Homeಮುಖಪುಟಕನ್ನಡದಲ್ಲಿ ಔ‍ಷಧ ಚೀಟಿ | ಪ್ರಾಧಿಕಾರದ ಪ್ರಸ್ತಾಪ 'ಅಸಂಬದ್ಧ ಮತ್ತು ಅನಗತ್ಯ': ಖ್ಯಾತ ವೈದ್ಯ ಶ್ರೀನಿವಾಸ...

ಕನ್ನಡದಲ್ಲಿ ಔ‍ಷಧ ಚೀಟಿ | ಪ್ರಾಧಿಕಾರದ ಪ್ರಸ್ತಾಪ ‘ಅಸಂಬದ್ಧ ಮತ್ತು ಅನಗತ್ಯ’: ಖ್ಯಾತ ವೈದ್ಯ ಶ್ರೀನಿವಾಸ ಕಕ್ಕಿಲ್ಲಾಯ ಅಸಮಾಧಾನ

- Advertisement -
- Advertisement -

ರಾಜ್ಯದ ವೈದ್ಯರುಗಳು ರೋಗಿಗಳಿಗೆ ನೀಡುವ ಔಷಧ ಚೀಟಿಗಳನ್ನು ಕನ್ನಡದಲ್ಲಿ ಬರೆಯಬೇಕು ಎನ್ನುವ ಕನ್ನಡ ಪ್ರಾಧಿಕಾರದ ಅಧ್ಯಕ್ಷರಾದ ಪುರುಷೋಷೋತ್ತಮ ಬಿಳಿಮಲೆ ಅವರ ಪ್ರಸ್ತಾಪಕ್ಕೆ ಖ್ಯಾತ ವೈದ್ಯರಾದ ಶ್ರೀನಿವಾಸ ಕಕ್ಕಿಲ್ಲಾಯ ಅವರು ಅಸಮಾಧಾನ ವ್ಯಕ್ತಪಡಿಸಿದ್ದು, ಇದು ‘ಅಸಂಬದ್ಧ’ ಮತ್ತು ‘ಅನಗತ್ಯ’ ಪ್ರಸ್ತಾಪ ಎಂದು ಹೇಳಿದ್ದಾರೆ. ”ವೈದ್ಯರುಗಳಿಗೆ ರೋಗಿಗಳ ಶುಶ್ರೂಷೆ ಮಾಡುವುದು ಆದ್ಯ ಕರ್ತವ್ಯವಾಗಿದೆ, ಕನ್ನಡ ಬೆಳೆಸುವುದಲ್ಲ. ಒಂದು ವೇಳೆ ಕನ್ನಡ ಬೆಳೆಸುವುದು ವೈದ್ಯರುಗಳ ಕೆಲಸ ಎಂದು ಪ್ರಾಧಿಕಾರ ಹೇಳುವುದಾದರೆ, ಪ್ರಾಧಿಕಾರದಲ್ಲಿ ಕನ್ನಡ ಬೆಳೆಸುವ ಮತ್ತು ಉಳಿಸುವ ಯಾವುದೆ ಹೊಸ ಚಿಂತನೆ ಇಲ್ಲ ಎಂದರ್ಥ” ಎಂದು ಅವರು ಹೇಳಿದ್ದಾರೆ. ಕನ್ನಡದಲ್ಲಿ ಔ‍ಷಧ ಚೀಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕನ್ನಡ ಪ್ರಾಧಿಕಾರದ ಪ್ರಸ್ತಾಪದ ಬಗ್ಗೆ ನಾನುಗೌರಿ.ಕಾಮ್ ಜೊತೆಗೆ ಮಾತನಾಡಿದ ಡಾಕ್ಟರ್ ಶ್ರೀನಿವಾಸ ಕಕ್ಕಿಲ್ಲಾಯ ಅವರು, ಕನ್ನಡ ಬೆಳೆಸುವುದು ವೈದ್ಯರ ಕೆಲಸವಲ್ಲ ಎಂದು ಹೇಳಿದರು. “ನನಗೆ ಪ್ರೊಫೆಸರ್ ಬಿಳಿಮಲೆ ಮೇಲೆ ತುಂಬಾ ಗೌರವಿದೆ, ಅವರು ಮಾಡಿರುವ ಕೆಲಸಗಳ ಬಗ್ಗೆ ಹೆಮ್ಮೆಯಿದೆ. ಆದರೆ ಅವರ ಇಂತಹ ಸಲಹೆಗಳನ್ನು ನಾನು ಒಪ್ಪಬೇಕೆಂದಿಲ್ಲ. ಒಂದು ವೇಳೆ ಔ‍ಷಧಿ ಚೀಟಿಗಳನ್ನು ಕನ್ನಡದಲ್ಲಿ ಬರೆದರೆ ಅದು ಭಾರಿ ಗೊಂದಲಕ್ಕೆ ದಾರಿ ಮಾಡಿಕೊಡುತ್ತದೆ. ರೋಗಿಗಳಿಗೆ ಏನಾದರೂ ಹೆಚ್ಚು ಕಮ್ಮಿಯಾದರೆ, ಅದಕ್ಕೆ ಹೊಣೆ ಯಾರು” ಎಂದು ಕೇಳಿದರು.

