Homeಕರ್ನಾಟಕವಾಲ್ಮೀಕಿ ನಿಗಮದ ಅಕ್ರಮ : ಶಾಸಕ ನಾಗೇಂದ್ರ ಸೇರಿ 25 ಮಂದಿಯ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದ...

ವಾಲ್ಮೀಕಿ ನಿಗಮದ ಅಕ್ರಮ : ಶಾಸಕ ನಾಗೇಂದ್ರ ಸೇರಿ 25 ಮಂದಿಯ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದ ಇಡಿ

- Advertisement -
- Advertisement -

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (ಕೆಎಂವಿಎಸ್‌ಟಿಡಿಸಿಎಲ್‌) ಬ್ಯಾಂಕ್ ಖಾತೆಯಿಂದ ಅಕ್ರಮವಾಗಿ 95 ಕೋಟಿ ರೂಪಾಯಿ ಹಣ ವರ್ಗಾಯಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ ನಾಗೇಂದ್ರ ಸೇರಿ 25 ಆರೋಪಿಗಳ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) 4,970 ಪುಟಗಳ ಆರೋಪ ಪಟ್ಟಿ ಹಾಗೂ 144 ಪುಟಗಳ ದೂರನ್ನು ಸೋಮವಾರ (ಸೆ.9) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದೆ.

ಹಣ ಅಕ್ರಮ ವರ್ಗಾವಣೆ ಕಾಯ್ದೆಯ ಸೆಕ್ಷನ್‌ 3 ಮತ್ತು 4ರ ಅಡಿ ಜಾರಿ ನಿರ್ದೇಶನಾಲಯ ವಿಸ್ತೃತ ತನಿಖೆ ನಡೆಸಿ ಜನಪ್ರತಿನಿಧಿಗಳ ವಿಶೇಷ ಸತ್ರ ನ್ಯಾಯಾಧೀಶರಾದ ಸಂತೋಷ್‌ ಗಜಾನನ ಭಟ್‌ ಅವರಿಗೆ ಆರೋಪ ಪಟ್ಟಿ ಸಲ್ಲಿಸಿದೆ ಎಂದು ತಿಳಿದು ಬಂದಿದೆ.

ಪ್ರಕರಣದಲ್ಲಿ ಬಳ್ಳಾರಿ ಗ್ರಾಮೀಣ ಶಾಸಕರಾಗಿರುವ ಬಿ ನಾಗೇಂದ್ರ ಅವರು ಮೊದಲನೇ ಆರೋಪಿಯಾಗಿದ್ದು, ಸತ್ಯನಾರಾಯಣ ವರ್ಮ (ಬ್ರೋಕರ್) ಎರಡನೇ ಆರೋಪಿ, ಮೂರನೇ ಆರೋಪಿಯಾಗಿ ಸತ್ಯನಾರಾಯಣ ವರ್ಮ ಏಕತಾರಿ (ಫಸ್ಟ್ ಬ್ಯಾಂಕ್ ಮಾಲೀಕ), ನಾಲ್ಕನೇ ಆರೋಪಿಯಾಗಿ ಜೆ ಜಿ ಪದ್ಮನಾಭ (ವಾಲ್ಮೀಕಿ ನಿಗಮದ ವ್ಯವಸ್ಥಾಪಕ ನಿರ್ದೇಶಕ) ಅವರನ್ನು ಹೆಸರಿಸಲಾಗಿದೆ ಎಂದು ವರದಿಗಳು ಹೇಳಿವೆ.

ವಾಲ್ಮೀಕಿ ನಿಗಮದ ಖಾತೆಯಿಂದ ಒಟ್ಟಾರೆ 84 ಕೋಟಿ ರೂಪಾಯಿಯನ್ನು ಅಕ್ರಮವಾಗಿ ಬಳಕೆ ಮಾಡಲಾಗಿದೆ. ಮಾಜಿ ಸಚಿವ ಬಿ ನಾಗೇಂದ್ರ ಅವರು ನಕಲಿ ಖಾತೆ ಸೃಷ್ಟಿಸಲು ಸೂಚಿಸಿ, ಹಣ ವರ್ಗಾವಣೆ ಮಾಡಲು ನಿರ್ದೇಶಿಸಿದ್ದಾರೆ. ನಾಗೇಂದ್ರ ಸೂಚನೆಯಂತೆ ಪದ್ಮನಾಭರಿಂದ ಹಣ ವರ್ಗಾವಣೆಯಾಗಿದೆ. ಈ ಪ್ರಕರಣದಲ್ಲಿ ನಾಗೇಂದ್ರ ಒಳಸಂಚು ರೂಪಿಸಿದ್ದು, ನಂತರ ಸಾಕ್ಷ್ಯ ನಾಶಕ್ಕೆ ಪ್ರಯತ್ನಿಸಿದ್ದಾರೆ. ವಸಂತ ನಗರದ ಶಾಂಗ್ರೀಲಾ ಹೋಟೆಲ್‌ನಲ್ಲಿ ನಾಗೇಂದ್ರ ಸಭೆ ನಡೆಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮನಕ್ಕೆ ಪದ್ಮನಾಭ ಅವರನ್ನು ನಾಗೇಂದ್ರ ಆಪ್ತನಾದ ನೆಕ್ಕಂಟಿ ನಾಗರಾಜ್‌ ಮೂಲಕ ನೇಮಕ ಮಾಡಲಾಗಿತ್ತು ಎಂದು ಚಾರ್ಜ್ ಶೀಟ್‌ನಲ್ಲಿ ಆರೋಪಿಸಿರುವುದಾಗಿ ತಿಳಿದು ಬಂದಿದೆ.

