Homeಮುಖಪುಟರಷ್ಯಾ ಸೇನೆಯಲ್ಲಿ ಭಾರೀ ಮೊತ್ತದ ವೇತನದ ಆಸೆಗೆ ಪಾಸ್‌ ಪೋರ್ಟ್ ತೊರೆದ ಭಾರತೀಯರು!

ರಷ್ಯಾ ಸೇನೆಯಲ್ಲಿ ಭಾರೀ ಮೊತ್ತದ ವೇತನದ ಆಸೆಗೆ ಪಾಸ್‌ ಪೋರ್ಟ್ ತೊರೆದ ಭಾರತೀಯರು!

- Advertisement -
- Advertisement -

ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ದದಲ್ಲಿ ರಷ್ಯಾ ಸೇನೆಗೆ ನೆರವು ಸಿಬ್ಬಂದಿಯಾಗಿ ತೆರಳಿರುವ ಹಲವಾರು ಕೇರಳಿಗರು, ಭಾರೀ ಮೊತ್ತದ ವೇತನದ ಆಮಿಷಕ್ಕೆ ಒಳಗಾಗಿ ತಮ್ಮ ಭಾರತೀಯ ಪಾಸ್‌ಪೋರ್ಟ್ ಅನ್ನು ಶರಣಾಗಿಸಿ, ರಷ್ಯಾದ ಖಾಯಂ ನಿವಾಸಿಗಳಾಗಿರುವ ವಿಷಯ ಬೆಳಕಿಗೆ ಬಂದಿದೆ ಎಂದು ರಾಜ್ಯ ಸರ್ಕಾರದ ಅನಿವಾಸಿ ಕೇರಳಿಗರ ವ್ಯವಹಾರಗಳ ಇಲಾಖೆ (NORKA) ತಿಳಿಸಿದೆ.

ತವರಿನಲ್ಲಿ ಗಳಿಸುತ್ತಿದ್ದಕ್ಕಿಂತ ಹೆಚ್ಚಿನ ಮೊತ್ತವಾದ ಸುಮಾರು 2.5 ಲಕ್ಷ ರೂಪಾಯಿ ಮಾಸಿಕ ವೇತನದ ಆಹ್ವಾನ ದೊರೆತಿದ್ದರಿಂದ ರಷ್ಯಾ ಸೇನೆಯ ನೆರವು ಸಿಬ್ಬಂದಿಯಾಗಿ ತೆರಳಿರುವ ಈ ಕೇರಳಿಗರು, ತಮ್ಮ ಭಾರತೀಯ ಪಾಸ್‌ಪೋರ್ಟ್ ಅನ್ನು ಶರಣಾಗಿಸಿದ್ದಾರೆ ಎಂದು NORKAದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅಜಿತ್ ಕೊಲಸ್ಸೆರಿ ಹೇಳಿದ್ದಾಗಿ indianexpress.com ವರದಿ ಮಾಡಿದೆ.

ರಷ್ಯಾದ ಖಾಯಂ ನಿವಾಸತ್ವ ಪಡೆದುಕೊಂಡ ಬಳಿಕ, ಸೇನೆಗೆ ಸೇರ್ಪಡೆಯಾಗಲು ಇವರೆಲ್ಲ (ಕೇರಳಿಗರು) ಲಿಖಿತ ಸಮ್ಮತಿ ನೀಡಿದ್ದಾರೆ ಎಂದು ಮಾಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿಯಿಂದ ತಿಳಿದು ಬಂದಿದೆ ಎಂದು ಅಜಿತ್ ಕೊಲಶ್ಶೇರಿ ಮಾಹಿತಿ ನೀಡಿದ್ದಾರೆ.

ಕಳೆದ ಆಗಸ್ಟ್‌ನಲ್ಲಿ ತ್ರಿಶೂರ್ ಜಿಲ್ಲೆಯ 36 ವರ್ಷದ ಸಂದೀಪ್ ಡ್ರೋನ್ ದಾಳಿಯಲ್ಲಿ ಸಾವನ್ನಪ್ಪಿದ ನಂತರ, ಅವರಲ್ಲಿ (ಕೇರಳಿಗರು) ಕೆಲವರು ಭಾರತಕ್ಕೆ ಮರಳುವ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಕೆಲವರ ಮನೆಯವರು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಕಳೆದ ವಾರ ಪಿಣರಾಯಿ ವಿಜಯನ್ ಅವರು ರಷ್ಯಾದ ಸೇನಾ ಶಿಬಿರಗಳಿಂದ ಕೇರಳಿಗರನ್ನು ಮರಳಿ ಕರೆತರುವಂತೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರಿಗೆ ಪತ್ರ ಬರೆದಿದ್ದಾರೆ.

