Homeಮುಖಪುಟಶ್ರೀಲಂಕಾ ಬಂಧಿಸಿರುವ ಮೀನುಗಾರರ ಬಿಡುಗಡೆಗೆ ಆಗ್ರಹ; ವಿದೇಶಾಂಗ ಸಚಿವರಿಗೆ ಎಂಕೆ ಸ್ಟಾಲಿನ್ ಪತ್ರ

ಶ್ರೀಲಂಕಾ ಬಂಧಿಸಿರುವ ಮೀನುಗಾರರ ಬಿಡುಗಡೆಗೆ ಆಗ್ರಹ; ವಿದೇಶಾಂಗ ಸಚಿವರಿಗೆ ಎಂಕೆ ಸ್ಟಾಲಿನ್ ಪತ್ರ

- Advertisement -
- Advertisement -

ಶ್ರೀಲಂಕಾ ನೌಕಾಪಡೆಯಿಂದ ಬಂಧಿತರಾಗಿರುವ ಮೀನುಗಾರರನ್ನು ಬಿಡುಗಡೆಗೆ ತಕ್ಷಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್ ಅವರಿಗೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಪತ್ರ ಬರೆದಿದ್ದಾರೆ.

ಪದೇಪದೆ ಇಂಥ ಬಂಧನಗಳು ಆತಂಕಕಾರಿ ಏರಿಕೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ದೋಣಿಗಳನ್ನು ಬಿಡುಗಡೆ ಮಾಡುವಲ್ಲಿ ಮಧ್ಯಪ್ರವೇಶಿಸುವಂತೆ ಮತ್ತು ಮೀನುಗಾರರಿಗೆ ವಿಧಿಸಲಾದ ದಂಡವನ್ನು ತಪ್ಪಿಸುವಂತೆ ಜೈಶಂಕರ್ ಅವರನ್ನು ವಿನಂತಿಸಿದರು.

“ಸೆಪ್ಟೆಂಬರ್ 7 ರಂದು, ಶ್ರೀಲಂಕಾ ನೌಕಾಪಡೆಯು ನಮ್ಮ ಮೂರು ಯಾಂತ್ರೀಕೃತ ಮೀನುಗಾರಿಕೆ ದೋಣಿಗಳೊಂದಿಗೆ ಪುದುಕೊಟ್ಟೈನಿಂದ ಬರೋಬ್ಬರಿ 14 ಮೀನುಗಾರರನ್ನು ವಶಕ್ಕೆ ತೆಗೆದುಕೊಂಡಿತು. 2024 ರಲ್ಲಿ 350 ಮೀನುಗಾರರು ಮತ್ತು 49 ಮೀನುಗಾರಿಕಾ ದೋಣಿಗಳನ್ನು ಶ್ರೀಲಂಕಾ ನೌಕಾಪಡೆಯು ಬಂಧಿಸಿದೆ, ಇದು ಕಳೆದ ಆರು ವರ್ಷಗಳಲ್ಲಿ ಅತಿ ಹೆಚ್ಚು. ಶ್ರೀಲಂಕಾ ನ್ಯಾಯಾಲಯಗಳು ನಮ್ಮ ಮೀನುಗಾರರಿಗೆ ಸಾಮರ್ಥ್ಯ ಮೀರಿದ ಭಾರಿ ದಂಡವನ್ನು ವಿಧಿಸುತ್ತಿವೆ” ಎಂದು ಮುಖ್ಯಮಂತ್ರಿ ಹೇಳಿದರು.

ಅಂತಹ ಬಂಧನಗಳು ದೀರ್ಘಾವಧಿಯ ಸೆರೆವಾಸಕ್ಕೆ ಕಾರಣವಾಗುತ್ತವೆ ಮತ್ತು ಅವರ ಕುಟುಂಬಗಳಿಗೆ ಸಂಕಟವನ್ನು ಉಂಟುಮಾಡುತ್ತವೆ ಎಂದು ಅವರು ಹೇಳಿದ್ದಾರೆ.