“ಮೊದಲನೆಯದಾಗಿ ಈಗಾಗಲೆ ಲಕ್ಷಾಂತರ ಔಷಧಿ ಬ್ರಾಂಡ್‌ಗಳು ಮಾರುಕಟ್ಟೆಯಲ್ಲಿ ಇವೆ. ಔ‍ಷಧಗಳ ಹೆಸರಿನಲ್ಲಿ ಒಂದು ಅಕ್ಷರ ಬದಲಾದರೂ ಅದು ಬೇರೆಯೆ ಆಗಿಬಿಡುತ್ತದೆ. ಅಲ್ಲದೆ, ಕನ್ನಡದಲ್ಲಿ ಔಷದ ಬರೆದರೆ ಔಷಧ ಅಂಗಡಿಗಳಲ್ಲಿ ಔಷಧ ಕೊಡುವವರು ಕನ್ನಡಿಗರೆ ಆಗಿರುವುದಿಲ್ಲ. ಅದನ್ನು ಓದಲು ತಿಳಿಯದೆ ಮತ್ತೆ ನಮಗೆ ಕರೆ ಮಾಡಿ ಅದರ ಬಗ್ಗೆ ಕೇಳುತ್ತಾರೆ. ನಾವು ರೋಗಿಗಳನ್ನು ಬಿಟ್ಟು ಅವರಿಗೆ ಉತ್ತರಿಸುವುದೆ ಕೆಲಸ ಮಾಡಿಕೊಂಡಿರಲು ಸಾಧ್ಯವಿಲ್ಲ. ಕನ್ನಡ ಕಟ್ಟುವ ಕೆಲಸ ಎಂದರೆ ಇದಲ್ಲ” ಎಂದು ಅವರು ತಿಳಿಸಿದರು.