“ಕೇರಳದಿಂದ ಇನ್ನೂ ಎಷ್ಟು ಮಂದಿ ಇದ್ದಾರೆ ಎಂಬುವುದು ನಮಗೆ ತಿಳಿದಿಲ್ಲ. ನಾಲ್ವರು ಹಿಂತಿರುಗುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲವರು ಕೇರಳಕ್ಕೆ ಮರಳಲು ಹಿಂದೇಟು ಹಾಕುತ್ತಿದ್ದಾರೆ. ಏಕೆಂದರೆ ಅಲ್ಲಿ ತಿಂಗಳಿಗೆ 2.5 ಲಕ್ಷ ರೂ. ವೇತನ ಸಿಗುತ್ತಿದ್ದೆ. ಊರಿನಲ್ಲಿ ಅವರೆಲ್ಲ ಎಲೆಕ್ಟ್ರಿಷಿಯನ್, ಪ್ಲಂಬಿಂಗ್, ಅಡುಗೆ ಕೆಲಸದಂತಹ ಉದ್ಯೋಗ ಮಾಡುತಿದ್ದರು. ಇದು ಕೇರಳ ಮಟ್ಟಿಗೆ ತುಂಬಾ ಅಸಹಜ ವಲಸೆಯಾಗಿದೆ” ಎಂದು ಕೊಲಸ್ಸೆರಿ ಹೇಳಿದ್ದಾರೆ.

ಭಾರತೀಯರನ್ನು ಮಾನವ ಕಳ್ಳಸಾಗಾಣಿಕೆ ಮಾಡಿದ ಆರೋಪದ ಮೇಲೆ ಹಲವು ಪ್ರವಾಸಿ ಏಜೆಂಟ್‌ಗಳ ವಿರುದ್ದಈ ವರ್ಷದ ಮಾರ್ಚ್‌ನಲ್ಲಿ ದೆಹಲಿಯ ಸಿಬಿಐ ಪ್ರಕರಣ ದಾಖಲಿಸಿಕೊಂಡಿದೆ. ಕೇರಳದ ಕೆಲವರು ಸೇರಿದಂತೆ ಹಲವಾರು ಭಾರತೀಯರನ್ನುರಷ್ಯಾ ಸೇನೆಯೊಂದಿಗೆ ಕೆಲಸ ಮಾಡಲು, ಅಲ್ಲಿಗೆ ಕಳ್ಳಸಾಗಾಣಿಕೆ ಮಾಡಿದ ಆರೋಪ ಈ ಏಜೆಂಟ್‌ಗಳ ವಿರುದ್ದ ಇದೆ. ಉಕ್ರೇನ್ ವಿರುದ್ಧದ ರಷ್ಯಾದ ಯುದ್ಧದಲ್ಲಿ ಇಬ್ಬರು ಭಾರತೀಯ ಯುವಕರು ಸಾವನ್ನಪ್ಪಿದ ನಂತರ ಏಜೆಂಟರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಆಫಾತಕಾರಿ ವಿಷಯವೆಂದರೆ, ಮಾರ್ಚ್ ತಿಂಗಳಲ್ಲಿ ಉದ್ಯೋಗ ವಂಚನೆ ಪ್ರಕರಣ ಬೆಳಕಿಗೆ ಬಂದಿದ್ದರೂ, ಸೇನೆಯ ಕೆಲಸಕ್ಕೆ ಸೇರಲು ರಷ್ಯಾದ ಖಾಯಂ ನಿವಾಸತ್ವ ತೆಗೆದುಕೊಂಡಿರುವ ಕೆಲವರು ಏಪ್ರಿಲ್‌ನಲ್ಲಿ ಅಲ್ಲಿಗೆ ಪ್ರಯಾಣಿಸಿದ್ದಾರೆ.

ಈ ಪೈಕಿ ಕೆಲವರು ನಮ್ಮ ಜೊತೆ ಮಾತನಾಡಿದ್ದು, “ನಮಗೆ ಸೇನಾ ಶಿಬಿರದಲ್ಲಿ ನಿಯೋಜಿಸುವ ಮಾಹಿತಿ ನೀಡಲಾಗಿತ್ತಾದರೂ, ಯುದ್ಧಭೂಮಿಯಲ್ಲಿ ಸೈನ್ಯದಲ್ಲಿ ಕೆಲಸ ಮಾಡುವ ಕುರಿತು ಯಾವುದೇ ಮಾಹಿತಿ ನೀಡಿರಲಿಲ್ಲ” ಎಂಬುವುದಾಗಿ ತಿಳಿಸಿದ್ದಾರೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ಹೇಳಿದೆ.

