Homeಫ್ಯಾಕ್ಟ್‌ಚೆಕ್FACT CHECK : ಹಿಂದೂ ಬಾಲಕನ ತಾಯತವನ್ನು ಮುಸ್ಲಿಮರು ಬಲವಂತದಿಂದ ತೆಗೆದಿದ್ದಾರೆ ಎಂಬುವುದು ಸುಳ್ಳು

FACT CHECK : ಹಿಂದೂ ಬಾಲಕನ ತಾಯತವನ್ನು ಮುಸ್ಲಿಮರು ಬಲವಂತದಿಂದ ತೆಗೆದಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ಬಾಂಗ್ಲಾದೇಶದಲ್ಲಿ ಹಿಂದೂ ಬಾಲಕನ ಕತ್ತಿನಿಂದ ‘ತುಳಸಿ ಮಾಲೆ’ ಅಥವಾ ತಾಯತವನ್ನು ಮುಸ್ಲಿಮರು ಬಲವಂತವಾಗಿ ಕಿತ್ತು ಹಾಕಿದ್ದಾರೆ ಎಂದು ಆರೋಪಿಸಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಿಡಿಯೋದಲ್ಲಿ ಮೊಣಕಾಲು ಮಟ್ಟ ನೀರಿನಲ್ಲಿ ನಿಂತಿರುವ ಬಾಲಕನಿಗೆ ಆಹಾರ ಸಾಮಗ್ರಿ ನೀಡುವ ಮುಸ್ಲಿಂ ವ್ಯಕ್ತಿಯೊಬ್ಬರು, ಆತನ ಕತ್ತಿನಲ್ಲಿರುವ ತಾಯತವನ್ನು ಹಲ್ಲಿನಿಂದ ಕಚ್ಚಿ ಕತ್ತರಿಸಿ ತೆಗೆಯುವ ದೃಶ್ಯವಿದೆ. ವಿಡಿಯೋ ಮೇಲೆ ಬಾಂಗ್ಲಾ ಭಾಷೆಯಲ್ಲಿ “ನೊಖಾಲಿಯಲ್ಲಿ ರಿಲೀಫ್ ಸಾಮಗ್ರಿಗಳ ವಿತರಣೆಯ ಸಮಯದಲ್ಲಿ ಮಗುವಿಗೆ ಶಿರ್ಕ್‌ನಿಂದ ಮುಕ್ತಿ ದೊರೆಯಿತು” ಎಂದು ಬರೆಯಲಾಗಿದೆ.

ಆಗಾಗ ಸುಳ್ಳು ಸುದ್ದಿಗಳನ್ನು ಹಂಚಿಕೊಳ್ಳುವ ಜಿತೇಂದ್ರ ಪ್ರತಾಪ್ ಸಿಂಗ್ (@jpsin1) ಎಂಬ ಎಕ್ಸ್‌ ಬಳಕೆದಾರ ಆಗಸ್ಟ್ 30ರಂದು ವಿಡಿಯೋ ಹಂಚಿಕೊಂಡು “ಬಾಂಗ್ಲಾದೇಶದ ಹೊಸ ಸರ್ಕಾರ ಹಿಂದೂಗಳನ್ನು ಹೇಗೆ ನಾಶ ಮಾಡುತ್ತಿದೆ ಎಂಬುವುದನ್ನು ನೋಡಿ. ನೊಖಾಲಿಯಲ್ಲಿ ಪ್ರವಾಹದಲ್ಲಿ ದಿನಗಟ್ಟಲೆ ಸಿಲುಕಿ ಹಸಿದಿದ್ದ ಹಿಂದೂ ಮಗುವನ್ನು ಜಮಾತ್-ಎ-ಇಸ್ಲಾಮಿಯ ಮೌಲ್ವಿಯೊಬ್ಬರು ಸಹಾಯ ಪಡೆಯುವ ಮೊದಲು ಕಲಿಮಾವನ್ನು ಪಠಿಸುವಂತೆ ಒತ್ತಾಯಿಸಿದರು. ನಂತರ ಮೌಲ್ವಿಯು ಮಗುವಿನ ಹಿಂದೂ ಸಂಕೇತವಾದ ತುಳಸಿ ಮಾಲೆಯನ್ನು ಬಲವಂತವಾಗಿ ತೆಗೆದು ಹಾಕಿದರು. ಅವನು ಇನ್ನು ಮುಂದೆ ಹಿಂದೂ ಅಲ್ಲ ಎಂದು ಮಗುವಿಗೆ ಹೇಳಿದರು. ಮಗು ಮಾಲೆಯನ್ನು ಹಿಂದಕ್ಕೆ ಕೇಳಿದಾಗ, ಅವರು ಇನ್ನು ಮುಂದೆ ಯಾವುದೇ ಪರಿಹಾರ ಸಾಮಗ್ರಿಗಳನ್ನು ಸಿಗುವುದಿಲ್ಲ ಎಂದು ಹೇಳಿದ್ದಾರೆ” ಎಂದು ಬರೆದುಕೊಂಡಿದ್ದರು.

