Homeಕರ್ನಾಟಕಪರಶುರಾಮ ಪ್ರತಿಮೆ | ಕಂಚಿಗೆ ಬದಲಾಗಿ ಹಿತ್ತಾಳೆ, ತಾಮ್ರ ಬಳಕೆ : ಜನರ ಹಣ ಲೂಟಿ...

ಪರಶುರಾಮ ಪ್ರತಿಮೆ | ಕಂಚಿಗೆ ಬದಲಾಗಿ ಹಿತ್ತಾಳೆ, ತಾಮ್ರ ಬಳಕೆ : ಜನರ ಹಣ ಲೂಟಿ ಹೊಡೆಯಲಾಗಿದೆ ಎಂದ ಹೈಕೋರ್ಟ್‌

- Advertisement -
- Advertisement -

ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಹಿಂದಿನ ಬಿಜೆಪಿ ಸರ್ಕಾರದ ಆಡಳಿತದಲ್ಲಿ ಕಂಚಿನ ಪರಶುರಾಮ ಪ್ರತಿಮೆಗೆ ಬದಲಾಗಿ ಹಿತ್ತಾಳೆ, ತಾಮ್ರ ಮತ್ತು ಸತು ಬಳಸಿ ಕಳಪೆ ಕಾಮಗಾರಿ ನಡೆಸಲಾಗಿದೆ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಕರ್ನಾಟಕ ಹೈಕೋರ್ಟ್‌, ಜನರ ಹಣವನ್ನು ಲೂಟಿ ಮಾಡಲಾಗಿದೆ ಎಂದು ಕಿಡಿಕಾರಿದೆ.

ಬೆಂಗಳೂರಿನ ಸರ್. ಎಂ ವಿಶ್ವೇಶ್ವರಯ್ಯ ಬಡಾವಣೆ ನಿವಾಸಿಯಾಗಿರುವ ಕಲಾವಿದ ಕೃಷ್ಣ ನಾಯಕ್‌ ಅವರು ತಮ್ಮ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಆದೇಶ ಕಾಯ್ದಿರಿಸಿದೆ.

ಕಳಪೆ ಕಾಮಗಾರಿ ನಡೆಸಲಾಗಿದೆ ಎಂದು ಖಚಿತಪಡಿಸಿರು ಪೀಠ, “ನಿಮಗೆ ಕೊಟ್ಟಿರುವುದು ನಿರ್ಮಿತಿ ಕೇಂದ್ರ ಅಥವಾ ದೂರುದಾರರಿಗೆ ಸೇರಿದ ದುಡ್ಡಲ್ಲ, ಅದು ಜನರ ದುಡ್ಡು. ನೀವು ಜನರ ಹಣದಲ್ಲಿ ಆಟವಾಡಲಾಗದು” ಎಂದು ಖಾರವಾಗಿ ನುಡಿದಿರುವುದಾಗಿ ಬಾರ್ & ಬೆಂಚ್ ವರದಿ ಮಾಡಿದೆ.

“ಪ್ರತಿಮೆಗೆ ಕಂಚು ಬಳಸುವ ಬದಲು ಹಿತ್ತಾಳೆ ಮತ್ತು ಸತುವನ್ನೇಕೆ ಬಳಸಲಾಗಿದೆ? ಪ್ರತಿಮೆ ಹೆಸರಿನಲ್ಲಿ ಕಳಪೆ ಕಾಮಗಾರಿ ನಡೆಸಿ ಸಾರ್ವಜನಿಕರ ಹಣವನ್ನು ಲೂಟಿ ಮಾಡಲಾಗಿದೆ. 1.83 ಕೋಟಿ ರೂಪಾಯಿ ಪೈಕಿ ಈಗಾಗಲೇ ನಿಮಗೆ 1.20 ಕೋಟಿ ರೂಪಾಯಿ ಪಾವತಿಯಾಗಿದೆ. ಇದು ಸಾರ್ವಜನಿಕರ ಹಣ. ಎಲ್ಲವೂ ದಾಖಲೆಯಲ್ಲಿರುವುದರಿಂದ ಯಾವುದೇ ಸೂಚನೆ ಪಡೆಯುವ ಅಗತ್ಯವೇ ಇಲ್ಲ. ಜನರ ಹಣದ ಜೊತೆ ಆಟ ಆಡುವವರನ್ನು ಬಿಡಲಾಗದು. ಪುಣ್ಯಕ್ಕೆ ಪ್ರತಿಮೆ ಮಾರನೇಯ ದಿನ ಕುಸಿದಿಲ್ಲ. ಅದು ಬೀಳುವ ಮುಂಚೆಯೇ ತೆರವು ಮಾಡಲಾಗಿದೆ” ಎಂದು ನ್ಯಾಯಮೂರ್ತಿ ನಾಗಪ್ರಸನ್ನ ಅವರು ಅರ್ಜಿದಾರರ ವಿರುದ್ಧ ಮೌಖಿಕವಾಗಿ ಕಿಡಿಕಾರಿದ್ದಾರೆ

