Homeಕರ್ನಾಟಕಹರ್ಯಾಣದ ಜನತೆ ಬದಲಾವಣೆ ಬಯಸಿದ್ದಾರೆ: ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ

ಹರ್ಯಾಣದ ಜನತೆ ಬದಲಾವಣೆ ಬಯಸಿದ್ದಾರೆ: ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ

- Advertisement -
- Advertisement -

ಹರ್ಯಾಣ ವಿಧಾನಸಭೆ ಚುನಾವಣೆ ಸಾಕಷ್ಟು ಕುತೂಹಲ ಕೆರಳಿಸಿತ್ತು. ಆ ಎಲ್ಲ ಕುತೂಹಲಕ್ಕೆ ಫಲಿತಾಂಶ ಉತ್ತರದಾಯಿಯಾಗಿದೆ. ಹರ್ಯಾಣದಲ್ಲಿ ಗೆಲ್ಲುವ ಹಮ್ಮಿನಲ್ಲಿದ್ದ ಬಿಜೆಪಿ ಮಕಾಡೆ ಮಲಗಿದೆ. ಇತ್ತ ಕಾಂಗ್ರೆಸ್‌, ಜೆಜೆಪಿ ಪಕ್ಷಗಳಿಗೂ ಬಹುಮತ ಸಿಕ್ಕಿಲ್ಲ. ಒಟ್ಟು ೯೦ ವಿಧಾನಸಭಾ ಸ್ಥಾನ ಹೊಂದಿರುವ ಹರ್ಯಾಣದಲ್ಲಿ ಮತದಾರರು ಯಾರಿಗೂ ಸ್ಪಷ್ಟ ಬಹುಮತ ನೀಡಿಲ್ಲ. ಯಾವುದೇ ಪಕ್ಷ ಅಧಿಕಾರಕ್ಕೆ ಬರಲು ೪೬ ಸ್ಥಾನಗಳು ಬೇಕು.

ಕಾಂಗ್ರೆಸ್‌ ೩೦ ಸ್ಥಾನ, ಬಿಜೆಪಿ ೪೦ ಸ್ಥಾನ, ಜೆಜೆಪಿ ೧೦, ಇತರರು ೧೦ ಸ್ಥಾನ ಗೆದ್ದಿದ್ದಾರೆ. ಹರ್ಯಾಣ ಫಲಿತಾಂಶವನ್ನು ಮಾಜಿ ಸಿಎಂ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ. ’ ಹರಿಯಾಣದ ಜನ ಬದಲಾವಣೆ ಬಯಸಿದ್ದಾರೆ ಎಂಬುದು ಚುನಾವಣಾ ಫಲಿತಾಂಶದಿಂದ ಸ್ಪಷ್ಟವಾಗಿದೆ. ಹರಿಯಾಣದಲ್ಲಿ ಯಾವೊಂದು ಪಕ್ಷವೂ ಸ್ಪಷ್ಟ ಬಹುಮತ ಗಳಿಸದ ಕಾರಣ ಕಾಂಗ್ರೆಸ್ ಪಕ್ಷವು ಇತರ ಪಕ್ಷಗಳೊಂದಿಗೆ ಸೇರಿ ಸರ್ಕಾರ ರಚಿಸುವ ಸಾಧ್ಯತೆಗಳು ಹೆಚ್ಚಿದೆ’ ಎಂದು ಫೇಸ್‌ಬುಕ್‌ನಲ್ಲಿ ವಿಷಯ ಹಂಚಿಕೊಂಡಿದ್ದಾರೆ.

