Homeಮುಖಪುಟಫುಲೆ v/s ತಿಲಕ್ | ಶಿವಾಜಿ ಸಮಾಧಿ ಇತಿಹಾಸ ತಿರುಚಿದ ಆರೆಸ್ಸೆಸ್‌ನ ಭಾಗವತ್; ತೀವ್ರ ವಿವಾದ

ಫುಲೆ v/s ತಿಲಕ್ | ಶಿವಾಜಿ ಸಮಾಧಿ ಇತಿಹಾಸ ತಿರುಚಿದ ಆರೆಸ್ಸೆಸ್‌ನ ಭಾಗವತ್; ತೀವ್ರ ವಿವಾದ

- Advertisement -
- Advertisement -

‘ಸ್ವಾತಂತ್ರ್ಯ ಹೋರಾಟಗಾರ ಬಾಲಗಂಗಾಧರ ತಿಲಕ್ ಅವರು ಶಿವಾಜಿ ಮಹಾರಾಜರ ಸಮಾಧಿಯನ್ನು ಕಂಡುಹಿಡಿದರು’ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ನೀಡಿದ್ದ ಹೇಳಿಕೆ ಮಹಾರಾಷ್ಟ್ರದಲ್ಲಿ ಭಾರಿ ವಿವಾದ ಹುಟ್ಟುಹಾಕಿದೆ. ಭಾಗವತ್ ಅವರ ಈ ಹೇಳಿಕೆ ಫುಲೆ ಅವರ ಶ್ರೇಯವನ್ನು ಕಸಿದುಕೊಳ್ಳುವ ಪಿತೂರಿ ಎಂದು ಮಹಾರಾಷ್ಟ್ರದ ಒಬಿಸಿ ನಾಯರು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ವಾರದ ಆರಂಭದಲ್ಲಿ ಪುಣೆಯಲ್ಲಿ ಮಾತನಾಡಿದ್ದ ಭಾಗವತ್, “ಶಿವಾಜಿಯನ್ನು ಸ್ಮರಿಸುವಂತೆ ಜಾಗೃತಿಯ ಆಂದೋಲನವನ್ನು ಪ್ರಾರಂಭಿಸಲಾಯಿತು. ರಾಯಗಡದಲ್ಲಿ ಈ ಆಚರಣೆಯನ್ನು ಪ್ರಾರಂಭಿಸಲಾಯಿತು. ತಿಲಕರು ಇದನ್ನೆಲ್ಲ ಕಂಡುಹಿಡಿದರು” ಎಂದು ಹೇಳಿದ್ದರು. ಅವರ ಹೇಳಿಕೆಗೆ ಅಕ್ರೋಶ ವ್ಯಕ್ತಪಡಿಸಿರುವ ಒಬಿಸಿ ನಾಯಕರು ಸಮಾಜ ಸುಧಾರಕ ಜ್ಯೋತಿರಾವ್ ಫುಲೆ ಅವರ ಶ್ರೇಯವನ್ನು ಕಸಿದುಕೊಳ್ಳಲು ಪಿತೂರಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

1869 ರಲ್ಲಿ ಜ್ಯೋತಿರಾವ್ ಫುಲೆ ಅವರು ಸ್ಮಾರಕಕ್ಕೆ ಭೇಟಿ ನೀಡಿದ್ದರು ಎಂದು ಇತಿಹಾಸ ಹೇಳುತ್ತದೆ. ಫುಲೆ 19ನೇ ಶತಮಾನದ ಭಾರತದ ಪ್ರಮುಖ ಸಮಾಜ ಸುಧಾರಕರಾಗಿದ್ದರು. ವಿಶೇಷವಾಗಿ ಒಬಿಸಿ ಸಮುದಾಯಗಳು ಮತ್ತು ತಳಸ್ಥರದ ಸಮುದಾಯಗಳ ಪರವಾಗಿ ಅವರು ಹೋರಾಟ ಮಾಡಿದ್ದರು. ಅಲ್ಲದೆ, ಅವರು ಜಾತಿ ವ್ಯವಸ್ಥೆಯ ತೀವ್ರ ಟೀಕಾಕಾರ ಕೂಡಾ ಆಗಿದ್ದರು. ಸಾಮಾಜಿಕ ಮತ್ತು ಶೈಕ್ಷಣಿಕ ಸುಧಾರಣೆಯ ಮೂಲಕ ಒಬಿಸಿ ಸೇರಿದಂತೆ ಕೆಳ ಜಾತಿಗಳ ಸಬಲೀಕರಣಕ್ಕಾಗಿ ಅವರು ಕೆಲಸ ಮಾಡಿದ್ದರು.