ಬಲಪಂಥೀಯ ಸುದ್ದಿ ವೆಬ್‌ಸೈಟ್ ‘ಓಪ್ಇಂಡಿಯಾ’ ಕೂಡ ವಿಡಿಯೋ ಕುರಿತು ಆಗಸ್ಟ್ 30ರಂದು ವರದಿ ಪ್ರಕಟಿಸಿತ್ತು. ವರದಿಯಲ್ಲಿ ಹಿಂದೂ ಮಗುವಿನಿಂದ ಮೌಲ್ವಿ ತುಳಸಿ ಮಾಲೆಯನ್ನು ತೆಗೆದಿದ್ದಾರೆ ಎಂದು ಆರೋಪಿಸಿತ್ತು. ಬಳಿಕ, ಮಗುವಿನ ಧರ್ಮವನ್ನು ಖಚಿತವಾಗಿ ದೃಢೀಕರಿಸಲು ಸಾಧ್ಯವಿಲ್ಲ ಎಂದು ಸುದ್ದಿಯಲ್ಲಿ ತಿದ್ದುಪಡಿ ಮಾಡಿತ್ತು. ಆದರೆ, ಸುದ್ದಿಯ ಯುಆರ್‌ಎಲ್‌ ಲಿಂಕ್‌ನಲ್ಲಿ ಇನ್ನೂ ಕೂಡ ಹಿಂದೂ ಮಗು ಎಂದೇ ಇದೆ.

ಬಲಪಂಥೀಯ ಎಕ್ಸ್‌ ಬಳಕೆದಾರ ರೌಶನ್ ಸಿನ್ಹಾ ಅಥವಾ ಮಿ. ಸಿನ್ಹಾ  ಆಗಸ್ಟ್ 30ರಂದು ವಿಡಿಯೋ ಹಂಚಿಕೊಂಡು ” ಬಾಂಗ್ಲಾದೇಶದಲ್ಲಿ ಇಸ್ಲಾಮಿಸ್ಟ್‌ಗಳು ಪರಿಹಾರ ಸಾಮಾಗ್ರಿ ನೀಡಲು ಹಿಂದೂ ಮಕ್ಕಳ ಕುತ್ತಿಗೆಯಿಂದ ಧಾರ್ಮಿಕ ದಾರವನ್ನು ತೆಗೆದಿದ್ದಾರೆ. ಭಾರತದಲ್ಲಿ ಯಾವುದಾದರೂ ಸಹಾಯಕ್ಕೆ ಬದಲಾಗಿ ಯಾವುದೇ ಹಿಂದೂ ಸ್ವಾಮಿ ಮುಸ್ಲಿಂ ವ್ಯಕ್ತಿಗೆ ಇದೇ ರೀತಿ ಮಾಡಿದರೆ ಏನಾಗುತ್ತಿತ್ತು ಊಹಿಸಿ” ಎಂದು ಬರೆದಕೊಂಡಿದ್ದರು.

ಮತ್ತೊಂದು ಬಲಪಂಥೀಯ ಎಕ್ಸ್‌ ಖಾತೆ ಫ್ರಂಟಲ್ ಫೋರ್ಸ್ (@FrontalForce) ಕೂಡ ಮಿ. ಸಿನ್ಹಾನಂತೆ ಬರೆದುಕೊಂಡು ಆಗಸ್ಟ್ 30ರಂದು ವಿಡಿಯೋ ಹಂಚಿಕೊಂಡಿತ್ತು.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯಲು ನಾವು ಆ ಕುರಿತು ಮಾಹಿತಿ ಹುಡುಕಿದ್ದೇವೆ. ಈ ವೇಳೆ ಖ್ಯಾತ ಫ್ಯಾಕ್ಟ್‌ಚೆಕ್ ಸಂಸ್ಥೆ ಆಲ್ಟ್‌ ನ್ಯೂಸ್ ವಿಡಿಯೋ ಕುರಿತು ಸುದ್ದಿ ಮಾಡಿರುವುದು ಕಂಡು ಬಂದಿದೆ.

