Homeಮುಖಪುಟಜಮ್ಮು ಕಾಶ್ಮೀರ ಚುನಾವಣೆ : ಕಥುವಾ ಅತ್ಯಾಚಾರ ಆರೋಪಿಗಳನ್ನು ಬೆಂಬಲಿಸಿದ್ದ ಲಾಲ್‌ ಸಿಂಗ್‌ಗೆ ಟಿಕೆಟ್ ಕೊಟ್ಟ...

ಜಮ್ಮು ಕಾಶ್ಮೀರ ಚುನಾವಣೆ : ಕಥುವಾ ಅತ್ಯಾಚಾರ ಆರೋಪಿಗಳನ್ನು ಬೆಂಬಲಿಸಿದ್ದ ಲಾಲ್‌ ಸಿಂಗ್‌ಗೆ ಟಿಕೆಟ್ ಕೊಟ್ಟ ಕಾಂಗ್ರೆಸ್!

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಮೂರನೇ ಪಟ್ಟಿಯನ್ನು ಸೋಮವಾರ (ಸೆ. 9) ಬಿಡುಗಡೆ ಮಾಡಿದ್ದು, ಕಥುವಾ ಬಾಲಕಿಯ ಅತ್ಯಾಚಾರ ಆರೋಪಿಗಳನ್ನು ಬೆಂಬಲಿಸಿ ರ್‍ಯಾಲಿ ನಡೆಸಿದ್ದ ಚೌಧರಿ ಲಾಲ್ ಸಿಂಗ್‌ಗೆ ಬಸೋಹ್ಲಿ ಕ್ಷೇತ್ರದಿಂದ ಟಿಕೆಟ್ ಕೊಟ್ಟಿದೆ.

2018ರಲ್ಲಿ, ಬಿಜೆಪಿ-ಪಿಡಿಪಿ ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿದ್ದ ಲಾಲ್‌ ಸಿಂಗ್, ಎಂಟು ವರ್ಷದ ಅಲೆಮಾರಿ ಬುಡಕಟ್ಟು ಬಾಲಕಿಯ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಬೆಂಬಲಿಸಿ ಸ್ಥಳೀಯ ಹಿಂದುತ್ವ ನಾಯಕರು ಆಯೋಜಿಸಿದ್ದ’ಹಿಂದೂ ಏಕತಾ’ ರ್‍ಯಾಲಿಯಲ್ಲಿ ಭಾಗವಹಿಸಿದ್ದರು. ಇದು ಲಾಲ್ ಸಿಂಗ್ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಬಳಿಕ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರು.

ಅತ್ಯಾಚಾರ ಆರೋಪಿಗಳಾದ ಪರ್ವೇಶ್ ಕುಮಾರ್, ಸಂಜಿ ರಾಮ್ ಮತ್ತು ದೀಪಕ್ ಖಜುರಿಯಾ ಪರ ನಡೆದ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ್ದ ಲಾಲ್ ಸಿಂಗ್, ಪೊಲೀಸ್ ತನಿಖೆಯನ್ನು ಪ್ರಶ್ನಿಸಿದ್ದರು ಮತ್ತು ಅತ್ಯಾಚಾರ ಆರೋಪ ‘ಹಿಂದೂಗಳ ವಿರುದ್ಧದ ಪಿತೂರಿಯ ಪ್ರಯತ್ನ’ ಎಂದಿದ್ದರು. ಲಾಲ್ ಸಿಂಗ್‌ ಅವರ ಈ ಹೇಳಿಕೆ, ಆಗಿನ ಜಮ್ಮು ಕಾಶ್ಮೀರ ಸರ್ಕಾರದ ವಿರುದ್ದ ಜನಾಕ್ರೋಶಕ್ಕೆ ಕಾರಣವಾಗಿತ್ತು.

ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ, ಲಾಲ್ ಸಿಂಗ್ ‘ಡೋಗ್ರಾ ಸ್ವಾಭಿಮಾನ್ ಸಂಘಟನೆ’ ಎಂಬ ಪಕ್ಷ ಕಟ್ಟಿದ್ದರು. ನಂತರ, ಲೋಕಸಭೆ ಚುನಾವಣೆಯ ಸಂದರ್ಭ ಮಾರ್ಚ್ 20, 2024ರಂದು ಅವರು ಕಾಂಗ್ರೆಸ್‌ಗೆ ಮರು ಸೇರ್ಪಡೆಯಾಗಿದ್ದರು ಮತ್ತು ತನ್ನ ಪಕ್ಷವನ್ನು ಕಾಂಗ್ರೆಸ್ ಜೊತೆ ವಿಲೀನ ಮಾಡಿದ್ದರು.