“35 ಅಡಿ ಎತ್ತರದ ಪ್ರತಿಮೆಯ ಭಾರವನ್ನು ಹಿತ್ತಾಳೆ ಮತ್ತು ಸತು ತಾಳುತ್ತದೆಯೇ? ಪ್ರತಿಮೆಗೆ ಕಂಚನ್ನೇ ಬಳಸಬೇಕು ಎಂದು ಹೇಳಿರುವುದಕ್ಕೆ ನಿಖರ ಕಾರಣವಿದೆ. ಹಿತ್ತಾಳೆ ಮತ್ತು ಸತು ಬಳಸಿ ಪ್ರತಿಮೆ ನಿರ್ಮಿಸಲು 1.20 ಕೋಟಿ ರೂಪಾಯಿ ಏಕೆ ಪಡೆದಿರಿ? ಕಂಚು ಬಳಕೆ ಮಾಡದಿರುವುದು ಕ್ರಿಮಿನಲ್‌ ಅಪರಾಧ. ನಿರ್ಮಿತಿ ಕೇಂದ್ರದ ಬಗ್ಗೆ ಚೆನ್ನಾಗಿ ತಿಳಿದಿದೆ. ಅದರ ಬಗ್ಗೆ ಕಡಿಮೆ ಮಾತನಾಡಿದಷ್ಟು ಒಳ್ಳೆಯದು” ಎಂದು ಹೈಕೋರ್ಟ್ ಚಾಟಿ ಬೀಸಿದೆ.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಎಂ ಅರುಣ್‌ ಶ್ಯಾಮ್‌ “ಪರಶುರಾಮ ಪ್ರತಿಮೆ ತಲೆಯ ಭಾಗ ಭಾರ ತಾಳಲಾರದ್ದರಿಂದ ಅದರ ಜೋಡಣೆ ಬದಲಿಸಲಾಗಿದೆ. ಕಂಚಿನಲ್ಲಿ ಪ್ರತಿಮೆ ನಿರ್ಮಿಸಬೇಕು ಎಂದು ಹೇಳಿದ್ದು, ನಾವು ತಾಮ್ರ, ಸತು ಮತ್ತು ಹಿತ್ತಾಳೆಯನ್ನು ಬಳಕೆ ಮಾಡಿದ್ದೇವೆ. ಸತು ಮತ್ತು ಹಿತ್ತಾಳೆಯು ಕಂಚಿಗೆ ಸಮನಾಗುತ್ತದೆ” ಎಂದು ಸಮಜಾಯಿಷಿ ನೀಡಿದ್ದಾರೆ.

“ಕೆಲಸದ ಭಾಗವಾಗಿ 1.20 ಕೋಟಿ ರೂಪಾಯಿ ಸ್ವೀಕರಿಸಿದ್ದೇವೆ. ನಮ್ಮ ಕೆಲಸವನ್ನು ಪೂರ್ಣಗೊಳಿಸುತ್ತೇವೆ. ಆಮೇಲೆ ಅದನ್ನು ಪರಿಶೀಲಿಸಬಹುದು. ಪರಶುರಾಮ ಥೀಮ್‌ ಪಾರ್ಕ್‌ನಲ್ಲಿ ಪರಶುರಾಮ ಪ್ರತಿಮೆ ನಿರ್ಮಾಣವೂ ಒಂದಾಗಿತ್ತು. ಉದ್ಘಾಟನೆಯ ಹಿನ್ನೆಲೆಯಲ್ಲಿ ಬೇಗ ಮಾಡಿ ಮುಗಿಸಲಾಗಿತ್ತು. ಆನಂತರ ಜಿಲ್ಲಾಧಿಕಾರಿಯು ಅದನ್ನು ಪುನರ್‌ ನಿರ್ಮಾಣ ಮಾಡುವಂತೆ ಸೂಚಿಸಿದ್ದಾರೆ. ಈಗ ಸರ್ಕಾರ ಇಡೀ ಪ್ರಕರಣವನ್ನು ತನಿಖೆಗೆ ಒಪ್ಪಿಸಿದ್ದರಿಂದ ಅಲ್ಲಿಗೆ ತೆರಳಿ ಕೆಲಸ ಮಾಡಲಾಗುತ್ತಿಲ್ಲ. ಅವಕಾಶ ನೀಡಿದರೆ ಕಂಚಿನಲ್ಲೇ ಕಾಲಮಿತಿಯಲ್ಲಿ ಕೆಲಸ ಪೂರ್ಣಗೊಳಿಸಲಾಗುವುದು” ಎಂದಿದ್ದಾರೆ.

