Homeಅಂಕಣಗಳುಊನಾ ಒಂದು ಮಾದರಿಯಾಗಿಬಿಟ್ಟಿದೆಯೆ?

ಊನಾ ಒಂದು ಮಾದರಿಯಾಗಿಬಿಟ್ಟಿದೆಯೆ?

- Advertisement -
- Advertisement -

ಜುಲೈ 11, 2016 ಊನಾ, ಗುಜರಾತ್:
ಬಾಲು ಸರ್ವೈಯಾ, ಅವನ ಇಬ್ಬರು ಪುತ್ರರಾದ ರಮೇಶ್ ಸರ್ವೈಯಾ ಮತ್ತು ವಶರಾಮ್ ಸರ್ವೈಯಾ ಅವರೊಂದಿಗೆ ಕುಂವರ್, ಅಶೋಕ್ ಸರ್ವೈಯಾ, ಮತ್ತು ಬೇಚರ್ ಸರ್ವೈಯಾ ಅವರುಗಳು ತಮ್ಮ ಊರಲ್ಲಿ ಸತ್ತ ಆಕಳ ಚರ್ಮ ಸುಲಿಯುತ್ತಿದ್ದಾಗ ಬಂದ ಗೋರಕ್ಷಕ ಪಡೆಯವರು, ಅವರುಗಳು ಆಕಳನ್ನು ಕೊಂದಿದ್ದು ಎಂದು ಆಪಾದಿಸಿ ಅಲ್ಲಿಂದ ಎತ್ತೊಯ್ಯುತ್ತಾರೆ. ಊನಾ ಪಟ್ಟಣಕ್ಕೆ ಕರೆತಂದು ಒಂದು ದೊಡ್ಡ ವಾಹನಕ್ಕೆ ಅವರನ್ನು ಕಟ್ಟಿ ಹಾಕಿ, ರಾಡ್‍ಗಳಿಂದ ಮನಸೋಇಚ್ಛೆ ಥಳಿಸಲಾಗುತ್ತದೆ. ನೂರಾರು ಜನ ಥಳಿತದ ಈ ದೃಶ್ಯವನ್ನು ನೋಡುತ್ತಾರೆ. ಒಬ್ಬ ತನ್ನ ಮೊಬೈಲಿನ ಕ್ಯಾಮೆರಾದಲ್ಲಿ ದೃಶ್ಯವನ್ನು ಸೆರೆಹಿಡಿಯುತ್ತಾನೆ. ದಲಿತರ ಮೇಲಿನ ಈ ಹಲ್ಲೆಯನ್ನು ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತವೆ. ಗುಜರಾತಿನ ಮತ್ತು ದೇಶದ ಇತರ ಹೋರಾಟಗಾರರು ಸೇರಿ ಊನಾ ಚಳವಳಿಯನ್ನು ರೂಪಿಸುತ್ತಾರೆ. ಆಗಸ್ಟ್ 15 ರಂದು ಲಕ್ಷಾಂತರ ಜನ ಊನಾದಲ್ಲಿ ಸೇರಿ, ತಾವೆಂದೂ ಇನ್ನು ಮುಂದೆ ಸತ್ತ ದನದ ಚರ್ಮವನ್ನು ಸುಲಿಯುವುದಿಲ್ಲ ಎಂದು ಪ್ರತಿಜ್ಞೆ ಮಾಡುತ್ತಾರೆ. ಅದೇ ಚಳವಳಿಯ ರೂವಾರಿಯಾಗಿದ್ದ ಜಿಗ್ನೇಶ್ ಮೇವಾನಿ ಎನ್ನುವ ಯುವಕ ಮುನ್ನೆಲೆಗೆ ಬಂದು ದೇಶಾದ್ಯಂತ ಚಳವಳಿ ಕಟ್ಟಲು ತಿರುಗಾಡುತ್ತಿದ್ದಾನೆ. ಈಗ ಗುಜರಾತಿನ ಶಾಸಕ ಕೂಡ. ಹಲ್ಲೆ ಮಾಡಿದವರನ್ನು ಬಂಧಿಸಿ, 43 ಜನರ ವಿರುದ್ಧ ಪ್ರಕರಣ ನಡೆಯುತ್ತಿದೆ..
