Homeಮುಖಪುಟ೫೦:೫೦ ಸಮಾನ ಅಧಿಕಾರ ಹಂಚಿಕೆಗೆ ಶಿವಸೇನೆ ಪಟ್ಟು: ಸಿಎಂ ಹುದ್ದೆ ಮೇಲೆ ಕಣ್ಣು..!

೫೦:೫೦ ಸಮಾನ ಅಧಿಕಾರ ಹಂಚಿಕೆಗೆ ಶಿವಸೇನೆ ಪಟ್ಟು: ಸಿಎಂ ಹುದ್ದೆ ಮೇಲೆ ಕಣ್ಣು..!

- Advertisement -
- Advertisement -

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಫಲಿತಾಂಶ ಎಲ್ಲರ ಹುಬ್ಬೇರುವಂತೆ ಮಾಡಿದೆ. ಒಟ್ಟು ೨೮೮ ಸ್ಥಾನ ಹೊಂದಿರುವ ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಶಿವಸೇನೆ ಹಾಗೂ ಇತರೆ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡಿತ್ತು. ಮಹಾಘಟಬಂಧನ್‌ ೧೫೮ ಕ್ಷೇತ್ರಗಳನ್ನು ಬಾಚಿಕೊಂಡಿದೆ. ಇತ್ತ ಕಾಂಗ್ರೆಸ್‌ ಮತ್ತು ಎನ್‌ಸಿಪಿ ಮೈತ್ರಿ ೧೦೦ ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಇತರೆ -೩೦ ಸ್ಥಾನ ಗೆದ್ದು ಶಕ್ತಿ ಪ್ರದರ್ಶನ ಮಾಡಿದ್ದಾರೆ.

ಈಗ ಮಹಾರಾಷ್ಟ್ರದಲ್ಲಿ ಸಿಎಂ ಸ್ಥಾನ ಯಾವ ಪಕ್ಷಕ್ಕೆ ಹೋಗಲಿದೆ ಎಂಬ ಲೆಕ್ಕಾಚಾರ ಹಾಕಲಾಗುತ್ತಿದೆ. ಶಿವಸೇನೆ ಮಾತ್ರ ಚುನಾವಣೆ ಪೂರ್ವದಲ್ಲಿ ಮಾಡಿಕೊಂಡ ಮೈತ್ರಿಗೆ ಬದ್ಧರಾಗಿದ್ದು, ೫೦-೫೦ ಸಮಾನ ಅಧಿಕಾರ ಹಂಚಿಕೆಗೆ ಪಟ್ಟು ಹಿಡಿದಿದೆ. ಉಪಮುಖ್ಯಮಂತ್ರಿ ಸ್ಥಾನವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ, ಮೈತ್ರಿಯ ನಿಯಮ ಮತ್ತು ರೂಪುರೇಷೆಗಳನ್ನು ನಾವೇ ನಿರ್ಧರಿಸುತ್ತೇವೆಂದು ಕಡ್ಡಿ ತುಂಡಾದಂತೆ ಹೇಳಿದೆ. ಈಗ ಮಹಾರಾಷ್ಟ್ರದಲ್ಲಿ ಸಿಎಂ ಗದ್ದುಗೆ ಯಾವ ಪಕ್ಷಕ್ಕೆ ಹೋಗಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಬಿಜೆಪಿ ಮತ್ತು ಶಿವಸೇನೆ ಮಹಾಮೈತ್ರಿ ಬಹುಮತ ಗಳಿಸುತ್ತಿದ್ದಂತೆ ಸಿಎಂ ಹುದ್ದೆಯ ಚರ್ಚೆ ಮುನ್ನೆಲೆಗೆ ಬಂದಿದೆ. ಅಧಿಕಾರದ ಸಮಾನ ಹಂಚಿಕೆಯಾಗಬೇಕು ಎಂಬ ಒತ್ತಾಯ ಕೇಳಿ ಬರುತ್ತಿದೆ. ಶಿವಸೇನೆಯ ಹಿರಿಯ ನಾಯಕ ಸಂಜಯ್‌ ರಾವತ್ ಮಾತನಾಡಿ, ಚುನಾವಣೆಗೆ ಮೊದಲು ಮಾಡಿಕೊಂಡಿದ್ದ ಮೈತ್ರಿಯಂತೆಯೇ ಸಾಗುತ್ತೇವೆ. ಸರ್ಕಾರದಲ್ಲಿ ಸಮಪಾಲು ಕೋರಿದ್ದೆವು. ಈಗ ೫೦:೫೦ ಸೂತ್ರದಂತೆ ಸರ್ಕಾರ ರಚನೆ ಆಗುತ್ತದೆ. ಪಕ್ಷದ ಸಾಧನೆ ತೆಗೆದು ಹಾಕುವಂಥದ್ದಲ್ಲ. ಮುಖ್ಯಸ್ಥ ಉದ್ಧವ್‌ ಠಾಕ್ರೆ ಅವರನ್ನು ಭೇಟಿಯಾಗಿ ಚರ್ಚಿಸುವುದಾಗಿ ತಿಳಿಸಿದರು.

