Homeಕರ್ನಾಟಕಮಂಡ್ಯ ಹಿಂಸಾಚಾರ | ಪೊಲೀಸ್ ಇನ್ಸ್‌ಪೆಕ್ಟರ್ ಅಮಾನತು; ಮತ್ತೆ 3 ಮಂದಿ ಆರೋಪಿಗಳ ಬಂಧನ

ಮಂಡ್ಯ ಹಿಂಸಾಚಾರ | ಪೊಲೀಸ್ ಇನ್ಸ್‌ಪೆಕ್ಟರ್ ಅಮಾನತು; ಮತ್ತೆ 3 ಮಂದಿ ಆರೋಪಿಗಳ ಬಂಧನ

- Advertisement -
- Advertisement -

ಮಂಡ್ಯ ಜಿಲ್ಲೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇನ್ನೂ ಮೂವರನ್ನು ಬಂಧಿಸಲಾಗಿದ್ದು, ಕರ್ತವ್ಯ ಲೋಪವೆಸಗಿದ್ದಕ್ಕಾಗಿ ಪೊಲೀಸ್ ಇನ್ಸ್‌ಪೆಕ್ಟರ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ. ಬುಧವಾರ ರಾತ್ರಿ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ಹಲವಾರು ಅಂಗಡಿಗಳು ಮತ್ತು ವಾಹನಗಳನ್ನು ಸುಟ್ಟುಹಾಕಲಾಗಿದೆ. ಸಧ್ಯಕ್ಕೆ ನಗರದಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪರಿಸ್ಥಿತಿ ಶಾಂತಿಯುತವಾಗಿದ್ದರೂ, ನಗರದಲ್ಲಿ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಸೆಪ್ಟೆಂಬರ್ 14 ರವರೆಗೆ ನಾಲ್ಕಕ್ಕಿಂತ ಹೆಚ್ಚು ಜನರ ಗುಂಪನ್ನು ನಿಷೇಧಿಸುವ ನಿಷೇಧಾಜ್ಞೆಗಳನ್ನು ವಿಧಿಸಲಾಗಿದೆ. ಹೊಸಾಗಿ ಮೂವರ ಬಂಧನಗಳೊಂದಿಗೆ, ಪ್ರಕರಣದಲ್ಲಿ ಬಂಧಿತರಾಗಿರುವ ಒಟ್ಟು ಜನರ ಸಂಖ್ಯೆ ಈಗ 55ಕ್ಕೆ ಏರಿಕೆಯಾಗಿದೆ. ಆರಂಭದಲ್ಲಿ ಬಂಧಿತರಾದ 52 ಜನರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರ ತಂಡ ಗುರುವಾರ ಸ್ಥಳಕ್ಕೆ ಭೇಟಿ ನೀಡಿ ಸಾಕ್ಷ್ಯ ಸಂಗ್ರಹಿಸಿದೆ. ಅಲ್ಲದೆ, ಮೆರವಣಿಗೆ ವೇಳೆ ಉಂಟಾದ ಘರ್ಷಣೆಗೆ ಸಂಬಂಧಿಸಿದಂತೆ ಕರ್ತವ್ಯ ಲೋಪವೆಸಗಿದ ಹಿನ್ನೆಲೆಯಲ್ಲಿ ನಾಗಮಂಗಲ ಪಟ್ಟಣ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಅಶೋಕ್ ಕುಮಾರ್ ಅವರನ್ನು ಗುರುವಾರ ಸಂಜೆ ಅಮಾನತು ಮಾಡಲಾಗಿದೆ ಎಂದು ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.

ಇದನ್ನೂಓದಿ: ಮುಡಾ ಪ್ರಕರಣ| ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಅಂತ್ಯ : ಆದೇಶ ಕಾಯ್ದಿರಿಸಿದ ಹೈಕೋರ್ಟ್‌

“ಇಲ್ಲಿ ಪರಿಸ್ಥಿತಿ ಶಾಂತಿಯುತವಾಗಿದೆ ಮತ್ತು ಈಗಾಗಲೇ ಬಂಧಿಸಲಾಗಿರುವ 52 ಜನರನ್ನು ಹೊರತುಪಡಿಸಿ, ಘಟನೆಗೆ ಸಂಬಂಧಿಸಿದಂತೆ ನಾವು ಇನ್ನೂ ಮೂವರನ್ನು ಬಂಧಿಸಿದ್ದೇವೆ. ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಿದ್ದು, ಸೆಪ್ಟೆಂಬರ್ 14 ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ” ಎಂದು ಅವರು ಹೇಳಿದ್ದಾರೆ.

