Homeಕರ್ನಾಟಕಹರ್ಯಾಣದ ಜನತೆ ಬದಲಾವಣೆ ಬಯಸಿದ್ದಾರೆ: ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ

ಹರ್ಯಾಣದ ಜನತೆ ಬದಲಾವಣೆ ಬಯಸಿದ್ದಾರೆ: ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ

- Advertisement -
- Advertisement -

ಹರ್ಯಾಣ ವಿಧಾನಸಭೆ ಚುನಾವಣೆ ಸಾಕಷ್ಟು ಕುತೂಹಲ ಕೆರಳಿಸಿತ್ತು. ಆ ಎಲ್ಲ ಕುತೂಹಲಕ್ಕೆ ಫಲಿತಾಂಶ ಉತ್ತರದಾಯಿಯಾಗಿದೆ. ಹರ್ಯಾಣದಲ್ಲಿ ಗೆಲ್ಲುವ ಹಮ್ಮಿನಲ್ಲಿದ್ದ ಬಿಜೆಪಿ ಮಕಾಡೆ ಮಲಗಿದೆ. ಇತ್ತ ಕಾಂಗ್ರೆಸ್‌, ಜೆಜೆಪಿ ಪಕ್ಷಗಳಿಗೂ ಬಹುಮತ ಸಿಕ್ಕಿಲ್ಲ. ಒಟ್ಟು ೯೦ ವಿಧಾನಸಭಾ ಸ್ಥಾನ ಹೊಂದಿರುವ ಹರ್ಯಾಣದಲ್ಲಿ ಮತದಾರರು ಯಾರಿಗೂ ಸ್ಪಷ್ಟ ಬಹುಮತ ನೀಡಿಲ್ಲ. ಯಾವುದೇ ಪಕ್ಷ ಅಧಿಕಾರಕ್ಕೆ ಬರಲು ೪೬ ಸ್ಥಾನಗಳು ಬೇಕು.

ಕಾಂಗ್ರೆಸ್‌ ೩೦ ಸ್ಥಾನ, ಬಿಜೆಪಿ ೪೦ ಸ್ಥಾನ, ಜೆಜೆಪಿ ೧೦, ಇತರರು ೧೦ ಸ್ಥಾನ ಗೆದ್ದಿದ್ದಾರೆ. ಹರ್ಯಾಣ ಫಲಿತಾಂಶವನ್ನು ಮಾಜಿ ಸಿಎಂ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ. ’ ಹರಿಯಾಣದ ಜನ ಬದಲಾವಣೆ ಬಯಸಿದ್ದಾರೆ ಎಂಬುದು ಚುನಾವಣಾ ಫಲಿತಾಂಶದಿಂದ ಸ್ಪಷ್ಟವಾಗಿದೆ. ಹರಿಯಾಣದಲ್ಲಿ ಯಾವೊಂದು ಪಕ್ಷವೂ ಸ್ಪಷ್ಟ ಬಹುಮತ ಗಳಿಸದ ಕಾರಣ ಕಾಂಗ್ರೆಸ್ ಪಕ್ಷವು ಇತರ ಪಕ್ಷಗಳೊಂದಿಗೆ ಸೇರಿ ಸರ್ಕಾರ ರಚಿಸುವ ಸಾಧ್ಯತೆಗಳು ಹೆಚ್ಚಿದೆ’ ಎಂದು ಫೇಸ್‌ಬುಕ್‌ನಲ್ಲಿ ವಿಷಯ ಹಂಚಿಕೊಂಡಿದ್ದಾರೆ.

