Homeಮುಖಪುಟಕೊಯಮತ್ತೂರು | 12 ಮಂದಿ ಶಾಲಾ ಬಾಲಕಿಯರಿಗೆ ಲೈಂಗಿಕ ಕಿರುಕುಳ ಆರೋಪ: ವೈದ್ಯನ ಬಂಧನ

ಕೊಯಮತ್ತೂರು | 12 ಮಂದಿ ಶಾಲಾ ಬಾಲಕಿಯರಿಗೆ ಲೈಂಗಿಕ ಕಿರುಕುಳ ಆರೋಪ: ವೈದ್ಯನ ಬಂಧನ

- Advertisement -
- Advertisement -

ತಮಿಳುನಾಡಿನ ಕೊಯಮುತ್ತೂರಿನ ಜಿಲ್ಲೆಯ ಅಲಂದುರೈ ಸರ್ಕಾರಿ ಶಾಲೆಯಲ್ಲಿ ನಡೆದ ವೈದ್ಯಕೀಯ ಶಿಬಿರದಲ್ಲಿ 12 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕೊಯಮತ್ತೂರಿನ ಪೆರೂರ್ ಮಹಿಳಾ ಠಾಣೆ (ಎಡಬ್ಲ್ಯುಪಿಎಸ್) ಪೊಲೀಸರು ಶುಕ್ರವಾರ (ಸೆ.6) ವೈದ್ಯರೊಬ್ಬರನ್ನು ಬಂಧಿಸಿದ್ದಾರೆ ಎಂದು ವರದಿಗಳು ಹೇಳಿವೆ.

ಸರ್ಕಾರದ ಮುಖ್ಯ ಕಾರ್ಯದರ್ಶಿ ಎನ್ ಮುರುಗಾನಂದಂ ಅವರ ಆದೇಶದ ಮೇರೆಗೆ ಆಯೋಜಿಸಿದ್ದ ಶಿಕ್ಷಣಾಧಿಕಾರಿಗಳು ಮತ್ತು ವಿದ್ಯಾರ್ಥಿಗಳ ನಡುವಿನ ಸಭೆಯಲ್ಲಿ ಲೈಂಗಿಕ ದೌರ್ಜನ್ಯದ ಘಟನೆ ಬೆಳಕಿಗೆ ಬಂದಿದೆ.

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವಾಲ್ಪಾರೈನ ಸರ್ಕಾರಿ ಕಾಲೇಜಿನ ನಾಲ್ವರು ಸಿಬ್ಬಂದಿಯನ್ನು ಇತ್ತೀಚೆಗೆ ಬಂಧಿಸಲಾಗಿತ್ತು. ಈ ಹಿನ್ನೆಲೆ ರಾಜ್ಯಾದ್ಯಂತ ಶಿಕ್ಷಣಾಧಿಕಾರಿಗಳು ಮತ್ತು ವಿದ್ಯಾರ್ಥಿಗಳ ನಡುವಿನ ಸಭೆಗಳನ್ನು ಆಯೋಜಿಸುವಂತೆ ಆದೇಶಿಸಲಾಗಿತ್ತು.

ಬಂಧಿತ ವೈದ್ಯನನ್ನು ತಿರುಪತ್ತೂರು ಜಿಲ್ಲೆಯ 33 ವರ್ಷದ ಎಸ್ ಸರವಣಮೂರ್ತಿ ಎಂದು ಗುರುತಿಸಲಾಗಿದೆ. ಇವರು ಇಶಾ ಫೌಂಡೇಶನ್ ನಿರ್ವಹಿಸುವ ಸಂಚಾರಿ ವೈದ್ಯಕೀಯ ಘಟಕಗಳ ತಂಡದ ಭಾಗವಾಗಿದ್ದರು. ಈ ಘಟಕಗಳು ತಮ್ಮ ‘ಆಕ್ಷನ್ ಫಾರ್ ರೂರಲ್ ರಿಜುವೆನೇಶನ್’ ಕಾರ್ಯಕ್ರಮದ ಅಡಿಯಲ್ಲಿ ಕೊಯಮತ್ತೂರಿನಾದ್ಯಂತ ಶಾಲಾ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಉಚಿತ ವೈದ್ಯಕೀಯ ಶಿಬಿರಗಳನ್ನು ನಡೆಸುತ್ತಿವೆ ಎಂದು ವರದಿಯಾಗಿದೆ.