ಕಾಂಗ್ರೆಸ್‌ಗೆ ಮರು ಸೇರ್ಪಡೆಯಾದ ಬಳಿಕ, ಲೋಕಸಭಾ ಚುನಾವಣೆಗೆ ಲಾಲ್ ಸಿಂಗ್‌ಗೆ ಉದಂಪುರ-ದೋಡಾ ಕ್ಷೇತ್ರದಿಂದ ಟಿಕೆಟ್ ನೀಡಲಾಗಿತ್ತು. ಆದರೆ, ಅವರು 1.24 ಲಕ್ಷ ಮತಗಳ ಅಂತರದಿಂದ ಸೋತಿದ್ದರು.

ಲಾಲ್ ಸಿಂಗ್ ಅವರು ಈ ಹಿಂದೆ ಮೂರು ಬಾರಿ ಗೆದ್ದಿರುವ ಬಸೋಹ್ಲಿ ಕ್ಷೇತ್ರದಿಂದ ಟಿಕೆಟ್ ಪಡೆದಿದ್ದಾರೆ. ಅವರು ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸುತ್ತಿರುವ ಬಿಜೆಪಿ ಅಭ್ಯರ್ಥಿ, ಉದ್ಯಮಿ ದರ್ಶನ್ ಸಿಂಗ್ ವಿರುದ್ಧ ಕಣಕ್ಕಿಳಿದಿದ್ದಾರೆ.

ಕಾಂಗ್ರೆಸ್‌ಗೆ ಮರು ಸೇರ್ಪಡೆಯಾದ ಲಾಲ್ ಸಿಂಗ್ 

2014ಕ್ಕಿಂತ ಮೊದಲು ಲಾಲ್‌ ಸಿಂಗ್‌ ಕಾಂಗ್ರೆಸ್‌ನಲ್ಲೇ ಇದ್ದರು. ಎರಡು ಬಾರಿ ಪಕ್ಷದ ಟಿಕೆಟ್‌ನಲ್ಲಿ ಉಂದಪುರ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸಿ ಸಂಸದರಾಗಿದ್ದರು. 2014ರಲ್ಲಿ ಕಾಂಗ್ರೆಸ್ ಟಿಕೆಟ್ ನಿರಾಕರಿಸಿದಾಗ ಬಿಜೆಪಿ ಸೇರ್ಪಡೆಗೊಂಡು ಮೆಹಬೂಬಾ ಮುಫ್ತಿ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿದ್ದರು.

ಜನವರಿ 2023ರಲ್ಲಿ ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೋ ಯಾತ್ರೆ ಜಮ್ಮು ಪ್ರವೇಶಿಸಿದಾಗ, ಲಾಲ್ ಸಿಂಗ್ ಕೂಡ ಯಾತ್ರೆಯಲ್ಲಿ ಭಾಗವಹಿಸಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಕಥುವಾ ಸಂತ್ರಸ್ತೆಯ ಪರವಾಗಿ ವಾದ ಮಾಡಿದ್ದ ವಕೀಲೆ ಮತ್ತು ಕಾಂಗ್ರೆಸ್ ಪಕ್ಷದ ವಕ್ತಾರೆ ದೀಪಕ್ ಪುಷ್ಕರ್ ನಾಥ್ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು.

ಕಳೆದ ವರ್ಷ ನವೆಂಬರ್‌ನಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಲಾಲ್ ಸಿಂಗ್, ಅವರ ಪತ್ನಿ ಮತ್ತು ಮಾಜಿ ಶಾಸಕ ಕಾಂತಾ ಅಂಡೋತ್ರಾ ನಡೆಸುತ್ತಿದ್ದ ಶೈಕ್ಷಣಿಕ ಟ್ರಸ್ಟ್‌ಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿಸಿತ್ತು.

