Homeಮುಖಪುಟಆಗ್ರಾದಲ್ಲಿ ನಿರಂತರ ಮಳೆ | ತಾಜ್ ಮಹಲ್ ಮುಖ್ಯ ಗುಮ್ಮಟದಲ್ಲಿ ನೀರು ಸೋರಿಕೆ!

ಆಗ್ರಾದಲ್ಲಿ ನಿರಂತರ ಮಳೆ | ತಾಜ್ ಮಹಲ್ ಮುಖ್ಯ ಗುಮ್ಮಟದಲ್ಲಿ ನೀರು ಸೋರಿಕೆ!

- Advertisement -
- Advertisement -

ಕಳೆದ ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಆಗ್ರಾದ ತಾಜ್ ಮಹಲ್ ಮುಖ್ಯ ಗುಮ್ಮಟ ನೀರು ಸೋರಿಕೆಯಾಗಿದ್ದು, ಆವರಣದಲ್ಲಿರುವ ಉದ್ಯಾನಕ್ಕೆ ನೀರು ನುಗ್ಗಿದೆ. ಗುರುವಾರ ತಾಜ್‌ಮಹಲ್ ಆವರಣದಲ್ಲಿರುವ ಉದ್ಯಾನ ಮುಳುಗಡೆ ಆಗಿರುವ ವಿಡಿಯೋ ವೈರಲ್ ಆಗಿತ್ತು. ಮುಖ್ಯ ಗುಮ್ಮಟದಲ್ಲಿ ಸೋರಿಕೆಯಾಗಿದೆಯಾದರೂ, ಅದಕ್ಕೆ ಯಾವುದೇ ಹಾನಿಯಾಗಿಲ್ಲ ಎಂದು ಆಗ್ರಾ ವೃತ್ತದ ಭಾರತೀಯ ಪುರಾತತ್ವ ಸರ್ವೇಕ್ಷಣೆಯ (ಎಎಸ್‌ಐ) ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಗುರುವಾರ ಸಂಜೆ ಹೊರಹೊಮ್ಮಿದ 20 ಸೆಕೆಂಡ್‌ಗಳ ವೀಡಿಯೊವು ಇಂಟರ್‌ನೆಟ್‌ನಲ್ಲಿ ವೈರಲ್ ಆಗಿದ್ದು, ಇದರಲ್ಲಿ ಸ್ಮಾರಕದ ಉದ್ಯಾನವೊಂದು ಮಳೆ ನೀರಿನಿಂದ ಮುಳುಗಿದ್ದು ದಾಖಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ತಾಜ್ ಮಹಲ್ ಮುಖ್ಯ ಗುಮ್ಮಟದಲ್ಲಿನ ಸೋರಿಕೆ ಕುರಿತು ಮಾತನಾಡಿದ ಆಗ್ರಾ ವೃತ್ತದ ಭಾರತೀಯ ಪುರಾತತ್ವ ಸರ್ವೇಕ್ಷಣೆಯ (ಎಎಸ್‌ಐ) ಅಧೀಕ್ಷಕ ಮುಖ್ಯಸ್ಥ ರಾಜ್‌ಕುಮಾರ್ ಪಟೇಲ್, “ಹೌದು, ತಾಜ್ ಮಹಲ್‌ನ ಮುಖ್ಯ ಗುಮ್ಮಟದಲ್ಲಿ ಸೋರಿಕೆಯಾಗಿರುವುದನ್ನು ನಾವು ನೋಡಿದ್ದೇವೆ. ಅದರ ನಂತರ ನಾವು ಪರಿಶೀಲಿಸಿದಾಗ ಸೋರಿಕೆಯಿಂದಾಗಿ ಮುಖ್ಯ ಗುಮ್ಮಟಕ್ಕೆ ಯಾವುದೇ ಹಾನಿಯಾಗಿಲ್ಲ. ನಾವು ಡ್ರೋನ್ ಕ್ಯಾಮೆರಾ ಮೂಲಕ ಮುಖ್ಯ ಗುಮ್ಮಟವನ್ನು ಪರಿಶೀಲಿಸಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂಓದಿ: ಬಿರಿಯಾನಿ ತಂದ ವಿದ್ಯಾರ್ಥಿಯ ಅಮಾನತು ಪ್ರಕರಣ | ಮಕ್ಕಳ ಹಕ್ಕುಗಳ ಆಯೋಗದಿಂದ ತನಿಖೆಗೆ ಆದೇಶ

