Homeಮುಖಪುಟಚುನಾವಣೆಯಲ್ಲಿ ಟಿಕ್‌ಟಾಕ್‌ ಸ್ಟಾರ್‌ ಸೋನಾಲಿಗೆ ಸೋಲು: ಮತದಾರರ ಮನ ಗೆದ್ದ ಕುಲ್ದೀಪ್‌

ಚುನಾವಣೆಯಲ್ಲಿ ಟಿಕ್‌ಟಾಕ್‌ ಸ್ಟಾರ್‌ ಸೋನಾಲಿಗೆ ಸೋಲು: ಮತದಾರರ ಮನ ಗೆದ್ದ ಕುಲ್ದೀಪ್‌

- Advertisement -
- Advertisement -

ಟಿಕ್‌ಟಾಕ್‌ ವಿಡಿಯೋ ಮೂಲಕ ಲಕ್ಷ ಲಕ್ಷ ಜನತೆಯ ಮನ ಗೆದ್ದಿದ್ದ ಟಿಕ್‌ಟಾಕ್‌ ಸ್ಟಾರ್‌, ಬಿಜೆಪಿ ಅಭ್ಯರ್ಥಿ ಸೋನಾಲಿ ಪೋಗಟ್‌ ಚುನಾವಣೆಯಲ್ಲಿ ಹರಿಯಾಣ ಜನತೆಯ ಮನ ಗೆಲ್ಲುವಲ್ಲಿ ವಿಫಲರಾಗಿದ್ದಾರೆ. ಹರ್ಯಾಣದ ಆದಂಪುರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಸೋನಾಲಿ ಪೋಗಟ್, ಕಾಂಗ್ರೆಸ್‌ ಅಭ್ಯರ್ಥಿ ಕುಲ್ದೀಪ್‌ ಬಿಶ್ನೋಯ್‌ ವಿರುದ್ಧ ಹೀನಾಯ ಸೋಲು ಕಂಡಿದ್ದಾರೆ.

ಬಿಜೆಪಿಯ ಸೋನಾಲಿ ವಿರುದ್ಧ ಕುಲ್ದೀಪ್‌ ಬಿಶ್ನೋಯ್‌ ೨೬ ಸಾವಿರ ಮತಗಳ ಅಂತರದಿಂದ ಗೆದ್ದು ಬೀಗಿದ್ದಾರೆ. ಕಾಂಗ್ರೆಸ್‌ನ ಕುಲ್ದೀಪ್‌. ಮಾಜಿ ಸಿಎಂ ಭಜನ್‌ಲಾಲ್‌ ಅವರ ಪುತ್ರ . ಆದಂಪುರ ಕ್ಷೇತ್ರದಲ್ಲಿ ಉತ್ತಮ ಹಿಡಿತ ಹೊಂದಿದವರು. ಮೂರು ಬಾರಿ ಶಾಸಕರಾಗಿದ್ದರು. ಆದರೆ ಮೊದಲ ಚುನಾವಣೆಯಲ್ಲೇ ಸೋನಾಲಿ ಪೋಗಟ್‌ ಮುಗ್ಗರಿಸಿದ್ದಾರೆ.

ಟಿಕ್‌ಟಾಕ್‌ನಲ್ಲಿ ಲಕ್ಷಾಂತರ ಫಾಲೋವರ್ಸ್‌ ಹೊಂದುವ ಮೂಲಕ ಸ್ಟಾರ್‌ ಖ್ಯಾತಿ ಪಡೆದಿದ್ದ ಸೋನಾಲಿ ಪೋಗಟ್‌ಗೆ ಚುನಾವಣೆ ಗೆಲ್ಲುತ್ತಾರೆ ಎಂಬ ಲೆಕ್ಕಾಚಾರದಿಂದ ಟಿಕೆಟ್‌ ನೀಡಿತ್ತು. ಆಗ ಪಕ್ಷದಲ್ಲಿ ಭಿನ್ನಾಭಿಪ್ರಾಯ ಭುಗಿಲೆದ್ದಿತ್ತು. ಆದರೆ ಬಿಜೆಪಿ ಹೈಕಮಾಂಡ್‌ ಇದ್ಯಾವುದನ್ನೂ ಗಣನೆಗೆ ತೆಗೆದುಕೊಂಡಿರಲಿಲ್ಲ. ಆದರೆ ಬಿಜೆಪಿ ಲೆಕ್ಕಾಚಾರ ತಲೆಕೆಳಗಾಗಿದ್ದು, ಸೋನಾಲಿಯನ್ನು ಮತದಾರರು ಒಪ್ಪಿಕೊಂಡಿಲ್ಲ. ಅಷ್ಟೇ ಅಲ್ಲ, ಕಾಂಗ್ರೆಸ್‌ ಅಭ್ಯರ್ಥಿ ಹಾಗೂ ಕ್ಷೇತ್ರದಲ್ಲಿ ಅಬ್ಬರಿಸಿದ್ದ ಸೋನಾಲಿ ಚುನಾವಣೆ ಗೆಲುವಿಗಾಗಿ ಹಿಂದೂ ಮಂತ್ರ ಪಠಿಸಿದ್ದರು. ಆದರೆ ಇದ್ಯಾವುದೂ ಸೋನಾಲಿಯನ್ನು ಹೈ ಹಿಡಿದಿಲ್ಲ.

ಇನ್ನು ಚುನಾವಣೆ ಪ್ರಚಾರದ ವೇಳೆ ಸೋನಾಲಿ ಪೋಗಟ್‌ ಭಾರತ್‌ ಮಾತಾ ಕೀ ಜೈ ಎನ್ನದವರು ಭಾರತೀಯರಲ್ಲ ಎಂದು ನಿಂದಿಸಿದ್ದ ಹಾಗೂ ಸವಾಲು ಹಾಕಿದ್ದ ವಿಡಿಯೋ ಟಿಕ್‌ಟಾಕ್‌ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸಂಚಲನ ಮೂಡಿಸಿತ್ತು. ಆದಂಪುರ ಕ್ಷೇತ್ರದಲ್ಲಿ ಕುಲ್ದೀಪ್‌ಗೆ ಸೋನಾಲಿ ಸವಾಲು ಹಾಕಿದ್ದರು. ಆದರೆ ಕುಲ್ದೀಪ್‌ ಮತದಾರರ ಮನ ಗೆದ್ದಿದ್ದು, ಮತ್ತೆ ಕ್ಷೇತ್ರವನ್ನು ತೆಕ್ಕೆಗೆ ತೆಗೆದುಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...