Homeಫ್ಯಾಕ್ಟ್‌ಚೆಕ್FACT CHECK : ಪತ್ರಕರ್ತರ ಪ್ರಶ್ನೆಗೆ ಹೆದರಿ ಅಖಿಲೇಶ್ ಯಾದವ್ ಕಾಂಪೌಂಡ್ ಹಾರಿ ಓಡಿ ಹೋದ್ರಾ?

FACT CHECK : ಪತ್ರಕರ್ತರ ಪ್ರಶ್ನೆಗೆ ಹೆದರಿ ಅಖಿಲೇಶ್ ಯಾದವ್ ಕಾಂಪೌಂಡ್ ಹಾರಿ ಓಡಿ ಹೋದ್ರಾ?

- Advertisement -
- Advertisement -

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ವಿಡಿಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅದರಲ್ಲಿ, ಅಖಿಲೇಶ್ ಅವರು ಕಾಂಪೌಂಡ್ ಅಥವಾ ಗೇಟ್‌ನ್ನು ಜಿಗಿದು ಹೋಗುವುದು, ಹಲವಾರು ಟಿವಿ ಚಾನೆಲ್‌ಗಳ ಕ್ಯಾಮರಾಗಳು ಮತ್ತು ಪತ್ರಕರ್ತರು ಆ ದೃಶ್ಯವನ್ನು ಸೆರೆ ಹಿಡಿಯುವುದು ಇದೆ. ‘ಪತ್ರಕರ್ತರ ಪ್ರಶ್ನೆಗಳಿಂದ ತಪ್ಪಿಸಿಕೊಳ್ಳಲು ಅಖಿಲೇಶ್ ಯಾದವ್ ಓಡಿ ಹೋಗಿದ್ದಾರೆ’ ಎಂಬ ಶೀರ್ಷಿಕೆಯಿಂದ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ.

“ಪತ್ರಕರ್ತರು ಪ್ರಶ್ನೆಗಳನ್ನು ಕೇಳುತ್ತಿದ್ದಂತೆ ಅಖಿಲೇಶ್ ಯಾದವ್ ಓಡಿಹೋದರು” ಎಂಬ ಶೀರ್ಷಿಕೆಯೊಂದಿಗೆ ವಿಶ್ವ ಹಿಂದೂ ಪರಿಷತ್ ನಾಯಕಿ ಸಾಧ್ವಿ ಪ್ರಾಚಿ (@sadhvi?_Prachi)ಅವರು 18 ಸೆಕೆಂಡುಗಳ ಕ್ಲಿಪ್ ಅನ್ನು ಸೆಪ್ಟೆಂಬರ್ 4ರಂದು ಎಕ್ಸ್‌ನಲ್ಲಿ ಹಂಚಿಕೊಂಡಿದ್ದರು. ಬಳಿಕ ಸಾಧ್ವಿ ಅವರು ಅವರು ಪೋಸ್ಟ್ ಡಿಲಿಟ್ ಮಾಡಿದ್ದಾರೆ. ಆದರೆ, ಅಷ್ಟರಲ್ಲಿ ಅದು 2.3 ಲಕ್ಷ ವೀಕ್ಷಣೆ ಪಡೆದಿತ್ತು ಮತ್ತು 2 ಸಾವಿರ ಮಂದಿ ಶೇರ್ ಮಾಡಿದ್ದರು.

ಸದಾ ಕೋಮು ದ್ವೇಷದ ಸುದ್ದಿಗಳನ್ನು ಹಂಚಿಕೊಳ್ಳುವ ಸುನಂದಾ ರಾಯ್ (@SaffronSunanda)ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡು “ಪತ್ರಕರ್ತರು ಮೊಯೀದ್ ಖಾನ್ ಮತ್ತು ನವಾಬ್ ಯಾದವ್ ಅವರ ಬಗ್ಗೆ ಪ್ರಶ್ನೆಗಳನ್ನು ಕೇಳಿದ್ದಕ್ಕೆ, ಅಖಿಲೇಶ್ ಯಾದವ್ ಮಾಧ್ಯಮಗಳಿಂದ ತಪ್ಪಿಸಿಕೊಂಡು ಓಡಿ ಹೋಗಿದ್ದಾರೆ. ಈ ಮನುಷ್ಯ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಲು ಬಯಸುತ್ತಿದ್ದಾರೆ” ಎಂದು ಬರೆದುಕೊಂಡಿದ್ದರು. ಬಳಿಕ ಅವರು ಪೋಸ್ಟ್ ಡಿಲಿಟ್ ಮಾಡಿದ್ದರು. ಅಷ್ಟರಲ್ಲಿ ಅದು, 21,000 ವೀಕ್ಷಣೆಗಳನ್ನು ಪಡೆದಿತ್ತು.

ಇನ್ನೂ ಹಲವಾರು ಬಲಪಂಥೀಯ ಎಕ್ಸ್‌ ಹ್ಯಾಂಡಲ್‌ಗಳಲ್ಲಿ ವಿಡಿಯೋ ಪೋಸ್ಟ್ ಮಾಡಿ “ಅಖಿಲೇಶ್ ಯಾದವ್ ಪತ್ರಕರ್ತರಿಗೆ ಹೆದರಿ ಓಡಿ ಹೋಗಿದ್ದಾರೆ” ಎಂದು ಬರೆಯಲಾಗಿತ್ತು.

