Homeಮುಖಪುಟಮದುವೆ ಆಮಿಷವೊಡ್ಡಿ 10 ವರ್ಷಗಳಲ್ಲಿ 77 ಮಹಿಳೆಯರಿಗೆ ವಂಚಿಸಿದ ದುಷ್ಕರ್ಮಿ!

ಮದುವೆ ಆಮಿಷವೊಡ್ಡಿ 10 ವರ್ಷಗಳಲ್ಲಿ 77 ಮಹಿಳೆಯರಿಗೆ ವಂಚಿಸಿದ ದುಷ್ಕರ್ಮಿ!

- Advertisement -
- Advertisement -

ಮದುವೆ ಆಮಿಷ ನೀಡಿ 77 ಮಹಿಳೆಯರನ್ನು ಬಲೆಗೆ ಬೀಳಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ನಗದು ಮತ್ತು ಬೆಲೆಬಾಳುವ ವಸ್ತುಗಳನ್ನು ದೂಚಿ ವಂಚಿಸಿದ್ದ 43 ವರ್ಷದ ದರೋಡೆಕೋರನನ್ನು ಒರಿಸ್ಸಾ ಅಪರಾಧ ವಿಭಾಗದ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಆರೋಪಿಯು ಕಳೆದ 10 ವರ್ಷಗಳಲ್ಲಿ ಸುಮಾರು 7 ರಾಜ್ಯಗಳ ಮಹಿಳೆಯರ ವಿರುದ್ಧ ಈ ಕೃತ್ಯ ಎಸಗಿದ್ದಾಗಿ ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆರೋಪಿಯನ್ನು ಅಂಗುಲ್‌ನ ಚೆಂಡಿಪಾಡಾ ಮೂಲದ ಬಿರಂಚಿ ನಾರಾಯಣನಾಥ್ ಎಂದು ಗುರುತಿಸಲಾಗಿದೆ. ಆತನನ್ನು ಬಂಧಿಸಿದ ಸಿಐಡಿ-ಸಿಬಿಯ ಸೈಬರ್ ಕ್ರೈಂ ಘಟಕವು ಆತನಿಂದ ವಶಪಡಿಸಿದ ಮೂರು ಮೊಬೈಲ್ ಫೋನ್‌ಗಳಿಂದ ವಾಟ್ಸಾಪ್ ಚಾಟ್‌ಗಳ ಜೊತೆಗೆ ಮಹಿಳೆಯರ 300 ಕ್ಕೂ ಹೆಚ್ಚು ನಿಕಟ ಫೋಟೋಗಳನ್ನು ಕಂಡುಕೊಂಡಿದೆ.

ಆರೋಪಿಯಿಂದ ವಂಚನೆಗೊಳಗಾದವರ ನಿಖರ ಸಂಖ್ಯೆಯನ್ನು ಸಿಬಿ ಖಚಿತಪಡಿಸುತ್ತಿದೆ ಎಂದು ಮೂಲಗಳು ತಿಳಿಸಿವೆ. 2013ರಿಂದಲೂ ಈತ ಇಂತಹ ವಂಚನೆ ಮಾಡುತ್ತಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಆರೋಪಿಯು ಒರಿಸ್ಸಾ ಮಾತ್ರವಲ್ಲದೆ ರಾಜಸ್ಥಾನ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಮಧ್ಯಪ್ರದೇಶ, ಹರಿಯಾಣ ಮತ್ತು ನವದೆಹಲಿಯಾದ್ಯಂತ ಮಹಿಳೆಯರಿಗೆ ವಂಚನೆ ಮಾಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಒರಿಸ್ಸಾದಲ್ಲಿ, ಬೈದ್ಯನಾಥಪುರ, ಜರ್ಪದ, ಬಾಲಸೋರ್ ಸದರ್, ಛೇಂಡ್, ಧೆಂಕನಲ್ ಟೌನ್, ನಯಾಪಲ್ಲಿ, ಬಲಿಪಟ್ನಾ ಮತ್ತು ಅಂಗುಲ್ ಟೌನ್ ಪೊಲೀಸ್ ಠಾಣೆಗಳಲ್ಲಿ ಮಹಿಳೆಯರನ್ನು ಮದುವೆಯಾಗಿ ಸುಲಿಗೆ ಮಾಡಿದ್ದಕ್ಕಾಗಿ ಈತನ ವಿರುದ್ಧ ಈ ಹಿಂದೆ ಕನಿಷ್ಠ ಒಂಬತ್ತು ಪ್ರಕರಣಗಳು ದಾಖಲಾಗಿದ್ದವು ವರದಿ ಹೇಳಿವೆ.

