Homeಫ್ಯಾಕ್ಟ್‌ಚೆಕ್FACT CHECK : ಕಲಬುರಗಿಯ ಹಳೆಯ ವಿಡಿಯೋಗೆ ಕೋಮು ಬಣ್ಣ ಬಳಿದು ಹಂಚಿಕೊಳ್ಳುತ್ತಿರುವ ಬಲಪಂಥೀಯರು

FACT CHECK : ಕಲಬುರಗಿಯ ಹಳೆಯ ವಿಡಿಯೋಗೆ ಕೋಮು ಬಣ್ಣ ಬಳಿದು ಹಂಚಿಕೊಳ್ಳುತ್ತಿರುವ ಬಲಪಂಥೀಯರು

- Advertisement -
- Advertisement -

ಇಬ್ಬರು ವ್ಯಕ್ತಿಗಳು ಬಾಲಕನೋರ್ವನ ಕೈ ಹಿಡಿದುಕೊಂಡು, ಆತನಿಂದ ರೈಲು ಹಳಿ ಮೇಲೆ ಇಟ್ಟಿರುವ ಕಲ್ಲುಗಳನ್ನು ತೆಗೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ವಿಡಿಯೋದಲ್ಲಿ, ಆ ವ್ಯಕ್ತಿಗಳು ಕನ್ನಡ ಭಾಷೆಯಲ್ಲಿ “ಎಷ್ಟು ರೈಲುಗಳಿಗೆ ಈ ರೀತಿ ಕಲ್ಲು ಇಟ್ಟಿದ್ದೀರಿ? ಎಂದು ಕೇಳುತ್ತಿರುವುದು ಮತ್ತು ಅದಕ್ಕೆ, “ಇದೇ ಮೊದಲ ಬಾರಿ ಇಟ್ಟಿದ್ದೀನಿ ಅಂಕಲ್. ನಿಮ್ಮ ಕಾಲಿಗೆ ಬೀಳುತ್ತೇನೆ, ದಯವಿಟ್ಟು ಬಿಟ್ಟು ಬಿಡಿ” ಎಂದು ಬಾಲಕ ಹೇಳುತ್ತಿರುವುದನ್ನು ನೋಡಬಹುದು.

ಸದಾ ಸುಳ್ಳು ಮತ್ತು ಕೋಮು ದ್ವೇಷದ ಸುದ್ದಿಗಳನ್ನು ಹಂಚಿಕೊಳ್ಳುವ ಬಲಪಂಥೀಯ ಎಕ್ಸ್ ಬಳಕೆದಾರ ರೌಶನ್ ಸಿಹ್ಹಾ ಅಥವಾ ಮಿ.ಸಿನ್ಹಾ ಇಂದು (ಸೆಪ್ಟೆಂಬರ್ 8, 2024) ವಿಡಿಯೋ ಪೋಸ್ಟ್ ಮಾಡಿ “ಇದು ತಮಾಷೆಯಲ್ಲ; ಇದು ಗಂಭೀರ ಸಮಸ್ಯೆ!. ದಿನಾಂಕ ಮತ್ತು ಸ್ಥಳ ತಿಳಿದಿಲ್ಲ. ಆದರೆ, ಇಂತಹ ವಿಡಿಯೋಗಳು ಬಹುತೇಕ ಪ್ರತಿದಿನ ಹೊರ ಬರುತ್ತಿವೆ. ರೈಲು ಹಳಿತಪ್ಪಿಸುವ ಉದ್ದೇಶದಿಂದ ಇಂತಹ ಕೆಲಸಗಳನ್ನು ಮಾಡಲು ಅವರಿಗೆ ಕಲಿಸಲಾಗುತ್ತಿದೆಯೇ?” ಎಂದು ಬರೆದುಕೊಂಡಿದ್ದಾರೆ.

