Homeಮುಖಪುಟನಕಲಿ ಎನ್‌ಕೌಂಟರ್ | "ಆರೋಪಿಗಳು ಈ ರೀತಿ ಪ್ರಾಣ ಕಳೆದುಕೊಳ್ಳುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ" : ಸುಪ್ರೀಂ...

ನಕಲಿ ಎನ್‌ಕೌಂಟರ್ | “ಆರೋಪಿಗಳು ಈ ರೀತಿ ಪ್ರಾಣ ಕಳೆದುಕೊಳ್ಳುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ” : ಸುಪ್ರೀಂ ಕೋರ್ಟ್

- Advertisement -
- Advertisement -

ಅಸ್ಸಾಂನ ‘ನಕಲಿ ಎನ್‌ಕೌಂಟರ್‌’ ಗಳ ವಿರುದ್ದ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರ ಸುಪ್ರೀಂ ಕೋರ್ಟ್ ಪೀಠ, “ಆರೋಪಿಗಳು ಈ ರೀತಿ ಪ್ರಾಣ ಕಳೆದುಕೊಳ್ಳುತ್ತಿರುವುದು ಕಾನೂನಿನಡಿ ಒಳ್ಳೆಯ ಬೆಳವಣಿಗೆಯಲ್ಲ” ಎಂದು ಟೀಕಿಸಿದ್ದಾರೆ.

ನ್ಯಾಯಮೂರ್ತಿ ಸೂರ್ಯ ಕಾಂತ್ ಅವರನ್ನೊಳಗೊಂಡ ಪೀಠದ ಭಾಗವಾದ ನ್ಯಾಯಮೂರ್ತಿ ಭುಯಾನ್ ಅವರು ಗೌಹಾಟಿ ಹೈಕೋರ್ಟ್‌ ಆದೇಶದ ವಿರುದ್ಧ ಸಲ್ಲಿಸಲಾಗಿರುವ ವಿಶೇಷ ರಜಾ ಅವಧಿಯ ಅರ್ಜಿಯ ವಿಚಾರಣೆ ನಡೆಸಿದ್ದಾರೆ.

ಅರ್ಜಿದಾರರು ನಕಲಿ ಎನ್‌ಕೌಂಟರ್‌ಗಳ ಬಗ್ಗೆ ತನಿಖೆ ನಡೆಸಲು ಕೋರಿ ಗೌಹಾಟಿ ಹೈಕೋರ್ಟ್‌ಗೆ ಮೊರೆ ಹೋಗಿದ್ದರು. ಆದರೆ, ಅವರ ಮನವಿಯನ್ನು ತಿರಸ್ಕರಿಸಿದ್ದ ಹೈಕೋರ್ಟ್, ಪ್ರತಿ ಪ್ರಕರಣದಲ್ಲೂ ರಾಜ್ಯದ ಅಧಿಕಾರಿಗಳು ತನಿಖೆ ನಡೆಸುತ್ತಿರುವುದರಿಂದ ಆಪಾದಿತ ಘಟನೆಗಳ ಬಗ್ಗೆ ಪ್ರತ್ಯೇಕ ತನಿಖೆ ಅಗತ್ಯವಿಲ್ಲ ಎಂದು ಹೇಳಿರುವುದಾಗಿ ವರದಿಯಾಗಿದೆ.

ಪ್ರಕರಣ ಸಂಬಂಧ ಅಫಿಡವಿಟ್ ಸಲ್ಲಿಸಲು ಅಸ್ಸಾಂ ಸರ್ಕಾರಕ್ಕೆ ಸಮಯ ನೀಡಿರುವ ಸುಪ್ರೀಂ ಕೋರ್ಟ್ ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 22ಕ್ಕೆ ಮುಂದೂಡಿದೆ.