ಎರಡೂ ರಾಜ್ಯಗಳಲ್ಲಿ ಅಧಿಕಾರದಲ್ಲಿದ್ದ ಮುಖ್ಯಮಂತ್ರಿಗಳಾಗಲಿ, ಪ್ರಧಾನಿ ನರೇಂದ್ರ ಮೋದಿಯವರಾಗಲಿ ತಮ್ಮ ಸರ್ಕಾರಗಳ ಸಾಧನೆ ಬಗ್ಗೆ ಮಾತಾಡಲೇ ಇಲ್ಲ. ಭಾವನಾತ್ಮಕ ವಿಚಾರಗಳಾದ ಕಾಶ್ಮೀರ ವಿವಾದ ಮತ್ತು ಪಾಕಿಸ್ತಾನವನ್ನೇ ಮುಂದಿಟ್ಟುಕೊಂಡು ಚುನಾವಣೆ ಎದುರಿಸಿದರೂ ಸಹ ಜನ ಅವರನ್ನು ತಿರಸ್ಕರಿಸಿದ್ದಾರೆ. ಹರಿಯಾಣ ಮತ್ತು ಮಹಾರಾಷ್ಟ್ರಗಳೆರಡೂ ರಾಜ್ಯಗಳಲ್ಲಿ ಚುನಾವಣಾ ಪೂರ್ವದಲ್ಲಿ ನಡೆದ ಪಕ್ಷಾಂತರ, ಸಂಘಟನೆಯಲ್ಲಿನ ಲೋಪಗಳು ಮತ್ತು ಸಂಪನ್ಮೂಲದ ಕೊರತೆಯಿಂದಾಗಿ ಕಾಂಗ್ರೆಸ್‌ಗೆ ಕೊಂಚ ಹಿನ್ನಡೆಯಾಯಿತು. ಇಲ್ಲದೆ ಇದ್ದಿದ್ದರೆ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆಯುವ ಎಲ್ಲ ಅವಕಾಶಗಳು ಇತ್ತು. ಕಳೆದ ಬಾರಿಯ ಚುನಾವಣಾ ಫಲಿತಾಂಶಕ್ಕೆ ಹೋಲಿಕೆ ಮಾಡಿದರೆ ಬಿಜೆಪಿ ಎರಡೂ ರಾಜ್ಯಗಳಲ್ಲಿ ಹಿನ್ನಡೆ ಅನುಭವಿಸಿದೆ, ಮಹಾರಾಷ್ಟ್ರದಲ್ಲಿ 120 ಸ್ಥಾನದಿಂದ ನೂರರ ಆಸುಪಾಸಿಗೆ ಬಂದಿದೆ. ಹರ್ಯಾಣದಲ್ಲಿ 47 ರಿಂದ 41ಕ್ಕೆ ಇಳಿದಿದೆ. ಬಿಜೆಪಿ ಭಾರೀ ಬಹುಮತ ಗಳಿಸಲಿದೆ ಎಂದು ಹೇಳುತ್ತಿದ್ದ ಸಮೀಕ್ಷೆಗಳೆಲ್ಲ ಹುಸಿಯಾಗಿವೆ.

ಎರಡು ರಾಜ್ಯಗಳ ಚುನಾವಣಾ ಫಲಿತಾಂಶ ನರೇಂದ್ರ ಮೋದಿಯವರ ಕುಸಿಯುತ್ತಿರುವ ಜನಪ್ರಿಯತೆಯ ದಿಕ್ಸೂಚಿ.‌ ಎರಡೂ ಕಡೆ ಮೋದಿ-ಶಾ ಜೋಡಿ ಹಲವಾರು ರ್‍ಯಾಲಿಗಳನ್ನು ಮಾಡಿದ ಹೊರತಾಗಿಯೂ ಬಿಜೆಪಿ ಸ್ಪಷ್ಟ ಬಹುಮತ ಗಳಿಸಲು ವಿಫಲವಾಗಿರುವುದು ಅವರ ಕ್ಷೀಣಿಸುತ್ತಿರುವ ಜನಪ್ರಿಯತೆಗೆ ಸಾಕ್ಷಿ. ಹರಿಯಾಣದಲ್ಲಿ ಐದು ತಿಂಗಳ ಹಿಂದೆ‌ ನಡೆದಿದ್ದ ಲೋಕಸಭಾ ಚುನಾವಣೆಯಲ್ಲಿ 10ಕ್ಕೆ 10 ಕ್ಷೇತ್ರಗಳನ್ನು ಬಿಜೆಪಿ ಗೆದ್ದಿತ್ತು, ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆಯಲು ವಿಫಲವಾಗಿದೆ.‌ ಇದು ಮೋದಿಯವರ ಜನಪ್ರಿಯತೆ ಕುಸಿದಿರುವುದಕ್ಕೆ ಇನ್ನೊಂದು ಸಾಕ್ಷಿ. ನಾನು ಪ್ರಚಾರಕ್ಕೆ ಹೋಗಿದ್ದ ಮಹಾರಾಷ್ಟ್ರದ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದಿದೆ, ಕೇರಳದ ಮಂಜೇಶ್ವರದಲ್ಲಿ ಮುಸ್ಲಿಂ ಲೀಗ್ ಗೆದ್ದಿರುವುದು ಸಂತಸ ಉಂಟು ಮಾಡಿದೆ.

