Homeಕರ್ನಾಟಕ‘ಒಳಗಿನ ಭ್ರಷ್ಟಾಚಾರ ಬಾಹ್ಯ ಭಯೋತ್ಪಾದನೆಗಿಂತ ಅಪಾಯಕಾರಿ’ | ಲಂಚ ಪ್ರಕರಣದ ವಿಚಾರಣೆ ವೇಳೆ ಬೆಂಗಳೂರು ನ್ಯಾಯಾಲಯ...

‘ಒಳಗಿನ ಭ್ರಷ್ಟಾಚಾರ ಬಾಹ್ಯ ಭಯೋತ್ಪಾದನೆಗಿಂತ ಅಪಾಯಕಾರಿ’ | ಲಂಚ ಪ್ರಕರಣದ ವಿಚಾರಣೆ ವೇಳೆ ಬೆಂಗಳೂರು ನ್ಯಾಯಾಲಯ ಅಭಿಪ್ರಾಯ

- Advertisement -
- Advertisement -

‘ಬಾಹ್ಯ ಭಯೋತ್ಪಾದನೆಗಿಂತ ಒಳಗಿನ ಭ್ರಷ್ಟಾಚಾರ ಅತ್ಯಂತ ಅಪಾಯಕಾರಿ’ ಎಂದು ಲಂಚ ಪ್ರಕರಣವೊಂದರ ವಿಚಾರಣೆ ನಡೆಸುವ ವೇಳೆ ಬೆಂಗಳೂರಿನ ವಿಶೇಷ ನ್ಯಾಯಾಲಯ ಹೇಳಿದೆ. ಭೂ ವಿವಾದ ಇತ್ಯರ್ಥಕ್ಕೆ 5 ಲಕ್ಷ ರೂಪಾಯಿ ಲಂಚ ಸ್ವೀಕರಿಸಿದ್ದ ಮಾಜಿ ವಿಶೇಷ ತಹಶೀಲ್ದಾರ್ ಹಾಗೂ ಮಧ್ಯವರ್ತಿಯೊಬ್ಬರಿಗೆ ಭ್ರಷ್ಟಾಚಾರ ಪ್ರಕರಣಗಳ ವಿಚಾರಣೆ ನಡೆಸುತ್ತಿರುವ ಕೋರ್ಟ್‌ ಈ ಹೇಳಿಕೆ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬೆಂಗಳೂರು ದಕ್ಷಿಣ ತಾಲ್ಲೂಕಿನ ವಿಶೇಷ ತಹಶೀಲ್ದಾರ್ ಎಸ್ ವೆಂಕಟಾಚಲಪತಿ ಮತ್ತು ಮಧ್ಯವರ್ತಿ ಮಧುಸೂಧನ್ ಬಿ ಆರ್ ಅವರನ್ನು 2017 ರಲ್ಲಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಂಧಿಸಿತ್ತು. ಬುಧವಾರ ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ 23ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶ ಕೆ ಎಂ ರಾಧಾಕೃಷ್ಣ ಅವರು ವೆಂಕಟಾಚಲಪತಿ ಮತ್ತು ಮಧುಸೂಧನ್ ಅವರಿಗೆ ತಲಾ ಮೂರು ವರ್ಷಗಳ ಜೈಲು ಶಿಕ್ಷೆ ಮತ್ತು ಕ್ರಮವಾಗಿ 7 ಲಕ್ಷ ಮತ್ತು 40 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ.

“ಇಂದಿನ ದಿನಗಳಲ್ಲಿ ಸಾರ್ವಜನಿಕ ಕಚೇರಿಗಳಲ್ಲಿ, ವಿಶೇಷವಾಗಿ ಕಂದಾಯ ಇಲಾಖೆಯಲ್ಲಿ ನಡೆಯುತ್ತಿರುವ ದೊಡ್ಡ ಪ್ರಮಾಣದ ಭ್ರಷ್ಟಾಚಾರವು ಬಡ, ಅಸಹಾಯಕ ರೈತರು ಮತ್ತು ಇತರ ಸಾರ್ವಜನಿಕರ ಜೀವನಕ್ಕೆ ಶಾಪವಾಗಿ ಪರಿಣಮಿಸಿದೆ. ಸಾರ್ವಜನಿಕ ಸೇವಕರು ಮತ್ತು ಜನಪ್ರತಿನಿಧಿಗಳ ಈ ಅಂತರ್ಗತ ಭ್ರಷ್ಟ ಚಟುವಟಿಕೆಗಳು ಹೊರಗಿನ ಭಯೋತ್ಪಾದನೆಗಿಂತ ಹೆಚ್ಚು ಅಪಾಯಕಾರಿಯಾಗಿ ಪರಿಣಮಿಸಿದೆ. ಇದು ದೇಶದ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ” ಎಂದು ನ್ಯಾಯಾಧೀಶರು ತಮ್ಮ ಆದೇಶದಲ್ಲಿ ಹೇಳಿದ್ದಾರೆ.

