Homeಕರ್ನಾಟಕಪ್ರತಿಭಟನೆಗಳನ್ನು ಫ್ರೀಡಂ ಪಾರ್ಕ್‌ಗೆ ಸೀಮಿತಗೊಳಿಸಿರುವ ಆದೇಶ ಹಿಂಪಡೆಯಿರಿ: ನಾಗರಿಕ ಸಂಘಟನೆಯಿಂದ ಮುಖ್ಯಮಂತ್ರಿಗೆ ಆಗ್ರಹ

ಪ್ರತಿಭಟನೆಗಳನ್ನು ಫ್ರೀಡಂ ಪಾರ್ಕ್‌ಗೆ ಸೀಮಿತಗೊಳಿಸಿರುವ ಆದೇಶ ಹಿಂಪಡೆಯಿರಿ: ನಾಗರಿಕ ಸಂಘಟನೆಯಿಂದ ಮುಖ್ಯಮಂತ್ರಿಗೆ ಆಗ್ರಹ

- Advertisement -
- Advertisement -

ಪ್ರತಿಭಟನೆಗಳನ್ನು  ಫ್ರೀಡಂ ಪಾರ್ಕ್‌ಗೆ (ಸ್ವಾತಂತ್ರ್ಯ ಉದ್ಯಾನವನ) ಸೀಮಿತಗೊಳಿಸಿರುವ ಆದೇಶವನ್ನು ಸೆಪ್ಟೆಂಬರ್ 15ರೊಳಗೆ (ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ) ಹಿಂಪಡೆಯಬೇಕೆಂದು ‘ಹೋರಾಟದ ಹಕ್ಕಿಗಾಗಿ ಜನಾಂದೋಲನ’ ಸಂಘಟನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದೆ.

ಬೆಂಗಳೂರಿನಲ್ಲಿ ಪ್ರೆಸ್‌ಕ್ಲಬ್‌ನಲ್ಲಿ ಇಂದು (ಸೆ.12) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆಲ್ ಇಂಡಿಯಾ ಲಾಯರ್ಸ್‌ ಆಸೋಸಿಯೇಶನ್ ಫಾರ್ ಜಸ್ಟೀಸ್ (ಎಐಎಲ್‌ಎಜೆ) ಸಂಸ್ಥೆಯ ವಕೀಲೆ ಮೈತ್ರೇಯಿ ಅವರು” ಪ್ರತಿಭಟನೆಗಳನ್ನು ಫ್ರೀಡಂ ಪಾರ್ಕ್‌ಗೆ ನಿರ್ಬಂಧಿಸಿರುವುದಷ್ಟೇ ಅಲ್ಲ, ಪೋಲೀಸರು ತಮ್ಮಅಧಿಕಾರ ದುರುಪಯೋಗಪಡಿಸಿಕೊಂಡು ಅನೇಕ ಬಾರಿ ಕರಪತ್ರ ಹಂಚುವ, ಮೊಂಬತ್ತಿ ಹಚ್ಚಿ ಕೂರುವ, ಸಾಮಾಜಿಕ ಸಮಸ್ಯೆಗಳ ಕುರಿತ ಸಾಕ್ಷ್ಯಚಿತ್ರಗಳ ಪ್ರದರ್ಶನ ಪ್ರಕ್ರಿಯೆಗಳನ್ನು ಸ್ಥಗಿತಗೊಳಿಸಿದ್ದಾರೆ. ಶಾಂತಿಯುತ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿರುವ ಎಲ್ಲಾ ಪ್ರಕರಣಗಳನ್ನು ಹಿಂಪಡೆಯಬೇಕು ಮತ್ತು ಪೊಲೀಸ್ ಹಿಂಸಾಚಾರದ ಘಟನೆಗಳ ಬಗ್ಗೆ ಕೂಡಲೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು.

ಮುಖ್ಯಮಂತ್ರಿಗೆ ನೀಡುತ್ತಿರುವ ಬಹಿರಂಗ ಪತ್ರಕ್ಕೆ ಈಗಾಗಲೇ 565 ನಾಗರಿಕರು ಮತ್ತು ಕಾರ್ಯಕರ್ತರು ಸಹಿ ಹಾಕಿದ್ದಾರೆ ಎಂದು ತಿಳಿಸಿದರು.

