Homeಕರ್ನಾಟಕ'ಸಿಎಂ ಬದಲಾವಣೆ ಚರ್ಚೆಯಿಂದ ಆಡಳಿತಕ್ಕೆ ತೊಡಕಾಗಿದೆ; ಜನ ಭರವಸೆ ಕಳೆದುಕೊಳ್ಳುತ್ತಿದ್ದಾರೆ..'; ರಾಹುಲ್‌ಗೆ ಕಾಂಗ್ರೆಸ್ ನಾಯಕರಿಂದ ಪತ್ರ

‘ಸಿಎಂ ಬದಲಾವಣೆ ಚರ್ಚೆಯಿಂದ ಆಡಳಿತಕ್ಕೆ ತೊಡಕಾಗಿದೆ; ಜನ ಭರವಸೆ ಕಳೆದುಕೊಳ್ಳುತ್ತಿದ್ದಾರೆ..’; ರಾಹುಲ್‌ಗೆ ಕಾಂಗ್ರೆಸ್ ನಾಯಕರಿಂದ ಪತ್ರ

- Advertisement -
- Advertisement -

ಮುಖ್ಯಮಂತ್ರಿ ಬದಲಾವಣೆಯ ಕುರಿತು ಹೇಳಿಕೆ ನೀಡುವಲ್ಲಿ ತೊಡಗಿರುವ ಕರ್ನಾಟಕ ಕಾಂಗ್ರೆಸ್ ನಾಯಕರಿಗೆ ಖಡಕ್ ಸೂಚನೆ ನೀಡುವಂತೆ ಕೋರಿ ಹದಿನೈದು ಜನ ಕಾಂಗ್ರೆಸ್ ನಾಯಕರು ಸೆಪ್ಟೆಂಬರ್ 10ರಂದು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿದ್ದಾರೆ.

ಹಿರಿಯ ಸಚಿವರು ಸೇರಿದಂತೆ ಆರಕ್ಕೂ ಹೆಚ್ಚು ನಾಯಕರು ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಹೋರಾಡುವ ಬದಲು ಮುಖ್ಯಮಂತ್ರಿ ಹುದ್ದೆಗೆ ಹಕ್ಕು ಚಲಾಯಿಸುತ್ತಿದ್ದಾರೆ. ಅವರ ಈ ಬಹಿರಂಗ ಹೇಳಿಕೆಗಳಿಂದ ನಮ್ಮ ಅನೇಕ ನಾಯಕರು ಮತ್ತು ಕಾರ್ಯಕರ್ತರು ಹತಾಶರಾಗುತ್ತಿದ್ದಾರೆ. ಸರ್ಕಾರ ಮತ್ತು ಪಕ್ಷದ ಮೇಲಿನ ಭರವಸೆಯನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಮಾಜಿ ಸಚಿವ ಬಿ.ಎಲ್.ಶಂಕರ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ.ರೇವಣ್ಣ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸಿ.ಎಸ್.ದ್ವಾರಕಾನಾಥ್ ಸೇರಿದಂತೆ ಹಲವರು ಪತ್ರಕ್ಕೆ ಸಹಿ ಹಾಕಿದ್ದಾರೆ.

ಅದೇ ರೀತಿ ನಮ್ಮ ನಾಯಕರ ಒಳಜಗಳ ಮತ್ತು ಅಜಾಗರೂಕ ಹೇಳಿಕೆಗಳಿಂದಾಗಿ ಕರ್ನಾಟಕದ ಜನತೆ ನಮ್ಮ ಪಕ್ಷ ಮತ್ತು ಸರ್ಕಾರದ ಮೇಲಿನ ಭರವಸೆಯನ್ನು ನಿಧಾನವಾಗಿ ಕಳೆದುಕೊಳ್ಳುತ್ತಿದ್ದಾರೆ. ರಾಜ್ಯ ಸರ್ಕಾರದ ಆಡಳಿತಕ್ಕೆ ದೊಡ್ಡ ಮಟ್ಟದಲ್ಲಿ ತೊಡಕಾಗಿದೆ. ಆದ್ದರಿಂದ, ನಾವು ನಿಮ್ಮಲ್ಲಿ ವಿನಮ್ರವಾಗಿ ಮನವಿ ಮಾಡುತ್ತೇವೆ, ಈ ನಾಯಕರು ನೀಡಿರುವ ಹೇಳಿಕೆಗಳನ್ನು ಗಮನಿಸಿ ಮತ್ತು ಅವರಿಗೆ ಎಚ್ಚರಿಕೆ ನೀಡಬೇಕು. ಮುಂದೆ ಕಾಂಗ್ರೆಸ್ ಪಕ್ಷ ಮತ್ತು ಕರ್ನಾಟಕ ರಾಜ್ಯದ ಹಿತದೃಷ್ಟಿಯಿಂದ ಇಂತಹ ಹಾನಿಕಾರಕ ಹೇಳಿಕೆಗಳನ್ನು ನೀಡದಂತೆ ನಿರ್ದೇಶನ ನೀಡಬೇಕು ಎಂದು ಮುಖಂಡರು ಆಗ್ರಹಿಸಿದ್ದಾರೆ.

ಕರ್ನಾಟಕದ ಜನರು ತುಂಬಾ ಸಂತೋಷವಾಗಿದ್ದಾರೆ ಮತ್ತು ಪಕ್ಷವನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಂಬಲಿಸುತ್ತಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್‌ಗಳು ಇದನ್ನು ಗಂಭೀರವಾಗಿ ಪರಿಗಣಿಸಿವೆ, ಕರ್ನಾಟಕದಲ್ಲಿ ನಮ್ಮ ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸಲು ಬಯಸುತ್ತಿವೆ. ಇದ್ದಕ್ಕಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ವಿಚಾರವನ್ನು ತೆಗೆದುಕೊಂಡಿದ್ದಾರೆ. ಇದರಲ್ಲಿ ಸಿದ್ದರಾಮಯ್ಯನವರ ಪಾತ್ರ ಇಲ್ಲ. ಆದರೂ, ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17 (ಎ) ಅಡಿಯಲ್ಲಿ ಅವರು ಕರ್ನಾಟಕ ರಾಜ್ಯಪಾಲರಿಂದ ಅನುಮತಿ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೇಳಿದ್ದಾರೆ.

ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಜಂಟಿಯಾಗಿ ಒತ್ತಾಯಿಸುತ್ತಿದ್ದಾರೆ. ಪತ್ರದ ಪ್ರತಿಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಮತ್ತು ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೂ ಕಳುಹಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ; ನಾವು ಸಂವಿಧಾನ ಎತ್ತಿಹಿಡಿಯುವ ಮಾತನಾಡುವಾಗ ಬಿಜೆಪಿಗೆ ಯಾಕೆ ಸಮಸ್ಯೆಯಾಗುತ್ತದೆ: ಅಮಿತ್ ಶಾಗೆ ಕಾಂಗ್ರೆಸ್ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...