ಶ್ರೀಲಂಕಾ ಅಧಿಕಾರಿಗಳ ವಶದಲ್ಲಿರುವ ಎಲ್ಲ ಮೀನುಗಾರರು ಮತ್ತು ದೋಣಿಗಳನ್ನು ಬಿಡುಗಡೆ ಮಾಡಲು ತಕ್ಷಣ ರಾಜತಾಂತ್ರಿಕ ಪ್ರಯತ್ನಗಳನ್ನು ಮಾಡುವಂತೆ ಜೈಶಂಕರ್ ಅವರನ್ನು ಸ್ಟಾಲಿನ್ ಒತ್ತಾಯಿಸಿದರು. ಯಾವುದೇ ವಿಳಂಬವಿಲ್ಲದೆ ಅವರ ಜಂಟಿ ಕಾರ್ಯ ಸಮೂಹವನ್ನು ಪುನರುಜ್ಜೀವನಗೊಳಿಸುವ ಕ್ರಮಗಳನ್ನು ಪ್ರಾರಂಭಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ನಡುವೆ, ಆಗಸ್ಟ್ 5 ರಂದು 12 ಮೀನುಗಾರರನ್ನು ಬಂಧಿಸಿದ ನಂತರ ತರುವೈಕುಲಂನಲ್ಲಿ ಮೀನುಗಾರರ ಕುಟುಂಬಗಳು ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ. ಕಾನೂನು ಪ್ರಕ್ರಿಯೆ ಅನುಸರಿಸಿ, 12 ಮೀನುಗಾರರಿಗೆ 42 ಲಕ್ಷ ರೂಪಾಯಿ ದಂಡ ಅಥವಾ ಆರು ತಿಂಗಳು ಜೈಲು ಶಿಕ್ಷೆ ವಿಧಿಸಲು ಆದೇಶಿಸಲಾಗಿದೆ.

“ಕಳೆದ 35 ದಿನಗಳಿಂದ ಅವರ ಸ್ಥಿತಿಯ ಬಗ್ಗೆ ನಮಗೆ ತಿಳಿದಿಲ್ಲ. ತಲಾ 42 ಲಕ್ಷ ಜಾಮೀನು ಮೊತ್ತವನ್ನು ವಿಧಿಸಿರುವುದು ಮಾಧ್ಯಮಗಳ ಮೂಲಕ ತಿಳಿದು ಬಂದಿದೆ. ನಾವು ಅಷ್ಟೊಂದು ಶ್ರೀಮಂತರಲ್ಲ, ಹಲವು ಮನವಿಗಳನ್ನು ನೀಡಿದರೂ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರೂ ಪರಿಹಾರ ಸಿಗದ ಕಾರಣ ಉಪವಾಸ ಸತ್ಯಾಗ್ರಹ ಆರಂಭಿಸಿದ್ದೇವೆ” ಎಂದು ಬಂಧಿತ ಮೀನುಗಾರರಲ್ಲಿ ಒಬ್ಬರಾದ ಅಂಥೋಣಿ ರಾಜ್ ಅವರ ಪತ್ನಿ ಝಾನ್ಸಿ ರಾಣಿ ಹೇಳಿದ್ದಾರೆ. “ಯಾವುದೇ ದಂಡವಿಲ್ಲದೆ ಮೀನುಗಾರರನ್ನು ಮರಳಿ ಕರೆತರುವಂತೆ ನಾವು ಸರ್ಕಾರವನ್ನು ಒತ್ತಾಯಿಸುತ್ತೇವೆ” ಎಂದು ಅವರು ಬೇಡಿಕೆ ಇಟ್ಟಿದ್ದಾರೆ.

ಇದನ್ನೂ ಓದಿ; ಯಡಿಯೂರಪ್ಪ, ಪ್ರಜ್ವಲ್ ರೇವಣ್ಣ, ರಮೇಶ್ ಜಾರಕಿಹೊಳಿ ಪ್ರಕರಣಗಳ ವಿಚಾರಣೆ ಮುಂದೂಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...