“ದೂರುದಾರರು ರಾಜಕೀಯ ಪಕ್ಷದ ಪ್ರತಿನಿಧಿ. ಅವರು, ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸದೇ ಹೈಕೋರ್ಟ್‌ನ ವಿಭಾಗೀಯ ಪೀಠವು ವಜಾ ಮಾಡಿದೆ. ಹಿಂದಿನ ಸರ್ಕಾರ ಮತ್ತು ಮಾಜಿ ಸಚಿವರ ವರ್ಚಸ್ಸು ಹಾಳು ಮಾಡುವ ಉದ್ದೇಶದಿಂದ ಈ ಕೆಲಸ ಮಾಡಲಾಗುತ್ತಿದೆ. ದೂರುದಾರರು ಕಾರ್ಕಳ ಶಾಸಕ ಸುನಿಲ್‌ ಕುಮಾರ್‌ ವಿರುದ್ಧ ಚುನಾವಣೆಯಲ್ಲಿ ಸೋಲನುಭವಿಸಿದ್ದಾರೆ. ಹಾಗಾಗಿ, ಈ ರೀತಿ ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದಕ್ಕೂ ಮುನ್ನ, ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕ ಬಿ ಎನ್‌ ಜಗದೀಶ್‌ ಅವರು “ಸುರತ್ಕಲ್‌ನಲ್ಲಿರುವ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ (ಎನ್‌ಐಟಿ) ನೀಡಿರುವ ವರದಿಯ ಪ್ರಕಾರ ಅರ್ಜಿದಾರರು ಪರಶುರಾಮ ಪ್ರತಿಮೆಗೆ ಕಂಚು ಬಳಸಿಲ್ಲ. ಶೇ. 80ರಷ್ಟು ಹಿತ್ತಾಳೆ ಮತ್ತು ಶೇ.20ರಷ್ಟು ಸತು ಬಳಕೆ ಮಾಡಿದ್ದಾರೆ ಎಂದು ವರದಿ ನೀಡಿದೆ. ಆದರೆ, ನಿರ್ಮಿತಿ ಕೇಂದ್ರ ಮತ್ತು ಅರ್ಜಿದಾರರು ಕಂಚು ಬಳಕೆ ಮಾಡಿದೆ ಎಂದು ಹೇಳಿದೆ. ನಿರ್ಮಿತಿ ಕೇಂದ್ರ ಹೇಳುತ್ತಿರುವುದನ್ನು ನೋಡಿದರೆ ಇನ್ನಷ್ಟು ತನಿಖೆಯಾಗಬೇಕಿದೆ. ಜಿಲ್ಲಾಧಿಕಾರಿ ಪ್ರತಿಮೆ ತೆರವು ಮಾಡಿ ಎಂದು ಆದೇಶ ಮಾಡಿದ್ದಾರೆ. ಈ ಆದೇಶವನ್ನು ನಿರ್ಮಿತಿ ಕೇಂದ್ರವು ನ್ಯಾಯಾಲಯಕ್ಕೆ ಸಲ್ಲಿಸಿಲ್ಲ. ತನಿಖೆ ಪ್ರಗತಿಯಲ್ಲಿರುವುದರಿಂದ ತೆರವು ಮಾಡುವಂತೆ ಆದೇಶಿಸಿದ್ದನ್ನು ತಡೆಯಿರಿ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ. ತನಿಖೆ ನಡೆಯಲಿ, ಅರ್ಜಿದಾರರಿಗೂ ಹಣ ತಲುಪಿದೆಯೋ ಗೊತ್ತಿಲ್ಲ. ಅವರ ಪಾತ್ರವೂ ಬಹಿರಂಗವಾಗಬೇಕಿದೆ. ಇದರಲ್ಲಿ ನಿಜವಾದ ಅಪರಾಧಿ ಯಾರು ಎಂಬುವುದು ತಿಳಿಯಬೇಕಿದೆ” ಎಂದಿದ್ದಾರೆ.

ಇದನ್ನೂ ಓದಿ : ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ : ‘ಕರಾಳ ದಿನ’ ಆಚರಣೆಗೆ ಕರವೇ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...