Homeಮುಖಪುಟಫುಲೆ v/s ತಿಲಕ್ | ಶಿವಾಜಿ ಸಮಾಧಿ ಇತಿಹಾಸ ತಿರುಚಿದ ಆರೆಸ್ಸೆಸ್‌ನ ಭಾಗವತ್; ತೀವ್ರ ವಿವಾದ

ಫುಲೆ v/s ತಿಲಕ್ | ಶಿವಾಜಿ ಸಮಾಧಿ ಇತಿಹಾಸ ತಿರುಚಿದ ಆರೆಸ್ಸೆಸ್‌ನ ಭಾಗವತ್; ತೀವ್ರ ವಿವಾದ

- Advertisement -
- Advertisement -

‘ಸ್ವಾತಂತ್ರ್ಯ ಹೋರಾಟಗಾರ ಬಾಲಗಂಗಾಧರ ತಿಲಕ್ ಅವರು ಶಿವಾಜಿ ಮಹಾರಾಜರ ಸಮಾಧಿಯನ್ನು ಕಂಡುಹಿಡಿದರು’ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ನೀಡಿದ್ದ ಹೇಳಿಕೆ ಮಹಾರಾಷ್ಟ್ರದಲ್ಲಿ ಭಾರಿ ವಿವಾದ ಹುಟ್ಟುಹಾಕಿದೆ. ಭಾಗವತ್ ಅವರ ಈ ಹೇಳಿಕೆ ಫುಲೆ ಅವರ ಶ್ರೇಯವನ್ನು ಕಸಿದುಕೊಳ್ಳುವ ಪಿತೂರಿ ಎಂದು ಮಹಾರಾಷ್ಟ್ರದ ಒಬಿಸಿ ನಾಯರು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ವಾರದ ಆರಂಭದಲ್ಲಿ ಪುಣೆಯಲ್ಲಿ ಮಾತನಾಡಿದ್ದ ಭಾಗವತ್, “ಶಿವಾಜಿಯನ್ನು ಸ್ಮರಿಸುವಂತೆ ಜಾಗೃತಿಯ ಆಂದೋಲನವನ್ನು ಪ್ರಾರಂಭಿಸಲಾಯಿತು. ರಾಯಗಡದಲ್ಲಿ ಈ ಆಚರಣೆಯನ್ನು ಪ್ರಾರಂಭಿಸಲಾಯಿತು. ತಿಲಕರು ಇದನ್ನೆಲ್ಲ ಕಂಡುಹಿಡಿದರು” ಎಂದು ಹೇಳಿದ್ದರು. ಅವರ ಹೇಳಿಕೆಗೆ ಅಕ್ರೋಶ ವ್ಯಕ್ತಪಡಿಸಿರುವ ಒಬಿಸಿ ನಾಯಕರು ಸಮಾಜ ಸುಧಾರಕ ಜ್ಯೋತಿರಾವ್ ಫುಲೆ ಅವರ ಶ್ರೇಯವನ್ನು ಕಸಿದುಕೊಳ್ಳಲು ಪಿತೂರಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

1869 ರಲ್ಲಿ ಜ್ಯೋತಿರಾವ್ ಫುಲೆ ಅವರು ಸ್ಮಾರಕಕ್ಕೆ ಭೇಟಿ ನೀಡಿದ್ದರು ಎಂದು ಇತಿಹಾಸ ಹೇಳುತ್ತದೆ. ಫುಲೆ 19ನೇ ಶತಮಾನದ ಭಾರತದ ಪ್ರಮುಖ ಸಮಾಜ ಸುಧಾರಕರಾಗಿದ್ದರು. ವಿಶೇಷವಾಗಿ ಒಬಿಸಿ ಸಮುದಾಯಗಳು ಮತ್ತು ತಳಸ್ಥರದ ಸಮುದಾಯಗಳ ಪರವಾಗಿ ಅವರು ಹೋರಾಟ ಮಾಡಿದ್ದರು. ಅಲ್ಲದೆ, ಅವರು ಜಾತಿ ವ್ಯವಸ್ಥೆಯ ತೀವ್ರ ಟೀಕಾಕಾರ ಕೂಡಾ ಆಗಿದ್ದರು. ಸಾಮಾಜಿಕ ಮತ್ತು ಶೈಕ್ಷಣಿಕ ಸುಧಾರಣೆಯ ಮೂಲಕ ಒಬಿಸಿ ಸೇರಿದಂತೆ ಕೆಳ ಜಾತಿಗಳ ಸಬಲೀಕರಣಕ್ಕಾಗಿ ಅವರು ಕೆಲಸ ಮಾಡಿದ್ದರು.