ಸೆಪ್ಟೆಂಬರ್ 4, ಬುಧವಾರದಂದು ಶಿಕ್ಷಣಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ 6 ರಿಂದ 10ನೇ ತರಗತಿಯ ಸುಮಾರು 12 ವಿದ್ಯಾರ್ಥಿನಿಯರು ವೈದ್ಯಕೀಯ ಶಿಬಿರಗಳಲ್ಲಿ ಸರವಣಮೂರ್ತಿ ಅವರು ಹೇಗೆ ಅನುಚಿತವಾಗಿ ತಮ್ಮನ್ನು ಸ್ಪರ್ಶಿಸಿದರು ಎಂಬುವುದರ ಕುರಿತು ದೂರು ನೀಡಿದ್ದಾರೆ.

ಕೂಡಲೇ, ಶಾಲೆಯ ಆಡಳಿತ ಮಂಡಳಿ ಮಕ್ಕಳ ಕಲ್ಯಾಣ ಸಮಿತಿಗೆ (ಸಿಡಬ್ಲ್ಯುಸಿ) ಈ ಕುರಿತು ಮಾಹಿತಿ ನೀಡಿದೆ. ಸಿಡಬ್ಲ್ಯುಸಿ ವಿದ್ಯಾರ್ಥಿಗಳನ್ನು ವಿಚಾರಣೆ ನಡೆಸಿ, ಪ್ರಕರಣವನ್ನು ಪೇರೂರ್ ಮಹಿಳಾ ಪೊಲೀಸರಿಗೆ ವರ್ಗಾಯಿಸಿದೆ.

ಪೊಲೀಸ್ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಸಂತ್ರಸ್ತ್ರ ವಿದ್ಯಾರ್ಥಿನಿಯರಲ್ಲಿ ಪ್ರತಿಯೊಬ್ಬರನ್ನೂ ವೈಯಕ್ತಿಕವಾಗಿ ಮಾತನಾಡಿಸಿದ್ದಾರೆ. ವಿದ್ಯಾರ್ಥಿನಿಯರ ಹೇಳಿಕೆಗಳನ್ನು ದಾಖಲಿಸಿದ ನಂತರ, ಆರೋಪಿ ವೈದ್ಯನ ವಿರುದ್ಧ ಸೆಕ್ಷನ್ 9 (ಇ) (ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಯ ಆಡಳಿತ ಅಥವಾ ಸಿಬ್ಬಂದಿ ಆಸ್ಪತ್ರೆಯಲ್ಲಿ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗುವುದು) 10 (ಶಿಕ್ಷೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಜೊತೆಗೆ ಪೋಕ್ಸೋ ಕಾಯ್ದೆಯ (ಲೈಂಗಿಕ ದೌರ್ಜನ್ಯ) ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ. ಸದ್ಯ, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ಬೆನ್ನಲ್ಲೇ ಪ್ರಕಟಣೆ ಹೊರಡಿಸಿರುವ ಇಶಾ ಫೌಂಡೇಶನ್, “ಕೊಯಮತ್ತೂರಿನ ಗ್ರಾಮಾಂತರ ಪ್ರದೇಶಗಳಲ್ಲಿ ನಮ್ಮ ಔಟ್ರೀಚ್ ಮೊಬೈಲ್ ವೈದ್ಯಕೀಯ ಸೇವೆಯ ವೈದ್ಯನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂಬುವುದು ನಮ್ಮ ಗಮನಕ್ಕೆ ಬಂದಿದೆ. ಮಹಿಳೆಯರು ಮತ್ತು ಮಕ್ಕಳ ವಿರುದ್ಧದ ಯಾವುದೇ ಅಪರಾಧ ಪ್ರಕರಣಗಳಲ್ಲಿ ಆರೋಪಿಯ ಮೇಲೆ ಇಶಾ ಶೂನ್ಯ ಸಹಿಷ್ಣುತೆಯ ನೀತಿಯನ್ನು ಹೊಂದಿದೆ. ಪ್ರಸ್ತುತ ನಡೆಯುತ್ತಿರುವ ಪೊಲೀಸ್ ತನಿಖೆಗೆ ನಾವು ಸಹಕರಿಸುತ್ತಿದ್ದೇವೆ ಮತ್ತು ಕಾನೂನು ಮೂಲಕ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದೆ.

ಇದನ್ನೂ ಓದಿ : ಕುಸ್ತಿಪಟುಗಳ ಪ್ರತಿಭಟನೆ ನನ್ನ ವಿರುದ್ಧ ನಡೆಸಿದ ಪಿತೂರಿ ಎಂಬುದು ಸಾಬೀತಾಗಿದೆ: ಬ್ರಿಜ್ ಭೂಷಣ್ ಶರಣ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...