ಈ ವರ್ಷದ ಮಾರ್ಚ್‌ನಲ್ಲಿ ಲಾಲ್‌ ಸಿಂಗ್‌ಗೆ ಮರು ಸೇರ್ಪಡೆಗೊಂಡಾಗ, ಕಾಂಗ್ರೆಸ್ ವಿರುದ್ದ ತೀವ್ರ ಟೀಕೆ ವ್ಯಕ್ತವಾಗಿತ್ತು. ಈ ಕುರಿತು ಪ್ರತಿಕ್ರಿಯಿಸಿದ್ದ ಮಾಜಿ ಕಾಂಗ್ರೆಸ್ ನಾಯಕ ಹಾಗೂ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ (ಡಿಪಿಎಪಿ) ಮುಖ್ಯಸ್ಥ ಗುಲಾಂ ನಬಿ ಆಜಾದ್, “ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಗೆ ಲಾಲ್‌ ಸಿಂಗ್‌ ಅನ್ನು ಪಕ್ಷಕ್ಕೆ ಸ್ವಾಗತಿಸಿದ್ದಕ್ಕೆ ನಾಚಿಕೆಯಾಗಬೇಕು. 8 ವರ್ಷದ ಬಾಲಕಿಯ ಅತ್ಯಾಚಾರಿಗಳನ್ನು ಬೆಂಬಲಿಸಿದ ಲಾಲ್ ಸಿಂಗ್ ಅನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಮೂಲಕ ಕಾಂಗ್ರೆಸ್ ತನ್ನ ಮೂಲ ತತ್ವಗಳು ಮತ್ತು ಸಿದ್ಧಾಂತಗಳಿಗೆ ದ್ರೋಹ ಬಗೆದಿದೆ” ಎಂದಿದ್ದರು.

ಲಾಲ್‌ ಸಿಂಗ್‌ಗೆ ಕಾಂಗ್ರೆಸ್ ಟಿಕೆಟ್ ಕೊಟ್ಟಿರುವುದು ಹಿಂದೂ ಪ್ರಾಬಲ್ಯದ ಪ್ರದೇಶದಲ್ಲಿ ಬಿಜೆಪಿಯನ್ನು ಸೋಲಿಸಲು ಎಂದು ಹೇಳಲಾಗುತ್ತಿದೆ. ಆದರೆ, ಈ ಹಿಂದೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿ. ಸಚಿವರಾಗಿದ್ದಾಗಲೇ ಅತ್ಯಾಚಾರ ಆರೋಪಿಗಳನ್ನು ಬೆಂಬಲಿಸಿ ನಡೆದ ರ್‍ಯಾಲಿಯಲ್ಲಿ ಪಾಲ್ಗೊಂಡಿರುವ, ಹಿಂದುತ್ವದ ಪ್ರತಿಪಾದಕನಿಗೆ ಟಿಕೆಟ್ ಕೊಟ್ಟಿರುವ ಕಾಂಗ್ರೆಸ್‌ ನಡೆ ಆಕ್ರೋಶಕ್ಕೆ ಕಾರಣವಾಗಿದೆ.

ದೇಶವನ್ನು ತಲ್ಲಣಗೊಳಿಸಿದ್ದ ಅತ್ಯಾಚಾರ ಪ್ರಕರಣ

ಜನವರಿ 2018ರಲ್ಲಿ ಎಂಟು ವರ್ಷದ ಬಾಲಕಿಯನ್ನು ಅಪಹರಿಸಿ ವಾರಗಳ ಕಾಲ ದೇವಸ್ಥಾನದೊಳಗೆ ಸಾಮೂಹಿಕ ಅತ್ಯಾಚಾರ ಎಸಗಲಾಗಿತ್ತು. ಆಕೆಯ ಗರ್ಭಕೋಶ ಖಾಸಗಿ ಭಾಗದಿಂದ ಹೊರಬರುವಷ್ಟು ಕ್ರೂರವಾಗಿ ಹಿಂಸಿಸಲಾಗಿತ್ತು.

ಜನವರಿ 10, 2018ರಂದು ಕಥುವಾದ ರಸ್ಸಾನ ಗ್ರಾಮದ ಹೊಲವೊಂದರಲ್ಲಿ ಕುದುರೆಗಳನ್ನು ಮೇಯಿಸುತ್ತಿದ್ದಾಗ ಬಾಲಕಿ ನಾಪತ್ತೆಯಾಗಿದ್ದಳು. ಈ ಸಂಬಂಧ ಆಕೆಯ ತಂದೆ ಯೂಸುಫ್ ಜನವರಿ 12ರಂದು ಸ್ಥಳೀಯ ಹಿರಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ವಾರದ ಬಳಿಕ ಜನವರಿ 17ರಂದು ಬಾಲಕಿಯ ಮೃತದೇಹ ಪತ್ತೆಯಾಗಿತ್ತು. ವೈದ್ಯಕೀಯ ಪರೀಕ್ಷೆಯಲ್ಲಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದು ದೃಢಪಟ್ಟಿತ್ತು. ಈ ಘಟನೆ ದೇಶದಾದ್ಯಂತ ಜನಾಕ್ರೋಶಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ : ಜಮ್ಮು ಕಾಶ್ಮೀರ ಚುನಾವಣೆ : ಸಂಸದ ಇಂಜಿನಿಯರ್ ರಶೀದ್‌ಗೆ ಮಧ್ಯಂತರ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...