ಇದನ್ನೂಓದಿ: “ನಾವೂ ತಲ್ವಾರ್ ಹಿಡಿಯುತ್ತೇವೆ”: ಪ್ರಚೋದನಕಾರಿ ಹೇಳಿಕೆ ಕೊಟ್ಟ ಪ್ರತಾಪ್ ಸಿಂಹ

ಆರೋಪಿಯು ಕನಿಷ್ಠ ಮೂರು ಬಾರಿ ಜೈಲಿಗೆ ಹೋಗಿ ಬಂದರೂ ತನ್ನ ವಂಚನೆಯನ್ನು ಮುಂದುವರೆಸಿದ್ದನು. ಆತನ ತಾನು ರೈಲ್ವೆ, ಆದಾಯ ತೆರಿಗೆ ಇಲಾಖೆ, ಕಸ್ಟಮ್ಸ್ ಮತ್ತು ಕೇಂದ್ರ ಅಬಕಾರಿ ಮತ್ತು ನರಶಸ್ತ್ರಚಿಕಿತ್ಸಕನ ಉದ್ಯೋಗಿ ಎಂದು ಬಿಂಬಿಸಿ ಮಹಿಳೆಯರಿಗೆ ವಂಚಿಸಿದ್ದನು. ಜೊತೆಗೆ ತಾನು ರಾಜ್ಯಶಾಸ್ತ್ರ, ಇಂಗ್ಲಿಷ್ ಹಾಗೂ ಕಾನೂನಿನಲ್ಲಿ ಎಂಎ ಪದವಿ ಪಡೆದಿರುವುದಾಗಿ ಹೇಳಿಕೊಂಡಿದ್ದಾನೆ.

ನಾಲ್ಕು ಭಾಷೆಗಳಲ್ಲಿ ಸ್ಪಷ್ಟ ಮತ್ತು ನಿರರ್ಗಳವಾಗಿ ಮಾತನಾಡುವ ಆರೋಪಿ, ದೇವಾಲಯಗಳಲ್ಲಿ ಹಲವು ಮಹಿಳೆಯರಿಗೆ ತಾಳಿ ಕಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ವೈವಾಹಿಕ ಸೈಟ್‌ಗಳಲ್ಲಿ, ಆರೋಪಿ ನಾರಾಯಣನಾಥ್ ಹೆಚ್ಚಾಗಿ ಮಧ್ಯವಯಸ್ಸಿನ ಮಹಿಳೆಯರು ಪ್ರತ್ಯೇಕಗೊಂಡ ಅಥವಾ ವಿಚ್ಛೇದನ ಮತ್ತು ವಿಧವೆಯರನ್ನು ಗುರಿಯಾಗಿಸಿಕೊಂಡಿದ್ದನು. ತನ್ನ ಮೂಲ ಹೆಸರನ್ನು ಮರೆಮಾಚಿ, ಪ್ರವಾಕರ್ ಶ್ರೀವಾಸ್ತವ್ ಮತ್ತು ಮಾನಸ್ ರಾತ್ ಅವರಂತಹ ನಕಲಿ ಗುರುತುಗಳನ್ನು ಬಳಸುತ್ತಿದ್ದನು.

