Homeಮುಖಪುಟಜಿಎಸ್‌ಟಿ ಕುರಿತ ಟೀಕೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕ್ಷಮೆ ಕೋರಿದ ಹೋಟೆಲ್ ಮಾಲೀಕ :...

ಜಿಎಸ್‌ಟಿ ಕುರಿತ ಟೀಕೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕ್ಷಮೆ ಕೋರಿದ ಹೋಟೆಲ್ ಮಾಲೀಕ : ವಿಡಿಯೋ ವೈರಲ್

- Advertisement -
- Advertisement -

ಜಿಎಸ್‌ಟಿ ಸಂಬಂಧಿತ ಸಮಸ್ಯೆಗಳ ಕುರಿತು ಪ್ರಶ್ನೆಯೆತ್ತಿ ತುಂಬಿದ ಸಭೆಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಮಾಡಿದ್ದಕ್ಕೆ ತಮಿಳುನಾಡಿನ ಕೊಯಮತ್ತೂರಿನ ಹೋಟೆಲ್ ಮಾಲೀಕರೊಬ್ಬರು ಕ್ಷಮೆ ಕೇಳಿದ್ದಾರೆ ಎನ್ನಲಾದ ವಿಡಿಯೋವೊಂದು ವೈರಲ್ ಆಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ ಹಲವರು, ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕ್ಷಮೆ ಕೇಳಿಸಿದ್ದಾರೆ ಎಂದು ಆರೋಪಿಸಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಎಕ್ಸ್‌ನಲ್ಲಿ ವಿಡಿಯೋಗಳನ್ನು ಹಂಚಿಕೊಂಡಿರುವ ಕೇರಳ ಕಾಂಗ್ರೆಸ್ “ಶ್ರೀ ಅನ್ನಪೂರ್ಣ ಕೊಯಮತ್ತೂರಿನ ಪ್ರಸಿದ್ಧ ಸಸ್ಯಾಹಾರಿ ರೆಸ್ಟೋರೆಂಟ್ ಸರಪಳಿಯಾಗಿದೆ. ಬುಧವಾರ, ರೆಸ್ಟೋರೆಂಟ್‌ನ ಮಾಲೀಕ ಶ್ರೀನಿವಾಸನ್ ಅವರು ಹಣಕಾಸು ಸಚಿವರ ಜೊತೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಅಲ್ಲಿ ಜಿಎಸ್‌ಟಿಯ ಸಮಸ್ಯೆಗಳ ಬಗ್ಗೆ ಬಹಳ ನಯವಾಗಿ ಅವರು ಪ್ರಶ್ನೆಗಳನ್ನು ಕೇಳಿದ್ದರು” ಎಂದು ತಿಳಿಸಿದೆ.

“ಸಮಸ್ಯೆಯೆಂದರೆ ಪ್ರತಿಯೊಂದು ವಸ್ತುವಿಗೂ ವಿಭಿನ್ನವಾಗಿ ಜಿಎಸ್‌ಟಿ ಅನ್ವಯಿಸಲಾಗುತ್ತದೆ. ಉದಾಹರಣೆಗೆ : ಬನ್ ಮೇಲೆ ಯಾವುದೇ ಜಿಎಸ್‌ಟಿ ಇಲ್ಲ. ನೀವು ಅದರಲ್ಲಿ ಕ್ರೀಮ್ ಹಾಕಿದರೆ ಶೇ.18 ಜಿಎಸ್‌ಟಿ ಬೀಳುತ್ತದೆ. ಹಾಗಾಗಿ, ಬನ್ ಮತ್ತು ಕ್ರೀಮ್ ಅನ್ನು ಪ್ರತ್ಯೇಕವಾಗಿ ಕೊಡಿ ಎಂದು ಗ್ರಾಹಕರು ಕೇಳುತ್ತಾರೆ. ಹಣ ಉಳಿಸಲು ಅವರೇ ಬನ್‌ ಮೇಲೆ ಕ್ರೀಂ ಹಾಕಿಕೊಳ್ಳುತ್ತಾರೆ. ಉತ್ತರ ಭಾರತದಲ್ಲಿ ಜನರು ಹೆಚ್ಚು ಸಿಹಿ ತಿನ್ನುತ್ತಾರೆ ಎಂಬ ಕಾರಣಕ್ಕೆ ಹಣಕಾಸು ಇಲಾಖೆ ಸಿಹಿ ಮೇಲೆ ಶೇ.5 ಮತ್ತು ನಮ್ಕೀನ್ ಮೇಲೆ ಶೇ.12 ಜಿಎಸ್‌ಟಿ ಹಾಕಿದೆ ಎಂದು ಜನರು ಹೇಳುತ್ತಾರೆ. ತಮಿಳುನಾಡಿನಲ್ಲಿ ಸಿಹಿ, ನಮ್ಕೀನ್ ಮತ್ತು ಕಾಫಿ ಒಟ್ಟಿಗೆ ಹೋಗುತ್ತದೆ. ಆದ್ದರಿಂದ, ದಯವಿಟ್ಟು ಇವುಗಳಿಗೆ ಏಕರೂಪದ ಜಿಎಸ್‌ಟಿಯನ್ನು ವಿಧಿಸಿ. ಈ ಜಿಎಸ್‌ಟಿ ಗೊಂದಲದಿಂದಾಗಿ ಕಂಪ್ಯೂಟರೇ ಸ್ಟ್ರಕ್ ಆಗುತ್ತಿವೆ” ಎಂದು ಶ್ರೀನಿವಾಸನ್ ಅವರ ಮಾತುಗಳನ್ನು ವಿವರಿಸಿದೆ.