ಎರಡೂ ರಾಜ್ಯಗಳಲ್ಲಿ ಅಧಿಕಾರದಲ್ಲಿದ್ದ ಮುಖ್ಯಮಂತ್ರಿಗಳಾಗಲಿ, ಪ್ರಧಾನಿ ನರೇಂದ್ರ ಮೋದಿಯವರಾಗಲಿ ತಮ್ಮ ಸರ್ಕಾರಗಳ ಸಾಧನೆ ಬಗ್ಗೆ ಮಾತಾಡಲೇ ಇಲ್ಲ. ಭಾವನಾತ್ಮಕ ವಿಚಾರಗಳಾದ ಕಾಶ್ಮೀರ ವಿವಾದ ಮತ್ತು ಪಾಕಿಸ್ತಾನವನ್ನೇ ಮುಂದಿಟ್ಟುಕೊಂಡು ಚುನಾವಣೆ ಎದುರಿಸಿದರೂ ಸಹ ಜನ ಅವರನ್ನು ತಿರಸ್ಕರಿಸಿದ್ದಾರೆ. ಹರಿಯಾಣ ಮತ್ತು ಮಹಾರಾಷ್ಟ್ರಗಳೆರಡೂ ರಾಜ್ಯಗಳಲ್ಲಿ ಚುನಾವಣಾ ಪೂರ್ವದಲ್ಲಿ ನಡೆದ ಪಕ್ಷಾಂತರ, ಸಂಘಟನೆಯಲ್ಲಿನ ಲೋಪಗಳು ಮತ್ತು ಸಂಪನ್ಮೂಲದ ಕೊರತೆಯಿಂದಾಗಿ ಕಾಂಗ್ರೆಸ್‌ಗೆ ಕೊಂಚ ಹಿನ್ನಡೆಯಾಯಿತು. ಇಲ್ಲದೆ ಇದ್ದಿದ್ದರೆ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆಯುವ ಎಲ್ಲ ಅವಕಾಶಗಳು ಇತ್ತು. ಕಳೆದ ಬಾರಿಯ ಚುನಾವಣಾ ಫಲಿತಾಂಶಕ್ಕೆ ಹೋಲಿಕೆ ಮಾಡಿದರೆ ಬಿಜೆಪಿ ಎರಡೂ ರಾಜ್ಯಗಳಲ್ಲಿ ಹಿನ್ನಡೆ ಅನುಭವಿಸಿದೆ, ಮಹಾರಾಷ್ಟ್ರದಲ್ಲಿ 120 ಸ್ಥಾನದಿಂದ ನೂರರ ಆಸುಪಾಸಿಗೆ ಬಂದಿದೆ. ಹರ್ಯಾಣದಲ್ಲಿ 47 ರಿಂದ 41ಕ್ಕೆ ಇಳಿದಿದೆ. ಬಿಜೆಪಿ ಭಾರೀ ಬಹುಮತ ಗಳಿಸಲಿದೆ ಎಂದು ಹೇಳುತ್ತಿದ್ದ ಸಮೀಕ್ಷೆಗಳೆಲ್ಲ ಹುಸಿಯಾಗಿವೆ.

ಎರಡು ರಾಜ್ಯಗಳ ಚುನಾವಣಾ ಫಲಿತಾಂಶ ನರೇಂದ್ರ ಮೋದಿಯವರ ಕುಸಿಯುತ್ತಿರುವ ಜನಪ್ರಿಯತೆಯ ದಿಕ್ಸೂಚಿ.‌ ಎರಡೂ ಕಡೆ ಮೋದಿ-ಶಾ ಜೋಡಿ ಹಲವಾರು ರ್‍ಯಾಲಿಗಳನ್ನು ಮಾಡಿದ ಹೊರತಾಗಿಯೂ ಬಿಜೆಪಿ ಸ್ಪಷ್ಟ ಬಹುಮತ ಗಳಿಸಲು ವಿಫಲವಾಗಿರುವುದು ಅವರ ಕ್ಷೀಣಿಸುತ್ತಿರುವ ಜನಪ್ರಿಯತೆಗೆ ಸಾಕ್ಷಿ. ಹರಿಯಾಣದಲ್ಲಿ ಐದು ತಿಂಗಳ ಹಿಂದೆ‌ ನಡೆದಿದ್ದ ಲೋಕಸಭಾ ಚುನಾವಣೆಯಲ್ಲಿ 10ಕ್ಕೆ 10 ಕ್ಷೇತ್ರಗಳನ್ನು ಬಿಜೆಪಿ ಗೆದ್ದಿತ್ತು, ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆಯಲು ವಿಫಲವಾಗಿದೆ.‌ ಇದು ಮೋದಿಯವರ ಜನಪ್ರಿಯತೆ ಕುಸಿದಿರುವುದಕ್ಕೆ ಇನ್ನೊಂದು ಸಾಕ್ಷಿ. ನಾನು ಪ್ರಚಾರಕ್ಕೆ ಹೋಗಿದ್ದ ಮಹಾರಾಷ್ಟ್ರದ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದಿದೆ, ಕೇರಳದ ಮಂಜೇಶ್ವರದಲ್ಲಿ ಮುಸ್ಲಿಂ ಲೀಗ್ ಗೆದ್ದಿರುವುದು ಸಂತಸ ಉಂಟು ಮಾಡಿದೆ.