ಆಲ್ಟ್ ನ್ಯೂಸ್ ಸುದ್ದಿಯಲ್ಲಿ “ನಾವು ಬಾಂಗ್ಲಾದೇಶದ ಫ್ಯಾಕ್ಟ್‌ಚೆಕ್ಕರ್ ಸೊಹಾನುರ್ಹ್ಮಾನ್ ಅವರೊಂದಿಗೆ ಮಾತನಾಡಿದ್ದೇವೆ. ಅವರು ವಿಡಿಯೋದಲ್ಲಿರುವ ಬಾಲಕ ಹಿಂದೂ ಧರ್ಮವದನಲ್ಲ, ಮುಸ್ಲಿಂ. ಅಲ್ಲದೆ, ಆತನ ಕತ್ತಿನಿಂದ ತುಳಸಿ ಮಾಲೆಯನ್ನಲ್ಲ ತೆಗೆದಿರುವುದು. ಅದು ತಲಿಸ್ಮನ್ (ಮುಸ್ಲಿಮರು ಧರಿಸುವ ತಾಯತ) ಎಂದು ಹೇಳಿದ್ದಾರೆ ಎಂದು ತಿಳಿಸಲಾಗಿದೆ.

ನಾವು ಸೊಹಾನುರ್ಹ್ಮಾನ್ ಅವರ ಎಕ್ಸ್‌ ಖಾತೆಯನ್ನು ಪರಿಶೀಲಿಸಿದಾಗ, ಆಗಸ್ಟ್ 30ರಂದು ಅವರು ವಿಡಿಯೋ ಕುರಿತು ಸ್ಪಷ್ಟನೆ ಕೊಟ್ಟಿರುವುದು ಕಂಡು ಬಂದಿದೆ.

ಸೊಹಾನುರ್ಹ್ಮಾನ್ ಹೇಳಿರುವಂತೆ “ವೈರಲ್ ವಿಡಿಯೋವನ್ನು ಆಗಸ್ಟ್ 26ರಂದ ರಸೇಲ್ ಖಾನ್ ಎಂಬವರು ಮೊದಲು ಫೇಸ್‌ಬುಕ್‌ನಲ್ಲಿ ಅಪ್ಲೋಡ್ ಮಾಡಿದ್ದರು. ವಿಡಿಯೋದಲ್ಲಿ ಘಟನೆ ನಡೆದಿರುವುದು ನೊಖಾಲಿ  ಪ್ರದೇಶದಲ್ಲಿ ಎಂದಿದೆ. ಆ ಪ್ರದೇಶದಲ್ಲಿ ಚಂದ್‌ಪುರದ ‘ತೌಹಿದ್ ಅಕಾಡೆಮಿ ಮತ್ತು ಇಸ್ಲಾಮಿಕ್ ಸೆಂಟರ್’ ಎಂಬ ಹೆಸರಿನ ಸಲಫಿ ಇಸ್ಲಾಮಿಕ್ ಶಾಲೆಯು ಜನರಿಗೆ ಪರಿಹಾರ ಸಾಮಾಗ್ರಿಗಳನ್ನು ವಿತರಿಸಿತ್ತು. ಸಲಫಿ/ಅಹ್ಲೆ ಹದೀಸ್ ಅನುಯಾಯಿಗಳು ತವೀಜ್ (ತಾಯತ) ಧರಿಸುವುದನ್ನು ವಿರೋಧಿಸುತ್ತಾರೆ. ಸಲಫಿಗಳು ಅನೇಕ ಕಡೆಗಳಲ್ಲಿ ಜನರ ಕತ್ತಿನಿಂದ ತಾಯತ ಕತ್ತರಿಸಿದ ವಿಡಿಯೋಗಳು ಲಭ್ಯವಿದೆ”

“ಹಿಂದೂ ಬಾಲಕನ ತಾಯತ ಕತ್ತರಿಸಿ ಆತನನ್ನು ಶಿರ್ಕ್‌ನಿಂದ ಹೊರತರಲು ಸಾಧ್ಯವಿಲ್ಲ. ಈ ಶಿರ್ಕ್‌ ಅನ್ನುವುದು ಅಲ್ಲಾಹನನ್ನು ಆರಾಧಿಸುವ ಮುಸ್ಲಿಮರಿಗೆ ಸಂಬಂಧಿಸಿದ್ದಾಗಿದೆ. ಇಸ್ಲಾಮಿನಲ್ಲಿ ಬಹು ದೈವಾರಾಧನೆ ಶಿರ್ಕ್‌ ಎಂದು ಪರಿಗಣಿಸಲಾಗುತ್ತದೆ. ಸಲಫಿಗಳು ತಾಯತ ಧರಿಸುವುದನ್ನೂ ಬಹು ದೈವಾರಾಧನೆ ಎಂದು ಹೇಳುತ್ತಾರೆ. ಹಾಗಾಗಿ, ಮುಸ್ಲಿಂ ಬಾಲಕನ ಕತ್ತಿನಿಂದ ತಾಯತ ತೆಗೆದಿದ್ದಾರೆ” ಎಂದು ಸೊಹಾನುರ್ಹ್ಮಾನ್ ವಿವರಿಸಿದ್ದಾರೆ.