ಮೇ 2018, ಶಾಪರ್ ಗ್ರಾಮ, ರಾಜಕೋಟ್ ಜಿಲ್ಲೆ, ಗುಜರಾತ್
ಮುಕೇಶ್ ವಾನಿಯಾ, ಅವನ ಹೆಂಡತಿ ಜಯಾ ಮತ್ತು ಇನ್ನೊಬ್ಬ ಮಹಿಳೆ ಸವಿತಾ, ಈ ಮೂವರು ಬೆಳಗ್ಗೆ 5 ಗಂಟೆಯ ಸುಮಾರಿಗೆ ಎಂದಿನಂತೆ ಅಲ್ಲಿಯ ಕಾರ್ಖಾನೆಯ ಹತ್ತಿರ ಚಿಂದಿ ಆಯಲು ಪ್ರಾರಂಭಿಸಿದ್ದರು. ಆಗ ಅಲ್ಲಿಗೆ ಬಂದ ಕಾರ್ಖಾನೆಯ ಮಾಲೀಕ ಜಯಸುಖ್ ರಾದಾದಿಯ ಮತ್ತು ಅವನ ಸಂಗಡಿಗರು, ಅವರಿಗೆ ಕಾರ್ಖಾನೆಯ ಆವರಣದಲ್ಲಿಯ ಕಸವನ್ನು ತೆಗೆಯಲು ಹೇಳಿದರು. ಆ ಕೆಲಸಕ್ಕೆ ದುಡ್ಡು ತೆಗೆದುಕೊಳ್ಳದೇ ಮಾಡಬೇಕು ಎಂದಿದ್ದಕ್ಕಾಗಿ ಇವರು ಒಪ್ಪಲಿಲ್ಲ. ಇವರು ಕೆಳಜಾತಿಯವರು, ಚಿಂದಿ, ಕಸ ಆಯುವುದು ಅವರ ಕರ್ತವ್ಯ ಎಂದು ವಾದಿಸಿ ಮುಕೇಶನ ಮೇಲೆ ಹಲ್ಲೆ ಮಾಡಲಾರಂಭಿಸಿದರು. ಅಲ್ಲಿಂದ ಅವನ ಹೆಂಡತಿ ಮತ್ತು ಸವಿತಾ ಇಬ್ಬರೂ ಮಹಿಳೆಯರನ್ನು ಅಲ್ಲಿಂದ ಹೊರಗೆ ದಬ್ಬಿದರು. ಕೆಲ ಹೊತ್ತಿನ ನಂತರ ಆ ಇಬ್ಬರೂ ಮಹಿಳೆಯರು ತಮ್ಮ ಹಳ್ಳಿಯ ಕೆಲವು ಜನರೊಂದಿಗೆ ಬಂದಾಗ ಮುಕೇಶ್ ನೆಲದ ಮೇಲೆ ನಿಶ್ಚಲವಾಗಿ ಬಿದ್ದಿದ್ದ. ಅವನನ್ನು ಆಸ್ಪತ್ರೆಗೆ ಕರೆದೊಯ್ದಾಗ ಅವನು ಆಗಲೇ ಅಸುನೀಗಿದ್ದ.
ಮುಕೇಶನನ್ನು ಒಂದು ಕಂಬಕ್ಕೆ ಕಟ್ಟಿ, ಲೋಹದ ಒಂದು ರಾಡಿನಿಂದ ಒಬ್ಬೊಬ್ಬರಾಗಿ ಥಳಿಸಿದ್ದರು, ಆ ಗುಂಪಿನಲ್ಲಿಯ ಒಬ್ಬ ತುಂಬಾ ಸಂತೋಷದಿಂದಲೇ ಈ ದೃಶ್ಯವನ್ನು ತನ್ನ ಮೊಬೈಲ್‍ನ ಕ್ಯಾಮೆರಾದಲ್ಲಿ ಸೆರೆಹಿಡಿದು, ತನ್ನ ಸ್ನೇಹಿತರಿಗೆ ಕಳಿಸಿದ. ಆ ವಿಡಿಯೋವನ್ನು ಲಕ್ಷಾಂತರ ಜನ ಈಗಾಗಲೇ ನೋಡಿದ್ದಾರೆ.
ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
25ನೇ ಏಪ್ರಿಲ್ 2018, ಊನಾ, ಗುಜರಾತ್
2016 ಜುಲೈನಲ್ಲಿ ಹಲ್ಲೆಗೀಡಾದ ಸರ್ವೈಯಾ ಕುಟುಂಬದವರು ಬೌದ್ಧ ಧರ್ಮಕ್ಕೆ ಮತಾಂತರಗೊಳ್ಳಲು ನಿರ್ಧರಿಸಿದರು. ಏಪ್ರಿಲ್ 29ರಂದು ಅವರು ಅಧಿಕೃತವಾಗಿ ಬೌದ್ಧ ಧರ್ಮಕ್ಕೆ ಮತಾಂತರಗೊಳ್ಳಲಿದ್ದರು. ಅದಕ್ಕಾಗಿಯೇ ಇಡೀ ಕುಟುಂಬ ತಯಾರಿಯಲ್ಲಿತ್ತು. ಭಾನುವಾರದ ಕಾರ್ಯಕ್ರಮಕ್ಕಾಗಿ ಕೆಲವು ವಸ್ತುಗಳನ್ನು ಖರೀದಿಸಲು ಅವರು ಸಮೀಪದ ಪಟ್ಟಣವಾದ ಊನಾಗೆ ಬಂದು ಖರೀದಿ ಮಾಡಿ ಹಿಂತಿರುಗುತ್ತಿದ್ದರು. ಬಾಲುಭಾಯಿ, ವಸರಾಮ್ ಮತ್ತಿತರರು ಎಲ್ಲ ವಸ್ತುಗಳೊಂದಿಗೆ ವಾಹನದಲ್ಲಿದ್ದರೆ, ರಮೇಶ್ ಮತ್ತು ಅಶೋಕ್ ಅವರಿಗಿಂತ ಸ್ವಲ್ಪ ಮುಂದೆ ಮೋಟರ್ ಸೈಕಲ್‍ನಲ್ಲಿ ಬರುತ್ತಿದ್ದರು. ಇವರು ಸಮ್ತೇರ್ ಗ್ರಾಮದ ಬಳಿ ಬರುತ್ತಿದ್ದಂತೆ ಎರಡು ವರ್ಷಗಳ ಹಿಂದೆ ಇವರ ಮೇಲೆ ಹಲ್ಲೆ ಮಾಡಿದ್ದ ಕಿರಣ್ ಸಿಂಗ್ ಇವರನ್ನು ನೋಡಿ, ‘ಇವರಿಗೇ ನೋಡು, ನಾವು ಹೊಡೆದಿದ್ದು’ ಎಂದು ತನ್ನ ಸಂಗಡಿಗನಿಗೆ ಹೇಳಿ ಗೇಲಿ ಮಾಡುತ್ತಾ, ರಮೇಶ್ ಮತ್ತು ಅಶೋಕ್ ಅವರನ್ನು ತಡೆಯುತ್ತಾರೆ.. ಅಲ್ಲಿ ಕಿರಣ್ ಸಿಂಗ್ ಇವರಿಬ್ಬರಿಗೂ ಬೆದರಿಕೆ ಹಾಕಿ, ಪ್ರಕರಣವನ್ನು ಹಿಂತೆಗೆದುಕೊಳ್ಳುವಂತೆ ಆದೇಶಿಸುತ್ತಾನೆ. ರಮೇಶ್ ಅವನ ಬೆದರಿಕೆಗೆ ಜಗ್ಗದಿರುವಾಗ ಕಟ್ಟಿಗೆಯ ಸನಿಕೆಯನ್ನು ತೆಗೆದುಕೊಂಡು ಅವನ ಮೇಲೆ ಹಲ್ಲೆಗೆ ಮುಂದಾಗುತ್ತಾನೆ. ರಮೇಶ್ ಪ್ರತಿರೋಧ ತೋರುತ್ತಾನೆ ಮತ್ತು ಅಷ್ಟರಲ್ಲಿ ಗ್ರಾಮಸ್ಥರು ಬಂದು ಸೇರುವುದರಿಂದ ಕಿರಣ್ ಸಿಂಗ್ ಅವನ ಸಂಗಡಿಗನೊಂದಿಗೆ ಪರಾರಿಯಾಗುತ್ತಾನೆ. ಸರ್ವೈಯಾ ಕುಟುಂಬದವರು ಪೊಲೀಸ್ ಠಾಣೆಗೆ ಹೋಗಿ ಪ್ರಕರಣ ದಾಖಲಿಸುತ್ತಾರೆ. ಕಿರಣ್ ಸಿಂಗ್ ಮತ್ತು ಅವನ ಸಂಗಡಿಗ ತಲೆಮರೆಸಿಕೊಳ್ಳುತ್ತಾರೆ.