ಈ ಮಧ್ಯೆ ಲೋಕಸಭೆ ಮಾಜಿ ಸ್ಪೀಕರ್‌ ಡಾ.ಮನೋಹರ್‌ ಜೋಶಿ ಪ್ರತಿಕ್ರಿಯಿಸಿ, ಮಹಾರಾಷ್ಟ್ರದ ಮುಂದಿನ ಸಿಎಂ ಹುದ್ದೆ ಶಿವಸೇನೆಗೆ ಸಿಗಲಿದೆ ಎಂದಿದ್ದಾರೆ. ಅಲ್ಲದೇ ಕಳೆದ ೨೦೧೪ರ ಚುನಾವಣೆಯಲ್ಲಿ ೧೨೨ ಸ್ಥಾನಗಳಲ್ಲಿ ಜಯಗಳಿಸಿದ್ದ ಬಿಜೆಪಿ, ಈ ಬಾರಿ ೧೦೨ ಸ್ಥಾನಗಳಲ್ಲಿ ವಿಜಯಿಯಾಗಿದೆ. ಇನ್ನು ಶಿವಸೇನೆ ೫೬ ಸ್ಥಾನಗಳಲ್ಲಿ ಗೆದ್ದಿದ್ದು, ಠಾಕ್ರೆ ಕುಟುಂಬದ ಕುಡಿಯನ್ನು ಸಿಎಂ ಮಾಡುತ್ತಾರೆ ಎಂಬ ಮಾತುಗಳೂ ಕೇಳಿ ಬರುತ್ತಿವೆ.

ಇನ್ನು ಕಾಂಗ್ರೆಸ್‌ ಮತ್ತು ಎನ್‌ಸಿಪಿ ಮೈತ್ರಿ ೧೦೦ ಸ್ಥಾನ ಗೆದ್ದಿದೆ. ಒಟ್ಟಿನಲ್ಲಿ ೨೦೧೪ರಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿದ್ದ ಬಿಜೆಪಿ ಮತ್ತು ಶಿವಸೇನೆ, ಈ ಬಾರಿ ಮೈತ್ರಿ ಮೂಲಕ ಚುನಾವಣೆ ಎದುರಿಸಿದರೂ ನಿರೀಕ್ಷಿತ ಫಲಿತಾಂಶ ಸಿಕ್ಕಿಲ್ಲ. ಈ ಬಾರಿ ಬಿಜೆಪಿ ೧೬೪, ಶಿವಸೇನೆ ೧೨೬, ಕಾಂಗ್ರೆಸ್ ೧೪೭, ಎನ್‌ಸಿಪಿ ೧೨೧ ಸ್ಥಾನಗಳಲ್ಲಿ ಸ್ಪರ್ಧಿಸಿದ್ದವು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...