ಜನವಾದಿ ಮಹಿಳಾ ಸಂಘಟನೆಯ ಉಪಾಧ್ಯಕ್ಷೆ ಕೆ.ಎಸ್. ವಿಮಲಾ ಮಾತನಾಡಿ, “ಪ್ರಜಾಪ್ರಭುತ್ವ ಕೇವಲ ಮತ ಹಾಕುವುದಕ್ಕೆ ಸೀಮಿತವಾಗಿಲ್ಲ. ನಮ್ಮ ಮೂಲಭೂತ ಹಕ್ಕುಗಳಿಗಾಗಿ ಹೋರಾಡುವುದು ಹಾಗೂ ಮೂಲಭೂತ ಕರ್ತವ್ಯಗಳನ್ನು ಪೂರೈಸುವುದು ಕೂಡ ಪ್ರಜಾಪ್ರಭುತ್ವದ ಭಾಗವೇ. ಪ್ರತಿಭಟನೆಗಳನ್ನು ಸ್ವಾತಂತ್ರ್ಯ ಉದ್ಯಾನವನಕ್ಕೆ ಸೀಮಿತಿಗೊಳಿಸುವುದರಿಂದ ಪ್ರತಿಭಟನೆಯ ಉದ್ದೇಶವನ್ನೇ ಸೋಲಿಸದಂತಾಗುತ್ತದೆ” ಎಂದರು.

ಸ್ವಾತಂತ್ರ್ಯ ಉದ್ಯಾನವನ ಈ ಹಿಂದೆ ಜೈಲು ಆಗಿತ್ತು. ಇಂದು ನಮ್ಮ ಪ್ರತಿಭಟನೆಗಳನ್ನು ಅಲ್ಲಿ ಬಂಧಿಸಲಾಗಿದೆ. ದಶಕಗಳಿಂದ ಹೋರಾಟ ಮಾಡಿಕೊಂಡು ಬಂದಿರುವ ನಾನಾಗಲಿ ನನ್ನ ಸಂಘಟನೆಯಾಗಲಿ ಎಲ್ಲಿ ಪ್ರತಿಭಟಿಸಬೇಕೆಂದು ತೀರ್ಮಾನಿಸಲು ಆಗುತ್ತಿಲ್ಲ. ಅದನ್ನು ಪೊಲೀಸರೇ ತೀರ್ಮಾನಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ಡಾ. ಮೋಹನ್ ರಾಜ್ ಮಾತನಾಡಿ “ಈ ಹಿಂದೆ ಮುಖ್ಯಮಂತ್ರಿಗಳೇ ಪ್ರತಿಭಟನೆಗೆ ವಿಧಿಸಿರುವ ನಿರ್ಬಂಧವನ್ನು ತೆಗೆಯಲಾಗುವುದು ಎಂದು ಘೋಷಿಸಿದ್ದರು. ಸಾರ್ವಜನಿಕ ಸಭೆಯೊಂದರಲ್ಲಿ, ಈ ವಿಷಯವಾಗಿ ಅಡ್ವೊಕೇಟ್ ಜನರಲ್ ಜೊತೆ ಮಾತನಾಡುವುದಾಗಿ ಮರಳುಸಿದಪ್ಪ ಅವರಿಗೆ ತಿಳಿಸಿದ್ದರು. ಆ ಮಾತು ಹೇಳಿ ಒಂದು ವರ್ಷ ಕಳೆಯಿತು ಎಂದು ನೆನಪಿಸಿದರು.

ಹಿರಿಯ ಸಾಹಿತಿ ಹಾಗೂ ಇತಿಹಾಸ ತಜ್ಞ ರಾಮಚಂದ್ರ ಗುಹಾ ಮಾತನಾಡಿ “ಈ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ್ದೇ ಹೋರಾಟಗಳ ಮೂಲಕ. ಟ್ರಾಫಿಕ್ ಸಮಸ್ಯೆ ಆಗುತ್ತದೆ ಎನ್ನುವ ನೆಪದಲ್ಲಿ ಮೂಲಭೂತ ಹಕ್ಕಾದ ಹೋರಾಟದ ಹಕ್ಕನ್ನು ಹತ್ತಿಕ್ಕುವುದು ಸರಿಯಲ್ಲ. ಈ ಹಿಂದೆ ಟೌನ್ ಹಾಲ್, ಮೈಸೂರು ವೃತ್ತ, ಆನಂದ್ ರಾವ್ ವೃತ್ತ ಇಲ್ಲೆಲ್ಲ ಪ್ರತಿಭಟನೆ ಮಾಡಿದ್ದೇವೆ. ಆಗೆಲ್ಲ ಯಾವ ಟ್ರಾಫಿಕ್ ಸಮಸ್ಯೆಯೂ ಆಗಿಲ್ಲ” ಎಂದು ಹೇಳಿದರು.

“ಈಗ ನಮ್ಮನ್ನು ‘Unfreedom Park’ ಅಥವಾ ‘Freedom-Hidden-Away Park’ಗೆ ಬಂಧಿಸಿದ್ದಾರೆ” ಎಂದು ಸರ್ಕಾರದ ನಡೆ ಖಂಡಿಸಿದರು.

