Homeಮುಖಪುಟದೂರು ನೀಡಲು ಹೋಗಿದ್ದ ಅತ್ಯಾಚಾರ ಸಂತ್ರಸ್ತೆಯ ಪೋಷಕರಿಗೆ ಥಳಿಸಿದ ಪೊಲೀಸರು: ವರದಿ

ದೂರು ನೀಡಲು ಹೋಗಿದ್ದ ಅತ್ಯಾಚಾರ ಸಂತ್ರಸ್ತೆಯ ಪೋಷಕರಿಗೆ ಥಳಿಸಿದ ಪೊಲೀಸರು: ವರದಿ

- Advertisement -
- Advertisement -

ಚೆನ್ನೈನಲ್ಲಿ ತಮ್ಮ ಹತ್ತು ವರ್ಷದ ಮಗಳ ಮೇಲೆ ಅತ್ಯಾಚಾರ ನಡೆದಿರುವ ಬಗ್ಗೆ ದೂರು ದಾಖಲಿಸಲು ಠಾಣೆಗೆ ತೆರಳಿದ್ದ ದಂಪತಿಗೆ ಪೊಲೀಸರು ಥಳಿಸಿರುವ ಆರೋಪ ಕೇಳಿ ಬಂದಿದೆ.

ದಂಪತಿ ಆಗಸ್ಟ್ 31ರಂದು ಮುಂಜಾನೆ ದೂರು ದಾಖಲಿಸಲು ಅಣ್ಣಾನಗರ ಮಹಿಳಾ ಠಾಣೆಗೆ ತೆರಳಿದ್ದರು. ಈ ವೇಳೆ ಪೊಲೀಸರು ಥಳಿಸಿರುವುದಾಗಿ ಆರೋಪಿಸಿದ್ದಾರೆ. ಆದರೆ, ಪೊಲೀಸರು ಈ ಆರೋಪವನ್ನು ನಿರಾಕರಿಸಿದ್ದಾರೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ವೈರಲ್ ಆಗಿದ್ದು, ಅದರಲ್ಲಿ ಪೊಲೀಸರು ನಮಗೆ ಥಳಿಸಿದ್ದಾರೆ ಎಂದು ಸಂತ್ರಸ್ತೆಯ ಪೋಷಕರು ಹೇಳಿದ್ದಾರೆ. ವಿಡಿಯೋದಲ್ಲಿ ಮಾತನಾಡಿರುವ ಸಂತ್ರಸ್ತೆಯ ತಾಯಿ “ಪೊಲೀಸರು ನನ್ನ ಕೈ ತಿರುವಿದರು, ಅವರು ಹೇಳಿಕೊಟ್ಟಂತೆ ಹೇಳಲು ಸೂಚಿಸಿದರು. ವೈದ್ಯರು ಹೇಳಿರುವುದನ್ನು ನಾನು ಅವರಿಗೆ ಹೇಳಿದೆ. ಇನ್ಸ್‌ಪೆಕ್ಟರ್ ನನ್ನನ್ನು ದುರಹಂಕಾರಿ ಎಂದು ಕರೆದರು ಮತ್ತು ನನ್ನ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದರು. ನನ್ನ ಮಗಳನ್ನು ಸರಿಯಾಗಿ ಬೆಳೆಸಿಲ್ಲ ಎಂದು ಮೂರು ವರ್ಷಗಳ ಕಾಲ ಜೈಲಿಗೆ ಹಾಕುವುದಾಗಿ ಹೇಳಿದರು” ಎಂದಿದ್ದಾರೆ. ಸಂತ್ರಸ್ತೆಯ ತಂದೆಗೂ ಅದೇ ದಿನ ಪೊಲೀಸರು ಥಳಿಸಿದ್ದಾರೆ. ವಿಡಿಯೋದಲ್ಲಿ ಮಾತನಾಡಿರುವ ಅವರು “ಏಕೆ ಹೊಡೆಯುತ್ತಿದ್ದೇವೆ ಗೊತ್ತಾ? ಎಂದು ಕೇಳುತ್ತಾ ನನಗೆ ಹೊಡೆದರು” ಎಂದಿದ್ದಾರೆ ಎಂದು ನ್ಯೂಸ್ ಮಿನಿಟ್ ವರದಿ ತಿಳಿಸಿದೆ.

ಪ್ರಕರಣದ ಕುರಿತು ಮಾತನಾಡಿರುವ ಪಶ್ಚಿಮ ಚೆನ್ನೈನ ಜಂಟಿ ಪೊಲೀಸ್ ಆಯುಕ್ತ ವಿಜಯ್ ಕುಮಾರ್ ಅವರು “ಇನ್‌ಸ್ಪೆಕ್ಟರ್ ಕೊಠಡಿಯೊಳಗೆ ಸಿಸಿಟಿವಿ ಕ್ಯಾಮರಾ ಇರಲಿಲ್ಲ. ಆದರೂ, ನಾವು ಇತರ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದೇವೆ. ಪೊಲೀಸರು ಸಂತ್ರಸ್ತೆಯ ಪೋಷಕರಿಗೆ ಥಳಿಸಿರುವ ಬಗ್ಗೆ ನಮಗೆ ಯಾವುದೇ ಪುರಾವೆಗಳು ಕಂಡು ಬಂದಿಲ್ಲ. ಇನ್ಸ್‌ಪೆಕ್ಟರ್ ಅವರೊಂದಿಗೆ ಕಟುವಾಗಿ ಮಾತನಾಡಿದ್ದಾರೆಯೇ? ಎಂದು ಪರಿಶೀಲಿಸಿದ್ದೇವೆ. ಆ ಬಗ್ಗೆಯೂ ನಮಗೆ ಯಾವುದೇ ಮಾಹಿತಿ ದೊರೆತಿಲ್ಲ. ಇನ್ಸ್‌ಪೆಕ್ಟರ್ ತನ್ನ ಕೆಲಸವನ್ನು ಮಾಡಿದ್ದಾರೆ” ಎಂದು ನ್ಯೂಸ್ ಮಿನಿಟ್ ವರದಿ ಮಾಡಿದೆ.

