Homeಮುಖಪುಟಮಹಾರಾಷ್ಟ್ರ: ಆಂಬ್ಯುಲೆನ್ಸ್‌ ನಿರಾಕರಿಸಿದ ಆಸ್ಪತ್ರೆ; ಸತ್ತ ಮಕ್ಕಳನ್ನು ಹೆಗಲ ಮೇಲೆ ಹೊತ್ತೊಯ್ದ ಪೋಷಕರು

ಮಹಾರಾಷ್ಟ್ರ: ಆಂಬ್ಯುಲೆನ್ಸ್‌ ನಿರಾಕರಿಸಿದ ಆಸ್ಪತ್ರೆ; ಸತ್ತ ಮಕ್ಕಳನ್ನು ಹೆಗಲ ಮೇಲೆ ಹೊತ್ತೊಯ್ದ ಪೋಷಕರು

- Advertisement -
- Advertisement -

ಮಹಾರಾಷ್ಟ್ರದ ಆಹೇರಿ ತಾಲೂಕಿನ ಯುವ ದಂಪತಿಗಳು ತೀವ್ರ ಜ್ವರದಿಂದ ಮೃತಪಟ್ಟಿದ್ದ ತಮ್ಮ ಇಬ್ಬರು ಪುತ್ರರ ಮೃತದೇಹಗಳನ್ನು ಹೆಗಲ ಮೇಲೆ ಹೊತ್ತೊಯ್ದಿರುವ ವಿಡಿಯೊ ಇದೀಗ ವೈರಲ್ ಆಗಿದ್ದು, ಸಮಯಕ್ಕೆ ಸರಿಯಾಗಿ ಚಿಕಿತ್ಸೆ ದೊರೆಯದ ಕಾರಣ ಜ್ವರದಿಂದ ಬಾಲಕರು ಸಾವನ್ನಪ್ಪಿದ್ದಾರೆ. ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್‌ ನೀಡಲು ನಿರಾಕರಿಸಿದ್ದರಿಂದ ಆಸ್ಪತ್ರೆಯಿಂದ 15 ಕಿಮೀ ದೂರದಲ್ಲಿರುವ ಗಡ್ಚಿರೋಲಿಯಲ್ಲಿರುವ ತಮ್ಮ ಗ್ರಾಮದ ಮನೆಗೆ ಕಾಲ್ನಡಿಗೆಯಲ್ಲೆ ಸಾಗಿದ್ದಾರೆ.

ಅಪರಿಚಿತ ದಂಪತಿಗಳು 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಇಬ್ಬರು ಅಪ್ರಾಪ್ತ ಬಾಲಕರ ಶವಗಳನ್ನು ಹೆಗಲ ಮೇಲೆ ಹೊತ್ತುಕೊಂಡು ಕೆಸರುಮಯವಾದ ಕಾಡಿನ ಹಾದಿಯಲ್ಲಿ ಸಾಗುತ್ತಿರುವ ದೃಶ್ಯವನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿಜಯ ವಾಡೆತ್ತಿವಾರ್ ಅವರು ಹಂಚಿಕೊಂಡಿದ್ದಾರೆ.

“ಇಬ್ಬರು ಒಡಹುಟ್ಟಿದವರು ಜ್ವರದಿಂದ ಬಳಲುತ್ತಿದ್ದರು. ಆದರೆ, ಅವರಿಗೆ ಸಮಯಕ್ಕೆ ಚಿಕಿತ್ಸೆ ಸಿಗಲಿಲ್ಲ. ಒಂದೆರಡು ಗಂಟೆಗಳಲ್ಲಿ ಅವರ ಸ್ಥಿತಿ ಹದಗೆಟ್ಟಿತು ಮತ್ತು ಮುಂದಿನ ಒಂದು ಗಂಟೆಯಲ್ಲಿ ಇಬ್ಬರು ಹುಡುಗರು ಸಾವನ್ನಪ್ಪಿದರು” ಎಂದು ವಡೆಟ್ಟಿವಾರ್ ಅವರು ದುರಂತದ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ.