ಫ್ಯಾಕ್ಟ್‌ಚೆಕ್ : ಅಖಿಲೇಶ್ ಯಾದವ್ ಅವರ ವೈರಲ್ ಪೋಟೋ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಈ ವೇಳೆ ಅಕ್ಟೋಬರ್ 17, 2023ರಂದು ಸಮಾಜವಾದಿ ಪಕ್ಷ (ಎಸ್‌ಪಿ)ಯ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ವೈರಲ್ ವಿಡಿಯೋದಲ್ಲಿರುವ ಅಖಿಲೇಶ್ ಯಾದವ್ ಕಾಂಪೌಂಡ್ ಹಾರುವ ಫೋಟೋ ಪೋಸ್ಟ್ ಮಾಡಿರುವುದು ಕಂಡು ಬಂದಿದೆ.

ಫೋಟೋ ಕುರಿತು ವಿವರಣೆ ನೀಡಿರುವ ಸಮಾಜವಾದಿ ಪಕ್ಷ “ಜಯಪ್ರಕಾಶ್ ನಾರಾಯಣ ಅವರ ಜನ್ಮ ದಿನದ ಪ್ರಯುಕ್ತ ಅಕ್ಟೋಬರ್ 11, 2023ರಂದು ಲಕ್ನೋದ ಜಯಪ್ರಕಾಶ್ ನಾರಾಯಣ್ ಇಂಟರ್‌ನ್ಯಾಷನಲ್ ಸೆಂಟರ್ (ಜೆಪಿಎನ್ಐಸಿ) ನಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದರೆ, ಸರ್ಕಾರ ಜೆಪಿಎನ್ಐಸಿ ಗೇಟ್‌ಗೆ ಬೀಗ ಹಾಕಿ ಒಳಗೆ ಪ್ರವೇಶಿಸದಂತೆ ತಡೆದಿತ್ತು. ಈ ವೇಳೆ ಅಖಿಲೇಶ್ ಯಾದವ್ ಅವರು ಗೇಟ್ ಹಾರಿ ಒಳನುಗ್ಗಿ ಜಯಪ್ರಕಾಶ್ ನಾರಾಯಣ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ್ದಾರೆ” ಎಂದು ತಿಳಿಸಿದೆ.

ಅಕ್ಟೋಬರ್ 11, 2023ರಂದು ಇಂಡಿಯನ್ ಎಕ್ಸ್‌ಪ್ರೆಸ್ ಈ ಕುರಿತು ವರದಿ ಪ್ರಕಟಿಸಿತ್ತು, ಅದರಲ್ಲೂ “ಜೆಪಿಎನ್ಐಸಿ ಪ್ರವೇಶಿಸಲು ಅಖಿಲೇಶ್ ಯಾದವ್ ಅವರಿಗೆ ಅವಕಾಶ ನಿರಕರಿಸಿದ್ದಕ್ಕೆ, ಅವರು ಕಾಂಪೌಂಡ್ ಹಾರಿ ಜೆಪಿ ಅವರಿಗೆ ಗೌರವಾರ್ಪಣೆ ಮಾಡಿ ಬಂದಿದ್ದಾರೆ” ಎಂದು ತಿಳಿಸಲಾಗಿತ್ತು.

ಅಕ್ಟೋಬರ್ 11, 2023ರಂದು ದಿ ಎಕನಾಮಿಕ್ಸ್ ಟೈಮ್ಸ್ ಯೂಟ್ಯೂಬ್ ಚಾನೆಲ್‌ನಲ್ಲಿ ಕೂಡ ವಿಡಿಯೋ ಹಂಚಿಕೊಂಡು “ಜಯಪ್ರಕಾಶ್ ನಾರಾಯಣ ಅವರಿಗೆ ಗೌರವ ಸಲ್ಲಿಸಲು ಅಖಿಲೇಶ್ ಯಾದವ್ ಅವರು ಜೆಪಿಎನ್‌ಐಸಿಯ ಕಾಂಪೌಂಡ್ ಹಾರಿದರು” ಎಂದು ಶೀರ್ಷಿಕೆ ಕೊಡಲಾಗಿತ್ತು.

ಒಟ್ಟಿನಲ್ಲಿ “ಜಯಪ್ರಕಾಶ್ ನಾರಾಯಣ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲು ಅವಕಾಶ ನಿರಾಕರಿಸಿ ಜೆಪಿಎನ್‌ಐಸಿ ಗೇಟ್‌ಗೆ ಸರ್ಕಾರ ಬೀಗ ಹಾಕಿದ್ದಕ್ಕೆ ಅಖಿಲೇಶ್ ಯಾದವ್ ಗೇಟ್ ಹಾರಿ ಒಳ ಹೋಗಿದ್ದರು. ಆ ವಿಡಿಯೋ ಮತ್ತು ಫೋಟೋ ಹಂಚಿಕೊಂಡು “ಅಖಿಲೇಶ್ ಪತ್ರಕರ್ತರ ಪ್ರಶ್ನೆಗಳಿಗೆ ಹೆದರಿ ಓಡಿ ಹೋಗಿದ್ದಾರೆ” ಎಂದು ಸುಳ್ಳು ಸುದ್ದಿ ಹಬ್ಬಿಸಲಾಗಿದೆ.

ಇದನ್ನೂ ಓದಿ : FACT CHECK : ಕಲಬುರಗಿಯ ಹಳೆಯ ವಿಡಿಯೋಗೆ ಕೋಮು ಬಣ್ಣ ಬಳಿದು ಹಂಚಿಕೊಳ್ಳುತ್ತಿರುವ ಬಲಪಂಥೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...