Homeಕರ್ನಾಟಕಪ್ರತಿಭಟನೆಗಳನ್ನು ಫ್ರೀಡಂ ಪಾರ್ಕ್‌ಗೆ ಸೀಮಿತಗೊಳಿಸಿರುವ ಆದೇಶ ಹಿಂಪಡೆಯಿರಿ: ನಾಗರಿಕ ಸಂಘಟನೆಯಿಂದ ಮುಖ್ಯಮಂತ್ರಿಗೆ ಆಗ್ರಹ

ಪ್ರತಿಭಟನೆಗಳನ್ನು ಫ್ರೀಡಂ ಪಾರ್ಕ್‌ಗೆ ಸೀಮಿತಗೊಳಿಸಿರುವ ಆದೇಶ ಹಿಂಪಡೆಯಿರಿ: ನಾಗರಿಕ ಸಂಘಟನೆಯಿಂದ ಮುಖ್ಯಮಂತ್ರಿಗೆ ಆಗ್ರಹ

- Advertisement -
- Advertisement -

ಪ್ರತಿಭಟನೆಗಳನ್ನು  ಫ್ರೀಡಂ ಪಾರ್ಕ್‌ಗೆ (ಸ್ವಾತಂತ್ರ್ಯ ಉದ್ಯಾನವನ) ಸೀಮಿತಗೊಳಿಸಿರುವ ಆದೇಶವನ್ನು ಸೆಪ್ಟೆಂಬರ್ 15ರೊಳಗೆ (ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ) ಹಿಂಪಡೆಯಬೇಕೆಂದು ‘ಹೋರಾಟದ ಹಕ್ಕಿಗಾಗಿ ಜನಾಂದೋಲನ’ ಸಂಘಟನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದೆ.

ಬೆಂಗಳೂರಿನಲ್ಲಿ ಪ್ರೆಸ್‌ಕ್ಲಬ್‌ನಲ್ಲಿ ಇಂದು (ಸೆ.12) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆಲ್ ಇಂಡಿಯಾ ಲಾಯರ್ಸ್‌ ಆಸೋಸಿಯೇಶನ್ ಫಾರ್ ಜಸ್ಟೀಸ್ (ಎಐಎಲ್‌ಎಜೆ) ಸಂಸ್ಥೆಯ ವಕೀಲೆ ಮೈತ್ರೇಯಿ ಅವರು” ಪ್ರತಿಭಟನೆಗಳನ್ನು ಫ್ರೀಡಂ ಪಾರ್ಕ್‌ಗೆ ನಿರ್ಬಂಧಿಸಿರುವುದಷ್ಟೇ ಅಲ್ಲ, ಪೋಲೀಸರು ತಮ್ಮಅಧಿಕಾರ ದುರುಪಯೋಗಪಡಿಸಿಕೊಂಡು ಅನೇಕ ಬಾರಿ ಕರಪತ್ರ ಹಂಚುವ, ಮೊಂಬತ್ತಿ ಹಚ್ಚಿ ಕೂರುವ, ಸಾಮಾಜಿಕ ಸಮಸ್ಯೆಗಳ ಕುರಿತ ಸಾಕ್ಷ್ಯಚಿತ್ರಗಳ ಪ್ರದರ್ಶನ ಪ್ರಕ್ರಿಯೆಗಳನ್ನು ಸ್ಥಗಿತಗೊಳಿಸಿದ್ದಾರೆ. ಶಾಂತಿಯುತ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿರುವ ಎಲ್ಲಾ ಪ್ರಕರಣಗಳನ್ನು ಹಿಂಪಡೆಯಬೇಕು ಮತ್ತು ಪೊಲೀಸ್ ಹಿಂಸಾಚಾರದ ಘಟನೆಗಳ ಬಗ್ಗೆ ಕೂಡಲೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು.

ಮುಖ್ಯಮಂತ್ರಿಗೆ ನೀಡುತ್ತಿರುವ ಬಹಿರಂಗ ಪತ್ರಕ್ಕೆ ಈಗಾಗಲೇ 565 ನಾಗರಿಕರು ಮತ್ತು ಕಾರ್ಯಕರ್ತರು ಸಹಿ ಹಾಕಿದ್ದಾರೆ ಎಂದು ತಿಳಿಸಿದರು.