ಫುಲೆ ರಾಯಗಡ ಕೋಟೆಗೆ ಭೇಟಿ ನೀಡಿದ ಅದೇ ವರ್ಷ, “ಛತ್ರಪತಿ ಶಿವಾಜಿ ರಾಜೇ ಭೋಸಲೆ ಯಂಚ ಪೋವಾಡ” ಎಂಬ ಲಾವಣಿಯೊಂದನ್ನು ಬರೆದಿದ್ದರು. ಅದು ಶಿವಾಜಿಯ ಇತಿಹಾಸವನ್ನು ಸಾಮಾನ್ಯ ಜನರ ದೃಷ್ಟಿಕೋನದಿಂದ ವಿವರಿಸುತ್ತದೆ ಮತ್ತು ಅವರನ್ನು ರಾಜರಿಗಿಂತ ಹೆಚ್ಚಾಗಿ ರೈತ ನಾಯಕ ಎಂದು ಚಿತ್ರಿಸುತ್ತದೆ. ಆ ಕಾಲದ ಬ್ರಾಹ್ಮಣ ಇತಿಹಾಸಕಾರರು ಶಿವಾಜಿಯನ್ನು ಬ್ರಾಹ್ಮಣರ ಕಲ್ಯಾಣಕ್ಕಾಗಿ ಸಮರ್ಪಿತವಾದ ರಾಜ ಎಂದು ಚಿತ್ರಿಸಿದ್ದರು.

ಇದನ್ನೂಓದಿ: ಅಬಕಾರಿ ನೀತಿ ಪ್ರಕರಣ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ಈ ಬಗ್ಗೆ ಮಾತನಾಡಿರುವ ಇತಿಹಾಸತಜ್ಞ ಇಂದ್ರಜಿತ್ ಸಾವಂತ್, “ಅರ್ಧ ಶತಮಾನಕ್ಕೂ ಹೆಚ್ಚು ಕಾಲ, ರಾಯಗಢ ಕೋಟೆಯ ಆವರಣದಲ್ಲಿ ದಟ್ಟವಾದ ಗಿಡಗಂಟಿಗಳಿಂದ ಶಿವಾಜಿ ಮಹಾರಾಜರ ಸಮಾಧಿ ಮುಚ್ಚಿಹೋಗಿತ್ತು. ಇಂತಹ ಪರಿಸ್ಥಿತಿಗಳಲ್ಲಿ ಮಹಾತ್ಮ ಜ್ಯೋತಿಬಾ ಫುಲೆ 1869 ರಲ್ಲಿ ರಾಯಗಡಕ್ಕೆ ಹೋದರು. ಯಾರೂ ಭೇಟಿ ನೀಡದ ಈ ಸ್ಥಳಕ್ಕೆ ತೆರಳಿ ಅವರು ಸಮಾಧಿಯನ್ನು ಹುಡುಕಿದರು. ಇಡೀ ಭೇಟಿಯನ್ನು ದೀನಬಂಧು ಪತ್ರಿಕೆಯಲ್ಲಿ ದಾಖಲಿಸಲಾಗಿದೆ” ಎಂದು ಹೇಳುತ್ತಾರೆ. ಇಂದ್ರಜಿತ್ ಸಾವಂತ್ ಅವರು ಶಿವಾಜಿಯ ಸಮಾಧಿಯ ಕುರಿತು ‘ಶಿವಛತ್ರಪತಿಂಚ್ಯಾ ಸಮಾಧಿಚಾ ಶೋದ್ ವಾ ಬೋಧ್’ ಎಂಬ ಪುಸ್ತಕವನ್ನು ಬರೆದಿದ್ದಾರೆ.

ಆದರೆ ಬಾಲಗಂಗಾಧರ ತಿಲಕ್ ಅವರು 1895 ರಲ್ಲಿ ಸ್ಮಾರಕವನ್ನು ದುರಸ್ತಿ ಮಾಡಲು ಮತ್ತು ಅದರ ಮೇಲೆ ಛತ್ರಿ ನಿರ್ಮಿಸಲು ಹಣವನ್ನು ಸಂಗ್ರಹಿಸಿದ್ದರು. ಆದರೆ 1925 ರಲ್ಲಿ, ಬ್ರಿಟಿಷ್ ಸರ್ಕಾರವು ಸಮಾಧಿ ನಿರ್ಮಾಣ ಮತ್ತು ದುರಸ್ತಿಗೆ ಅನುಮೋದನೆ ನೀಡಿತ್ತು.