“ಶ್ರೀನಿವಾಸನ್ ಅವರ ಮಾತಿಗೆ ವೇದಿಕೆಯಲ್ಲಿ ಸೀತಾರಾಮನ್ ಮೇಡಂ ನಕ್ಕಿದ್ದರು. ಆದರೆ ನಂತರ ಶ್ರೀನಿವಾಸನ್ ಅವರು “ನಾನು ಯಾವುದೇ ಪಕ್ಷದ ಪರ ಇರುವವನಲ್ಲ” ಎಂದು ಸೀತಾರಾಮನ್ ಮುಂದೆ ಕ್ಷಮೆ ಯಾಚಿಸಿರುವುದು ವಿಡಿಯೋದಲ್ಲಿ ಕಂಡು ಬಂದಿದೆ. ಮಾಸ್ಟರ್ ಜೀ ಶ್ರೀನಿವಾಸನ್ ಅವರ ಟೀಕೆಗೆ ಕೋಪಗೊಂಡಿದ್ದಾರೆ ಮತ್ತು ಅವರ ಹಿಂಬಾಲಕರು ಕೂಡ ಅವರಂತೆ ವರ್ತಿಸುತ್ತಿದ್ದಾರೆ. ಟೀಕೆಗೆ ಅತ್ಯಂತ ಕೋಪಗೊಂಡಿದ್ದಾರೆ” ಎಂದು ಕೇರಳ ಕಾಂಗ್ರೆಸ್ ಹೇಳಿದೆ.

ತಮಿಳುನಾಡು ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಬಾಲಾಜಿ ಎಂ.ಎಸ್‌ ತನ್ನ ಎಕ್ಸ್‌ ಖಾತೆಯಲ್ಲಿ ವೈರಲ್ ವಿಡಿಯೋ ಹಂಚಿಕೊಂಡು “ಕೊಯಮತ್ತೂರು ಅನ್ನಪೂರ್ಣ ಶ್ರೀನಿವಾಸನ್ ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಅವರನ್ನು ಕೊಯಮತ್ತೂರು ದಕ್ಷಿಣ ಸದಸ್ಯೆ ವನತಿ ಜೊತೆ ಭೇಟಿಯಾಗಿ, ಸಭೆಯಲ್ಲಿ ತಾನು ಆಡಿದ ಮಾತುಗಳು ತಪ್ಪಾಗಿದೆ ಎಂದು ಕ್ಷಮೆ ಕೋರಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ : ತೆರಿಗೆಯಲ್ಲಿ ಶೇ.50ರಷ್ಟು ಪಾಲು ಕೊಡಿ : ಪ್ರತಿಪಕ್ಷಗಳ ಆಡಳಿತ ರಾಜ್ಯಗಳಿಂದ ಕೇಂದ್ರಕ್ಕೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...