ಮಹಿಳೆಯರನ್ನು ಮದುವೆಯಾದ ನಂತರ ಅವರ ಮನೆಗಳಲ್ಲಿಯೇ ಇರುತ್ತಿದ್ದ ಆರೋಪಿ, ಅವರಲ್ಲಿ ಯಾರನ್ನೂ ತನ್ನ ಮನೆಗೆ ಕರೆದುಕೊಂಡು ಹೋಗಿರಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂಓದಿ:‘ಶ್ರೀ ವಿಜಯ ಪುರಂ’ | ಅಂಡಮಾನ್ ನಿಕೋಬರ್‌ ರಾಜಧಾನಿ ‘ಪೋರ್ಟ್ ಬ್ಲೇರ್’ ಮರುನಾಮಕರಣ

2022 ರಲ್ಲಿ ರಸ್ತೆ ಅಪಘಾತದಲ್ಲಿ ಪತಿಯನ್ನು ಕಳೆದುಕೊಂಡು ತನ್ನ ಇಬ್ಬರು ಹೆಣ್ಣುಮಕ್ಕಳೊಂದಿಗೆ ವಾಸಿಸುತ್ತಿದ್ದ ಕಟಕ್‌ನ ಮಹಿಳೆಯನ್ನು ಆರೋಪಿ ಸಂಪರ್ಕಿಸಿದ್ದನು ಎಂದು ಸಿಬಿ ದಾಖಲಿಸಿದ ಪ್ರಕರಣದಲ್ಲಿ ಹೇಳಿದೆ. ಸಂತ್ರಸ್ತೆ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಪ್ರವಾಕರ್ ಶ್ರೀವಾಸ್ತವ್ ಎಂಬ ನಕಲಿ ಹೆಸರಿನಲ್ಲಿದ್ದ ಆರೋಪಿಯ ಸಂಪರ್ಕಕ್ಕೆ ಬಂದಿದ್ದರು. ಆಗ ಆರೋಪಿ ತಾನು ವಿಶಾಖಪಟ್ಟಣಂನಲ್ಲಿ ರೈಲ್ವೇಯಲ್ಲಿ ಪ್ರಯಾಣ ಟಿಕೆಟ್ ಇನ್ಸ್‌ಪೆಕ್ಟರ್ ಆಗಿ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿಕೊಂಡಿದ್ದನು.

ವಂಚನೆಯಿಂದ ಮಹಿಳೆಯನ್ನು ಮದುವೆಯಾದ ನಂತರ, ನಾರಾಯಣನಾಥ್ ಸುಮಾರು ಐದು ತಿಂಗಳ ಕಾಲ ಮಹಿಳೆಯ ಮನೆಯಲ್ಲಿದ್ದುಕೊಂಡು ಅವರಿಗೆ ಶೋಷಣೆ ಮಾಡಿದ್ದಾನೆ ಎಂದು ಸಿಬಿ ಮೂಲಗಳು ತಿಳಿಸಿವೆ. ತನ್ನ ದುರ್ವರ್ತನೆ ವೇಳೆ ಆರೋಪಿ ಮಹಿಳೆಯ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ್ದಾನೆ. ಆಕೆಯಿಂದ 5 ಲಕ್ಷ ರೂಪಾಯಿ ಹಾಗೂ 32 ಗ್ರಾಂ ಚಿನ್ನಾಭರಣಗಳನ್ನು ಸುಲಿಗೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ನಾರಾಯಣನಾಥ್ ತನ್ನ ಖಾಸಗಿ ಛಾಯಾಚಿತ್ರಗಳು ಮತ್ತು ವೀಡಿಯೊಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದರಿಂದ ಮಹಿಳೆ ದೌರ್ಜನ್ಯವನ್ನು ಸಹಿಸಿಕೊಂಡಿದ್ದರು. ಆದರೆ, ಆರೋಪಿ ಬೇರೆ ಮಹಿಳೆಯರೊಂದಿಗೆ ಸಂಪರ್ಕದಲ್ಲಿ ಇರುವುದು ತಿಳಿದಾಗ ಮಹಿಳೆ ಸಿಬಿಗೆ ದೂರು ನೀಡಿದ್ದರು.

ವಿಡಿಯೊನೋಡಿ: ಒಕ್ಕೂಟ ವ್ಯವಸ್ಥೆ ಮಣ್ಣು ಮುಕ್ಕಿದೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ಮೀನಾಕ್ಷಿ ಬಾಳಿ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...