ಲಿಸಬಹುದು ಅಥವಾ ತಾಲೂಕು ಶಿಶು ಅಭಿವೃದ್ದಿ ಯೋಜನಾಧಿಕಾರಿ ಮೂಲಕವೂ ನೀಡಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ವ್ಯವಸ್ಥೆಯಿಲ್ಲ, ಕೇವಲ ಆಫ್‌ಲೈನ್ ಮೂಲಕ ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್‌, ಬ್ಯಾಂಕ್ ಸ್ಟೇಟ್‌ಮೆಂಟ್, ಮಗುವಿನ ಜನನ ಪ್ರಮಾಣ ಪತ್ರ, ತಂದೆ ತಾಯಿ ನಿಧರಾಗಿದ್ದರೆ ಅವರ ಮರಣ ಪ್ರಮಾಣ ಪತ್ರ ಬೇಕಿದೆ. ಸಲ್ಲಿಕೆಯಾದ ಅರ್ಜಿಯನ್ನು ಮಕ್ಕಳ ರಕ್ಷಣಾ ಇಲಾಖೆ ಆಂತರಿಕವಾಗಿ ಪರಿಶೀಲನೆ ಮಾಡುತ್ತದೆ ಮತ್ತು ಅರ್ಜಿ ಸಲ್ಲಿಸಿದವರ ಮನೆಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸುತ್ತಾರೆ. ಬಳಿಕ ಅರ್ಹರನ್ನು ಯೋಜನೆಗೆ ಆಯ್ಕೆ ಮಾಡಲಾಗುತ್ತದೆ.

ಈ ಹಿಂದೆ ಯೋಜನೆಯ ಅವಧಿ ಮೂರು ವರ್ಷ ಇತ್ತು. ಈಗ ಒಂದು ವರ್ಷಕ್ಕೆ ಸೀಮಿತಗೊಳಿಸಲಾಗಿದೆ. ಪ್ರಸ್ತುತ ಒಂದು ಮಗುವಿಗೆ ಒಂದು ವರ್ಷದವರೆಗೆ ಮಾತ್ರ ಯೋಜನೆಯ ಲಾಭ ಸಿಗಲಿದೆ. ತೀರ ಅನಿವಾರ್ಯವಿದ್ದರೆ ಮೂರು ವರ್ಷದವರೆಗೆ ಮುಂದುವರೆಸಲಾಗುತ್ತದೆ.

ವರ್ಷಕ್ಕೆ ಒಂದು ಬಾರಿ ಮಾತ್ರ ಯೋಜನೆಗೆ ಪ್ರಸ್ತಾವ ಸಲ್ಲಿಸಲಾಗುತ್ತದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ವರ್ಷ 200 ಮತ್ತು ಈ ವರ್ಷ 300 ಮಕ್ಕಳನ್ನು ಯೋಜನೆಗೆ ಆಯ್ಕೆ ಮಾಡಲಾಗಿದೆ. ಈ ಬಾರಿ ಪ್ರಾಕೃತಿಕ ವಿಕೋಪಕ್ಕೆ ತುತ್ತಾಗಿರುವ ಮಕ್ಕಳ ಬಗ್ಗೆ ಹೆಚ್ಚು ಗಮನಹರಿಸಲಾಗಿದೆ ಎಂದು ಸೋನಲ್ ಐಗಲ್ ಹೇಳಿದ್ದಾರೆ.

ಒಟ್ಟಿನಲ್ಲಿ, ವಾಟ್ಸಾಪ್‌ನಲ್ಲಿ ಹರಿದಾಡುತ್ತಿರುವ ಸಂದೇಶಲ್ಲಿ ಹೇಳಿರುವಂತೆ 18 ವರ್ಷದೊಳಗಿನ ಮಕ್ಕಳಿಗೆ ಧನ ಸಹಾಯ ನೀಡುವ ಯೋಜನೆ ಜಾರಿಯಲ್ಲಿರುವುದು ನಿಜ. ಆದರೆ, ಅದು ತಂದೆಯಿಲ್ಲದ ಮಕ್ಕಳಿಗೆ ಮಾತ್ರ ಇರುವ ಯೋಜನೆಯಲ್ಲ. ಹಲವು ಅರ್ಹರು ಯೋಜನೆಯ ಲಾಭ ಪಡೆಯಬಹುದು. ಅಲ್ಲದೆ, ವಾರ್ಷಿಕವಾಗಿ 48 ಸಾವಿರ ರೂ. ಧನ ಸಹಾಯ ಸಿಗುತ್ತದೆ.

ಇದನ್ನೂ ಓದಿ : FACT CHECK : ಇಸ್ರೇಲ್ ಅನ್ನು ಅಂತಾರಾಷ್ಟ್ರೀಯ ನ್ಯಾಯಾಲಯ ‘ಅಕ್ರಮ ರಾಷ್ಟ್ರ’ವೆಂದು ಘೋಷಿಸಿರುವುದು ನಿಜಾನಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

6 COMMENTS

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...