Homeಕರ್ನಾಟಕಲೈಂಗಿಕ ದೌರ್ಜನ್ಯ ಆರೋಪ : ಮಹಿಳಾ ಕಲಾವಿದರ ಸಭೆ ಕರೆದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ

ಲೈಂಗಿಕ ದೌರ್ಜನ್ಯ ಆರೋಪ : ಮಹಿಳಾ ಕಲಾವಿದರ ಸಭೆ ಕರೆದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ

- Advertisement -
- Advertisement -

ಲೈಂಗಿಕ ಕಿರುಕುಳ ಸೇರಿದಂತೆ ಕನ್ನಡ ಚಿತ್ರರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್‌ಸಿಸಿ) ಸೆಪ್ಟೆಂಬರ್ 16 ರಂದು ಮಹಿಳಾ ಕಲಾವಿದರೊಂದಿಗೆ ಸಭೆ ನಡೆಸಲಿದೆ.

ಚಿತ್ರರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಲು ಸಭೆ ಕರೆಯುವಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿಯವರು ಪತ್ರ ಬರೆದಿರುವ ಹಿನ್ನೆಲೆ, ಕೆಎಫ್‌ಸಿಸಿ ಸಭೆ ಕರೆದಿದೆ ಎಂದು ವರದಿಗಳು ಹೇಳಿವೆ.

ನಾಗಲಕ್ಷ್ಮಿ ಚೌಧರಿ ಅವರು ತಮ್ಮ ಪತ್ರದಲ್ಲಿ ಕೇರಳದ ಹೇಮಾ ಸಮಿತಿ ವರದಿಯನ್ನು ಉಲ್ಲೇಖಿಸಿದ್ದು, ಲೈಂಗಿಕ ದೌರ್ಜನ್ಯ, ಕಿರುಕುಳ, ಬೆದರಿಕೆಗಳು ಮತ್ತು ಮಾನಸಿಕ ಹಿಂಸೆ ಸೇರಿದಂತೆ ಕೇರಳ ಚಲನಚಿತ್ರೋದ್ಯಮದಲ್ಲಿ ಮಹಿಳಾ ಕಲಾವಿದರು ಎದುರಿಸುತ್ತಿರುವ ಸಮಸ್ಯೆಗಳನ್ನು ಎತ್ತಿ ತೋರಿಸಿದ್ದಾರೆ. ಕನ್ನಡ ಸಿನಿಮಾ ರಂಗದಲ್ಲಿ ಈ ಬಗ್ಗೆ ಚರ್ಚೆ ನಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ಹಲವು ಸಿನಿಮಾಗಳ ಚಿತ್ರೀಕರಣ ನಡೆಯುತ್ತಿರುವುದರಿಂದ ಕಲಾವಿದರು ಸಭೆ ಹಾಜಾರಾಗುವ ಸಾಧ್ಯತೆಯ ಬಗ್ಗೆ ಕೆಎಫ್‌ಸಿಸಿ ಅಧ್ಯಕ್ಷ ಎನ್‌ಎಂ ಸುರೇಶ್ ಅನುಮಾನ ವ್ಯಕ್ತಪಡಿಸಿದ್ದಾರೆ. ಸೆಪ್ಟೆಂಬರ್ 16ರ ತಾತ್ಕಾಲಿಕ ದಿನಾಂಕವನ್ನು ಸಭೆಗೆ ನಿಗದಿಪಡಿಸಲಾಗಿದೆ. ಸೋಮವಾರ (ಸೆ. 9) ಸಭೆಯ ಬಗ್ಗೆ ಸ್ಪಷ್ಟ ಚಿತ್ರಣ ಹೊರಬೀಳಲಿದೆ” ಎಂದು ಸುರೇಶ್ ಹೇಳಿದ್ದಾರೆ.

ಲೈಂಗಿಕ ಹಿಂಸೆ ಸೇರಿದಂತೆ ಕನ್ನಡ ಚಲನಚಿತ್ರೋದ್ಯಮದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚಿಸುವಂತೆ ‘ಫಿಲ್ಮ್ ಇಂಡಸ್ಟ್ರಿ ಫಾರ್ ರೈಟ್ಸ್ ಅಂಡ್ ಇಕ್ವಾಲಿಟಿ’ (FIRE)ಈಗಾಗಲೇ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.

ಆರಂಭದಲ್ಲಿ FIRE ಮುಖ್ಯಮಂತ್ರಿಗೆ ಪತ್ರ ಬರೆದಿತ್ತು. ಅದಕ್ಕೆ ಸಿನಿಮಾ ಕಲಾವಿದರು, ಸಾಹಿತಿಗಳು, ಪತ್ರಕರ್ತರು ಮತ್ತು ಹೋರಾಟಗಾರರು ಸೇರಿದಂತೆ 153 ಮಂದಿ ಸಹಿ ಹಾಕಿದ್ದರು. ಬಳಿಕ FIRE ವತಿಯಿಂದ ನಟ, ನಟಿಯರು ಸಿಎಂ ಭೇಟಿಯಾಗಿ ಸಮಿತಿ ರಚನೆಗೆ ಆಗ್ರಹಿಸಿದ್ದಾರೆ. ನಟಿ ಸಂಜನಾ ಗಲ್ರಾನಿ ಅವರು ಪ್ರತ್ಯೇಖವಾಗಿ ಸಿಎಂ ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.

