Homeಮುಖಪುಟ'ಶ್ರೀ ವಿಜಯ ಪುರಂ' | ಅಂಡಮಾನ್ ನಿಕೋಬರ್‌ ರಾಜಧಾನಿ 'ಪೋರ್ಟ್ ಬ್ಲೇರ್' ಮರುನಾಮಕರಣ

‘ಶ್ರೀ ವಿಜಯ ಪುರಂ’ | ಅಂಡಮಾನ್ ನಿಕೋಬರ್‌ ರಾಜಧಾನಿ ‘ಪೋರ್ಟ್ ಬ್ಲೇರ್’ ಮರುನಾಮಕರಣ

- Advertisement -
- Advertisement -

ಕೇಂದ್ರದ ಬಿಜೆಪಿ ಸರ್ಕಾರ ಹೆಸರು ಬದಲಾವಣೆ ಮಾಡುವ ರಾಜಕೀಯ ಮುಂದುವರೆಸಿದ್ದು, ಅಂಡಮಾನ್ ನಿಕೋಬಾರ್ ದ್ವೀಪಗಳ ರಾಜಧಾನಿಯಾದ ಪೋರ್ಟ್ ಬ್ಲೇರ್ ಅನ್ನು ಶ್ರೀ ವಿಜಯ ಪುರಂ ಎಂದು ಮರುನಾಮಕರಣ ಮಾಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು “ರಾಷ್ಟ್ರವನ್ನು ವಸಾಹತುಶಾಹಿ ಸಂಕೇತಗಳಿಂದ ಮುಕ್ತಗೊಳಿಸುವ ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯನ್ನು ಸಾಕಾರಗೊಳಿಸಲು ಇದನ್ನು ಮಾಡಲಾಗಿದೆ” ಎಂದು ಶುಕ್ರವಾರ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈಸ್ಟ್ ಇಂಡಿಯಾ ಕಂಪನಿಯ ಬ್ರಿಟಿಷ್ ವಸಾಹತುಶಾಹಿ ನೌಕಾಪಡೆಯ ಅಧಿಕಾರಿ ಕ್ಯಾಪ್ಟನ್ ಆರ್ಚಿಬಾಲ್ಡ್ ಬ್ಲೇರ್ ಅವರ ಹೆಸರನ್ನು ಪೋರ್ಟ್ ಬ್ಲೇರ್‌ಗೆ ಇಡಲಾಗಿತ್ತು. ನಮ್ಮ ಸ್ವಾತಂತ್ರ್ಯ ಹೋರಾಟ ಮತ್ತು ಇತಿಹಾಸದಲ್ಲಿ ಶ್ರೀ ವಿಜಯ ಪುರಕ್ಕೆ ಅಪ್ರತಿಮ ಸ್ಥಾನವಿದೆ ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದಾರೆ. ಈ ಹೆಸರು ಸ್ವಾತಂತ್ರ್ಯ ಹೋರಾಟದಲ್ಲಿ ಸಾಧಿಸಿದ ವಿಜಯವನ್ನು ಸಂಕೇತಿಸುತ್ತದೆ ಎಂದು ಅವರು ಹೇಳಿದ್ದಾರೆ.

“ಹಿಂದಿನ ಹೆಸರು ವಸಾಹತುಶಾಹಿ ಪರಂಪರೆಯನ್ನು ಹೊಂದಿದ್ದರೂ, ಶ್ರೀ ವಿಜಯ ಪುರಂ ನಮ್ಮ ಸ್ವಾತಂತ್ರ್ಯ ಹೋರಾಟದಲ್ಲಿ ಸಾಧಿಸಿದ ವಿಜಯವನ್ನು ಮತ್ತು ಅಂಡಮಾನ್ ನಿಕೋಬಾರ್ ದ್ವೀಪಗಳ ವಿಶಿಷ್ಟ ಪಾತ್ರವನ್ನು ಸಂಕೇತಿಸುತ್ತದೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

“ಇದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಂದ ನಮ್ಮ ತಿರಂಗ (ತ್ರಿವರ್ಣ)ವನ್ನು ಮೊದಲ ಬಾರಿಗೆ ಹಾರಿಸಿದ ಸ್ಥಳವಾಗಿದೆ ಮತ್ತು ವೀರ್ ಸಾವರ್ಕರ್ ಮತ್ತು ಇತರ ಸ್ವಾತಂತ್ರ್ಯ ಹೋರಾಟಗಾರರು ಸ್ವತಂತ್ರ ರಾಷ್ಟ್ರಕ್ಕಾಗಿ ಹೋರಾಡಿದ ಸೆಲ್ಯುಲಾರ್ ಜೈಲು ಇರುವ ಸ್ಥಳವಾಗಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ: ಇಡಿ ಪ್ರಕರಣದ ಜಾಮೀನು ವಿಫಲಗೊಳಿಸಲು ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸಿತ್ತು: ನ್ಯಾ. ಭುಯಾನ್

“ನಮ್ಮ ಸ್ವಾತಂತ್ರ್ಯ ಹೋರಾಟ ಮತ್ತು ಇತಿಹಾಸದಲ್ಲಿ ಅಂಡಮಾನ್ ನಿಕೋಬಾರ್ ದ್ವೀಪಗಳು ಅಪ್ರತಿಮ ಸ್ಥಾನವನ್ನು ಹೊಂದಿವೆ. ಒಂದು ಕಾಲದಲ್ಲಿ ಚೋಳ ಸಾಮ್ರಾಜ್ಯದ ನೌಕಾ ನೆಲೆಯಾಗಿ ಕಾರ್ಯನಿರ್ವಹಿಸಿದ ದ್ವೀಪ ಪ್ರದೇಶವು ಇಂದು ನಮ್ಮ ಕಾರ್ಯತಂತ್ರ ಮತ್ತು ಅಭಿವೃದ್ಧಿಯ ಮಹತ್ವಾಕಾಂಕ್ಷೆಗಳಿಗೆ ನಿರ್ಣಾಯಕ ನೆಲೆಯಾಗಿದೆ” ಎಂದು ಅಮಿತ್ ಶಾ ಹೇಳಿದ್ದಾರೆ.

2018 ರಲ್ಲಿ, ಪ್ರಧಾನಿ ಮೋದಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಗೆ ಗೌರವವಾಗಿ ಅಂಡಮಾನ್ ನಿಕೋಬಾರ್ ದ್ವೀಪಸಮೂಹದ ಮೂರು ದ್ವೀಪಗಳ ಮರುನಾಮಕರಣವನ್ನು ಘೋಷಿಸಿದ್ದರು. ಮೂರು ದ್ವೀಪಗಳಾದ ರಾಸ್ ಐಲ್ಯಾಂಡ್, ನೀಲ್ ಐಲ್ಯಾಂಡ್ ಮತ್ತು ಹ್ಯಾವ್ಲಾಕ್ ದ್ವೀಪಗಳನ್ನು ಕ್ರಮವಾಗಿ ನೇತಾಜಿ ಸುಭಾಸ್ ಚಂದ್ರ ಬೋಸ್ ದ್ವೀಪ, ಶಹೀದ್ ದ್ವೀಪ ಮತ್ತು ಸ್ವರಾಜ್ ದ್ವೀಪ ಎಂದು ಮರುನಾಮಕರಣ ಮಾಡಲಾಗಿತ್ತು.

2014 ರಲ್ಲಿ ಅಧಿಕಾರ ವಹಿಸಿಕೊಂಡ ನಂತರ, ನರೇಂದ್ರ ಮೋದಿ ನೇತೃತ್ವದ ಸರ್ಕಾರವು ವಸಾಹತುಶಾಹಿ ಪರಂಪರೆಯನ್ನು ತೊಡೆದುಹಾಕುತ್ತೇನೆ ಎಂದು ಐತಿಹಾಸಿಕ ಮಹತ್ವ ಹೊಂದಿರುವ ಸ್ಥಳಗಳನ್ನು ಮರುನಾಮಕರಣ ಮಾಡುತ್ತಿದೆ.

ವಿಡಿಯೊ ನೋಡಿ: ಕಪ್ಪು ನಮ್ಮ ಗುರುತು, ಕಾಯಕ ನಮ್ಮ ವಿಳಾಸ: ಹಂಸಲೇಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...