Homeಫ್ಯಾಕ್ಟ್‌ಚೆಕ್FACT CHECK : ಪತ್ರಕರ್ತರ ಪ್ರಶ್ನೆಗೆ ಹೆದರಿ ಅಖಿಲೇಶ್ ಯಾದವ್ ಕಾಂಪೌಂಡ್ ಹಾರಿ ಓಡಿ ಹೋದ್ರಾ?

FACT CHECK : ಪತ್ರಕರ್ತರ ಪ್ರಶ್ನೆಗೆ ಹೆದರಿ ಅಖಿಲೇಶ್ ಯಾದವ್ ಕಾಂಪೌಂಡ್ ಹಾರಿ ಓಡಿ ಹೋದ್ರಾ?

- Advertisement -
- Advertisement -

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ವಿಡಿಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅದರಲ್ಲಿ, ಅಖಿಲೇಶ್ ಅವರು ಕಾಂಪೌಂಡ್ ಅಥವಾ ಗೇಟ್‌ನ್ನು ಜಿಗಿದು ಹೋಗುವುದು, ಹಲವಾರು ಟಿವಿ ಚಾನೆಲ್‌ಗಳ ಕ್ಯಾಮರಾಗಳು ಮತ್ತು ಪತ್ರಕರ್ತರು ಆ ದೃಶ್ಯವನ್ನು ಸೆರೆ ಹಿಡಿಯುವುದು ಇದೆ. ‘ಪತ್ರಕರ್ತರ ಪ್ರಶ್ನೆಗಳಿಂದ ತಪ್ಪಿಸಿಕೊಳ್ಳಲು ಅಖಿಲೇಶ್ ಯಾದವ್ ಓಡಿ ಹೋಗಿದ್ದಾರೆ’ ಎಂಬ ಶೀರ್ಷಿಕೆಯಿಂದ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ.

“ಪತ್ರಕರ್ತರು ಪ್ರಶ್ನೆಗಳನ್ನು ಕೇಳುತ್ತಿದ್ದಂತೆ ಅಖಿಲೇಶ್ ಯಾದವ್ ಓಡಿಹೋದರು” ಎಂಬ ಶೀರ್ಷಿಕೆಯೊಂದಿಗೆ ವಿಶ್ವ ಹಿಂದೂ ಪರಿಷತ್ ನಾಯಕಿ ಸಾಧ್ವಿ ಪ್ರಾಚಿ (@sadhvi?_Prachi)ಅವರು 18 ಸೆಕೆಂಡುಗಳ ಕ್ಲಿಪ್ ಅನ್ನು ಸೆಪ್ಟೆಂಬರ್ 4ರಂದು ಎಕ್ಸ್‌ನಲ್ಲಿ ಹಂಚಿಕೊಂಡಿದ್ದರು. ಬಳಿಕ ಸಾಧ್ವಿ ಅವರು ಅವರು ಪೋಸ್ಟ್ ಡಿಲಿಟ್ ಮಾಡಿದ್ದಾರೆ. ಆದರೆ, ಅಷ್ಟರಲ್ಲಿ ಅದು 2.3 ಲಕ್ಷ ವೀಕ್ಷಣೆ ಪಡೆದಿತ್ತು ಮತ್ತು 2 ಸಾವಿರ ಮಂದಿ ಶೇರ್ ಮಾಡಿದ್ದರು.

ಸದಾ ಕೋಮು ದ್ವೇಷದ ಸುದ್ದಿಗಳನ್ನು ಹಂಚಿಕೊಳ್ಳುವ ಸುನಂದಾ ರಾಯ್ (@SaffronSunanda)ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡು “ಪತ್ರಕರ್ತರು ಮೊಯೀದ್ ಖಾನ್ ಮತ್ತು ನವಾಬ್ ಯಾದವ್ ಅವರ ಬಗ್ಗೆ ಪ್ರಶ್ನೆಗಳನ್ನು ಕೇಳಿದ್ದಕ್ಕೆ, ಅಖಿಲೇಶ್ ಯಾದವ್ ಮಾಧ್ಯಮಗಳಿಂದ ತಪ್ಪಿಸಿಕೊಂಡು ಓಡಿ ಹೋಗಿದ್ದಾರೆ. ಈ ಮನುಷ್ಯ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಲು ಬಯಸುತ್ತಿದ್ದಾರೆ” ಎಂದು ಬರೆದುಕೊಂಡಿದ್ದರು. ಬಳಿಕ ಅವರು ಪೋಸ್ಟ್ ಡಿಲಿಟ್ ಮಾಡಿದ್ದರು. ಅಷ್ಟರಲ್ಲಿ ಅದು, 21,000 ವೀಕ್ಷಣೆಗಳನ್ನು ಪಡೆದಿತ್ತು.

ಇನ್ನೂ ಹಲವಾರು ಬಲಪಂಥೀಯ ಎಕ್ಸ್‌ ಹ್ಯಾಂಡಲ್‌ಗಳಲ್ಲಿ ವಿಡಿಯೋ ಪೋಸ್ಟ್ ಮಾಡಿ “ಅಖಿಲೇಶ್ ಯಾದವ್ ಪತ್ರಕರ್ತರಿಗೆ ಹೆದರಿ ಓಡಿ ಹೋಗಿದ್ದಾರೆ” ಎಂದು ಬರೆಯಲಾಗಿತ್ತು.