“ಇಬ್ಬರು ಅಪ್ರಾಪ್ತರ ಮೃತದೇಹಗಳನ್ನು ಅವರ ಗ್ರಾಮವಾದ ಪಟ್ಟಿಗಾಂವ್‌ಗೆ ವರ್ಗಾಯಿಸಲು ಸಹ ಆಂಬ್ಯುಲೆನ್ಸ್ ಇರಲಿಲ್ಲ ಮತ್ತು ಪೋಷಕರು ಮಳೆಯಿಂದ ತೋಯ್ದ ಕೆಸರು ಹಾದಿಯಲ್ಲಿ 15 ಕಿಲೋಮೀಟರ್ ನಡೆದುಕೊಂಡು ಹೋಗಬೇಕಾಯಿತು. ಗಡ್ಚಿರೋಲಿಯ ಆರೋಗ್ಯ ವ್ಯವಸ್ಥೆಯ ಕಠೋರ ವಾಸ್ತವ ಇಂದು ಮತ್ತೆ ಮುನ್ನೆಲೆಗೆ ಬಂದಿದೆ” ಎಂದು ಅವರು ಹೇಳಿದ್ದಾರೆ.

ಮಹಾಯುತಿ ಮಿತ್ರಪಕ್ಷಗಳಾದ ಭಾರತೀಯ ಜನತಾ ಪಕ್ಷದ ಫಡ್ನವೀಸ್ ಅವರು ಗಡ್ಚಿರೋಲಿಯ ಉಸ್ತುವಾರಿ ಸಚಿವರಾಗಿದ್ದಾರೆ. ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಧರ್ಮರಾವ್ ಬಾಬಾ ಅತ್ರಮ್ ಅವರು ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಸರ್ಕಾರದಲ್ಲಿ ಎಫ್‌ಡಿಎ ಸಚಿವರಾಗಿದ್ದಾರೆ ಎಂಬುದನ್ನು ಕಾಂಗ್ರೆಸ್ ನಾಯಕ ತಿಳಿಸಿದರು.

“ಇಬ್ಬರೂ ಮಹಾರಾಷ್ಟ್ರದಾದ್ಯಂತ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಪ್ರತಿದಿನ ರಾಜ್ಯವನ್ನು ಹೇಗೆ ಅಭಿವೃದ್ಧಿಪಡಿಸಬಹುದು ಎಂದು ಹೇಳಿಕೊಳ್ಳುತ್ತಾರೆ. ಅವರು ನೆಲಮಟ್ಟಕ್ಕೆ ಇಳಿದು ಗಡ್ಚಿರೋಲಿಯಲ್ಲಿ ಜನರು ಹೇಗೆ ವಾಸಿಸುತ್ತಿದ್ದಾರೆ ಮತ್ತು ಅಲ್ಲಿನ ಸಾವಿನ ಸಂಖ್ಯೆಯನ್ನು ನೋಡಬೇಕು” ಎಂದು ವಡೆಟ್ಟಿವಾರ್ ಹೇಳಿದರು.

ಈ ವಾರ ವಿದರ್ಭ ಪ್ರದೇಶದಿಂದ ಈ ರೀತಿಯ ಎರಡನೇ ನಿದರ್ಶನವನ್ನು ಕಾಂಗ್ರೆಸ್ ಹೈಲೈಟ್ ಮಾಡಿದೆ. ಸೆಪ್ಟೆಂಬರ್ 1 ರಂದು, ಗರ್ಭಿಣಿ ಬುಡಕಟ್ಟು ಮಹಿಳೆ ತನ್ನ ಮನೆಯಲ್ಲಿಯೇ ಸತ್ತ ಮಗುವಿಗೆ ಜನ್ಮ ನೀಡಿದ್ದಳು ಮತ್ತು ನಂತರ ಸ್ಥಳೀಯ ಆಸ್ಪತ್ರೆಯು ಸಮಯಕ್ಕೆ ಆಂಬ್ಯುಲೆನ್ಸ್ ಕಳುಹಿಸಲು ವಿಫಲವಾದ ನಂತರ ಹೆರಿಗೆ ನೋವಿನಿಂದ ಸಾವನ್ನಪ್ಪಿದಳು.

