Homeಮುಖಪುಟಬಾಲಕಿಗೆ ಲೈಂಗಿಕ ಕಿರುಕುಳ ಆರೋಪ; ರೈಲ್ವೇ ನೌಕರನನ್ನು ಹೊಡೆದು ಕೊಂದ ಪ್ರಯಾಣಿಕರು

ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ; ರೈಲ್ವೇ ನೌಕರನನ್ನು ಹೊಡೆದು ಕೊಂದ ಪ್ರಯಾಣಿಕರು

- Advertisement -
- Advertisement -

11 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ನಂತರ ರೈಲ್ವೇ ಉದ್ಯೋಗಿಯನ್ನು ಗುರುವಾರ ಮುಂಜಾನೆ ರೈಲಿನಲ್ಲಿದ್ದ ಬಾಲಕಿಯ ಕುಟುಂಬ ಸದಸ್ಯರು ಮತ್ತು ಇತರ ಪ್ರಯಾಣಿಕರು ನವದೆಹಲಿಯಲ್ಲಿ ಹೊಡೆದು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಧಿಕಾರಿಗಳ ಪ್ರಕಾರ, ಸಿವಾನ್‌ನ ಕುಟುಂಬವೊಂದು ಬುಧವಾರ ಬಿಹಾರದ ಬರೌನಿನಿಂದ ನವದೆಹಲಿಗೆ ಹಮ್‌ಸಫರ್ ಎಕ್ಸ್‌ಪ್ರೆಸ್ ಹತ್ತಿದೆ. ರಾತ್ರಿ 11.30 ರ ಸುಮಾರಿಗೆ, ಗ್ರೂಪ್ ಡಿ ರೈಲ್ವೆ ಉದ್ಯೋಗಿ ಪ್ರಶಾಂತ್ ಕುಮಾರ್ ಕುಟುಂಬದ 11 ವರ್ಷದ ಬಾಲಕಿಯನ್ನು ತನ್ನ ಸೀಟಿನಲ್ಲಿ ಕೂರಿಸಿಕೊಂಡರು. ಬಳಿಕ, ಬಾಲಕಿಯ ತಾಯಿ ವಾಶ್ ರೂಂಗೆ ಹೋದಾಗ ಕುಮಾರ್ ಬಾಲಕಿಗೆ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ.

ಮಹಿಳೆ ವಾಶ್ ರೂಂನಿಂದ ಹೊರಬಂದ ತಕ್ಷಣ, ಹುಡುಗಿ ತಾಯಿಯ ಬಳಿಗೆ ಓಡಿ, ಆಕೆಯನ್ನು ತಬ್ಬಿಕೊಂಡು ಅಳಲು ಪ್ರಾರಂಭಿಸಿದಳು. ಅವಳು ತನ್ನ ತಾಯಿಯನ್ನು ವಾಶ್‌ರೂಮ್‌ಗೆ ಕರೆದೊಯ್ದು ನಡೆದದ್ದನ್ನು ಹೇಳಿದಳು. ನಂತರ ತಾಯಿ ರೈಲಿನಲ್ಲಿ ಎಂ1ಕೋಚ್‌ನಲ್ಲಿದ್ದ ತನ್ನ ಪತಿ, ಮಾವ ಮತ್ತು ಇತರ ಪ್ರಯಾಣಿಕರಿಗೆ ಮಾಹಿತಿ ನೀಡಿದರು.