ಈ ಬಾರಿಯ ಚುನಾವಣೆಯಲ್ಲಿ ಪಕ್ಷಾಂತರಿಗಳನ್ನು ಜನ ತಿರಸ್ಕರಿಸಿದ್ದಾರೆ, ಗುಜರಾತ್ ಉಪಚುನಾವಣೆಯಲ್ಲಿ ಸಹ ಪಕ್ಷಾಂತರಿಗಳು ಸೋತಿದ್ದಾರೆ. ಕರ್ನಾಟಕದಲ್ಲಿ ಕೂಡಾ ಹದಿನೈದು ಸ್ಥಾನಗಳ ಪೈಕಿ ಬಹುಪಾಲು ಸ್ಥಾನಗಳು ಕಾಂಗ್ರೆಸ್ ಪಾಲಾಗಿ, ಯಡಿಯೂರಪ್ಪನವರು ರಾಜೀನಾಮೆ ನೀಡುವ ಪರಿಸ್ಥಿತಿ ನಿರ್ಮಾಣವಾಗಲಿದೆ. ಇವಿಎಂ ಅನ್ನು ದುರ್ಬಳಕೆ ಮಾಡಿಕೊಳ್ಳಲು ಅವಕಾಶವಿದೆ ಎಂದು ಇಂದು ಪತ್ರಿಕೆಯೊಂದು ವರದಿ ಮಾಡಿದೆ. ಇಷ್ಟಾದರೂ ಬಿಜೆಪಿಯವರಿಗೆ ಚುನಾವಣೆಯಲ್ಲಿ ಇವಿಎಂ ಬಳಕೆ ನಿಲ್ಲಿಸಿ ಮತ ಚೀಟಿ ಪದ್ದತಿಯನ್ನು ಜಾರಿಗೆ ತರಲು ಮನಸಿಲ್ಲ. ಬಿಜೆಪಿಯವರಿಗೆ ಏಕೆ ಇವಿಎಂ ಮೇಲೆ ಅತಿಯಾದ ವ್ಯಾಮೋಹವೋ ಅರ್ಥವಾಗುತ್ತಿಲ್ಲ. ಎಂದು ಪ್ರಶ್ನಿಸಿದ್ದಾರೆ.