ಶಿವಾಜಿ ಸಮಾಧಿ ಕಂಡುಹಿಡಿದ ಇತಿಹಾಸವನ್ನು ತಿರುಚುವುದು ಇತಿಹಾಸವನ್ನು ಪುನಃ ಬರೆಯುವ ಹಿಂದುತ್ವ ಪಿತೂರಿಯ ಭಾಗವಾಗಿದೆ ಎಂದು ರಾಜಕೀಯ ನಾಯಕರು ಆರೋಪಿಸಿದ್ದು, ಭಾಗವತ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಮಾಧಿಯನ್ನು ಕಂಡುಹಿಡಿದ ವ್ಯಕ್ತಿ ಎಂದು ತಿಲಕರ ಹೆಸರನ್ನು ಸೇರಿಸುವುದನ್ನು ಇತಿಹಾಸಕಾರರು ಪ್ರಶ್ನಿಸಿದ್ದಾರೆ.

ಇದನ್ನೂಓದಿ: ಹರಿಯಾಣ | 89 ಸ್ಥಾನಗಳಿಗೆ ಸ್ಪರ್ಧಿಸುತ್ತಿರುವ ಕಾಂಗ್ರೆಸ್; ಸಿಪಿಐ(ಎಂ)ಗೆ 1 ಸ್ಥಾನ; ಎಎಪಿ ಜೊತೆಗಿಲ್ಲ ಮೈತ್ರಿ

“ತಿಲಕರು ಸಮಾಧಿಯನ್ನು ಕಂಡುಹಿಡಿದ ಬಗ್ಗೆ ಯಾವುದೇ ಐತಿಹಾಸಿಕ ಉಲ್ಲೇಖಗಳಿಲ್ಲ. 1895 ರಿಂದ ಸ್ಮಾರಕಕ್ಕಾಗಿ ಚಳುವಳಿಯನ್ನು ಮುನ್ನಡೆಸುವಲ್ಲಿ ತಿಲಕರು ಪಾತ್ರವಹಿಸಿದ್ದರು ಮತ್ತು ಯೋಜನೆಗೆ ಹಣವನ್ನು ಸಂಗ್ರಹಿಸಿದ್ದರು. ಅದನ್ನು ಠೇವಣಿ ಮಾಡಿದ ಬ್ಯಾಂಕ್ ಬಸ್ಟ್ ಆದ ನಂತರ ಸಂಪೂರ್ಣ ಮೊತ್ತವು ಕಳೆದುಹೋಯಿತು. 1920ರಲ್ಲಿ ತಿಲಕರ ಮರಣದ ವೇಳೆಗೆ ಆಂದೋಲನವು ಭಗ್ನಗೊಂಡಿತ್ತು. ತಿಲಕ್ ಅವರು ಅದನ್ನು ಕಂಡುಹಿಡಿದಿದ್ದಾರೆ ಎಂದು ಹೇಳುವ ಮೂಲಕ ಸ್ಮಾರಕಕ್ಕೆ ಲಿಂಕ್ ಮಾಡುವುದು ಇತಿಹಾಸವನ್ನು ತಿರುಚುವ ಮತ್ತೊಂದು ಪ್ರಯತ್ನವಾಗಿದೆ” ಎಂದು ಇತಿಹಾಸಗಾರ ಸಾವಂತ್ ಹೇಳಿದ್ದಾರೆ.

“ಶಿವಾಜಿ ಮಹಾರಾಜರ ಸಮಾಧಿಯನ್ನು ಮೊದಲು ಕಂಡುಹಿಡಿದದ್ದು ಜ್ಯೋತಿರಾವ್ ಫುಲೆ ಎಂಬುದು ಸತ್ಯ. ಈ ಐತಿಹಾಸಿಕ ಸತ್ಯವನ್ನು ಈ ಜಗತ್ತಿನ ಯಾವ ವ್ಯಕ್ತಿಯೂ ಬದಲಾಯಿಸಲು ಸಾಧ್ಯವಿಲ್ಲ. ಶಿವಜಯಂತಿ ಆಚರಣೆಯನ್ನು ಪ್ರಾರಂಭಿಸಲು ಸಹ ಫುಲೆ ಕಾರಣರಾಗಿದ್ದರು” ಎಂದು ರಾಜ್ಯದ ಪ್ರಮುಖ ಒಬಿಸಿ ನಾಯಕರಲ್ಲಿ ಒಬ್ಬರಾದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ರಾಜ್ಯ ಕ್ಯಾಬಿನೆಟ್ ಸಚಿವ ಚಗ್ಗನ್ ಭುಜಬಲ್ ಹೇಳಿದ್ದಾರೆ.

ವಿಡಿಯೊ ನೋಡಿ: ಒಕ್ಕೂಟ ವ್ಯವಸ್ಥೆ ಮಣ್ಣು ಮುಕ್ಕಿದೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ಮೀನಾಕ್ಷಿ ಬಾಳಿ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...