ಮಂಡ್ಯ ಲೋಕಸಭಾ ಸದಸ್ಯರಾಗಿರುವ ಜೆಡಿಎಸ್ ಮುಖಂಡ ಹಾಗೂ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್ ಡಿ ಕುಮಾರಸ್ವಾಮಿ ಶುಕ್ರವಾರ ಪಟ್ಟಣಕ್ಕೆ ಭೇಟಿ ನೀಡಿದ್ದಾರೆ. ಗುರುವಾರ ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಪ್ರತಿಕ್ರಿಯಿಸಿದ್ದ ಕುಮಾರಸ್ವಾಮಿ ಅವರು ಹಿಂಸಾತ್ಮಕ ಘಟನೆಗಳನ್ನು ತೀವ್ರವಾಗಿ ಖಂಡಿಸಿದ್ದಾರೆ.

ಗಣಪತಿ ದೇವರ ಮೆರವಣಿಗೆಯಲ್ಲಿ ಶಾಂತಿಯುತವಾಗಿ ಸಾಗುತ್ತಿದ್ದ ಭಕ್ತರನ್ನು ಗುರಿಯಾಗಿಸಿಕೊಂಡು ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಗಲಾಟೆ ಎಬ್ಬಿಸಿದ್ದಾರೆ. ಸಾರ್ವಜನಿಕರು ಮತ್ತು ಪೊಲೀಸರ ಮೇಲೆ ಕಲ್ಲು, ಚಪ್ಪಲಿ ಎಸೆದಿರುವುದು, ಪೆಟ್ರೋಲ್ ಬಾಂಬ್‌ಗಳನ್ನು ಸ್ಫೋಟಿಸಿ ಮತ್ತು ಕತ್ತಿಗಳನ್ನು ಝಳಪಿಸಿರುವುದು ಪಟ್ಟಣದಲ್ಲಿ ‘ಕಾನೂನು ಸುವ್ಯವಸ್ಥೆಯ ವೈಫಲ್ಯ’ಕ್ಕೆ ಸಾಕ್ಷಿಯಾಗಿದೆ ಎಂದು ಅವರು ಆರೋಪಿಸಿದ್ದರು.

ಇದನ್ನೂಓದಿ:ಫುಲೆ v/s ತಿಲಕ್ | ಶಿವಾಜಿ ಸಮಾಧಿ ಇತಿಹಾಸ ತಿರುಚಿದ ಆರೆಸ್ಸೆಸ್‌ನ ಭಾಗವತ್; ತೀವ್ರ ವಿವಾದ

ಕಾನೂನುಬಾಹಿರ ಸಭೆ, ಕೊಲೆ ಯತ್ನ, ಸಾರ್ವಜನಿಕ ಸೇವಕರಿಗೆ ಅಡ್ಡಿಪಡಿಸುವುದು, ಸಾರ್ವಜನಿಕ ಆಸ್ತಿ ನಾಶ ಮತ್ತು ಭಾರತೀಯ ನ್ಯಾಯ ಸಂಹಿತೆಯ ಇತರ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬುಧವಾರ ರಾತ್ರಿ ನಡೆದ ಕಲ್ಲು ತೂರಾಟದಲ್ಲಿ ಇಬ್ಬರು ಪೊಲೀಸರು ಸೇರಿದಂತೆ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಬುಧವಾರ ಬದರಿಕೊಪ್ಪಲು ಗ್ರಾಮದ ಗಣೇಶ ಮೂರ್ತಿ ಮೆರವಣಿಗೆ ಪೂಜಾ ಸ್ಥಳಕ್ಕೆ ತಲುಪಿದಾಗ ಎರಡು ಗುಂಪುಗಳ ನಡುವೆ ವಾಗ್ವಾದ ನಡೆದಿದ್ದು, ಕೆಲ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, ಪರಿಸ್ಥಿತಿ ವಿಕೋಪಕ್ಕೆ ಕಾರಣವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಎರಡು ಗುಂಪುಗಳ ನಡುವಿನ ಘರ್ಷಣೆಯ ನಂತರ, ಬುಧವಾರ ರಾತ್ರಿ ಕೆಲವು ಅಂಗಡಿಗಳನ್ನು ಧ್ವಂಸಗೊಳಿಸಲಾಗಿದ್ದು, ಸರಕುಗಳನ್ನು ಸುಟ್ಟುಹಾಕಲಾಯಿತು ಮತ್ತು ವಾಹನಗಳಿಗೆ ಬೆಂಕಿ ಹಚ್ಚಲಾಯಿತು ಎಂದು ಅವರು ಹೇಳಿದ್ದಾರೆ.

ವಿಡಿಯೊ ನೋಡಿ: ಒಕ್ಕೂಟ ವ್ಯವಸ್ಥೆ ಮಣ್ಣು ಮುಕ್ಕಿದೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ಮೀನಾಕ್ಷಿ ಬಾಳಿ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...