Homeಕರ್ನಾಟಕ'ಒಕ್ಕೂಟ ಉಳಿಸಿ ಆಂದೋಲನ' ಆರಂಭ : ಹಲವು ನಿರ್ಣಯಗಳ ಅಂಗೀಕಾರ

‘ಒಕ್ಕೂಟ ಉಳಿಸಿ ಆಂದೋಲನ’ ಆರಂಭ : ಹಲವು ನಿರ್ಣಯಗಳ ಅಂಗೀಕಾರ

- Advertisement -
- Advertisement -

ರಾಜ್ಯಗಳ ಮೇಲಿನ ದಾಳಿಗೆ ಜನಪ್ರತಿರೋಧವನ್ನು ದಾಖಲಿಸುವ ಸಲುವಾಗಿ ಇಂದು (ಸೆ.14) ‘ಒಕ್ಕೂಟ ಉಳಿಸಿ ಆಂದೋಲನ’ದ ಚಾಲನಾ ಸಭೆ ನಡೆಯಿತು.

ಬೆಂಗಳೂರಿನ ಕೆ.ಆರ್ ವೃತ್ತದ ಬಳಿಯ ಯುವಿಸಿಇ ಅಲುಮ್ನಿ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತದ ಒಕ್ಕೂಟ ಸರ್ಕಾರವು ಎಲ್ಲಾ ರಾಜ್ಯಗಳ ಹಕ್ಕುಗಳು ಮತ್ತು ಅಸ್ಮಿತೆಯ ಮೇಲೆ ಬಹುಮುಖಿ ದಾಳಿಯನ್ನು ನಡೆಸುತ್ತಿರುವುದು, ಕರ್ನಾಟಕವೂ ಸೇರಿದಂತೆ ಹಲವು ರಾಜ್ಯಗಳ ಸಂಪನ್ಮೂಲಗಳನ್ನು ಬಸಿಯುತ್ತಿರುವುದು, ರಾಜ್ಯಗಳ ಪಾಲನ್ನು ಕೊಡದೆ ವಂಚಿಸುತ್ತಿರುವುದು, ನಮ್ಮ ಭಾಷೆ ಮತ್ತು ಸಂಸ್ಕೃತಿಗಳನ್ನು ಮೂಲೆಗೊತ್ತುತ್ತಿರುವುದರ ಕುರಿತು ಚರ್ಚಿಸಲಾಯಿತು ಮತ್ತು ಅದರ ವಿರುದ್ಧ ನಿರ್ಣಾಯಕವಾದ ಆಂದೋಲನವನ್ನು ರೂಪಿಸಲು ದೃಢ ನಿಶ್ಚಯ ಮಾಡಿದೆ ಎಂದು ಸಭೆ ಸರ್ವಾನುಮತದಿಂದ ಘೋಷಿಸಿತು.

ರಾಜ್ಯ ಪಟ್ಟಿಯಲ್ಲಿರುವ ವಿಷಯಗಳ ಕುರಿತು ಒಕ್ಕೂಟ ಸರ್ಕಾರವೇ ಜನ ವಿರೋಧಿ ರೀತಿಯಲ್ಲಿ ಶಾಸನಗಳನ್ನು ರೂಪಿಸುವುದು, ಅವನ್ನು ಜಾರಿಗೊಳಿಸಲೇಬೇಕು ಎಂದು ಒತ್ತಡ ಹಾಕುವುದು, ಇಲ್ಲವಾದರೆ ಅನುದಾನ ನೀಡುವುದಿಲ್ಲ ಎಂದು ಬೆದರಿಕೆ ಹಾಕುವುದು ಮೊದಲಾದ ಅಸಂವಿಧನಾತ್ಮಕ ನಡತೆಯನ್ನು ಒಕ್ಕೂಟ ಸರ್ಕಾರ ಪ್ರದರ್ಶಿಸುತ್ತಿದೆ. ಇದು ಒಕ್ಕೂಟ ತತ್ವದ ಮೇಲೆ ನಡೆಸುತ್ತಿರುವ ಅಪಚಾರವಾಗಿದೆ. ವಿರೋಧ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳಿಗೆ ಕಡಿಮೆ ಅನುದಾನ ನೀಡುವುದು, ಜಿಎಸ್‌ ಟಿ ಮೂಲಕ ರಾಜ್ಯಗಳ ಸಂಪನ್ಮೂಲಗಳನ್ನೆಲ್ಲಾ ತಾನೇ ಬಾಚಿಕೊಂಡು ರಾಜ್ಯಗಳಿಗೆ ಕನಿಷ್ಟ ಅರ್ಧಪಾಲನ್ನೂ ಸಹ ನೀಡದಿರುವುದು, ಬೆಲೆ ಏರಿಕೆಗೆ ಕಾರಣವಾಗುವ ರೀತಿಯಲ್ಲಿ ಸೆಸ್‌ ಮತ್ತು ಸರ್‌ ಚಾರ್ಜ್‌ ಹೆಚ್ಚಿಸುತ್ತಾ, ಅದರಲ್ಲಿ ರಾಜ್ಯಗಳಿಗೆ ಎಳ್ಳಷ್ಟು ಪಾಲನ್ನೂ ನೀಡದೆ ತಾನೇ ಕಬಳಿಸುವುದು, ಇವೆಲ್ಲವೂ ವಿತ್ತೀಯ ಕೇಂದ್ರೀಕರಣದ ಅಕ್ರಮ ಮಾರ್ಗಗಳಾಗಿವೆ. ಇಂತಹ ವಿವಿಧ ಕ್ರಮಗಳಿಗೆ ನಮ್ಮ ಪ್ರತಿರೋಧ ಇದ್ದೇ ಇರುತ್ತದೆ‌ ಎಂದು ಸಭೆ ನಿರ್ಣಯಿಸಿತು.