ಫುಲೆ ರಾಯಗಡ ಕೋಟೆಗೆ ಭೇಟಿ ನೀಡಿದ ಅದೇ ವರ್ಷ, “ಛತ್ರಪತಿ ಶಿವಾಜಿ ರಾಜೇ ಭೋಸಲೆ ಯಂಚ ಪೋವಾಡ” ಎಂಬ ಲಾವಣಿಯೊಂದನ್ನು ಬರೆದಿದ್ದರು. ಅದು ಶಿವಾಜಿಯ ಇತಿಹಾಸವನ್ನು ಸಾಮಾನ್ಯ ಜನರ ದೃಷ್ಟಿಕೋನದಿಂದ ವಿವರಿಸುತ್ತದೆ ಮತ್ತು ಅವರನ್ನು ರಾಜರಿಗಿಂತ ಹೆಚ್ಚಾಗಿ ರೈತ ನಾಯಕ ಎಂದು ಚಿತ್ರಿಸುತ್ತದೆ. ಆ ಕಾಲದ ಬ್ರಾಹ್ಮಣ ಇತಿಹಾಸಕಾರರು ಶಿವಾಜಿಯನ್ನು ಬ್ರಾಹ್ಮಣರ ಕಲ್ಯಾಣಕ್ಕಾಗಿ ಸಮರ್ಪಿತವಾದ ರಾಜ ಎಂದು ಚಿತ್ರಿಸಿದ್ದರು.

ಇದನ್ನೂಓದಿ: ಅಬಕಾರಿ ನೀತಿ ಪ್ರಕರಣ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ಈ ಬಗ್ಗೆ ಮಾತನಾಡಿರುವ ಇತಿಹಾಸತಜ್ಞ ಇಂದ್ರಜಿತ್ ಸಾವಂತ್, “ಅರ್ಧ ಶತಮಾನಕ್ಕೂ ಹೆಚ್ಚು ಕಾಲ, ರಾಯಗಢ ಕೋಟೆಯ ಆವರಣದಲ್ಲಿ ದಟ್ಟವಾದ ಗಿಡಗಂಟಿಗಳಿಂದ ಶಿವಾಜಿ ಮಹಾರಾಜರ ಸಮಾಧಿ ಮುಚ್ಚಿಹೋಗಿತ್ತು. ಇಂತಹ ಪರಿಸ್ಥಿತಿಗಳಲ್ಲಿ ಮಹಾತ್ಮ ಜ್ಯೋತಿಬಾ ಫುಲೆ 1869 ರಲ್ಲಿ ರಾಯಗಡಕ್ಕೆ ಹೋದರು. ಯಾರೂ ಭೇಟಿ ನೀಡದ ಈ ಸ್ಥಳಕ್ಕೆ ತೆರಳಿ ಅವರು ಸಮಾಧಿಯನ್ನು ಹುಡುಕಿದರು. ಇಡೀ ಭೇಟಿಯನ್ನು ದೀನಬಂಧು ಪತ್ರಿಕೆಯಲ್ಲಿ ದಾಖಲಿಸಲಾಗಿದೆ” ಎಂದು ಹೇಳುತ್ತಾರೆ. ಇಂದ್ರಜಿತ್ ಸಾವಂತ್ ಅವರು ಶಿವಾಜಿಯ ಸಮಾಧಿಯ ಕುರಿತು ‘ಶಿವಛತ್ರಪತಿಂಚ್ಯಾ ಸಮಾಧಿಚಾ ಶೋದ್ ವಾ ಬೋಧ್’ ಎಂಬ ಪುಸ್ತಕವನ್ನು ಬರೆದಿದ್ದಾರೆ.

ಆದರೆ ಬಾಲಗಂಗಾಧರ ತಿಲಕ್ ಅವರು 1895 ರಲ್ಲಿ ಸ್ಮಾರಕವನ್ನು ದುರಸ್ತಿ ಮಾಡಲು ಮತ್ತು ಅದರ ಮೇಲೆ ಛತ್ರಿ ನಿರ್ಮಿಸಲು ಹಣವನ್ನು ಸಂಗ್ರಹಿಸಿದ್ದರು. ಆದರೆ 1925 ರಲ್ಲಿ, ಬ್ರಿಟಿಷ್ ಸರ್ಕಾರವು ಸಮಾಧಿ ನಿರ್ಮಾಣ ಮತ್ತು ದುರಸ್ತಿಗೆ ಅನುಮೋದನೆ ನೀಡಿತ್ತು.