“ಜಗತ್ತುಈಗ ಕಿರಿದಾಗುತ್ತಿದೆ. ನಾವು ಆಧುನಿಕ ವೈದ್ಯರು ಜಗತ್ತಿನಾದ್ಯಂತ ವೈದ್ಯರು ಬರೆಯುವ ಹಾಗೆ ಔ‍ಷಧಿ ಚೀಟಿಯನ್ನು ಬರೆಯುತ್ತೇವೆ. ಮಂಗಳೂರಿನಲ್ಲಿ ಒಬ್ಬ ವೈದ್ಯ ಬರೆದ ಔ‍ಷಧ ಚೀಟಿ ಜಗತ್ತಿನ ಮತ್ತು ದೇಶದ ಬೇರೆ ವೈದ್ಯರಿಗೂ ಓದುವಂತೆ ಇದ್ದು ರೋಗಿಯ ಶುಶ್ರೂಷೆ ಮಾಡುವಂತೆ ಇರಬೇಕು. ಒಂದು ವೇಳೆ ನಾನು ಕನ್ನಡದಲ್ಲಿ ಔಷಧ ಚೀಟಿ ಬರೆದು ಕೊಟ್ಟ ರೋಗಿಯು ಕೇರಳದಲ್ಲಿ ಅನಾರೋಗ್ಯ ಪೀಡಿತನಾದರೆ, ಆತನಿಗೆ ಕನ್ನಡ ಬಾರದ ಮಲಯಾಳಂ ವೈದ್ಯರು ರೋಗ ನಿರ್ಣಯ ಮಾಡಿ ಹೇಗೆ ಚಿಕಿತ್ಸೆ ನೀಡುತ್ತಾರೆ?. ಔ‍ಷಧ ಚೀಟಿ ಎಂದರೆ ಕೇವಲ ಭಾಷೆಯ ಭಾವನಾತ್ಮಕ ವಿಚಾರ ಅಲ್ಲ, ಅದು ರೋಗಿಗಳ ರೋಗ ನಿರ್ಣಯದ ದಾಖಲೆ ಕೂಡಾ ಆಗಿದೆ” ಎಂದು ಅವರು ಹೇಳಿದರು.

ಇದನ್ನೂಓದಿ:ಪರಶುರಾಮ ಪ್ರತಿಮೆ | ಕಂಚಿಗೆ ಬದಲಾಗಿ ಹಿತ್ತಾಳೆ, ತಾಮ್ರ ಬಳಕೆ : ಜನರ ಹಣ ಲೂಟಿ ಹೊಡೆಯಲಾಗಿದೆ ಎಂದ ಹೈಕೋರ್ಟ್‌

“ಅಷ್ಟೆ ಅಲ್ಲದೆ, ವೈದ್ಯರು ಹೇಗೆ ಔ‍ಷಧ ಚೀಟಿ ಬರೆಯಬೇಕು ಎಂದು ನಮಗೆ ವೈದ್ಯ ಪರಿಷತ್ತು ಆದೇಶಿಸುತ್ತದೆ. ಅದನ್ನು ವೈದ್ಯರು ಪಾಲಿಸಬೇಕಿದೆ. ಅದು ಬಿಟ್ಟು ಕನ್ನಡ ಪ್ರಾಧಿಕಾರ ಇದನ್ನು ಹೇಳುವ ಹಾಗೆಯೆ ಇಲ್ಲ. ಇತ್ತಿಚೆಗೆ ಆರೋಗ್ಯ ಸಚಿವರು ಕೂಡಾ ಇದನ್ನೇ ಹೇಳಿದ್ದಾರೆ. ಭಾಷೆ ತಳಮಟ್ಟದಿಂದ ಬೆಳೆಯುವುದಕ್ಕೆ ವೈದ್ಯರು ಆಯಾ ಭಾಷೆಗಳಲ್ಲಿ ಚೀಟಿ ಬರೆಯುವುದೇ ಮುಖ್ಯ ಕಾರಣ ಎಂದಾದರೆ ಅಭಿವೃದ್ಧಿ ಪ್ರಾಧಿಕಾರವು ಕೂಡ ಬೇಕಾಗಿಲ್ಲ ಅಲ್ಲವೆ. ಭಾಷೆ ಬೆಳೆಸುವ ಜವಾಬ್ದಾರಿಯನ್ನೂ ವೈದ್ಯರುಗಳಿಗೆ ಚೀಟಿ ಬರೆಯಲು ವಹಿಸಿಕೊಟ್ಟರಾಯಿತು” ಎಂದು ಅವರು ಹೇಳಿದರು.