ಅಮರಾವತಿಯ ಮೆಲ್ಘಾಟ್ ಬುಡಕಟ್ಟು ಪ್ರದೇಶದ ದಹೆಂಡ್ರಿ ಗ್ರಾಮದ ಕವಿತಾ ಎ. ಸಕೋಲ್ ಎಂಬ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿತು. ಕೂಡಲೇ ಅವರ ಕುಟುಂಬವು ಸ್ಥಳೀಯ ಆರೋಗ್ಯ ಅಧಿಕಾರಿಗಳಿಂದ ಆಂಬ್ಯುಲೆನ್ಸ್ ಅನ್ನು ಕರೆದರು. ಆದರೆ ಕನಿಷ್ಠ ನಾಲ್ಕು ಗಂಟೆಗಳು ತೆಗೆದುಕೊಳ್ಳಬಹುದು ಎಂದು ಸಿಬ್ಬಂದಿ ಹೇಳಿದ್ದಾರೆ ಎನ್ನಲಾಗಿದೆ.

ಬೇರೆ ದಾರಿಯಿಲ್ಲದೆ ಕವಿತಾ ಮನೆಯಲ್ಲೇ ಹೆರಿಗೆ ಮಾಡಿಸಿದ್ದು, ಮಗು ಜನಿಸಿತ್ತು. ಆಕೆಯ ಸ್ಥಿತಿಯೂ ಹದಗೆಟ್ಟಿತು, ಆಕೆಯ ಸಂಬಂಧಿಕರು ಆತಂಕಗೊಂಡರು. ಮನೆಯವರು ಸ್ಥಳೀಯ ಖಾಸಗಿ ವಾಹನವನ್ನು ವ್ಯವಸ್ಥೆ ಮಾಡಿ ಚುರಾಣಿಯ ಗ್ರಾಮೀಣ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದರು. ಆದರೆ ಆಕೆ ಸ್ಥಿತಿ ಕ್ಷೀಣಿಸುತ್ತಲೇ ಇತ್ತು. ಅಕೆಯನ್ನು ಅಚಲಪುರಕ್ಕೆ ಮತ್ತು ನಂತರ ಅಮರಾವತಿಗೆ ವರ್ಗಾಯಿಸಿ ಚಿಕಿತ್ಸೆ ಕೊಡಿಸಿದ್ದರು.

“ಭಾನುವಾರ ಬೆಳಿಗ್ಗೆ ತಾಯಿ ಮತ್ತು ಶಿಶು ಇಬ್ಬರ ಜೀವನ್ ಹೋರಾಟ ಕೊನೆಗೊಂಡಿತು. ಅಸಮರ್ಪಕ ಆರೋಗ್ಯ ಮೂಲಸೌಕರ್ಯದಿಂದ ಇಬ್ಬರೂ ಜೀವಗಳನ್ನು ಕಳೆದುಕೊಂಡರು. ತಿಂಗಳಿಗೆ ₹ 1500 ಪಾವತಿಸಿ ಮತ ಕೇಳುತ್ತಿರುವ ಸರ್ಕಾರ. ‘ಲಡ್ಕಿ ಬಹಿನ್’ ಯೋಜನೆ, ಮೆಗಾ ಪ್ರಚಾರದ ಬ್ಲಿಟ್ಜ್ ಹಣವನ್ನು ಇಲ್ಲಿ ಆಂಬ್ಯುಲೆನ್ಸ್‌ಗಳಿಗಾಗಿ ಖರ್ಚು ಮಾಡಬಹುದಿತ್ತು” ಎಂದು ವಡೆಟ್ಟಿವಾರ್ ಹೇಳಿದರು.

ಎರಡೂ ಘಟನೆಗಳು ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಪ್ರತಿಕ್ರಿಯೆಗಳನ್ನು ಹುಟ್ಟುಹಾಕಿವೆ. ಆದರೂ ಆಡಳಿತ ಪಕ್ಷದಿಂದ ಇದುವರೆಗೆ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ.

ಇದನ್ನೂ ಓದಿ; ಹೇಮಾ ಸಮಿತಿ ವರದಿಗೆ ಸಂಬಂಧಿಸಿದ ವಿಷಯಗಳ ವಿಚಾರಣೆಗೆ ವಿಶೇಷ ಪೀಠ ರಚನೆ; ಕೇರಳ ಹೈಕೋರ್ಟ್ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...