ವಿಡಿಯೊ ಪ್ರವಾಸಿಗರ ಗಮನ ಸೆಳೆದಿದ್ದು, ಹಾಗಾಗಿ ಹಲವಾರು ಜನರು ತಾಜ್ ಮಹಲ್‌ಗೆ ಭೇಟಿ ನೀಡಿ, ಅದರ ವೀಡಿಯೊವನ್ನು ಚಿತ್ರೀಕರಿಸಿದ್ದಾರೆ. ಸರ್ಕಾರಿ ಅನುಮೋದಿತ ಪ್ರವಾಸಿ ಮಾರ್ಗದರ್ಶಿಯಾಗಿ ಕೆಲಸ ಮಾಡುತ್ತಿರುವ ಸ್ಥಳೀಯ ನಿವಾಸಿಯೊಬ್ಬರು, “ಸ್ಮಾರಕವನ್ನು ಸರಿಯಾದ ಕಾಳಜಿ ವಹಿಸಿ ನಿರ್ವಹಿಸಬೇಕು. ಏಕೆಂದರೆ ಪ್ರವಾಸೋದ್ಯಮ ಉದ್ಯಮದ ಜನರಿಗೆ ಇದು ಏಕೈಕ ಭರವಸೆಯಾಗಿದೆ” ಎಂದು ಹೇಳಿದರು.

ತಾಜ್ ಮಹಲ್ ಆಗ್ರಾ ಮತ್ತು ಇಡೀ ರಾಷ್ಟ್ರದ ಹೆಮ್ಮೆಯಾಗಿದೆ, ಇದು ನೂರಾರು ಸ್ಥಳೀಯರಿಗೆ ಮತ್ತು ಪ್ರವಾಸೋದ್ಯಮ ಉದ್ಯಮದಲ್ಲಿ ಕೆಲಸ ಮಾಡುವವರಿಗೆ ಉದ್ಯೋಗವನ್ನು ನೀಡುತ್ತದೆ ಎಂದು ಸರ್ಕಾರದ ಅನುಮೋದಿತ ಪ್ರವಾಸಿ ಮಾರ್ಗದರ್ಶಿ ಮೋನಿಕಾ ಶರ್ಮಾ ಹೇಳಿದ್ದಾರೆ.

ಆಗ್ರಾದಲ್ಲಿ ಕಳೆದ ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ನಗರದ ಬಹುತೇಕ ಭಾಗಗಳಲ್ಲಿ ನೀರಿನ ಸಮಸ್ಯೆ ಕಾಣಿಸಿಕೊಂಡಿದೆ. ರಾಷ್ಟ್ರೀಯ ಹೆದ್ದಾರಿಯೊಂದು ಮಳೆ ನೀರಿನಿಂದ ಕೊಚ್ಚಿ ಹೋಗಿದ್ದು, ಮಳೆ ನೀರಿನಿಂದ ಬೆಳೆಗಳು ಮುಳುಗಡೆಯಾಗಿದ್ದು, ನಿರಂತರ ಮಳೆಯಿಂದಾಗಿ ನಗರದ ಐಷಾರಾಮಿ ಪ್ರದೇಶಗಳು ನೀರು ನುಗ್ಗಿವೆ ಎಂದು ವರದಿಯಾಗಿದೆ. ಮಳೆಯಿಂದಾಗಿ ಎಲ್ಲಾ ಶಾಲೆಗಳನ್ನು ಮುಚ್ಚುವಂತೆ ಆಗ್ರಾ ಆಡಳಿತ ಆದೇಶಿಸಿದೆ.

ವಿಡಿಯೊನೋಡಿ: ರಾಜ್ಯಗಳ ಅಸ್ಮಿತೆ ಹಕ್ಕು ಮತ್ತು ಪಾಲಿನ ರಕ್ಷಣೆಗಾಗಿ ರಾಷ್ಟ್ರೀಯ ಅಭಿಯಾನ ಚಾಲನಾ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...