ಮತ್ತೋರ್ವ ಬಲ ಪಂಥೀಯ ಎಕ್ಸ್ ಬಳಕೆದಾರ ದೀಪಕ್ ಶರ್ಮಾ (@SonOfBharat7)ಸೆಪ್ಟೆಂಬರ್ 6, 2024ರಂದು ವಿಡಿಯೋ ಹಂಚಿಕೊಂಡು ” ಹಿಂದೂಗಳೇ ನಿಮ್ಮನ್ನು ಕೊಲ್ಲಲು ನರಭಕ್ಷಕ ಜಿಹಾದಿಗಳ ಮಗು ಸಿದ್ದವಾಗಿದೆ. ನಿಮ್ಮ ಪ್ರೀತಿ ಪಾತ್ರರ ಮೃತದೇಹಗಳನ್ನು ನಿಮ್ಮ ನಾಲ್ಕು ಭುಜಗಳ ಮೇಲೆ ಹೊತ್ತುಕೊಂಡು ಹೋಗುತ್ತೀರಿ. ಈ ವಿಡಿಯೋ ಕರ್ನಾಟಕದದ್ದು ಎನ್ನಲಾಗಿದೆ. ಎಕ್ಸ್ ಪ್ರೆಸ್ ರೈಲು ಪಲ್ಟಿಯಾಗಿ ಎಷ್ಟೋ ಜನ ಪ್ರಾಣ ಕಳೆದುಕೊಂಡಿದ್ದಾರೆ. ಹೀಗೊಂದು ಸುದ್ದಿ ಬರುವ ದಿನ ದೂರವಿಲ್ಲ. ಎಚ್ಚರಿಕೆ” ಎಂದು ಹಿಂದಿ ಭಾಷೆಯಲ್ಲಿ ಬರೆದುಕೊಂಡಿದ್ದರು

ಕೋಮು ದ್ವೇಷದ ಸುದ್ದಿಗಳನ್ನು ಹಂಚಿಕೊಳ್ಳುವ ಫ್ರಂಟಲ್ ಪೋರ್ಸ್ (@FrontalForce) ಎಂಬ ಇನ್ನೊಂದು ಎಕ್ಸ್ ಖಾತೆಯಲ್ಲಿ ಸೆಪ್ಟೆಂಬರ್ 7ರಂದು ವಿಡಿಯೋ ಹಂಚಿಕೊಂಡು “ಬ್ರೇಕಿಂಗ್, ರೈಲು ಅಪಘಾತ ಉಂಟು ಮಾಡಲು ರೈಲು ಹಳಿಗಳ ಮೇಲೆ ಕಲ್ಲು ಮತ್ತು ಇತರ ವಸ್ತುಗಳನ್ನು ಇಟ್ಟು ಸ್ಥಳೀಯರ ಕೈಗೆ ಸಿಕ್ಕಿಬಿದ್ದ ಮೂಲಭೂತವಾದಿ ಎಂದು ಬರೆದುಕೊಂಡಿದ್ದರು.

ಇನ್ನೂ ಅನೇಕ ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು ವಿಡಿಯೋ ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡವರಲ್ಲಿ ಕೆಲವರು ‘ಮುಸ್ಲಿಂ ಹುಡುಗ’ ರೈಲು ಹಳಿ ಮೇಲೆ ಕಲ್ಲುಗಳನ್ನು ಇಟ್ಟು ಸಿಕ್ಕಿ ಬಿದ್ದಿದ್ದಾನೆ ಎಂದು ನೇರವಾಗಿ ಬರೆದುಕೊಂಡರೆ, ಇನ್ನೂ ಕೆಲವರು ಪರೋಕ್ಷವಾಗಿ ವಿಡಿಯೋಗೆ ಕೋಮು ಬಣ್ಣ ಬಳಿಯುವ ಪ್ರಯತ್ನ ಮಾಡಿದ್ದಾರೆ.

ವಿಡಿಯೋ ಪೋಸ್ಟ್ ಮಾಡಿದವರು ಸದಾ ಸುಳ್ಳು ಮತ್ತು ಕೋಮುದ್ವೇಷದ ಸುದ್ದಿಗಳನ್ನು ಹಂಚಿಕೊಳ್ಳುವವರಾದ್ದರಿಂದ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ.

ಫ್ಯಾಕ್ಟ್‌ಚೆಕ್ : ವೈರಲ್ ಆಗಿರುವ ವಿಡಿಯೋ ಕರ್ನಾಟಕದ ಕಲಬುರಗಿ ಜಿಲ್ಲೆಯದ್ದು ಮತ್ತು ಆರು ವರ್ಷ ಹಳೆಯದ್ದಾಗಿದೆ. ಅಂದರೆ, 2018ರಲ್ಲಿ ನಡೆದ ಘಟನೆಯದ್ದಾಗಿದೆ.

