Homeಮುಖಪುಟಮಹಾರಾಷ್ಟ್ರ ವಿಧಾನಸಭೆ ವಿಪಕ್ಷಗಳ ಮೈತ್ರಿ | ಇನ್ನೂ ತೀರ್ಮಾನವಾಗದ 163 ಕ್ಷೇತ್ರಗಳು

ಮಹಾರಾಷ್ಟ್ರ ವಿಧಾನಸಭೆ ವಿಪಕ್ಷಗಳ ಮೈತ್ರಿ | ಇನ್ನೂ ತೀರ್ಮಾನವಾಗದ 163 ಕ್ಷೇತ್ರಗಳು

- Advertisement -
- Advertisement -

ಮುಂಬರುವ ಮಹಾರಾಷ್ಟ್ರ ವಿಧಾನಸಭೆ ವಿಪಕ್ಷಗಳ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟದ 125 ಸ್ಥಾನಗಳ ಭಿನ್ನಾಭಿಪ್ರಾಯಗಳು ನಿವಾರಿಸಲಾಗಿದೆ ಎಂದು ವರದಿಯಾಗಿದೆ. ಆದರೆ ಉಳಿದ 163 ಸ್ಥಾನಗಳು ಯಾರಿಗೆ ಎಂಬ ವಿಚಾರದಲ್ಲಿ ಮಿತ್ರಪಕ್ಷಗಳ ನಡುವೆ ಇನ್ನೂ ತೀರ್ಮಾನವಾಗಿಲ್ಲ ಎಂದು ಕಾಂಗ್ರೆಸ್ ಹೇಳಿದೆ. ಆದಾಗ್ಯೂ, ಗಣೇಶ ಹಬ್ಬದ ನಂತರ ಮಿತ್ರಪಕ್ಷಗಳು ಭಿನ್ನಾಭಿಪ್ರಾಯಗಳನ್ನು ಸೌಹಾರ್ದಯುತವಾಗಿ ಪರಿಹರಿಸಿ ವಿಧಾನಸಭಾ ಚುನಾವಣೆಗೆ ಸೀಟು ಹಂಚಿಕೆ ಒಪ್ಪಂದವನ್ನು ಪ್ರಕಟಿಸಲಿವೆ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ನಾಯಕ ವಿಜಯ್ ವಡೆತ್ತಿವಾರ್ ಮಾತನಾಡಿ, “ಎಂವಿಎ ಮೈತ್ರಿಕೂಟದ ಪಕ್ಷಗಳ ನಡುವೆ ವಿಧಾನಸಭೆಯ 125 ಸ್ಥಾನಗಳ ಬಗ್ಗೆ ಯಾವುದೇ ಸಮಸ್ಯೆಗಳಿಲ್ಲ. ಆದರೆ ಉಳಿದ 163 ಸ್ಥಾನಗಳ ಬಗ್ಗೆಗಿನ ಭಿನ್ನಾಭಿಪ್ರಾಯಗಳನ್ನು ಇನ್ನಷ್ಟೆ ಪರಿಹರಿಸಬೇಕಾಗಿದೆ” ಎಂದು ಹೇಳಿದ್ದಾರೆ.

ಆದಾಗ್ಯೂ, ಗಣೇಶ ಹಬ್ಬದ ನಂತರ ಮಿತ್ರಪಕ್ಷಗಳಾದ ಕಾಂಗ್ರೆಸ್, ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಶರದ್ ಪವಾರ್) ಭಿನ್ನಾಭಿಪ್ರಾಯಗಳನ್ನು ಸೌಹಾರ್ದಯುತವಾಗಿ ಪರಿಹರಿಸಿ ವಿಧಾನಸಭಾ ಚುನಾವಣೆಗೆ ಸೀಟು ಹಂಚಿಕೆ ಒಪ್ಪಂದವನ್ನು ಪ್ರಕಟಿಸಲಿವೆ ಎಂದು ಅವರು ಹೇಳಿದ್ದಾರೆ.

“ನಾವು ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸವಿದೆ. ಆಂತರಿಕ ಮತ್ತು ಬಾಹ್ಯ ಸಮೀಕ್ಷೆಗಳು ಎಂವಿಎ ಪ್ರಬಲವಾಗಿದೆ ಮತ್ತು ಲೋಕಸಭೆಯ ಕಾರ್ಯಕ್ಷಮತೆ ಪುನರಾವರ್ತನೆಯಾಗುವ ಸಾಧ್ಯತೆಯಿದೆ ಎಂದು ಸುಳಿವು ನೀಡಿದೆ. ಹಾಗಾಗಿ ಫಲಿತಾಂಶ ಇನ್ನೂ ಉತ್ತಮವಾಗಿ ಬರಬಹುದು”ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.