ಊನಾದ ಘಟನೆಯ ನಂತರ 2016 ರ ಡಿಸೆಂಬರ್ ತಿಂಗಳಲ್ಲಿಯೇ ಊನಾದ 43 ಆರೋಪಿಗಳಲ್ಲಿ 35 ಜನರಿಗೆ ಜಾಮೀನು ಸಿಕ್ಕಿರುತ್ತದೆ. ಆರೋಪಿ ಕಿರಣ್ ಸಿಂಗ್ ಸುಪ್ರೀಮ್ ಕೋರ್ಟಿಗೆ ಹೋಗಿ ತನ್ನನ್ನು ಬಂಧಿಸಬಾರದು ಎನ್ನುವ ಆದೇಶವನ್ನು ತಂದಿದ್ದಾನೆ.
10 ಜೂನ್ 2018, ವಾಕಡಿ ಗ್ರಾಮ, ಜಲಗಾಂವ ಜಿಲ್ಲೆ, ಮಹಾರಾಷ್ಟ್ರ
16 ಮತ್ತು 17 ನೇ ಹದಿವಯಸ್ಸಿನ ಹುಡುಗರು ಜೋಷಿಯವರ ತೋಟದ ಬಾವಿಗೆ ಈಜಲು ಹೋಗಿದ್ದರು. ಆಗ ಅಲ್ಲಿಗೆ ಬಂದ ಈಶ್ವರ್ ಜೋಷಿ ಮತ್ತು ಪಲ್ಹಾದ್ ಲೋಹಾರ್ ಅವರುಗಳು ಈ ಹುಡುಗರನ್ನು ಹಿಡಿದು, ಒಂದೆಡೆಗೆ ಹಾಕಿ, ಬಟ್ಟೆ ಬಿಚ್ಚಿಸಿ ಮನಬಂದಂತೆ ಥಳಿಸಿದರು. ಇಲ್ಲಿಯೂ ಆ ಥಳಿತದ ದೃಶ್ಯವನ್ನು ಮೊಬೈಲ್ ಫೋನಿನ ಕ್ಯಾಮೆರಾದಲ್ಲಿ ಸೆರೆಹಿಡಿಯಲಾಯಿತು. ಥಳಿತಕ್ಕೊಳಗಾದ ಹುಡುಗರು ಆದ ಘಟನೆಯ ಬಗ್ಗೆ ಯಾರ ಮುಂದೆಯೂ ಬಾಯಿ ಬಿಚ್ಚಲಿಲ್ಲ. ಎರಡು ದಿನಗಳ ನಂತರ ಥಳಿತದ ವೀಡಿಯೋ ಎಲ್ಲೆಡೆ ಹರಿದಾಡಿ ಅವರ ಪಾಲಕರಿಗೆ ತಲುಪಿದ್ದರಿಂದ ಪ್ರಕರಣ ಬೆಳಕಿಗೆ ಬಂದು ಹತ್ತಿರದ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದರು. ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ.
ಹೀಗೆ ಕಲೆಹಾಕುತ್ತ ಹೋದರೆ ದಲಿತರ ಮೇಲಿನ ಹಲ್ಲೆಗಳ ಪ್ರಕರಣಕ್ಕೆ ಕೊನೆಯೇ ಇಲ್ಲ. ಈ ಎಲ್ಲಾ ಘಟನೆಗಳಲ್ಲಿ ಹಲ್ಲೆಯ ದೃಶ್ಯವನ್ನು ಸೆರೆಹಿಡಿದದ್ದು ಸಾಮಾನ್ಯವಾಗಿದೆ. ಮತ್ತು ವಿಶೇಷವೆಂದರೆ ಹಲ್ಲೆಕೋರರೇ ಸ್ವತಃ ವಿಡಿಯೋ ಮಾಡಿದ್ದು. ಒಂದು, ಬಹುಶಃ ಅವರಿಗೆ ತಮಗೆ ಯಾವುದೇ ಶಿಕ್ಷೆ ಆಗುವುದಿಲ್ಲ ಎನ್ನುವ ಖಾತ್ರಿ ಇದೆ. ಇನ್ನೊಂದು, ನೋಡಿ ನಾವು ಈ ತರಹ ಹಲ್ಲೆ ಮಾಡುತ್ತಿದ್ದೇವೆ, ಮುಂದೆಯೂ ಮಾಡಲಿದ್ದೇವೆ ಎನ್ನುವ ಸಂದೇಶ ರವಾನಿಸುವ ಉದ್ದೇಶವೂ ಇರಬಹುದು.
ಬಹುಶಃ ಅವರ ಧೋರಣೆಯೇ ಇಂದಿನ ವಾಸ್ತವ ಸತ್ಯವಾಗಿರಬಹುದು.

– ರಾಜಶೇಖರ್ ಅಕ್ಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...