ಒಟ್ಟಿನಲ್ಲಿ ಹರ್ಯಾಣದ ಜನತೆ ಬಿಜೆಪಿಗೆ ತಕ್ಕ ಪಾಠ ಕಲಿಸಿದ್ದಾರೆ. ಅಭಿವೃದ್ಧಿ, ಆರ್ಥಿಕ ಕುಸಿತ, ನಿರುದ್ಯೋಗದಿಂದ ಜನತೆ ಕಂಗೆಟ್ಟು ಹೋಗಿದ್ದಾರೆ. ಇನ್ನು ರಾಜ್ಯದಲ್ಲಿ ಬಿಜೆಪಿ ಹಿನ್ನಡೆ ಅನುಭವಿಸಿದ್ದರ ನೈತಿಕ ಹೊಣೆ ಹೊತ್ತು ಬಿಜೆಪಿ ರಾಜ್ಯಾಧ್ಯಕ್ಷ ಸುಭಾಷ್‌ ಬರಾಲಾ, ಈಗಾಗಲೇ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಚುನಾವಣೆ ಫಲಿತಾಂಶ ಪ್ರಕಟವಾದ ಮರುಕ್ಷಣವೇ ಬಿಜೆಪಿಯ ಒಂದು ವಿಕೆಟ್‌ ಪತನವಾಗಿದೆ. ಹರ್ಯಾಣದಲ್ಲಿ ಬಿಜೆಪಿ ಆಡಳಿತದಲ್ಲಿದ್ದರೂ ಸಹ ಗೆಲ್ಲಲು ಸಾಧ್ಯವಾಗಿಲ್ಲ. ಸ್ವತಃ ಸುಭಾಷ್‌ ಬರಾಲಾ ಸ್ಪರ್ಧಿಸಿದ್ದ ತೋಹಾನಾ ಕ್ಷೇತ್ರದಲ್ಲಿ ಸೋಲುಂಡಿದ್ದಾರೆ. ಈಗ ಹರ್ಯಾಣದಲ್ಲಿ ಯಾವ ಪಕ್ಷ ಸರ್ಕಾರ ರಚನೆ ಮಾಡುತ್ತದೆ ಎಂಬುದು ಕುತೂಹಲ ಮೂಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...

ತಮಿಳುನಾಡು| ಮರ್ಯಾದೆಗೇಡು ಹತ್ಯೆ ಶಂಕೆ; 25 ವರ್ಷದ ದಲಿತ ಯುವಕನ ಭೀಕರ ಕೊಲೆ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಮರ್ಯಾದೆಗೇಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಆಗಸ್ಟ್ 16 ರಂದು ರಾತ್ರಿ ಚೆಂಗಲ್ಪಟ್ಟುವಿನ ಕೇಳಂಬಾಕ್ಕಂ ನಿವಾಸಿ ಪ್ರವೀಣ್ ಅವರ ಮೇಲೆ ದಾಳಿಕೋರರಾದ...

44 ಲಕ್ಷ ಮತದಾರರಿಗೆ ನೋಟಿಸ್: BLA ಗಳಿಗೆ ಪಟ್ಟಿ ನೀಡಿ, ಪಾರದರ್ಶಕತೆ ಕಾಯ್ದುಕೊಳ್ಳಲು ‘ಜಾಗೃತ ಕರ್ನಾಟಕ’ ಒತ್ತಾಯ

ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಪ್ರಕಟಗೊಳ್ಳುತ್ತಿರುವ ಕರಡು ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಬೇಕು ಹಾಗೂ ನೋಟಿಸ್ ಪ್ರಕ್ರಿಯೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಆಗ್ರಹಿಸಿ ‘ಜಾಗೃತ...

ಕೇರಳ ಬಿಜೆಪಿಗೆ ಹಿರಿಯ ನಟ ಎಸ್. ದೇವನ್ ಗುಡ್‌ಬೈ: ‘ದಳಪತಿ’ ವಿಜಯ್ ಟಿವಿಕೆ ಪಕ್ಷ ಸೇರಲು ಒಲವು!

ಮಲಯಾಳಂ ನಟ ಹಾಗೂ ರಾಜಕಾರಣಿ ಎಸ್. ದೇವನ್ ಅವರು ತಮಿಳುನಾಡಿನ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷವನ್ನು ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕೇರಳ...

ಮತ್ತೆ ಜೈಲಿನಿಂದ ಹೊರಬಂದ ಅತ್ಯಾಚಾರಿ ರಾಮ್ ರಹೀಮ್! 6 ವರ್ಷದಲ್ಲಿ 17ನೇ ಬಾರಿ ಪೆರೋಲ್

ನವದೆಹಲಿ/ರೋಹ್ಟಕ್: ಇಬ್ಬರು ಮಹಿಳಾ ಶಿಷ್ಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಹರಿಯಾಣ ಸರ್ಕಾರ ಪುನಃ...