ಇದನ್ನೂಓದಿ:ತೆರಿಗೆಯಲ್ಲಿ ಶೇ.50ರಷ್ಟು ಪಾಲು ಕೊಡಿ : ಪ್ರತಿಪಕ್ಷಗಳ ಆಡಳಿತ ರಾಜ್ಯಗಳಿಂದ ಕೇಂದ್ರಕ್ಕೆ ಆಗ್ರಹ

“ಮಹಾರಾಷ್ಟ್ರ ವಿರೋಧಿ ಮಹಾಯುತಿ ಸರ್ಕಾರವನ್ನು ಅಧಿಕಾರದಿಂದ ಹೊರಹಾಕಲು ಮತ್ತು ಸ್ಥಳೀಯ ಜನರು ಮತ್ತು ರೈತರ ಹಿತಾಸಕ್ತಿಗಳ ಪರವಾಗಿರುವ ಸರ್ಕಾರವನ್ನು ಮರಳಿ ತರಲು ಮಹಾರಾಷ್ಟ್ರದ ಜನರು ಅವಕಾಶಕ್ಕಾಗಿ ಕಾಯುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ಲೋಕಸಭೆ ಚುನಾವಣೆ ಫಲಿತಾಂಶದ ಆಧಾರದ ಮೇಲೆ ಪಕ್ಷವು 110ಕ್ಕೂ ಹೆಚ್ಚು ಸ್ಥಾನಗಳಿಗೆ ಬೇಡಿಕೆ ಇಟ್ಟಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು 13 ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಶರದ್ ಪವಾರ್ ನೇತೃತ್ವದ ಎನ್‌ಸಿಪಿ ತಾನು ಸ್ಪರ್ಧಿಸಿದ್ದ 10 ಸ್ಥಾನಗಳಲ್ಲಿ ಎಂಟು ಸ್ಥಾನಗಳನ್ನು ಗೆದ್ದಿದೆ. ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ತಾನು ಸ್ಪರ್ಧಿಸಿದ್ದ 21 ಸ್ಥಾನಗಳ ವಿರುದ್ಧ ಒಂಬತ್ತು ಸ್ಥಾನಗಳನ್ನು ಗೆದ್ದಿತ್ತು.

ಎನ್‌ಸಿಪಿ (ಎಸ್‌ಪಿ) ಕೂಡ ವಿಧಾನಸಭೆ ಚುನಾವಣೆಯಲ್ಲಿ ಸಮಾನ ಸಂಖ್ಯೆಯ ಸ್ಥಾನಗಳನ್ನು ಕೇಳುತ್ತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಲೋಕಸಭೆ ಚುನಾವಣೆಯಲ್ಲಿ ಎನ್‌ಸಿಪಿ (ಎಸ್‌ಪಿ) ಹೊಂದಾಣಿಕೆ ಮಾಡಿಕೊಂಡಿತ್ತು. ಜೊತೆಗೆ ಕಾಂಗ್ರೆಸ್ ಮತ್ತು ಶಿವಸೇನೆ (ಯುಬಿಟಿ) ಗಿಂತ ಕಡಿಮೆ ಸಂಖ್ಯೆಯ ಸ್ಥಾನಗಳಲ್ಲಿ ಸ್ಪರ್ಧಿಸಲು ಒಪ್ಪಿಕೊಂಡಿತ್ತು. ಆದರೆ ವಿಧಾನಸಭಾ ಚುನಾವಣೆಯಲ್ಲಿ ಕಡಿಮೆ ಸ್ಥಾನಕ್ಕೆ ಒಪ್ಪಿಕೊಳ್ಳಲು ಪಕ್ಷವೂ ಸಿದ್ಧವಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಶಿವಸೇನೆ (ಯುಬಿಟಿ) ಕೂಡ 100ಕ್ಕೂ ಹೆಚ್ಚು ಸ್ಥಾನಗಳನ್ನು ಕೇಳುತ್ತಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.

ವಿಡಿಯೊ ನೋಡಿ: ಒಕ್ಕೂಟ ವ್ಯವಸ್ಥೆ ಮಣ್ಣು ಮುಕ್ಕಿದೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ಮೀನಾಕ್ಷಿ ಬಾಳಿ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...