ಶಿವಾಜಿ ಸಮಾಧಿ ಕಂಡುಹಿಡಿದ ಇತಿಹಾಸವನ್ನು ತಿರುಚುವುದು ಇತಿಹಾಸವನ್ನು ಪುನಃ ಬರೆಯುವ ಹಿಂದುತ್ವ ಪಿತೂರಿಯ ಭಾಗವಾಗಿದೆ ಎಂದು ರಾಜಕೀಯ ನಾಯಕರು ಆರೋಪಿಸಿದ್ದು, ಭಾಗವತ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಮಾಧಿಯನ್ನು ಕಂಡುಹಿಡಿದ ವ್ಯಕ್ತಿ ಎಂದು ತಿಲಕರ ಹೆಸರನ್ನು ಸೇರಿಸುವುದನ್ನು ಇತಿಹಾಸಕಾರರು ಪ್ರಶ್ನಿಸಿದ್ದಾರೆ.

ಇದನ್ನೂಓದಿ: ಹರಿಯಾಣ | 89 ಸ್ಥಾನಗಳಿಗೆ ಸ್ಪರ್ಧಿಸುತ್ತಿರುವ ಕಾಂಗ್ರೆಸ್; ಸಿಪಿಐ(ಎಂ)ಗೆ 1 ಸ್ಥಾನ; ಎಎಪಿ ಜೊತೆಗಿಲ್ಲ ಮೈತ್ರಿ

“ತಿಲಕರು ಸಮಾಧಿಯನ್ನು ಕಂಡುಹಿಡಿದ ಬಗ್ಗೆ ಯಾವುದೇ ಐತಿಹಾಸಿಕ ಉಲ್ಲೇಖಗಳಿಲ್ಲ. 1895 ರಿಂದ ಸ್ಮಾರಕಕ್ಕಾಗಿ ಚಳುವಳಿಯನ್ನು ಮುನ್ನಡೆಸುವಲ್ಲಿ ತಿಲಕರು ಪಾತ್ರವಹಿಸಿದ್ದರು ಮತ್ತು ಯೋಜನೆಗೆ ಹಣವನ್ನು ಸಂಗ್ರಹಿಸಿದ್ದರು. ಅದನ್ನು ಠೇವಣಿ ಮಾಡಿದ ಬ್ಯಾಂಕ್ ಬಸ್ಟ್ ಆದ ನಂತರ ಸಂಪೂರ್ಣ ಮೊತ್ತವು ಕಳೆದುಹೋಯಿತು. 1920ರಲ್ಲಿ ತಿಲಕರ ಮರಣದ ವೇಳೆಗೆ ಆಂದೋಲನವು ಭಗ್ನಗೊಂಡಿತ್ತು. ತಿಲಕ್ ಅವರು ಅದನ್ನು ಕಂಡುಹಿಡಿದಿದ್ದಾರೆ ಎಂದು ಹೇಳುವ ಮೂಲಕ ಸ್ಮಾರಕಕ್ಕೆ ಲಿಂಕ್ ಮಾಡುವುದು ಇತಿಹಾಸವನ್ನು ತಿರುಚುವ ಮತ್ತೊಂದು ಪ್ರಯತ್ನವಾಗಿದೆ” ಎಂದು ಇತಿಹಾಸಗಾರ ಸಾವಂತ್ ಹೇಳಿದ್ದಾರೆ.

“ಶಿವಾಜಿ ಮಹಾರಾಜರ ಸಮಾಧಿಯನ್ನು ಮೊದಲು ಕಂಡುಹಿಡಿದದ್ದು ಜ್ಯೋತಿರಾವ್ ಫುಲೆ ಎಂಬುದು ಸತ್ಯ. ಈ ಐತಿಹಾಸಿಕ ಸತ್ಯವನ್ನು ಈ ಜಗತ್ತಿನ ಯಾವ ವ್ಯಕ್ತಿಯೂ ಬದಲಾಯಿಸಲು ಸಾಧ್ಯವಿಲ್ಲ. ಶಿವಜಯಂತಿ ಆಚರಣೆಯನ್ನು ಪ್ರಾರಂಭಿಸಲು ಸಹ ಫುಲೆ ಕಾರಣರಾಗಿದ್ದರು” ಎಂದು ರಾಜ್ಯದ ಪ್ರಮುಖ ಒಬಿಸಿ ನಾಯಕರಲ್ಲಿ ಒಬ್ಬರಾದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ರಾಜ್ಯ ಕ್ಯಾಬಿನೆಟ್ ಸಚಿವ ಚಗ್ಗನ್ ಭುಜಬಲ್ ಹೇಳಿದ್ದಾರೆ.

ವಿಡಿಯೊ ನೋಡಿ: ಒಕ್ಕೂಟ ವ್ಯವಸ್ಥೆ ಮಣ್ಣು ಮುಕ್ಕಿದೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ಮೀನಾಕ್ಷಿ ಬಾಳಿ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...