ರಷ್ಯಾದಿಂದ ಸ್ವದೇಶಕ್ಕೆ ಮರಳಲು ಬಯಸುತ್ತಿರುವ ಕೇರಳಿಗರಲ್ಲಿ ಒಬ್ಬರಾದ ಸಂತೋಷ್, ತಾನು ಮತ್ತು ಇತರ ಇಬ್ಬರು ಮೂರು ತಿಂಗಳವರೆಗೆ ಮಾನ್ಯವಾಗಿರುವ ಖಾಸಗಿ ವೀಸಾದಲ್ಲಿ ರಷ್ಯಾಗೆ ಬಂದಿದ್ದೇವೆ ಎಂದು ತಿಳಿಸಿದ್ದಾರೆ.

“ಶಿಬಿರಗಳಲ್ಲಿ ಸೇನೆಗೆ ನೆರವು ಸಿಬ್ಬಂದಿಯಾಗಿ ಸೇವೆಗೆ ಸೇರಲು, ನಮ್ಮ ಭಾರತೀಯ ಪಾಸ್‌ಪೋರ್ಟ್ ಅನ್ನು ರದ್ದುಗೊಳಿಸಿದ ನಂತರ ನಾವು ರಷ್ಯಾದ ಖಾಯಂ ನಿವಾಸತ್ವ ತೆಗೆದುಕೊಳ್ಳಬೇಕಾಗಿತ್ತು. ಆದರೆ, ಸಂದೀಪ್ ಸಾವಿನ ನಂತರ ನಾವು ಭಾರತಕ್ಕೆ ಮರಳಲು ನಿರ್ಧರಿಸಿದ್ದೇವೆ. ಇದಕ್ಕಾಗಿ ನಾವು ಮೊದಲು ಸೇನೆಯೊಂದಿಗಿನ ನಮ್ಮ ಒಪ್ಪಂದವನ್ನು ರದ್ದುಗೊಳಿಸಬೇಕಿದೆ. ನಂತರ ಖಾಯಂ ನಿವಾಸತ್ವ ರದ್ದುಗೊಳಿಸಬೇಕು. ಈ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಭಾರತೀಯ ರಾಯಭಾರ ಕಚೇರಿ ನಮಗೆ ಸಹಾಯ ಮಾಡುತ್ತಿದೆ” ಎಂದು ಸಂತೋಷ್ ಹೇಳಿದ್ದಾರೆ.

ಆಗಸ್ಟ್‌ನಲ್ಲಿ ಡ್ರೋನ್ ದಾಳಿಯಲ್ಲಿ ಸಾವನ್ನಪ್ಪಿದ ಸಂದೀಪ್ ಅವರ ಕುಟುಂಬವು ಅವರ ಪಾರ್ಥಿವ ಶರೀರವನ್ನು ಮನೆಗೆ ತಂದು ಅಂತ್ಯ ಸಂಸ್ಕಾರ ಮಾಡಲು ಕಾಯುತ್ತಿದೆ. ಈ ಕುರಿತು ಮಾತನಾಡಿರುವ ಸಂದೀಪ್ ಸಂಬಂಧಿ ಸರನ್ “ಮಾಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಸಂದೀಪ್ ಅವರ ದೇಹವನ್ನು ಇನ್ನಷ್ಟೇ ಪಡೆಯಬೇಕಿದೆ. ಯುದ್ಧಭೂಮಿಯಿಂದ ಸಂದೀಪ್ ದೇಹ ರಸ್ತೆ ಮಾರ್ಗದ ಮೂಲಕ ಮಾತ್ರ ರಾಜಧಾನಿ ಮಾಸ್ಕೋಗೆ ತರಲು ಸಾಧ್ಯವಿದೆ ಎಂದು ನಮಗೆ ಹೇಳಿದ್ದಾರೆ” ಎಂದು ತಿಳಿಸಿದ್ದಾರೆ.

Courtesy : indianexpress.com

ಇದನ್ನೂ ಓದಿ : ಕೇರಳ ಸಿಎಂ ಭೇಟಿಯಾದ ಡಬ್ಲ್ಯುಸಿಸಿ ಸದಸ್ಯರು; ಹೇಮಾ ಸಮಿತಿ ವರದಿಯ ಮುಂದಿನ ಕ್ರಮಕ್ಕೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Is Russians are mad to offer 2.5 kakhs pm just to logistics work in their Army. Going for earning heptic money and something happens blaming Indian Government. Government has to make Law that no Indian should go to other country for Army related jobs.

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...