Homeಮುಖಪುಟಯೂಟ್ಯೂಬ್ ನೋಡಿ 15 ವರ್ಷದ ಬಾಲಕನಿಗೆ ಆಪರೇಷನ್ ಮಾಡಿದ ನಕಲಿ ವೈದ್ಯ!

ಯೂಟ್ಯೂಬ್ ನೋಡಿ 15 ವರ್ಷದ ಬಾಲಕನಿಗೆ ಆಪರೇಷನ್ ಮಾಡಿದ ನಕಲಿ ವೈದ್ಯ!

- Advertisement -
- Advertisement -

ನಕಲಿ ವೈದ್ಯನೊಬ್ಬ ಮೊಬೈಲ್ ಫೋನ್‌ನಲ್ಲಿ ಯೂಟ್ಯೂಬ್ ವೀಡಿಯೊಗಳನ್ನು ನೋಡಿ ಪಿತ್ತಕೋಶದ ಕಲ್ಲು ತೆಗೆಯುವ ಶಸ್ತ್ರಚಿಕಿತ್ಸೆ ನಡೆಸಿದ ಘಟನೆ ಬಿಹಾರದಲ್ಲಿ ನಡೆದಿದೆ. ಆರೋಪಿಯನ್ನು ಅಜಿತ್ ಕುಮಾರ್ ಪುರಿ ಎಂದು ಗುರುತಿಸಲಾಗಿದ್ದು, ಶಸ್ತ್ರಚಿಕಿತ್ಸೆಗೆ ಒಳಪಟ್ಟ 15 ವರ್ಷದ ಬಾಲಕ ಸಾವನ್ನಪ್ಪಿದ್ದಾರೆ ಎಂದು ವರದಿಗಳು ಹೇಳಿವೆ.

ಘಟನೆಯ ನಂತರ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಅಜಿತ್ ಕುಮಾರ್ ಪುರಿಯನ್ನು, ಎರಡು ದಿನಗಳ ಕಳೆದು ಸೋಮವಾರ ಬಂಧಿಸಲಾಗಿದೆ. ಆತನ ಕ್ಲಿನಿಕ್ ಅನ್ನು ಸೀಲ್ ಮಾಡಲಾಗಿದೆ ಎಂದು ಸರನ್ ಪೊಲೀಸ್ ವರಿಷ್ಠಾಧಿಕಾರಿ ಆಶಿಶ್ ಭಾರ್ತಿ ತಿಳಿಸಿದ್ದಾರೆ. ಈ ಹಿಂದೆ ಬಾಲಕನ ಕುಟುಂಬಸ್ಥರ ಲಿಖಿತ ದೂರಿನ ಆಧಾರದ ಮೇಲೆ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಂತ್ರಸ್ತ ಕೃಷ್ಣ ಕುಮಾರ್ ಅಲಿಯಾಸ್ ಗೋಲು ಅವರ ತಂದೆ ಚಂದನ್ ಶಾ ಅವರು ತಮ್ಮ ಒಪ್ಪಿಗೆ ಅಥವಾ ಅರಿವಿಗೆ ಬಾರದೆ ತನ್ನ ಮಗನಿಗೆ ಆಪರೇಷನ್ ಮಾಡಲಾಗಿದೆ ಎಂದು ಲಿಖಿತ ದೂರಿನಲ್ಲಿ ಹೇಳಿದ್ದಾರೆ. ಯೂಟ್ಯೂಬ್ ವೀಡಿಯೋಗಳನ್ನು ನೋಡಿ ಪುರಿ ಶಸ್ತ್ರಚಿಕಿತ್ಸೆ ನಡೆಸುತ್ತಿದ್ದದ್ದನ್ನು ಪ್ರಶ್ನಿಸಿದಾಗ, ಆರೋಪಿಯು ತಾನು ವೈದ್ಯನಲ್ಲ ಎಂದು ಹೇಳಿದ್ದನು ಎಂದು ಚಂದನ್ ಶಾ ಆರೋಪಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಶಸ್ತ್ರಚಿಕಿತ್ಸೆಯ ಸಮಯದಲ್ಲಿ, ಗೋಲು ಅವರ ಆರೋಗ್ಯವು ಹದಗೆಟ್ಟಿತ್ತು. ಈ ವೇಳೆ ಅವರ ಕುಟುಂಬವು ಪ್ರತಿಭಟಿಸಿದಾಗ ನಕಲಿ ವೈದ್ಯ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲು ಪಾಟ್ನಾಗೆ ಕರೆದೊಯ್ಯುವುದಾಗಿ ಭರವಸೆ ನೀಡಿದ್ದನು. ಆದರೆ ಪಾಟ್ನಾಗೆ ತೆರಳುವ ಮಾರ್ಗಮಧ್ಯೆ ನಕಲಿ ವೈದ್ಯ ಪರಾರಿಯಾಗಿದ್ದಾಗಿ ವರದಿಯಾಗಿದೆ.