ಕಲಬುರಗಿ ಕೇಂದ್ರ ರೈಲು ನಿಲ್ದಾಣದಿಂದ ಹಿರೇನಂದೂರು ಕಡೆಗೆ ಸುಮಾರು 2 ಕಿಮೀ ದೂರದಲ್ಲಿ ಈ ಘಟನೆ ನಡೆದಿದೆ. ವಿಡಿಯೋದಲ್ಲಿರುವ ಬಾಲಕ ಪಕ್ಕದ ಕೊಳಗೇರಿಯ ನಿವಾಸಿಯಾಗಿದ್ದು, ಆತ ಮತ್ತು ಸ್ನೇಹಿತರು ಆಟವಾಡುತ್ತಾ ರೈಲು ಹಳಿ ಮೇಲೆ ಕಲ್ಲುಗಳನ್ನು ಜೋಡಿಸಿದ್ದಾರೆ. ಅವರಿಗೆ ಹಳಿ ಮೇಲೆ ಕಲ್ಲುಗಳನ್ನು ಇಟ್ಟು ಅಪಘಾತ ಉಂಟು ಮಾಡುವ ಯಾವುದೇ ಉದ್ದೇಶ ಇರಲಿಲ್ಲ.

ಮಕ್ಕಳು ರೈಲು ಹಳಿಗಳ ಮೇಲೆ ಕಲ್ಲು ಇಟ್ಟಿರುವುದನ್ನು ಗಮನಿಸಿದ ಟ್ರ್ಯಾಕ್‌ಮೆನ್‌ಗಳಾದ ಗೋಪಾಲ್, ರಾಜ್‌ಕುಮಾರ್ ಮತ್ತು ರಾಜು ಬಾಲಕನೋರ್ವನನ್ನು ಹಿಡಿದು ಕಲ್ಲುಗಳನ್ನು ತೆಗೆಸಿದ್ದರು.

ಈ ಘಟನೆಯ ವಿಡಿಯೋ 2018ರ ಬಳಿಕ ಅನೇಕ ಬಾರಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಮುಸ್ಲಿಂ ಬಾಲಕರು ರೈಲು ಹಳಿಗಳ ಮೇಲೆ ಕಲ್ಲುಗಳನ್ನು ಇಟ್ಟಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗಿತ್ತು. ಅಸಲಿಗೆ ರೈಲು ಹಳಿಗೆ ಕಲ್ಲುಗಳನ್ನು ಇಟ್ಟ ಬಾಲಕ ಹಿಂದೂ ಧರ್ಮದವನಾಗಿದ್ದಾನೆ.

ಇಲ್ಲಿ ಬಾಲಕನ ಧರ್ಮವನ್ನು ಹೇಳುವ ಅಗತ್ಯವಿಲ್ಲ. ಆದರೆ, ಇತ್ತೀಚಿಗೆ ಯಾವುದೇ ರೈಲು ಹಳಿಗಳ ಮೇಲೆ ಯಾವುದೇ ವಸ್ತುಗಳನ್ನು ಇಟ್ಟಿರುವುದು ಕಂಡು ಬಂದರೆ ಅಥವಾ ನೂತನ ವಂದೇ ಭಾರತ್ ರೈಲಿಗೆ ಯಾರಾದರು ಕಲ್ಲು ಎಸೆದರೆ, ಅದನ್ನು ಮುಸ್ಲಿಮರೇ ಮಾಡಿದ್ದಾರೆ ಎಂದು ಹೇಳುವುದು ಕೆಲವರಿಗೆ ವಾಡಿಕೆಯಾಗಿದೆ. ಈ ಮೂಲಕ ಮುಸ್ಲಿಂ ಸಮುದಾಯವನ್ನು ದೇಶ ವಿರೋಧಿಗಳ ರೀತಿ ಬಿಂಬಿಸಲಾಗುತ್ತಿದೆ.