ಫ್ಯಾಕ್ಟ್‌ಚೆಕ್ : ಅಖಿಲೇಶ್ ಯಾದವ್ ಅವರ ವೈರಲ್ ಪೋಟೋ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಈ ವೇಳೆ ಅಕ್ಟೋಬರ್ 17, 2023ರಂದು ಸಮಾಜವಾದಿ ಪಕ್ಷ (ಎಸ್‌ಪಿ)ಯ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ವೈರಲ್ ವಿಡಿಯೋದಲ್ಲಿರುವ ಅಖಿಲೇಶ್ ಯಾದವ್ ಕಾಂಪೌಂಡ್ ಹಾರುವ ಫೋಟೋ ಪೋಸ್ಟ್ ಮಾಡಿರುವುದು ಕಂಡು ಬಂದಿದೆ.

ಫೋಟೋ ಕುರಿತು ವಿವರಣೆ ನೀಡಿರುವ ಸಮಾಜವಾದಿ ಪಕ್ಷ “ಜಯಪ್ರಕಾಶ್ ನಾರಾಯಣ ಅವರ ಜನ್ಮ ದಿನದ ಪ್ರಯುಕ್ತ ಅಕ್ಟೋಬರ್ 11, 2023ರಂದು ಲಕ್ನೋದ ಜಯಪ್ರಕಾಶ್ ನಾರಾಯಣ್ ಇಂಟರ್‌ನ್ಯಾಷನಲ್ ಸೆಂಟರ್ (ಜೆಪಿಎನ್ಐಸಿ) ನಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದರೆ, ಸರ್ಕಾರ ಜೆಪಿಎನ್ಐಸಿ ಗೇಟ್‌ಗೆ ಬೀಗ ಹಾಕಿ ಒಳಗೆ ಪ್ರವೇಶಿಸದಂತೆ ತಡೆದಿತ್ತು. ಈ ವೇಳೆ ಅಖಿಲೇಶ್ ಯಾದವ್ ಅವರು ಗೇಟ್ ಹಾರಿ ಒಳನುಗ್ಗಿ ಜಯಪ್ರಕಾಶ್ ನಾರಾಯಣ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ್ದಾರೆ” ಎಂದು ತಿಳಿಸಿದೆ.

ಅಕ್ಟೋಬರ್ 11, 2023ರಂದು ಇಂಡಿಯನ್ ಎಕ್ಸ್‌ಪ್ರೆಸ್ ಈ ಕುರಿತು ವರದಿ ಪ್ರಕಟಿಸಿತ್ತು, ಅದರಲ್ಲೂ “ಜೆಪಿಎನ್ಐಸಿ ಪ್ರವೇಶಿಸಲು ಅಖಿಲೇಶ್ ಯಾದವ್ ಅವರಿಗೆ ಅವಕಾಶ ನಿರಕರಿಸಿದ್ದಕ್ಕೆ, ಅವರು ಕಾಂಪೌಂಡ್ ಹಾರಿ ಜೆಪಿ ಅವರಿಗೆ ಗೌರವಾರ್ಪಣೆ ಮಾಡಿ ಬಂದಿದ್ದಾರೆ” ಎಂದು ತಿಳಿಸಲಾಗಿತ್ತು.

ಅಕ್ಟೋಬರ್ 11, 2023ರಂದು ದಿ ಎಕನಾಮಿಕ್ಸ್ ಟೈಮ್ಸ್ ಯೂಟ್ಯೂಬ್ ಚಾನೆಲ್‌ನಲ್ಲಿ ಕೂಡ ವಿಡಿಯೋ ಹಂಚಿಕೊಂಡು “ಜಯಪ್ರಕಾಶ್ ನಾರಾಯಣ ಅವರಿಗೆ ಗೌರವ ಸಲ್ಲಿಸಲು ಅಖಿಲೇಶ್ ಯಾದವ್ ಅವರು ಜೆಪಿಎನ್‌ಐಸಿಯ ಕಾಂಪೌಂಡ್ ಹಾರಿದರು” ಎಂದು ಶೀರ್ಷಿಕೆ ಕೊಡಲಾಗಿತ್ತು.

ಒಟ್ಟಿನಲ್ಲಿ “ಜಯಪ್ರಕಾಶ್ ನಾರಾಯಣ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲು ಅವಕಾಶ ನಿರಾಕರಿಸಿ ಜೆಪಿಎನ್‌ಐಸಿ ಗೇಟ್‌ಗೆ ಸರ್ಕಾರ ಬೀಗ ಹಾಕಿದ್ದಕ್ಕೆ ಅಖಿಲೇಶ್ ಯಾದವ್ ಗೇಟ್ ಹಾರಿ ಒಳ ಹೋಗಿದ್ದರು. ಆ ವಿಡಿಯೋ ಮತ್ತು ಫೋಟೋ ಹಂಚಿಕೊಂಡು “ಅಖಿಲೇಶ್ ಪತ್ರಕರ್ತರ ಪ್ರಶ್ನೆಗಳಿಗೆ ಹೆದರಿ ಓಡಿ ಹೋಗಿದ್ದಾರೆ” ಎಂದು ಸುಳ್ಳು ಸುದ್ದಿ ಹಬ್ಬಿಸಲಾಗಿದೆ.

ಇದನ್ನೂ ಓದಿ : FACT CHECK : ಕಲಬುರಗಿಯ ಹಳೆಯ ವಿಡಿಯೋಗೆ ಕೋಮು ಬಣ್ಣ ಬಳಿದು ಹಂಚಿಕೊಳ್ಳುತ್ತಿರುವ ಬಲಪಂಥೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...