“ಕನ್ನಡ ಬೆಳೆಯಬೇಕು, ಬೆಳೆಸಬೇಕು ಎಂಬ ಬಿಳಿಮಲೆ ಅವರ ಚಿಂತನೆಯ ಬಗ್ಗೆ ನನಗೆ ಸಮ್ಮತಿಯಿದೆ. ನಾನು ಅದರ ವಿರೋಧಿಯು ಅಲ್ಲ. ಆದರೆ ಅದನ್ನು ವೈದ್ಯರ ಮೇಲೆ ಹಾಕುವುದು ಸರಿಯಲ್ಲ. ಅದಕ್ಕಾಗಿ ಬೇರೆ ದಾರಿಯನ್ನು ಕನ್ನಡ ಪ್ರಾಧಿಕಾರ ಹುಡುಕಬೇಕು. ಈ ರಾಜ್ಯಕ್ಕೆ ಬಂದು ವೈದ್ಯಕೀಯ ಶಾಸ್ತ್ರ ಕಲಿಯುವ ಬೇರೆ ರಾಜ್ಯದ ವಿದ್ಯಾರ್ಥಿಗಳಿಗೆ ಕನ್ನಡ ಕಲಿಸುವ ಬಗ್ಗೆ ಪ್ರಾಧಿಕಾರ ಚಿಂತಿಸಲಿ. ಪ್ರೊಫೆಸರ್ ಬಿಳಿಮಲೆ ಅವರಲ್ಲಿ ಕನ್ನಡ ಕಲಿಸುವ ಇಂತಹ ಹಲವು ಮಾದರಿಗಳು ಇವೆ. ಇದರಲ್ಲಿ ಅವರು ತಜ್ಞರು ಕೂಡಾ ಆಗಿದ್ದಾರೆ” ಎಂದು ತಿಳಿಸಿದರು.

“ಬೇರೆ ರಾಜ್ಯದ ವಿದ್ಯಾರ್ಥಿಗಳು ಕನ್ನಡ ಕಲಿತು ರೋಗಿಗಳೊಂದಿಗೆ ಸಂವಹನ ನಡೆಸಿದರೆ ಅದು ಕನ್ನಡ ಕಟ್ಟುವ ಕೆಲಸ ಆಗಲಿದೆ. ಜೊತೆಗೆ ಕನ್ನಡದ ರೋಗಿಗಳಿಗೆ ಇದರಿಂದ ಲಾಭವೂ ಆಗಲಿದೆ. ಅಷ್ಟೆ ಅಲ್ಲದೆ, ವೈದ್ಯಕೀಯ ಸಾಹಿತ್ಯ ಬರೆಯುವರಿಗೆ ಪ್ರಾಧಿಕಾರ ಪ್ರೋತ್ಸಾಹ ನೀಡಿ ಅವರನ್ನು ಬೆಳೆಸಬೇಕಿದೆ. ಜೊತೆಗೆ ವೈದ್ಯಕೀಯ ಭಾಷೆಯಲ್ಲಿ ಇರುವ ಹಲವು ಪದಗಳನ್ನು ಕನ್ನಡೀಕರಣ ಮಾಡುವಲ್ಲಿ ಮತ್ತು ಅದನ್ನು ಕನ್ನಡಿಗರಿಗೆ ತಲುಪಿಸುವಲ್ಲಿ ಕೆಲಸವನ್ನು ಮಾಡಬೇಕಿದೆ. ಅದು ಬಿಟ್ಟು ವೈದ್ಯರ ಮೇಲೆ ಕನ್ನಡ ಉಳಿಸುವ ಭಾರ ಹಾಕುವುದು ಸರಿಯಲ್ಲ” ಎಂದು ಡಾಕ್ಟರ್ ಶ್ರೀನಿವಾಸ ಕಕ್ಕಿಲ್ಲಾಯ ಹೇಳಿದರು.

ವಿಡಿಯೊ ನೋಡಿ: ರಾಜ್ಯಗಳ ಅಸ್ಮಿತೆ ಹಕ್ಕು ಮತ್ತು ಪಾಲಿನ ರಕ್ಷಣೆಗಾಗಿ ರಾಷ್ಟ್ರೀಯ ಅಭಿಯಾನ ಚಾಲನಾ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...