“ಕಳೆದ ವಾರ ವಾಂತಿ ಮತ್ತು ಹೊಟ್ಟೆ ನೋವಿನ ಕಾರಣಕ್ಕೆ ನಾವು ಸರನ್‌ನ ಮೋತಿರಾಜಪುರ ಧರಂಬಾಗಿ ಬಜಾರ್‌ನಲ್ಲಿರುವ ಅಜಿತ್ ಕುಮಾರ್ ಪುರಿ ಅವರ ಖಾಸಗಿ ಕ್ಲಿನಿಕ್ ಗಣಪತಿ ಸೇವಾ ಸದನ್‌ಗೆ ಮಗನನ್ನು ದಾಖಲಿಸಿದ್ದೆವು. ಆರಂಭದಲ್ಲಿ ಎರಡು ದಿನಗಳ ಕಾಲ ಅವರಿಗೆ ಚುಚ್ಚುಮದ್ದು ಮತ್ತು ಔಷಧಿಗಳೊಂದಿಗೆ ಚಿಕಿತ್ಸೆ ನೀಡಲಾಯಿತು. ಆದರೆ ಕಳೆದ ಶುಕ್ರವಾರ, ಯೂಟ್ಯೂಬ್ ವೀಡಿಯೊಗಳನ್ನು ನೋಡುತ್ತಲೇ ಪುರಿ ಶಸ್ತ್ರಚಿಕಿತ್ಸೆ ನಡೆಸಿದ್ದರು” ಎಂದು ಚಂದನ್ ಶಾ ಹೇಳಿದ್ದಾರೆ.

ಇದನ್ನೂಓದಿ:ಖನಿಜಗಳ ಮೇಲಿನ ರಾಯಧನ -ಬಾಕಿ ತೆರಿಗೆ ವಸೂಲಿ ಕುರಿತ ರಾಜ್ಯಗಳ ಅರ್ಜಿ; ಪ್ರತ್ಯೇಕ ಪೀಠದಲ್ಲಿ ವಿಚಾರಣೆಗೆ ಸುಪ್ರೀಂ ಒಪ್ಪಿಗೆ

ಮೊದಲು ನಾಲ್ಕು ವರ್ಷಗಳ ಕಾಲ ಸಹಾಯಕ ಕಮ್ ಕಾಂಪೌಂಡರ್ ಆಗಿ ಕೆಲಸ ಮಾಡಿದ ಪುರಿ ನಂತರ ಸ್ವಯಂ ಘೋಷಿತ ವೈದ್ಯರಾಗಿ ಬದಲಾಗಿದ್ದ ಎಂದು ಪೊಲೀಸರ ಆರಂಭಿಕ ತನಿಖೆಯಿಂದ ತಿಳಿದುಬಂದಿದೆ. ಗ್ರಾಮೀಣ ಬಿಹಾರದಲ್ಲಿ ಆರೋಗ್ಯ ಸೇವೆಯ ಸ್ಥಿತಿ ಎಷ್ಟು ದಯನೀಯವಾಗಿದೆ ಎಂಬುದಕ್ಕೆ ಗೋಲು ಪ್ರಕರಣ ಒಂದು ಉದಾಹರಣೆಯಾಗಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.

ಸ್ಥಳೀಯವಾಗಿ “ಜೋಲಾ ಚಾಪ್” ಎಂದು ಕರೆಯಲ್ಪಡುವ ನಕಲಿ ವೈದ್ಯರು ರಾಜ್ಯದಾದ್ಯಂತ ನೂರಾರು ಖಾಸಗಿ ಚಿಕಿತ್ಸಾಲಯಗಳನ್ನು ನಡೆಸುತ್ತಿದ್ದಾರೆ ಮತ್ತು ಬಡ ಜನರು ಅವರ ಬಲಿಪಶುಗಳಾಗುತ್ತಾರೆ ಎಂದು ವರದಿಗಳು ಹೇಳಿವೆ. ಆದರೆ ಅಂತಹ ಹೆಚ್ಚಿನ ಪ್ರಕರಣಗಳು ವರದಿಯಾಗುವುದಿಲ್ಲ.

ವಿಡಿಯೊ ನೋಡಿ: ಗೌರಿ ನೆನಪು-2024 ಗೌರಿ ನಮನ ಕಾರ್ಯಕ್ರಮ ಸಮಾಧಿ ಬಳಿಯಿಂದ ನೇರ ಪ್ರಸಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...