ಅರ್ಜಿ ವಿಚಾರಣೆ ವೇಳೆ, ನಕಲಿ ಎನ್‌ಕೌಂಟರ್‌ಗಳ ಕುರಿತ ತನಿಖೆಗೆ ನ್ಯಾಯಾಲಯ ಆಯೋಗ ರಚಿಸಲು ಉದ್ದೇಶಿಸಿರುವುದನ್ನು ನ್ಯಾಯಮೂರ್ತಿ ಕಾಂತ್ ಅವರು ಪುನರುಚ್ಚರಿಸಿದ್ದಾರೆ. ಆಯೋಗಕ್ಕೆ ನೇಮಕ ಮಾಡಲು ನಿವೃತ್ತ ನ್ಯಾಯಾಧೀಶರ ಹೆಸರನ್ನು ಸೂಚಿಸಲು ಕಕ್ಷಿದಾರಿಗೆ ಕೋರಿದ್ದಾರೆ.

ಒಂದು ಹಂತದಲ್ಲಿ, ಅಸ್ಸಾಂನ ಹೆಚ್ಚುವರಿ ಅಡ್ವೊಕೇಟ್ ಜನರಲ್ ನಳಿನ್ ಕೊಹ್ಲಿ ಅವರು, ಎನ್‌ಕೌಂಟರ್‌ನಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಯಾವುದೇ ಪೊಲೀಸ್ ಸಿಬ್ಬಂದಿಗೆ ಬಡ್ತಿ ನೀಡಲಾಗಿಲ್ಲ ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಭುಯಾನ್ ಅವರು “ಆರೋಪಿಗಳು ಸುಖಾ ಸುಮ್ಮನೆ ತಮ್ಮ ಪ್ರಾಣ ಕಳೆದುಕೊಳ್ಳುತ್ತಿರುವುದು ಕಾನೂನಿನಲ್ಲಿ ಒಳ್ಳೆಯದಲ್ಲ” ಎಂದಿದ್ದಾರೆ.

ಅಸ್ಸಾಂನ ವಕೀಲರಾದ ಆರಿಫ್ ಎಂಡಿ ಯಾಸಿನ್ ಜ್ವಾಡ್ಡರ್ ಅವರು, ಅಸ್ಸಾಂನಲ್ಲಿ ರಾಜ್ಯ ಪೊಲೀಸರು ನಡೆಸಿದ ಎನ್‌ಕೌಂಟರ್ ವಿಷಯವನ್ನು ಪ್ರಸ್ತಾಪಿಸಿ ಅರ್ಜಿ ಸಲ್ಲಿಸಿದ್ದಾರೆ.

ಮೇ 2021ರಿಂದ (ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅಧಿಕಾರ ವಹಿಸಿಕೊಂಡಾಗಿಂದ) ಅಸ್ಸಾಂ ಪೊಲೀಸರು ಮತ್ತು ವಿವಿಧ ಪ್ರಕರಣಗಳ ಆರೋಪಿಗಳ ನಡುವೆ 80ಕ್ಕೂ ಹೆಚ್ಚು ನಕಲಿ ಎನ್‌ಕೌಂಟರ್‌ಗಳು ನಡೆದಿವೆ ಎಂದು ಆರೋಪಿಸಿರುವ ಅರ್ಜಿದಾರರು, ಸಿಬಿಐ, ಎಸ್‌ಐಟಿ ಅಥವಾ ಇತರ ರಾಜ್ಯಗಳ ಪೊಲೀಸ್ ತಂಡದಂತಹ ಸ್ವತಂತ್ರ ಏಜೆನ್ಸಿಯಿಂದ ಈ ಬಗ್ಗೆ ತನಿಖೆ ನಡೆಸುವಂತೆ ಕೋರಿದ್ದಾರೆ.

ಅರ್ಜಿ ಸಂಬಂಧ, ಕಳೆದ ವರ್ಷದ ಜುಲೈ 17ರಂದು ಅಸ್ಸಾಂ ಸರ್ಕಾರ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮತ್ತು ಅಸ್ಸಾಂ ಮಾನವ ಹಕ್ಕುಗಳ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ.