ಎಸ್‌ಐಆರ್‌ ಕರಡು ತಿರಸ್ಕರಿಸಿದ ನಾಗರಿಕ ಸಂಘಟನೆಗಳು; ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ

ಆಗಸ್ಟ್ 24 ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಮತದಾರರ ಎಸ್‌ಐಆರ್‌ ಕರಡು ಪಟ್ಟಿಯನ್ನು ಕರ್ನಾಟಕದ ನಾಗರಿಕ ಸಂಘಟನೆಗಳು ತಿರಸ್ಕರಿಸಿದ್ದು, ಲಕ್ಷಾಂತರ ಮತದಾರರಿಗೆ ನೋಟಿಸ್‌ ಕೊಡಲು ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ...

‘ಕೇಂದ್ರ ಸರ್ಕಾರ ಜಾತಿ ಗಣತಿಗೆ ರೂಪಿಸಿರುವ ಪ್ರಶ್ನಾವಳಿ ವಿಧಾನ ದಾರಿತಪ್ಪಿಸುವಂತಿವೆ’: ಹೊಸ ಪ್ರಶ್ನಾವಳಿ ರಚಿಸಲು ಪ್ರಧಾನಿ ಮೋದಿಗೆ ಖರ್ಗೆ-ರಾಹುಲ್ ಪತ್ರ

ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ದತ್ತಾಂಶ ಸಂಗ್ರಹಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ರೂಪಿಸಿರುವ ಪ್ರಶ್ನಾವಳಿಯ ವಿಧಾನವು ಅತ್ಯಂತ ದಾರಿತಪ್ಪಿಸುವಂತಿದೆ ಎಂದು ಗಂಭೀರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕ...

ಪತ್ರಕರ್ತ ಅಭಿಷೇಕ್ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಸುಪ್ರೀಂ ಕೋರ್ಟ್ ಆದೇಶ

ರಾಮ ಮಂದಿರ ದೇಣಿಗೆ ಅಕ್ರಮದ ಕುರಿತು ವರದಿ ಮಾಡಿದ್ದ ಪತ್ರಕರ್ತ ಅಭಿಷೇಕ್ ಉಪಾಧ್ಯಾಯ ಅವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿದ್ದು,...

2027ರ ಜನಗಣತಿಯಲ್ಲಿ ಪೋಷಕರ ಧರ್ಮ, ಜನ್ಮಸ್ಥಳದ ವಿವರ ಏಕೆ? ಕೇಂದ್ರದ ವಿರುದ್ಧ ಸಿಪಿಐ(ಎಂ) ಆಕ್ರೋಶ

2027ರ ಜನಗಣತಿ ಪ್ರಶ್ನಾವಳಿಯಲ್ಲಿ ಪೋಷಕರ ಧರ್ಮ ಹಾಗೂ ಜನ್ಮಸ್ಥಳದ ಕುರಿತಾದ ವಿವರಗಳನ್ನು ಸಂಗ್ರಹಿಸಲು ಉದ್ದೇಶಿಸಿರುವುದರ ವಿರುದ್ಧ ಸಿಪಿಐ(ಎಂ) ತೀವ್ರ ಆತಂಕ ವ್ಯಕ್ತಪಡಿಸಿದ್ದು, ಈ ಕ್ರಮವು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿಗೆ ತರುವ...

ಟಿಎಂಸಿ ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಶಾಕ್: 20 ಎಂಪಿಗಳಿಗೆ ನೋಟಿಸ್ ಜಾರಿ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು, ಎನ್‌ಸಿಪಿಐ (NCPI) ಎಂಬ ಅಷ್ಟಾಗಿ ಜನಪ್ರಿಯವಲ್ಲದ ಪಕ್ಷದೊಂದಿಗೆ ವಿಲೀನಗೊಂಡು ಎನ್‌ಡಿಎ ಒಕ್ಕೂಟವನ್ನು ಸೇರಿಕೊಂಡಿರುವ 20 ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ. ಟಿಎಂಸಿ ಪ್ರಧಾನ...