ಜನವಾದಿ ಮಹಿಳಾ ಸಂಘಟನೆಯ ಉಪಾಧ್ಯಕ್ಷೆ ಕೆ.ಎಸ್. ವಿಮಲಾ ಮಾತನಾಡಿ, “ಪ್ರಜಾಪ್ರಭುತ್ವ ಕೇವಲ ಮತ ಹಾಕುವುದಕ್ಕೆ ಸೀಮಿತವಾಗಿಲ್ಲ. ನಮ್ಮ ಮೂಲಭೂತ ಹಕ್ಕುಗಳಿಗಾಗಿ ಹೋರಾಡುವುದು ಹಾಗೂ ಮೂಲಭೂತ ಕರ್ತವ್ಯಗಳನ್ನು ಪೂರೈಸುವುದು ಕೂಡ ಪ್ರಜಾಪ್ರಭುತ್ವದ ಭಾಗವೇ. ಪ್ರತಿಭಟನೆಗಳನ್ನು ಸ್ವಾತಂತ್ರ್ಯ ಉದ್ಯಾನವನಕ್ಕೆ ಸೀಮಿತಿಗೊಳಿಸುವುದರಿಂದ ಪ್ರತಿಭಟನೆಯ ಉದ್ದೇಶವನ್ನೇ ಸೋಲಿಸದಂತಾಗುತ್ತದೆ” ಎಂದರು.

ಸ್ವಾತಂತ್ರ್ಯ ಉದ್ಯಾನವನ ಈ ಹಿಂದೆ ಜೈಲು ಆಗಿತ್ತು. ಇಂದು ನಮ್ಮ ಪ್ರತಿಭಟನೆಗಳನ್ನು ಅಲ್ಲಿ ಬಂಧಿಸಲಾಗಿದೆ. ದಶಕಗಳಿಂದ ಹೋರಾಟ ಮಾಡಿಕೊಂಡು ಬಂದಿರುವ ನಾನಾಗಲಿ ನನ್ನ ಸಂಘಟನೆಯಾಗಲಿ ಎಲ್ಲಿ ಪ್ರತಿಭಟಿಸಬೇಕೆಂದು ತೀರ್ಮಾನಿಸಲು ಆಗುತ್ತಿಲ್ಲ. ಅದನ್ನು ಪೊಲೀಸರೇ ತೀರ್ಮಾನಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ಡಾ. ಮೋಹನ್ ರಾಜ್ ಮಾತನಾಡಿ “ಈ ಹಿಂದೆ ಮುಖ್ಯಮಂತ್ರಿಗಳೇ ಪ್ರತಿಭಟನೆಗೆ ವಿಧಿಸಿರುವ ನಿರ್ಬಂಧವನ್ನು ತೆಗೆಯಲಾಗುವುದು ಎಂದು ಘೋಷಿಸಿದ್ದರು. ಸಾರ್ವಜನಿಕ ಸಭೆಯೊಂದರಲ್ಲಿ, ಈ ವಿಷಯವಾಗಿ ಅಡ್ವೊಕೇಟ್ ಜನರಲ್ ಜೊತೆ ಮಾತನಾಡುವುದಾಗಿ ಮರಳುಸಿದಪ್ಪ ಅವರಿಗೆ ತಿಳಿಸಿದ್ದರು. ಆ ಮಾತು ಹೇಳಿ ಒಂದು ವರ್ಷ ಕಳೆಯಿತು ಎಂದು ನೆನಪಿಸಿದರು.

ಹಿರಿಯ ಸಾಹಿತಿ ಹಾಗೂ ಇತಿಹಾಸ ತಜ್ಞ ರಾಮಚಂದ್ರ ಗುಹಾ ಮಾತನಾಡಿ “ಈ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ್ದೇ ಹೋರಾಟಗಳ ಮೂಲಕ. ಟ್ರಾಫಿಕ್ ಸಮಸ್ಯೆ ಆಗುತ್ತದೆ ಎನ್ನುವ ನೆಪದಲ್ಲಿ ಮೂಲಭೂತ ಹಕ್ಕಾದ ಹೋರಾಟದ ಹಕ್ಕನ್ನು ಹತ್ತಿಕ್ಕುವುದು ಸರಿಯಲ್ಲ. ಈ ಹಿಂದೆ ಟೌನ್ ಹಾಲ್, ಮೈಸೂರು ವೃತ್ತ, ಆನಂದ್ ರಾವ್ ವೃತ್ತ ಇಲ್ಲೆಲ್ಲ ಪ್ರತಿಭಟನೆ ಮಾಡಿದ್ದೇವೆ. ಆಗೆಲ್ಲ ಯಾವ ಟ್ರಾಫಿಕ್ ಸಮಸ್ಯೆಯೂ ಆಗಿಲ್ಲ” ಎಂದು ಹೇಳಿದರು.

“ಈಗ ನಮ್ಮನ್ನು ‘Unfreedom Park’ ಅಥವಾ ‘Freedom-Hidden-Away Park’ಗೆ ಬಂಧಿಸಿದ್ದಾರೆ” ಎಂದು ಸರ್ಕಾರದ ನಡೆ ಖಂಡಿಸಿದರು.

