Homeಮುಖಪುಟಕನ್ನಡದಲ್ಲಿ ಔ‍ಷಧ ಚೀಟಿ | ಪ್ರಾಧಿಕಾರದ ಪ್ರಸ್ತಾಪ 'ಅಸಂಬದ್ಧ ಮತ್ತು ಅನಗತ್ಯ': ಖ್ಯಾತ ವೈದ್ಯ ಶ್ರೀನಿವಾಸ...

ಕನ್ನಡದಲ್ಲಿ ಔ‍ಷಧ ಚೀಟಿ | ಪ್ರಾಧಿಕಾರದ ಪ್ರಸ್ತಾಪ ‘ಅಸಂಬದ್ಧ ಮತ್ತು ಅನಗತ್ಯ’: ಖ್ಯಾತ ವೈದ್ಯ ಶ್ರೀನಿವಾಸ ಕಕ್ಕಿಲ್ಲಾಯ ಅಸಮಾಧಾನ

- Advertisement -
- Advertisement -

ರಾಜ್ಯದ ವೈದ್ಯರುಗಳು ರೋಗಿಗಳಿಗೆ ನೀಡುವ ಔಷಧ ಚೀಟಿಗಳನ್ನು ಕನ್ನಡದಲ್ಲಿ ಬರೆಯಬೇಕು ಎನ್ನುವ ಕನ್ನಡ ಪ್ರಾಧಿಕಾರದ ಅಧ್ಯಕ್ಷರಾದ ಪುರುಷೋಷೋತ್ತಮ ಬಿಳಿಮಲೆ ಅವರ ಪ್ರಸ್ತಾಪಕ್ಕೆ ಖ್ಯಾತ ವೈದ್ಯರಾದ ಶ್ರೀನಿವಾಸ ಕಕ್ಕಿಲ್ಲಾಯ ಅವರು ಅಸಮಾಧಾನ ವ್ಯಕ್ತಪಡಿಸಿದ್ದು, ಇದು ‘ಅಸಂಬದ್ಧ’ ಮತ್ತು ‘ಅನಗತ್ಯ’ ಪ್ರಸ್ತಾಪ ಎಂದು ಹೇಳಿದ್ದಾರೆ. ”ವೈದ್ಯರುಗಳಿಗೆ ರೋಗಿಗಳ ಶುಶ್ರೂಷೆ ಮಾಡುವುದು ಆದ್ಯ ಕರ್ತವ್ಯವಾಗಿದೆ, ಕನ್ನಡ ಬೆಳೆಸುವುದಲ್ಲ. ಒಂದು ವೇಳೆ ಕನ್ನಡ ಬೆಳೆಸುವುದು ವೈದ್ಯರುಗಳ ಕೆಲಸ ಎಂದು ಪ್ರಾಧಿಕಾರ ಹೇಳುವುದಾದರೆ, ಪ್ರಾಧಿಕಾರದಲ್ಲಿ ಕನ್ನಡ ಬೆಳೆಸುವ ಮತ್ತು ಉಳಿಸುವ ಯಾವುದೆ ಹೊಸ ಚಿಂತನೆ ಇಲ್ಲ ಎಂದರ್ಥ” ಎಂದು ಅವರು ಹೇಳಿದ್ದಾರೆ. ಕನ್ನಡದಲ್ಲಿ ಔ‍ಷಧ ಚೀಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕನ್ನಡ ಪ್ರಾಧಿಕಾರದ ಪ್ರಸ್ತಾಪದ ಬಗ್ಗೆ ನಾನುಗೌರಿ.ಕಾಮ್ ಜೊತೆಗೆ ಮಾತನಾಡಿದ ಡಾಕ್ಟರ್ ಶ್ರೀನಿವಾಸ ಕಕ್ಕಿಲ್ಲಾಯ ಅವರು, ಕನ್ನಡ ಬೆಳೆಸುವುದು ವೈದ್ಯರ ಕೆಲಸವಲ್ಲ ಎಂದು ಹೇಳಿದರು. “ನನಗೆ ಪ್ರೊಫೆಸರ್ ಬಿಳಿಮಲೆ ಮೇಲೆ ತುಂಬಾ ಗೌರವಿದೆ, ಅವರು ಮಾಡಿರುವ ಕೆಲಸಗಳ ಬಗ್ಗೆ ಹೆಮ್ಮೆಯಿದೆ. ಆದರೆ ಅವರ ಇಂತಹ ಸಲಹೆಗಳನ್ನು ನಾನು ಒಪ್ಪಬೇಕೆಂದಿಲ್ಲ. ಒಂದು ವೇಳೆ ಔ‍ಷಧಿ ಚೀಟಿಗಳನ್ನು ಕನ್ನಡದಲ್ಲಿ ಬರೆದರೆ ಅದು ಭಾರಿ ಗೊಂದಲಕ್ಕೆ ದಾರಿ ಮಾಡಿಕೊಡುತ್ತದೆ. ರೋಗಿಗಳಿಗೆ ಏನಾದರೂ ಹೆಚ್ಚು ಕಮ್ಮಿಯಾದರೆ, ಅದಕ್ಕೆ ಹೊಣೆ ಯಾರು” ಎಂದು ಕೇಳಿದರು.