ಇತ್ತೀಚೆಗೆ ಪಾಕಿಸ್ತಾನದಲ್ಲಿ ರೈಲು ಹಳಿಯೊಂದರಿಂದ ಮಕ್ಕಳು ಕಬ್ಬಿಣದ ವಸ್ತುಗಳನ್ನು ಕಳವು ಮಾಡಿದ ಘಟನೆಯನ್ನು ಭಾರತದಲ್ಲಿ ರೈಲು ಅಪಘಾತ ಉಂಟು ಮಾಡಲು ಮುಸ್ಲಿಂ ಮಕ್ಕಳು ರೈಲು ಹಳಿಗೆ ಹಾನಿ ಮಾಡುತ್ತಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಅದನ್ನು ನಾವು ಫ್ಯಾಕ್ಟ್‌ಚೆಕ್ ಮಾಡಿ ಜನರಿಗೆ ಸತ್ಯಾಸತ್ಯತೆ ತಿಳಿಸುವ ಪ್ರಯತ್ನ ಮಾಡಿದ್ದೇವೆ. ಆ ಸುದ್ದಿಯ ಲಿಂಕ್ ಕೆಳಗಿದೆ.

FACT CHECK : ಮುಸ್ಲಿಂ ಮಕ್ಕಳು ರೈಲ್ವೆ ಹಳಿಗೆ ಹಾನಿ ಮಾಡಿದ್ದಾರೆ ಎಂದು ಸುಳ್ಳು ವಿಡಿಯೋ ಹಂಚಿಕೆ

ಕಳೆದ ವರ್ಷ ಕಲಬುರಗಿಯ ಬಾಲಕನ ವಿಡಿಯೋ ಸುಳ್ಳು ಪ್ರತಿಪಾದನೆ ಮತ್ತು ಕೋಮು ಬಣ್ಣದೊಂದಿಗೆ ವೈರಲ್ ಆಗಿತ್ತು. ಆಗ ಖ್ಯಾತ ಫ್ಯಾಕ್ಟ್‌ಚೆಕ್ ಸಂಸ್ಥೆ ಆಲ್ಟ್‌ ನ್ಯೂಸ್ ವರದಿ ಪ್ರಕಟಿಸಿ ಜನರಿಗೆ ಸತ್ಯ ತಿಳಿಸಿತ್ತು. ಅದರ ಲಿಂಕ್ ಕೆಳಗಿದೆ.

5-yr-old video of boy placing stones on rail tracks viral with misleading claims

ಆಲ್ಟ್‌ ನ್ಯೂಸ್ ಸುದ್ದಿ ಬರೆಯುವ ವೇಳೆ, ರಾಯಚೂರು ರೈಲ್ವೆಯ ವೃತ್ತ ನಿರೀಕ್ಷಕ ರವಿಕುಮಾರ್ ಅವರನ್ನು ಸಂಪರ್ಕಿಸಿತ್ತು. ಅವರು ಕಲಬುರಗಿಯಲ್ಲಿ ಮಕ್ಕಳು ಆಟವಾಡುತ್ತಾ ರೈಲು ಹಳಿ ಮೇಲೆ ಕಲ್ಲು ಇಟ್ಟಿರುವುದನ್ನು ಖಚಿತಪಡಿಸಿದ್ದರು.

ಇಂದು (ಸೆ.8, 2024) ಆಲ್ಟ್‌ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಝುಬೈರ್ ಅವರು ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ಕಲಬುರಗಿಯ ಹಳೆಯ ವಿಡಿಯೋಗೆ ಬಲಪಂಥೀಯರು ಕೋಮು ಬಣ್ಣ ಬಳಿದಿರುವುದನ್ನು ವಿವರಿಸಿದ್ದಾರೆ.

 

ಒಟ್ಟಿನಲ್ಲಿ, ಕಲಬುರಗಿಯಲ್ಲಿ 6 ವರ್ಷಗಳ ಹಿಂದೆ ನಡೆದ ಘಟನೆಯೊಂದರ ವಿಡಿಯೋವನ್ನು ಈಗ ಹಂಚಿಕೊಂಡು, ಅದಕ್ಕೆ ಕೋಮು ಬಣ್ಣ ಬಳಿಯಲಾಗಿದೆ.

ಇದನ್ನೂ ಓದಿ : FACT CHECK : ಹಿಂದೂ ಬಾಲಕನ ತಾಯತವನ್ನು ಮುಸ್ಲಿಮರು ಬಲವಂತದಿಂದ ತೆಗೆದಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...