ಸಂತ್ರಸ್ತ ಬಾಲಕಿ ಅನಾರೋಗ್ಯಕ್ಕೆ ಒಳಗಾಗಿದ್ದಳು. ಆಗಸ್ಟ್ 29ರಂದು ಆಕೆಯನ್ನು ತಾಯಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಈ ವೇಳೆ ಆಕೆಯ ಮೇಲೆ ಅತ್ಯಾಚಾರ ನಡೆದಿರುವ ಸಾಧ್ಯತೆಯ ಬಗ್ಗೆ ವೈದ್ಯರು ಹೇಳಿದ್ದಾರೆ ಮತ್ತು ಆಕೆಯನ್ನು ಕಿಲ್ಪಾಕ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ (ಕೆಎಂಸಿ) ಕರೆದೊಯ್ಯುವಂತೆ ಸೂಚಿಸಿದ್ದಾರೆ. ಅಲ್ಲಿಗೆ ತೆರಳಿದಾಗ ಬಾಲಕಿಯನ್ನು ಪರೀಕ್ಷಿಸಿದ ವೈದ್ಯರು, ಅತ್ಯಾಚಾರ ನಡೆದಿರುವುದನ್ನು ದೃಢೀಕರಿಸಿ ಅಣ್ಣಾನಗರ ಮಹಿಳಾ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸಂತ್ರಸ್ತೆ ಆರಂಭದಲ್ಲಿ ತಮ್ಮ ಏರಿಯಾದಲ್ಲಿ ನೀರಿನ ಕ್ಯಾನ್‌ಗಳನ್ನು ವಿತರಿಸುವ ಸತೀಶ್ ಎಂಬಾತ ಅತ್ಯಾಚಾರ ಎಸಗಿರುವುದಾಗಿ ಹೇಳಿದ್ದಳು. ಬಳಿಕ, ಆಕೆ ತನ್ನ ಹೇಳಿಕೆಯನ್ನು ಹಿಂತೆಗೆದುಕೊಂಡಿದ್ದಾಳೆ ಎಂದು ವರದಿ ತಿಳಿಸಿದೆ.

ಬಾಲಕಿ ಹೇಳಿಕೆ ಬದಲಿಸಿದರೂ, ಆಕೆಯ ತಾಯಿ ಮಾತ್ರ ಸತೀಶ್ ತನ್ನ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ. ಆತನ ವಿರುದ್ದ ಕ್ರಮ ಕೈಗೊಳ್ಳುವಂತೆ ಒತ್ತಾಯಸಿದ್ದರು. ಅಂದೇ ಪೊಲೀಸರು ಅವರಿಗೆ ಥಳಿಸಿದ್ದಾರೆ ಎಂದು ಸಂತ್ರಸ್ತೆಯ ಕುಟುಂಬಸ್ಥರು ಹೇಳಿದ್ದಾರೆ.

ಆಗಸ್ಟ್ 30ರಂದು ಸತೀಶ್ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಲಾಗಿತ್ತು. ಆದರೆ, ಸಂತ್ರಸ್ತೆ ಹೇಳಿಕೆ ಹಿಂಪಡೆದಿದ್ದರಿಂದ ಆತನನ್ನು ಬಂಧಿಸಿರಲಿಲ್ಲ. ಬಳಿಕ ಸಂತ್ರಸ್ತೆ ತನ್ನ ಸಂಬಂಧಿ ಬಾಲಕನೊಬ್ಬ ತನ್ನ ಮೇಲೆ ದೌರ್ಜನ್ಯ ಎಸಗಿದ್ದಾಗಿ ಹೇಳಿದ್ದಳು. ಆತ, ಎರಡು ವರ್ಷಗಳ ಹಿಂದೆ, 2022ರಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಎಂದಿದ್ದಳು. ಆಕೆಯ ಹೇಳಿಕೆಯ ಆಧಾರದ ಮೇಲೆ ಪೊಲೀಸರು ಬಾಲಕನನ್ನು ಜುವೆನೈಲ್ ಜಸ್ಟೀಸ್ ಕೋರ್ಟ್ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದ್ದರು. ನ್ಯಾಯಾಲಯ ಜಾಮೀನು ನೀಡಿದ್ದರಿಂದ ಪೊಲೀಸರು ಆತನನ್ನು ಬಿಟ್ಟು ಕಳಿಸಿದ್ದಾರೆ. ತನಿಖೆ ಮುಂದುವರೆಸಿದ್ದಾರೆ ಎಂದು ನ್ಯೂಸ್ ಮಿನಿಟ್ ವಿವರಿಸಿದೆ.

ಇದನ್ನೂ ಓದಿ : ಬಿಜೆಪಿ ಹೈಕಮಾಂಡ್ ಆದೇಶ ಧಿಕ್ಕರಿಸಿದ ಬ್ರಿಜ್ ಭೂಷಣ್; ವಿನೇಶಾ ಫೋಗಟ್ ಮೇಲಿನ ದಾಳಿ ತೀವ್ರಗೊಳಿಸಿದ ಮಾಜಿ ಸಂಸದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...