“ಮೊದಲನೆಯದಾಗಿ ಈಗಾಗಲೆ ಲಕ್ಷಾಂತರ ಔಷಧಿ ಬ್ರಾಂಡ್‌ಗಳು ಮಾರುಕಟ್ಟೆಯಲ್ಲಿ ಇವೆ. ಔ‍ಷಧಗಳ ಹೆಸರಿನಲ್ಲಿ ಒಂದು ಅಕ್ಷರ ಬದಲಾದರೂ ಅದು ಬೇರೆಯೆ ಆಗಿಬಿಡುತ್ತದೆ. ಅಲ್ಲದೆ, ಕನ್ನಡದಲ್ಲಿ ಔಷದ ಬರೆದರೆ ಔಷಧ ಅಂಗಡಿಗಳಲ್ಲಿ ಔಷಧ ಕೊಡುವವರು ಕನ್ನಡಿಗರೆ ಆಗಿರುವುದಿಲ್ಲ. ಅದನ್ನು ಓದಲು ತಿಳಿಯದೆ ಮತ್ತೆ ನಮಗೆ ಕರೆ ಮಾಡಿ ಅದರ ಬಗ್ಗೆ ಕೇಳುತ್ತಾರೆ. ನಾವು ರೋಗಿಗಳನ್ನು ಬಿಟ್ಟು ಅವರಿಗೆ ಉತ್ತರಿಸುವುದೆ ಕೆಲಸ ಮಾಡಿಕೊಂಡಿರಲು ಸಾಧ್ಯವಿಲ್ಲ. ಕನ್ನಡ ಕಟ್ಟುವ ಕೆಲಸ ಎಂದರೆ ಇದಲ್ಲ” ಎಂದು ಅವರು ತಿಳಿಸಿದರು.