“ಸಾಮಾನ್ಯ ಜನರು ಎದುರಿಸುತ್ತಿರುವ ಪ್ರತಿಯೊಂದು ಸಮಸ್ಯೆಗೆ ಇದು ನಿಜವಾಗಿಯೂ ಮೂಲ ಕಾರಣವಾಗಿದೆ. ಈ ರೀತಿಯ ಕಳಂಕವನ್ನು ಮುಂದುವರಿಸಲು ಅನುಮತಿಸಿದರೆ, ಬಹುಶಃ ಅದು ವ್ಯವಸ್ಥೆಯ ತಳಹದಿಯನ್ನು ಮಾತ್ರವಲ್ಲದೆ ಸಾಮಾನ್ಯ ಜನರ ನಂಬಿಕೆಯನ್ನೂ ಸಹ ನಾಶಪಡಿಸುತ್ತದೆ. ಜೊತೆಗೆ ಇದು ಪ್ರಜಾಪ್ರಭುತ್ವದ ಸ್ಥಾಪನೆಯ ನಾಶಕ್ಕೆ ಕಾರಣವಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಈ ಅಪರಾಧಿಗಳಿಗೆ ಕಠಿಣ ಶಿಕ್ಷೆಯ ಅಗತ್ಯವಿದೆ ಎಂದು ನಾನು ಅಭಿಪ್ರಾಯಪಟ್ಟಿದ್ದೇನೆ. ಹಾಗಾದರೆ ಇದು ಇತರರಿಗೆ ಇದು ಪಾಠವಾಗಲಿದೆ” ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಇದನ್ನೂಓದಿ:ಸೆಬಿ ಅಧ್ಯಕ್ಷೆ ವಿರುದ್ಧ ಲೋಕಪಾಲ್‌ಗೆ ದೂರು ನೀಡಿದ ಸಂಸದೆ ಮಹುವಾ ಮೊಯಿತ್ರಾ

ದೂರುದಾರರ ವ್ಯಕ್ತಿಯು ತನ್ನ ತಂದೆಯ ಮರಣದ ನಂತರ, ವಿಶೇಷ ತಹಶೀಲ್ದಾರ್ ಮತ್ತು ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಆಗಿದ್ದ ವೆಂಕಟಾಚಲಪತಿ ಅವರನ್ನು ಸಂಪರ್ಕಿಸಿ, ಭೂಮಿಯ ಹಂಚಿಕೆಯನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಕೋರಿದ್ದರು. ಆದರೆ, ವೆಂಕಟಾಚಲಪತಿ ಅವರು ಮಧುಸೂಧನ್ ಅವರನ್ನು ಭೇಟಿಯಾಗುವಂತೆ ಕೇಳಿದ್ದು, 20 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಮಾತುಕತೆಯ ನಂತರ, ಮೊತ್ತವನ್ನು 15 ಲಕ್ಷಕ್ಕೆ ಇಳಿಸಿ, ಮುಂಗಡವಾಗಿ 5 ಲಕ್ಷ ರೂ. ಪಾವತಿಸುವಂತೆ ಮತ್ತು ಬಾಕಿ ಪಾವತಿಸಿದ ನಂತರ ಆದೇಶ ಪ್ರತಿ ನೀಡಲಾಗುವುದು ಎಂದು ಅವರು ಹೇಳಿದ್ದರು. ಡಿಸೆಂಬರ್ 15, 2017 ರಂದು ದೂರುದಾರರು ಎಸಿಬಿಯನ್ನು ಸಂಪರ್ಕಿಸಿ ದೂರು ದಾಖಲಿಸಿದ್ದರು. ಹೀಗಾಗಿ ತಹಸಿಲ್ದಾರ್ ಅವರಿಗೆ ಎಸಿಬಿ ಬಲೆ ಬೀಸಿ, ಡಿಸೆಂಬರ್ 18, 2017 ರಂದು ವೆಂಕಟಾಚಲಪತಿ ಅವರ ಸೂಚನೆ ಮೇರೆಗೆ ಮಧುಸೂಧನ್ 5 ಲಕ್ಷ ಮುಂಗಡ ವಸೂಲಿ ಮಾಡುವಾಗ ಸಿಕ್ಕಿಬಿದ್ದಿದ್ದರು.

ವಿಡಿಯೊ ನೋಡಿ: ಒಕ್ಕೂಟ ವ್ಯವಸ್ಥೆ ಮಣ್ಣು ಮುಕ್ಕಿದೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ಮೀನಾಕ್ಷಿ ಬಾಳಿ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...