ಈ ಬಾರಿಯ ಚುನಾವಣೆಯಲ್ಲಿ ಪಕ್ಷಾಂತರಿಗಳನ್ನು ಜನ ತಿರಸ್ಕರಿಸಿದ್ದಾರೆ, ಗುಜರಾತ್ ಉಪಚುನಾವಣೆಯಲ್ಲಿ ಸಹ ಪಕ್ಷಾಂತರಿಗಳು ಸೋತಿದ್ದಾರೆ. ಕರ್ನಾಟಕದಲ್ಲಿ ಕೂಡಾ ಹದಿನೈದು ಸ್ಥಾನಗಳ ಪೈಕಿ ಬಹುಪಾಲು ಸ್ಥಾನಗಳು ಕಾಂಗ್ರೆಸ್ ಪಾಲಾಗಿ, ಯಡಿಯೂರಪ್ಪನವರು ರಾಜೀನಾಮೆ ನೀಡುವ ಪರಿಸ್ಥಿತಿ ನಿರ್ಮಾಣವಾಗಲಿದೆ. ಇವಿಎಂ ಅನ್ನು ದುರ್ಬಳಕೆ ಮಾಡಿಕೊಳ್ಳಲು ಅವಕಾಶವಿದೆ ಎಂದು ಇಂದು ಪತ್ರಿಕೆಯೊಂದು ವರದಿ ಮಾಡಿದೆ. ಇಷ್ಟಾದರೂ ಬಿಜೆಪಿಯವರಿಗೆ ಚುನಾವಣೆಯಲ್ಲಿ ಇವಿಎಂ ಬಳಕೆ ನಿಲ್ಲಿಸಿ ಮತ ಚೀಟಿ ಪದ್ದತಿಯನ್ನು ಜಾರಿಗೆ ತರಲು ಮನಸಿಲ್ಲ. ಬಿಜೆಪಿಯವರಿಗೆ ಏಕೆ ಇವಿಎಂ ಮೇಲೆ ಅತಿಯಾದ ವ್ಯಾಮೋಹವೋ ಅರ್ಥವಾಗುತ್ತಿಲ್ಲ. ಎಂದು ಪ್ರಶ್ನಿಸಿದ್ದಾರೆ.

ಒಟ್ಟಿನಲ್ಲಿ ಹರ್ಯಾಣದ ಜನತೆ ಬಿಜೆಪಿಗೆ ತಕ್ಕ ಪಾಠ ಕಲಿಸಿದ್ದಾರೆ. ಅಭಿವೃದ್ಧಿ, ಆರ್ಥಿಕ ಕುಸಿತ, ನಿರುದ್ಯೋಗದಿಂದ ಜನತೆ ಕಂಗೆಟ್ಟು ಹೋಗಿದ್ದಾರೆ. ಇನ್ನು ರಾಜ್ಯದಲ್ಲಿ ಬಿಜೆಪಿ ಹಿನ್ನಡೆ ಅನುಭವಿಸಿದ್ದರ ನೈತಿಕ ಹೊಣೆ ಹೊತ್ತು ಬಿಜೆಪಿ ರಾಜ್ಯಾಧ್ಯಕ್ಷ ಸುಭಾಷ್‌ ಬರಾಲಾ, ಈಗಾಗಲೇ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಚುನಾವಣೆ ಫಲಿತಾಂಶ ಪ್ರಕಟವಾದ ಮರುಕ್ಷಣವೇ ಬಿಜೆಪಿಯ ಒಂದು ವಿಕೆಟ್‌ ಪತನವಾಗಿದೆ. ಹರ್ಯಾಣದಲ್ಲಿ ಬಿಜೆಪಿ ಆಡಳಿತದಲ್ಲಿದ್ದರೂ ಸಹ ಗೆಲ್ಲಲು ಸಾಧ್ಯವಾಗಿಲ್ಲ. ಸ್ವತಃ ಸುಭಾಷ್‌ ಬರಾಲಾ ಸ್ಪರ್ಧಿಸಿದ್ದ ತೋಹಾನಾ ಕ್ಷೇತ್ರದಲ್ಲಿ ಸೋಲುಂಡಿದ್ದಾರೆ. ಈಗ ಹರ್ಯಾಣದಲ್ಲಿ ಯಾವ ಪಕ್ಷ ಸರ್ಕಾರ ರಚನೆ ಮಾಡುತ್ತದೆ ಎಂಬುದು ಕುತೂಹಲ ಮೂಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...