“ಜಗತ್ತುಈಗ ಕಿರಿದಾಗುತ್ತಿದೆ. ನಾವು ಆಧುನಿಕ ವೈದ್ಯರು ಜಗತ್ತಿನಾದ್ಯಂತ ವೈದ್ಯರು ಬರೆಯುವ ಹಾಗೆ ಔ‍ಷಧಿ ಚೀಟಿಯನ್ನು ಬರೆಯುತ್ತೇವೆ. ಮಂಗಳೂರಿನಲ್ಲಿ ಒಬ್ಬ ವೈದ್ಯ ಬರೆದ ಔ‍ಷಧ ಚೀಟಿ ಜಗತ್ತಿನ ಮತ್ತು ದೇಶದ ಬೇರೆ ವೈದ್ಯರಿಗೂ ಓದುವಂತೆ ಇದ್ದು ರೋಗಿಯ ಶುಶ್ರೂಷೆ ಮಾಡುವಂತೆ ಇರಬೇಕು. ಒಂದು ವೇಳೆ ನಾನು ಕನ್ನಡದಲ್ಲಿ ಔಷಧ ಚೀಟಿ ಬರೆದು ಕೊಟ್ಟ ರೋಗಿಯು ಕೇರಳದಲ್ಲಿ ಅನಾರೋಗ್ಯ ಪೀಡಿತನಾದರೆ, ಆತನಿಗೆ ಕನ್ನಡ ಬಾರದ ಮಲಯಾಳಂ ವೈದ್ಯರು ರೋಗ ನಿರ್ಣಯ ಮಾಡಿ ಹೇಗೆ ಚಿಕಿತ್ಸೆ ನೀಡುತ್ತಾರೆ?. ಔ‍ಷಧ ಚೀಟಿ ಎಂದರೆ ಕೇವಲ ಭಾಷೆಯ ಭಾವನಾತ್ಮಕ ವಿಚಾರ ಅಲ್ಲ, ಅದು ರೋಗಿಗಳ ರೋಗ ನಿರ್ಣಯದ ದಾಖಲೆ ಕೂಡಾ ಆಗಿದೆ” ಎಂದು ಅವರು ಹೇಳಿದರು.

ಇದನ್ನೂಓದಿ:ಪರಶುರಾಮ ಪ್ರತಿಮೆ | ಕಂಚಿಗೆ ಬದಲಾಗಿ ಹಿತ್ತಾಳೆ, ತಾಮ್ರ ಬಳಕೆ : ಜನರ ಹಣ ಲೂಟಿ ಹೊಡೆಯಲಾಗಿದೆ ಎಂದ ಹೈಕೋರ್ಟ್‌

“ಅಷ್ಟೆ ಅಲ್ಲದೆ, ವೈದ್ಯರು ಹೇಗೆ ಔ‍ಷಧ ಚೀಟಿ ಬರೆಯಬೇಕು ಎಂದು ನಮಗೆ ವೈದ್ಯ ಪರಿಷತ್ತು ಆದೇಶಿಸುತ್ತದೆ. ಅದನ್ನು ವೈದ್ಯರು ಪಾಲಿಸಬೇಕಿದೆ. ಅದು ಬಿಟ್ಟು ಕನ್ನಡ ಪ್ರಾಧಿಕಾರ ಇದನ್ನು ಹೇಳುವ ಹಾಗೆಯೆ ಇಲ್ಲ. ಇತ್ತಿಚೆಗೆ ಆರೋಗ್ಯ ಸಚಿವರು ಕೂಡಾ ಇದನ್ನೇ ಹೇಳಿದ್ದಾರೆ. ಭಾಷೆ ತಳಮಟ್ಟದಿಂದ ಬೆಳೆಯುವುದಕ್ಕೆ ವೈದ್ಯರು ಆಯಾ ಭಾಷೆಗಳಲ್ಲಿ ಚೀಟಿ ಬರೆಯುವುದೇ ಮುಖ್ಯ ಕಾರಣ ಎಂದಾದರೆ ಅಭಿವೃದ್ಧಿ ಪ್ರಾಧಿಕಾರವು ಕೂಡ ಬೇಕಾಗಿಲ್ಲ ಅಲ್ಲವೆ. ಭಾಷೆ ಬೆಳೆಸುವ ಜವಾಬ್ದಾರಿಯನ್ನೂ ವೈದ್ಯರುಗಳಿಗೆ ಚೀಟಿ ಬರೆಯಲು ವಹಿಸಿಕೊಟ್ಟರಾಯಿತು” ಎಂದು ಅವರು ಹೇಳಿದರು.