ಲೋಕಸಭಾ ಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಬಳಕೆ ಮಾಡಲಾಗಿದೆ. ನಾಗೇಂದ್ರ ಅವರ ಆಪ್ತ ಸಹಾಯಕನಾದ 8ನೇ ಆರೋಪಿ ವಿಜಯ್ ಕುಮಾರ್ ಮೊಬೈಲ್‌ನಲ್ಲಿ ಹಣದ ಮೊತ್ತ, ಯಾರಿಗೆಲ್ಲಾ ಪೂರೈಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ ಎಂದು ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. ಬಳ್ಳಾರಿ ಲೋಕಸಭಾ ಚುನಾವಣೆಗೆ 20.19 ಕೋಟಿ ರೂಪಾಯಿ ಬಳಕೆ ಮಾಡಲಾಗಿದೆ ಎಂದು ವಿವರಿಸಲಾಗಿದೆ. ಈ ಸಂಬಂಧ ಎಲ್ಲಾ ಆರೋಪಿಗಳ ಹೇಳಿಕೆ ದಾಖಲಿಸಲಾಗಿದೆ ಎನ್ನಲಾಗಿದೆ.

ಪ್ರಕರಣದಲ್ಲಿ ಸದ್ಯ 15 ಸಾಕ್ಷಿಗಳ ಕಲೆ ಹಾಕಲಾಗಿದ್ದು, ನಾಗೇಂದ್ರ 5.26 ಕೋಟಿ ರೂಪಾಯಿ ಬಳಕೆ ಮಾಡಿದ್ದಾರೆ. ಆದರೆ, ಈ ಸಂಬಂಧ ಉತ್ತರಿಸಲು ನಾಗೇಂದ್ರ ನಿರಾಕರಿಸಿದ್ದಾರೆ. ಸಣ್ಣ ಕೆಲಸಗಳಿಗೆ ಹೆಚ್ಚಿನ ಮೊತ್ತದ ನಕಲಿ ಬಿಲ್‌ಗಳನ್ನು ಸೃಷ್ಟಿಸಲಾಗಿದೆ. ಹಗರಣದಲ್ಲಿ ಆರ್ಥಿಕ ಇಲಾಖೆ ಅಧಿಕಾರಿಗಳು ಭಾಗಿಯಾಗಿರುವ ಬಗ್ಗೆ ಜಾರಿ ನಿರ್ದೇಶನಾಲಯ ಸಂಶಯ ವ್ಯಕ್ತಪಡಿಸಿದೆ ಎಂದು ಆರೋಪಿಸಲಾಗಿದೆ.

ಕಳೆದ ಆಗಸ್ಟ್‌ 6ರಂದು ಕೆಎಂವಿಎಸ್‌ಟಿಡಿಸಿಎಲ್‌ ಹಣ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾಧೀನ ನ್ಯಾಯಾಲಯಕ್ಕೆ ರಾಜ್ಯ ಸರ್ಕಾರ ನೇಮಿಸಿರುವ ವಿಶೇಷ ತನಿಖಾ ದಳ (ಎಸ್‌ಐಟಿ) ಏಳು ಸಂಪುಟಗಳಲ್ಲಿ 3,072 ಪುಟಗಳ ಪ್ರಾಥಮಿಕ ಆರೋಪ ಪಟ್ಟಿ ಸಲ್ಲಿಸಿತ್ತು.