ರೈಲು ಲಕ್ನೋದ ಐಶ್‌ಬಾಗ್ ಜಂಕ್ಷನ್‌ಗೆ ತಲುಪಿದಾಗ ಕೋಪಗೊಂಡ ಪ್ರಯಾಣಿಕರು ಮತ್ತು ಕುಟುಂಬ ಸದಸ್ಯರು ಕುಮಾರ್‌ನನ್ನು ಹಿಡಿದು ಕೋಚ್‌ನ ಬಾಗಿಲಿನ ಸಮೀಪವಿರುವ ಪ್ರದೇಶಕ್ಕೆ ಕರೆದೊಯ್ದು ರೈಲು ಕಾನ್ಪುರ ಸೆಂಟ್ರಲ್ ತಲುಪುವವರೆಗೆ, ಸುಮಾರು ಒಂದೂವರೆ ಗಂಟೆ ಥಳಿಸಿದ್ದಾರೆ ಎನ್ನಲಾಗಿದೆ. ಗುರುವಾರ ಮುಂಜಾನೆ 4.35 ಕ್ಕೆ ರೈಲು ಕಾನ್ಪುರ ಸೆಂಟ್ರಲ್‌ಗೆ ತಲುಪಿದಾಗ, ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ಅಧಿಕಾರಿಗಳು ಕುಮಾರ್ ಅವರನ್ನು ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ಆತ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಾಲಕಿಯ ಕುಟುಂಬದವರು ಲೈಂಗಿಕ ದೌರ್ಜನ್ಯದ ದೂರು ದಾಖಲಿಸಿದರೆ, ಕುಮಾರ್ ಕುಟುಂಬವು ಕೊಲೆ ಎಂದು ದೂರು ದಾಖಲಿಸಿದೆ.

ಬಿಹಾರದ ಮುಜಾಫರ್‌ಪುರ ಜಿಲ್ಲೆಯ ಸಮಸ್ತ್‌ಪುರ ಗ್ರಾಮದಲ್ಲಿ ವಾಸಿಸುವ ಕುಟುಂಬಕ್ಕೆ ಸ್ಥಳೀಯ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ ನಂತರ ಅವರನ್ನು ಹೊಡೆದು ಸಾಯಿಸಲಾಗಿದೆ ಎಂದು ಕುಮಾರ್ ಅವರ ಚಿಕ್ಕಪ್ಪ ಪವನ್ ಹೇಳಿದ್ದಾರೆ.

“ಪ್ರಶಾಂತ್ ಅಂತಹ ವ್ಯಕ್ತಿಯಲ್ಲ, ಪಿತೂರಿಯ ಭಾಗವಾಗಿ ಅವನನ್ನು ಕೊಲ್ಲಲಾಗಿದೆ ಎಂದು ತೋರುತ್ತದೆ. ಅವನನ್ನು ಇಷ್ಟು ಜನ ಥಳಿಸಿದ್ದಾರೆ, ಸುತ್ತಲೂ ರೈಲ್ವೆ ಪೊಲೀಸ್ ಪಡೆಯ ಸಿಬ್ಬಂದಿ ಇರಲಿಲ್ಲವೇ” ಎಂದು ಅವರು ಪ್ರಶ್ನಿಸಿದ್ದಾರೆ.

ಪೊಲೀಸ್ ಅಧೀಕ್ಷಕ, ಜಿಆರ್‌ಪಿ (ಪ್ರಯಾಗ್‌ರಾಜ್) ಅಭಿಷೇಕ್ ಯಾದವ್ ಪ್ರತಿಕ್ರಿಯಿಸಿ, “ರೈಲು ಐಶ್‌ಬಾಗ್ ದಾಟಿದಾಗ, ಬಾಲಕಿ ತನಗೆ ಕಿರುಕುಳ ನೀಡಲಾಯಿತು ಎಂದು ಹೇಳಿದರು. ಆಕೆಯ ಕುಟುಂಬ ಸದಸ್ಯರು ಮತ್ತು ಇತರ ಪ್ರಯಾಣಿಕರು ಆರೋಪಿಯನ್ನು ಥಳಿಸಿದ್ದಾರೆ. ಕಾನ್ಪುರ ಸೆಂಟ್ರಲ್‌ನಲ್ಲಿ ಆರೋಪಿಯನ್ನು ಹಸ್ತಾಂತರಿಸಲಾಗಿದೆ. ಜಿಆರ್‌ಪಿ ಮತ್ತು ದೂರು ದಾಖಲಿಸಿದ್ದು, ಆತನನ್ನು ಆಸ್ಪತ್ರೆಗೆ ಸಾಗಿಸಿದಾಗ ಆತ ಮೃತಪಟ್ಟಿದ್ದಾನೆ” ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ; ದೆಹಲಿ ಗಲಭೆ ಪ್ರಕರಣ: ವಿಚಾರಣೆಯಿಲ್ಲದೆ ನಾಲ್ಕು ವರ್ಷಗಳಿಂದ ಜೈಲಿನಲ್ಲಿರುವ ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...