“ಕನ್ನಡ ಬೆಳೆಯಬೇಕು, ಬೆಳೆಸಬೇಕು ಎಂಬ ಬಿಳಿಮಲೆ ಅವರ ಚಿಂತನೆಯ ಬಗ್ಗೆ ನನಗೆ ಸಮ್ಮತಿಯಿದೆ. ನಾನು ಅದರ ವಿರೋಧಿಯು ಅಲ್ಲ. ಆದರೆ ಅದನ್ನು ವೈದ್ಯರ ಮೇಲೆ ಹಾಕುವುದು ಸರಿಯಲ್ಲ. ಅದಕ್ಕಾಗಿ ಬೇರೆ ದಾರಿಯನ್ನು ಕನ್ನಡ ಪ್ರಾಧಿಕಾರ ಹುಡುಕಬೇಕು. ಈ ರಾಜ್ಯಕ್ಕೆ ಬಂದು ವೈದ್ಯಕೀಯ ಶಾಸ್ತ್ರ ಕಲಿಯುವ ಬೇರೆ ರಾಜ್ಯದ ವಿದ್ಯಾರ್ಥಿಗಳಿಗೆ ಕನ್ನಡ ಕಲಿಸುವ ಬಗ್ಗೆ ಪ್ರಾಧಿಕಾರ ಚಿಂತಿಸಲಿ. ಪ್ರೊಫೆಸರ್ ಬಿಳಿಮಲೆ ಅವರಲ್ಲಿ ಕನ್ನಡ ಕಲಿಸುವ ಇಂತಹ ಹಲವು ಮಾದರಿಗಳು ಇವೆ. ಇದರಲ್ಲಿ ಅವರು ತಜ್ಞರು ಕೂಡಾ ಆಗಿದ್ದಾರೆ” ಎಂದು ತಿಳಿಸಿದರು.

“ಬೇರೆ ರಾಜ್ಯದ ವಿದ್ಯಾರ್ಥಿಗಳು ಕನ್ನಡ ಕಲಿತು ರೋಗಿಗಳೊಂದಿಗೆ ಸಂವಹನ ನಡೆಸಿದರೆ ಅದು ಕನ್ನಡ ಕಟ್ಟುವ ಕೆಲಸ ಆಗಲಿದೆ. ಜೊತೆಗೆ ಕನ್ನಡದ ರೋಗಿಗಳಿಗೆ ಇದರಿಂದ ಲಾಭವೂ ಆಗಲಿದೆ. ಅಷ್ಟೆ ಅಲ್ಲದೆ, ವೈದ್ಯಕೀಯ ಸಾಹಿತ್ಯ ಬರೆಯುವರಿಗೆ ಪ್ರಾಧಿಕಾರ ಪ್ರೋತ್ಸಾಹ ನೀಡಿ ಅವರನ್ನು ಬೆಳೆಸಬೇಕಿದೆ. ಜೊತೆಗೆ ವೈದ್ಯಕೀಯ ಭಾಷೆಯಲ್ಲಿ ಇರುವ ಹಲವು ಪದಗಳನ್ನು ಕನ್ನಡೀಕರಣ ಮಾಡುವಲ್ಲಿ ಮತ್ತು ಅದನ್ನು ಕನ್ನಡಿಗರಿಗೆ ತಲುಪಿಸುವಲ್ಲಿ ಕೆಲಸವನ್ನು ಮಾಡಬೇಕಿದೆ. ಅದು ಬಿಟ್ಟು ವೈದ್ಯರ ಮೇಲೆ ಕನ್ನಡ ಉಳಿಸುವ ಭಾರ ಹಾಕುವುದು ಸರಿಯಲ್ಲ” ಎಂದು ಡಾಕ್ಟರ್ ಶ್ರೀನಿವಾಸ ಕಕ್ಕಿಲ್ಲಾಯ ಹೇಳಿದರು.

ವಿಡಿಯೊ ನೋಡಿ: ರಾಜ್ಯಗಳ ಅಸ್ಮಿತೆ ಹಕ್ಕು ಮತ್ತು ಪಾಲಿನ ರಕ್ಷಣೆಗಾಗಿ ರಾಷ್ಟ್ರೀಯ ಅಭಿಯಾನ ಚಾಲನಾ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...