ವಾಲ್ಮೀಕಿ ನಿಗಮದ ಅಕ್ರಮದ ಕುರಿತು ತನಿಖೆ ನಡೆಸಲು ಸರ್ಕಾರ ರಚಿಸಿದ್ದ ವಿಶೇಷ ತನಿಖಾ ದಳ(ಎಸ್‌ಐಟಿ) ನ್ಯಾಯಾಲಯಕ್ಕೆ ಪ್ರತ್ಯೇಕವಾಗಿ ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ನಾಗೇಂದ್ರ ಅವರನ್ನು ಆರೋಪಿ ಎಂದು ಉಲ್ಲೇಖಿಸಿರಲಿಲ್ಲ. ಅಧಿಕಾರಿಗಳನ್ನಷ್ಟೇ ಹೊಣೆ ಮಾಡಿತ್ತು. ಆದರೆ, ಇಡಿ ಸಲ್ಲಿಸಿರುವ ಆರೋಪ ಪಟ್ಟಿ ವ್ಯತಿರಿಕ್ತವಾಗಿದೆ. ನಾಗೇಂದ್ರ ಅವರನ್ನೇ ಮೊದಲನೇ ಆರೋಪಿಯನ್ನಾಗಿ ಹೆಸರಿಸಲಾಗಿದೆ.

ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರನ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ (ಎಸ್‌ಐಟಿ) 300 ಪುಟಗಳ ಆರೋಪ ಪಟ್ಟಿಯನ್ನು ಆಗಸ್ಟ್ 22ರಂದು ಶಿವಮೊಗ್ಗದ ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಿದೆ.

ಪ್ರಕರಣದಲ್ಲಿ ಕೆಎಂವಿಎಸ್‌ಟಿಡಿಸಿಎಲ್‌ ಹಿಂದಿನ ವ್ಯವಸ್ಥಾಪಕ ಜೆ.ಜಿ ಪದ್ಮನಾಭ ಮತ್ತು ಪರಶುರಾಮ ದುರ್ಗಣ್ಣನವರ್‌ ಅವರನ್ನು ಆರೋಪಿಗಳನ್ನಾಗಿಸಲಾಗಿದೆ. ಈ ಇಬ್ಬರೂ ಅಧಿಕಾರಿಗಳನ್ನು ಸರ್ಕಾರ ಅಮಾನತುಗೊಳಿಸಿದೆ. ಚಂದ್ರಶೇಖರನ್‌ ಪತ್ನಿ ಕವಿತಾ ಅವರು ನೀಡಿದ ದೂರಿನನ್ವಯ ಶಿವಮೊಗ್ಗದ ವಿನೋಬನಗರ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 306 ಮತ್ತು 34ರ ಅಡಿ ಪ್ರಕರಣ ದಾಖಲಾಗಿತ್ತು.

ಈ ಆರೋಪ ಪಟ್ಟಿಯಲ್ಲೂ ಮಾಜಿ ಸಚಿವ ಬಿ. ನಾಗೇಂದ್ರ ಮತ್ತು ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್‌ ಹಾಗೂ ಇನ್ನಿತರರ ಹೆಸರು ಇಲ್ಲ ಎಂದು ತಿಳಿದು ಬಂದಿದೆ.

ಚಂದ್ರಶೇಖರನ್‌ ಅವರ ಆತ್ಮಹತ್ಯೆ ಪ್ರಕರಣ ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಸುದ್ದಿಯಾದ ಬಳಿಕ, ರಾಜ್ಯ ಸರ್ಕಾರ ಮೇ 31,2023ರಂದು ಸಿಐಡಿಯ ಎಸ್‌ಐಟಿಗೆ ಪ್ರಕರಣದ ತನಿಖೆ ವರ್ಗಾಯಿಸಿತ್ತು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಒಟ್ಟು 8 ಪ್ರಕರಣಗಳು ದಾಖಲಾಗಿದ್ದು, ಎಲ್ಲವನ್ನೂ ಎಸ್‌ಐಟಿ ತನಿಖೆ ನಡೆಸುತ್ತಿದೆ.

ಶಿವಮೊಗ್ಗದ ವಿನೋಬನಗರದ ತಮ್ಮ ಮನೆಯಲ್ಲಿ 2024ರ ಮೇ 26 ರಂದು ಚಂದ್ರಶೇಖರ್‌ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸಂಬಂಧ ದಾಖಲಾಗಿದ್ದ ಪ್ರಕರಣದಲ್ಲಿ ಎಸ್‌ಐಟಿ ಅಧಿಕಾರಿಗಳು ಪ್ರಾಥಮಿಕ ಹಂತದ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ತನಿಖೆ ಮಾಡಬೇಕಾಗಿದ್ದು, ಸಂಪೂರ್ಣ ದೋಷರೋಪ ಪಟ್ಟಿ ಸಲ್ಲಿಸಲು ಹೆಚ್ಚಿನ ಕಾಲಾವಕಾಶ ನೀಡುವಂತೆ ಎಸ್‌ಐಟಿ ಅಧಿಕಾರಿಗಳು ನ್ಯಾಯಾಲಯವನ್ನು ಕೋರಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ : ವಿವಿಧ ಹಗರಣಗಳ ತನಿಖೆ ಸಮನ್ವಯಕ್ಕೆ ಗೃಹ ಸಚಿವರ ನೇತೃತ್ವದಲ್ಲಿ ಸಮಿತಿ ರಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...