ವೈರಲ್ ವಿಡಿಯೋದಲ್ಲಿರುವ ಮೌಲ್ವಿಯ ಹೆಸರು ಅಬ್ದುಲ್ ಮಲೆಕ್ ಮಿಯಾಜಿ. ತೌಹೀದ್ ಅಕಾಡೆಮಿ ಮತ್ತು ಇಸ್ಲಾಮಿಕ್ ಸೆಂಟರ್ ನಿರ್ವಹಿಸುತ್ತಿರುವ ಜಾಮಿಯಾ ದಾರುತೌಹೀದ್‌ನ ಸಹಾಯಕ ಪ್ರಾಂಶುಪಾಲರಾಗಿದ್ದಾರೆ. ಅವರೊಂದಿಗೆ ಸೊಹಾನುರ್ಹ್ಮಾನ್ ಮಾತನಾಡಿದ್ದು,” ವಿಡಿಯೋದಲ್ಲಿ ಬಾಲಕನ ಕತ್ತಿನಿಂದ ತಾಯತ ಕತ್ತರಿಸಿದ್ದು ನಾನೆ. ನೊವಾಖಾಲಿಯಲ್ಲಿ ಪರಿಹಾರ ಸಾಮಾಗ್ರಿಗಳನ್ನು ವಿತರಿಸುತ್ತಿದ್ದಾಗ ಆ ವಿಡಿಯೋ ಚಿತ್ರೀಕರಿಸಲಾಗಿದೆ. ವಿಡಿಯೋದಲ್ಲಿರುವ ಮಗುವಿನ ಹೆಸರು ಸೊಹೈಲ್ ಎಂದಾಗಿದ್ದು, ಆತ ಸ್ಥಳೀಯ ಮದ್ರಾಸದಲ್ಲಿ ಮೂರನೇ ತರಗತಿಯಲ್ಲಿ ಓದುತ್ತಿದ್ದಾನೆ. ಆತನ ತಂದೆಯ ಹೆಸರು ಅಬ್ದುಲ್ ಹಕ್, ಮತ್ತು ತಾಯಿ ರಜಿಯಾ ಖಾತುನ್ ಎಂದಾಗಿದೆ. ಇಬ್ಬರೂ ನೌಖಾಲಿಯ ಚಾರ್ ಅಲಗಿ ಗ್ರಾಮದವರು” ಎಂದು ವಿವರಿಸಿದ್ದಾರೆ.

ಒಟ್ಟಿನಲ್ಲಿ, ಬಾಂಗ್ಲಾದೇಶದ ನೊವಾಖಾಲಿಯಲ್ಲಿ ಪ್ರವಾಹ ಬಂದಾಗ, ಅಲ್ಲಿನ ಸ್ಥಳೀಯ ಸಲಫಿ ಸಂಸ್ಥೆ ತೌಹೀದ್ ಅಕಾಡೆಮಿ ಜನರಿಗೆ ಪರಿಹಾರ ಸಾಮಾಗ್ರಿಗಳನ್ನು ವಿತರಿಸಿತ್ತು. ಈ ವೇಳೆ ಪರಿಹಾರ ಸ್ವೀಕರಿಸಲು ಬಂದ ಸೊಹೈಲ್ ಎಂಬ ಬಾಲಕನ ಕತ್ತಿನಲ್ಲಿ ತಾಯತ ಕಂಡು, ಅದನ್ನು ಮೌಲ್ವಿ ಕತ್ತರಿಸಿ ತೆಗೆದಿದ್ದಾರೆ. ಆ ವಿಡಿಯೋವನ್ನು ಹಿಂದೂ ಬಾಲಕನ ತುಳಸಿ ಮಾಲೆಯನ್ನು ಮುಸ್ಲಿಮರು ಕತ್ತರಿಸಿದ್ದಾರೆ ಎಂದು ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ : FACT CHECK : ತಂದೆ ಇಲ್ಲದ ಮಕ್ಕಳ ಖಾತೆಗೆ ವರ್ಷಕ್ಕೆ 24 ಸಾವಿರ ರೂ. ಸ್ಕಾಲರ್‌ಶಿಪ್…ವೈರಲ್ ಸಂದೇಶದ ಸತ್ಯಾಸತ್ಯತೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...