ಕಾರ್ಮಿಕ ಸಂಘಟನೆಗಳ ಜಂಟಿ ಒಕ್ಕೂಟದ ಸಂಚಾಲಕ ಕೆ.ವಿ.ಭಟ್ ಮಾತನಾಡಿ, “ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸುವ ರಾಜ್ಯ ಸರ್ಕಾರದ ಕಾರ್ಯಕ್ರಮವನ್ನು ನಾವು ಸ್ವಾಗತಿಸುತ್ತೇವೆ. ಆದರೆ, ಬೆಂಗಳೂರಿನ ಜನರಿಗೆ ಅವರ ಸಾಂವಿಧಾನಿಕ ಹಕ್ಕುಗಳನ್ನು ಖಾತರಿಪಡಿಸುವ ಭರವಸೆಯನ್ನು ಸಿಎಂ ಈಡೇರಿಸಿಲ್ಲ. ಮೇ ದಿನದ ರ್‍ಯಾಲಿಗೂ ನಾವು ಉಚ್ಚ ನ್ಯಾಯಾಲಯದ ಅನುಮತಿ ಪಡೆಯುವಂತಾಗಿದೆ” ಎಂದರು.

ವಿದ್ಯಾರ್ಥಿ/ಯುವಕ ಸಂಘಟನೆಯಾದ ಕಲೆಕ್ಟಿವ್‌ನ ತ್ವಿಶಾ ಮೆಹ್ತಾ ಮಾತನಾಡಿ “ಇಂದು ಕೇವಲ ಪ್ರತಿಭಟನೆಗಳ ನಿರ್ಬಂಧ ಆಗುತ್ತಿಲ್ಲ. ನಾವು ಚಲನಚಿತ್ರ ಪ್ರದರ್ಶನ, ಕವನ ವಾಚನ, ರೈಡಿಂಗ್ ಸರ್ಕಲ್ ಅಥವಾ ಜನರನ್ನು ಒಟ್ಟುಗೂಡಿಸುವ ಯಾವುದೇ ಕೂಟವನ್ನು ಆಯೋಜಿಸಲು ಪ್ರಯತ್ನಿಸಿದಾಗ, ಈ ಅಸಂವಿಧಾನಿಕ ನಿರ್ಬಂಧವನ್ನು ಉಲ್ಲೇಖಿಸಿ ಪೊಲೀಸರು ದಮನ ಮಾಡುತ್ತಿದ್ದಾರೆ” ಎಂದು ದೂರಿದರು.

ಕರ್ನಾಟಕ ಲೈಂಗಿಕ ಅಲ್ಪಸಂಖ್ಯಾತರ ವೇದಿಕೆಯ ಮಲ್ಲಮ್ಮ ಮಾತನಾಡಿ, ”ಲಿಂಗ ಮತ್ತು ಲೈಂಗಿಕ ಅಲ್ಪಸಂಖ್ಯಾತರಾದ ನಮ್ಮ ಹಕ್ಕುಗಳನ್ನು ಆಚರಿಸಲು ಮತ್ತು ಪ್ರತಿಪಾದಿಸಲು ಪ್ರತಿ ವರ್ಷ ‘ಪ್ರೈಡ್ ಮಾರ್ಚ್’ ಎಂಬ ಮೆರವಣಿಗೆ ಆಯೋಜಿಸುತ್ತೇವೆ. 2022ರಲ್ಲಿ ಆ ಮೆರವಣಿಗೆ ನಡೆಸಲು ಬಿಟ್ಟಿಲ್ಲ. 2023ರಲ್ಲಿ ನಾವು ಗೃಹ ಸಚಿವರೊಂದಿಗೆ ಮಾತುಕತೆ ನಡೆಸಿ ನಮ್ಮ ಮೆರವಣಿಗೆಗೆ ಅವಕಾಶ ಪಡೆಯಬೇಕಾಯಿತು. ಅದರ ನಂತರವೂ ನಮ್ಮ ಮೆರವಣಿಗೆ ಕೇವಲ ಅರ್ಧ ಕಿಲೋಮೀಟರ್‌ಗೆ ಸೀಮಿತವಾಗಿತ್ತು. ಈ ಪ್ರತಿಭಟನೆಗಳು ಮತ್ತು ಸಾರ್ವಜನಿಕ ಪ್ರದರ್ಶನಗಳು ಕೇವಲ ಸ್ವಯಂ ಪ್ರೇರಿತವಲ್ಲ. ಅವು ನಮ್ಮ ಹಕ್ಕುಗಳಿಗಾಗಿ ಹೋರಾಟದ ಸುದೀರ್ಘ ಇತಿಹಾಸವನ್ನು ಹೊಂದಿವೆ” ಎಂದರು.

ಇದನ್ನೂ ಓದಿ : ಮಂಡ್ಯ | ಗಣೇಶ ಮೂರ್ತಿ ಮೆರವಣಿಗೆ ವೇಳೆ ಹಿಂಸಾಚಾರ; 46 ಮಂದಿಯ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...