“ಚಿತ್ರರಂಗದ ಹಲವು ವಿಷಯಗಳಲ್ಲಿ ಮೌನ ವಹಿಸಿರುವ ಇತಿಹಾಸ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮತ್ತು ಕಲಾವಿದರ ಸಂಘಕ್ಕೆ ಇದೆ. ಈ ಹಿಂದೆ ಗೀತರಚನೆಕಾರ ಮತ್ತು ಸಂಗೀತ ಸಂಯೋಜಕ ಹಂಸಲೇಖ ಅವರನ್ನು ಗುರಿಯಾಗಿಸಿ ಅಕ್ಷರ, ಭಾಷಣ ದಾಳಿಯಾದಾಗ ಈ ಸಮಿತಿಗಳು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ತನ್ನ ಕಲಾವಿದರನ್ನು ಬೆಂಬಲಿಸುವ ಕಾರ್ಯವನ್ನೂ ಮಾಡಿಲ್ಲ ಎಂದು” ದಿ ನ್ಯೂಸ್ ಮಿನಿಟ್ ಸುದ್ದಿ ಸಂಸ್ಥೆ ತನ್ನ ವರದಿಯಲ್ಲಿ ಟೀಕಿಸಿದೆ.

ಕೊಲೆ ಪ್ರಕರಣದಲ್ಲಿ ಪ್ರಸ್ತುತ ಜೈಲಿನಲ್ಲಿರುವ ನಟ ದರ್ಶನ್ ತನ್ನ ಪತ್ನಿ ವಿಜಯಲಕ್ಷ್ಮಿ ಮೇಲೆ ಹಲ್ಲೆ ನಡೆಸಿದ ಆರೋಪ 2011ರಲ್ಲಿ ಕೇಳಿ ಬಂದಿತ್ತು. ಈ ವಿಚಾರದಲ್ಲಿ ದರ್ಶನ್ ಮತ್ತು ಪತ್ನಿ ವಿಜಯಲಕ್ಷ್ಮಿ ನಡುವೆ ರಾಜಿ ಪಂಚಾಯಿತಿ ಮಾಡಲು ಆಗ ದಿವಗಂತ ನಟ ಅಂಬರೀಶ್ ಮಧ್ಯಸ್ಥಿಕೆ ವಹಿಸಿದ್ದರು. ಇದರ ಫಲವಾಗಿ ವಿಜಯಲಕ್ಷ್ಮಿ ರಾಜಿಗೆ ಒಪ್ಪಿಕೊಂಡರೂ ಒಂದು ಷರತ್ತು ವಿಧಿಸಿದ್ದರು. ತನ್ನ ವೈವಾಹಿಕ ಜೀವನಲ್ಲಿ ಮಧ್ಯ ಪ್ರವೇಶಿಸಿದ ಆರೋಪದ ಮೇಲೆ ನಟಿ ನಿಕಿತಾ ತುಕ್ರಾಲ್ ಅವರನ್ನು ಕನ್ನಡ ಚಲನಚಿತ್ರೋದ್ಯಮದಿಂದ ನಿಷೇಧಿಸಬೇಕೆಂದು ಅವರು ಒತ್ತಾಯಿಸಿದ್ದರು. ಅದಕ್ಕೆ ಒಪ್ಪಿದ್ದ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘ, ನಿಕಿತಾ ಅವರನ್ನು ಮೂರು ವರ್ಷಗಳ ಕಾಲ ನಿಷೇಧಿಸಿತ್ತು.

ಮತ್ತೊಂದು ಘಟನೆಯಲ್ಲಿ , 2015 ರಲ್ಲಿ ತಮ್ಮ ‘ವಿಸ್ಮಯ’ ಚಿತ್ರದ ಚಿತ್ರೀಕರಣ ವೇಳೆ ನಟ ಅರ್ಜುನ್ ಸರ್ಜಾ ಅವರು ಕಿರುಕುಳ ನೀಡಿದ್ದಾರೆ ಎಂದು ನಟಿ ಶ್ರುತಿ ಹರಿಹರನ್ ಆರೋಪಿಸಿದ್ದರು. ಆ ಬಳಿಕ ಅವರಿಗೆ ಚಿತ್ರರಂಗದಲ್ಲಿ ಅವಕಾಶಗಳು ಕಡಿಮೆಯಾಯಿತು ಎಂದು ಸ್ವತಃ ಶ್ರುತಿ ಹರಿಹರನ್ ಹೇಳಿಕೊಂಡಿದ್ದರು. ಶ್ರುತಿ ಅವರ ಆರೋಪ ಸಂಬಂಧ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುವ ಬದಲು ಫಿಲ್ಮ್ ಚೇಂಬರ್ ಇಬ್ಬರ ನಡುವೆ ‘ರಾಜಿ’ ಮಾಡಲು ಪ್ರಯತ್ನಿಸಿತ್ತು. ಆದರೆ, ಶ್ರುತಿ ತನ್ನ ಆರೋಪಗಳನ್ನು ಹಿಂಪಡೆಯಲು ನಿರಾಕರಿಸಿದ್ದರು. ಬಳಿಕ ಅರ್ಜುನ್ ಸರ್ಜಾ ಅವರು ಶ್ರುತಿ ವಿರುದ್ದ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಇದನ್ನೂ ಓದಿ : ಕೊಯಮತ್ತೂರು | 12 ಮಂದಿ ಶಾಲಾ ಬಾಲಕಿಯರಿಗೆ ಲೈಂಗಿಕ ಕಿರುಕುಳ ಆರೋಪ: ವೈದ್ಯನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...