ಈ ವರ್ಷದ ಏಪ್ರಿಲ್‌ನಲ್ಲಿ, ಅರ್ಜಿದಾರರು ಕೆಲವು ಹೆಚ್ಚುವರಿ ಮಾಹಿತಿಗಳನ್ನು ನೀಡುವಂತೆ ನ್ಯಾಯಾಲಯ ಸೂಚಿಸಿತ್ತು. ಅದರಂತೆ ಅವರು ಟಿನ್ಸುಕಿಯಾ ಎನ್‌ಕೌಂಟರ್ ಪ್ರಕರಣದ ಸಂತ್ರಸ್ತರ ಅಫಿಡವಿಟ್‌ಗಳನ್ನು ಸಲ್ಲಿಸಿದ್ದಾರೆ ಎಂದು ಹೇಳಲಾಗ್ತಿದೆ. ಈ ಪ್ರಕರಣದಲ್ಲಿ ಮೂವರು ವ್ಯಕ್ತಿಗಳು (ದೀಪಜ್ಯೋತಿ ನಿಯೋಗ್, ಬಿಸ್ವನಾಥ್ ಬರ್ಗೋಹೈನ್ ಮತ್ತು ಮನೋಜ್ ಬುರಾಗೊಹೈನ್) ಪೊಲೀಸ್ ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದಾರೆ.

ಟಿನ್ಸುಕಿಯಾ ಎನ್‌ಕೌಂಟರ್ ಪ್ರಕರಣದ ಇಬ್ಬರು ಬಲಿಪಶುಗಳ ಕುಟುಂಬ ಸದಸ್ಯರು, ಅಂದರೆ. ಬಿಸ್ವನಾಥ್ ಮತ್ತು ಮನೋಜ್‌ನ ಕುಟುಂಬಸ್ಥರು ಇಬ್ವರು ನಾಪತ್ತೆಯಾಗಿರುವುದಾಗಿ ದೂರು ದಾಖಲಿಸಲು ಮುಂದಾಗಿದ್ದರು. ಆದರೆ, ಅವರು ನಿಷೇಧಿತ ಉಗ್ರಗಾಮಿ ಸಂಘಟನೆ ಉಲ್ಫಾಗೆ ಸೇರಲು ತೆರಳಿದ್ದಾರೆ ಎಂದು ಒಪ್ಪಿಕೊಳ್ಳದ ಹೊರತು ದೂರು ದಾಖಲಿಸಿಕೊಳ್ಳುವುದಿಲ್ಲ ಎಂದು ಸ್ಥಳೀಯರ ಪೊಲೀಸರು ನಿರಾಕರಿಸಿದ್ದಾರೆ. ಎನ್‌ಕೌಂಟರ್ ಬಳಿಕ ಸಂತ್ರಸ್ತರ ಮೇಲೆಯೇ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅರ್ಜಿದಾರರು ನ್ಯಾಯಾಲಯಕ್ಕೆ ಹೇಳಿದ್ದಾರೆ.

ಅಸ್ಸಾಂನ ಧೋಲ್ಲಾ ಪೊಲೀಸ್ ಠಾಣೆಯ ಪ್ರಭಾರಿ ಅಧಿಕಾರಿ ಎನ್‌ಕೌಂಟರ್ ನಡೆದ ಸ್ಥಳದಲ್ಲಿ ಹಾಜರಿದ್ದರು. ಅವರ ಪಿಸ್ತೂಲ್ ಅನ್ನು ಸಂತ್ರಸ್ತೆ ದೀಪಜ್ಯೋತಿ ನಿಯೋಗ್ ಕಸಿದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಹೀಗಿರುವಾಗ, ಅದೇ ಪೊಲೀಸ್ ಅಧಿಕಾರಿ ತನ್ನನ್ನೇ ಪ್ರಕರಣದ ತನಿಖಾಧಿಕಾರಿಯಾಗಿ ನೇಮಿಸಿಕೊಂಡಿದ್ದಾರೆ ಎಂದು ಅರ್ಜಿದಾರ ನ್ಯಾಯಾಲಯಕ್ಕೆ ವಿವರಿಸಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ರಷ್ಯಾ ಸೇನೆಯಲ್ಲಿ ಭಾರೀ ಮೊತ್ತದ ವೇತನದ ಆಸೆಗೆ ಪಾಸ್‌ ಪೋರ್ಟ್ ತೊರೆದ ಭಾರತೀಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...