ಕಾರ್ಮಿಕ ಸಂಘಟನೆಗಳ ಜಂಟಿ ಒಕ್ಕೂಟದ ಸಂಚಾಲಕ ಕೆ.ವಿ.ಭಟ್ ಮಾತನಾಡಿ, “ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸುವ ರಾಜ್ಯ ಸರ್ಕಾರದ ಕಾರ್ಯಕ್ರಮವನ್ನು ನಾವು ಸ್ವಾಗತಿಸುತ್ತೇವೆ. ಆದರೆ, ಬೆಂಗಳೂರಿನ ಜನರಿಗೆ ಅವರ ಸಾಂವಿಧಾನಿಕ ಹಕ್ಕುಗಳನ್ನು ಖಾತರಿಪಡಿಸುವ ಭರವಸೆಯನ್ನು ಸಿಎಂ ಈಡೇರಿಸಿಲ್ಲ. ಮೇ ದಿನದ ರ್‍ಯಾಲಿಗೂ ನಾವು ಉಚ್ಚ ನ್ಯಾಯಾಲಯದ ಅನುಮತಿ ಪಡೆಯುವಂತಾಗಿದೆ” ಎಂದರು.

ವಿದ್ಯಾರ್ಥಿ/ಯುವಕ ಸಂಘಟನೆಯಾದ ಕಲೆಕ್ಟಿವ್‌ನ ತ್ವಿಶಾ ಮೆಹ್ತಾ ಮಾತನಾಡಿ “ಇಂದು ಕೇವಲ ಪ್ರತಿಭಟನೆಗಳ ನಿರ್ಬಂಧ ಆಗುತ್ತಿಲ್ಲ. ನಾವು ಚಲನಚಿತ್ರ ಪ್ರದರ್ಶನ, ಕವನ ವಾಚನ, ರೈಡಿಂಗ್ ಸರ್ಕಲ್ ಅಥವಾ ಜನರನ್ನು ಒಟ್ಟುಗೂಡಿಸುವ ಯಾವುದೇ ಕೂಟವನ್ನು ಆಯೋಜಿಸಲು ಪ್ರಯತ್ನಿಸಿದಾಗ, ಈ ಅಸಂವಿಧಾನಿಕ ನಿರ್ಬಂಧವನ್ನು ಉಲ್ಲೇಖಿಸಿ ಪೊಲೀಸರು ದಮನ ಮಾಡುತ್ತಿದ್ದಾರೆ” ಎಂದು ದೂರಿದರು.

ಕರ್ನಾಟಕ ಲೈಂಗಿಕ ಅಲ್ಪಸಂಖ್ಯಾತರ ವೇದಿಕೆಯ ಮಲ್ಲಮ್ಮ ಮಾತನಾಡಿ, ”ಲಿಂಗ ಮತ್ತು ಲೈಂಗಿಕ ಅಲ್ಪಸಂಖ್ಯಾತರಾದ ನಮ್ಮ ಹಕ್ಕುಗಳನ್ನು ಆಚರಿಸಲು ಮತ್ತು ಪ್ರತಿಪಾದಿಸಲು ಪ್ರತಿ ವರ್ಷ ‘ಪ್ರೈಡ್ ಮಾರ್ಚ್’ ಎಂಬ ಮೆರವಣಿಗೆ ಆಯೋಜಿಸುತ್ತೇವೆ. 2022ರಲ್ಲಿ ಆ ಮೆರವಣಿಗೆ ನಡೆಸಲು ಬಿಟ್ಟಿಲ್ಲ. 2023ರಲ್ಲಿ ನಾವು ಗೃಹ ಸಚಿವರೊಂದಿಗೆ ಮಾತುಕತೆ ನಡೆಸಿ ನಮ್ಮ ಮೆರವಣಿಗೆಗೆ ಅವಕಾಶ ಪಡೆಯಬೇಕಾಯಿತು. ಅದರ ನಂತರವೂ ನಮ್ಮ ಮೆರವಣಿಗೆ ಕೇವಲ ಅರ್ಧ ಕಿಲೋಮೀಟರ್‌ಗೆ ಸೀಮಿತವಾಗಿತ್ತು. ಈ ಪ್ರತಿಭಟನೆಗಳು ಮತ್ತು ಸಾರ್ವಜನಿಕ ಪ್ರದರ್ಶನಗಳು ಕೇವಲ ಸ್ವಯಂ ಪ್ರೇರಿತವಲ್ಲ. ಅವು ನಮ್ಮ ಹಕ್ಕುಗಳಿಗಾಗಿ ಹೋರಾಟದ ಸುದೀರ್ಘ ಇತಿಹಾಸವನ್ನು ಹೊಂದಿವೆ” ಎಂದರು.

ಇದನ್ನೂ ಓದಿ : ಮಂಡ್ಯ | ಗಣೇಶ ಮೂರ್ತಿ ಮೆರವಣಿಗೆ ವೇಳೆ ಹಿಂಸಾಚಾರ; 46 ಮಂದಿಯ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...