200 ವರ್ಷಗಳ ವೀರೋಚಿತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಲಕ್ಷಾಂತರ ಜನರ ಬಲಿದಾನದ ಮುಖಾಂತರ ವಸಾಹತುಶಾಹಿಗಳ ವಿರುದ್ಧದ ಆಂದೋಲನದಲ್ಲಿ ಒಂದುಗೂಡಿದ ಈ ದೇಶದ ಶಕ್ತಿ ಇದರ ವೈವಿಧ್ಯತೆಯಾಗಿದೆ. ಇಂತಹ ವಿಶಿಷ್ಟ ದೇಶ ಈ ಪ್ರಪಂಚದಲ್ಲಿ ಇನ್ನೊಂದಿಲ್ಲ. ಈ ವಿಶಿಷ್ಟತೆಯನ್ನು ನಾಶ ಮಾಡಿ ಇದನ್ನು ದುರ್ಬಲಗೊಳಿಸುವ ಒಂದು ಭಾಷೆ, ಒಂದು ಸಂಸ್ಕೃತಿ, ಒಂದು ಧರ್ಮ, ಒಂದು ರಾಜಕೀಯ ಪಕ್ಷ, ಒಬ್ಬ ನಾಯಕ, ಒಂದು ಚಿಂತನೆ ಎಂಬ ಸಿದ್ಧಾಂತವನ್ನು ನಾವು ವಿರೋಧಿಸುತ್ತೇವೆ. ಅದೇ ರೀತಿ, ಒಂದು ತೆರಿಗೆ, ಒಂದು ಮಾರುಕಟ್ಟೆ, ಒಮ್ಮೆಗೇ ಚುನಾವಣೆಯಂತಹ ಕ್ರಮಗಳೂ ಸಹಾ ದುರುದ್ದೇಶದಿಂದ ಕೂಡಿದೆ. ಈ ನಿಟ್ಟಿನಲ್ಲಿ ಇದುವರೆಗೆ ತೆಗೆದುಕೊಳ್ಳಲಾಗಿರುವ ಕ್ರಮಗಳನ್ನು ಹಿಂತೆಗೆದುಕೊಳ್ಳಬೇಕೆಂದು ನಾವು ಆಗ್ರಹಿಸುತ್ತೇವೆ ಮತ್ತು ಮುಂದಿನ ದಿನಗಳಲ್ಲಿ ಅಂತಹ ಕ್ರಮಗಳನ್ನು ತೆಗೆದುಕೊಂಡರೆ ಯಾವುದೇ ಬೆಲೆ ತೆತ್ತಾದರೂ ಅದನ್ನು ತಡೆಯುತ್ತೇವೆ ಎಂಬ ದೃಢ ‌ನಿಶ್ಚಯವನ್ನು ಸಭೆಯಲ್ಲಿ ಕೈಗೊಳ್ಳಲಾಯಿತು.

ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳು ಹೀಗಿವೆ..

ಕೇಂದ್ರೀಯ ಏಜೆನ್ಸಿಗಳಾದ ಸಿಬಿಐ, ಐಟಿ, ಇಡಿ ಇತ್ಯಾದಿಗಳನ್ನೂ, ರಾಜ್ಯಪಾಲರ ಕಚೇರಿಯೂ ಸೇರಿದಂತೆ ವಿವಿಧ ಸ್ವಾಯತ್ತ ಸಾಂವಿಧಾನಿಕ ಸಂಸ್ಥೆಗಳನ್ನೂ ಒಕ್ಕೂಟ ಸರ್ಕಾರವು ತನ್ನ ಖಾಸಗಿ ಏಜೆನ್ಸಿಗಳಂತೆ ಬಳಸಿಕೊಳ್ಳುತ್ತಿದೆ. ತನ್ನ ವಿರೋಧಿಗಳನ್ನು ಅಕ್ರಮವಾಗಿ ಬಗ್ಗುಬಡಿಯಲು, ತನ್ನ ಜೊತೆಗಿರುವವರನ್ನು ರಕ್ಷಿಸಲು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಈ ಹುನ್ನಾರವು ದೇಶದ ಜನರಿಗೆ ಸ್ಪಷ್ಟವಾಗಿ ಕಂಡಿದ್ದು, ಸಾಂವಿಧಾನಿಕ ಸಂಸ್ಥೆಗಳ ಸ್ವಾಯತ್ತತೆಯನ್ನು ಕಾಪಾಡಲು ಮತ್ತು ದೇಶದಲ್ಲಿ ಭ್ರಷ್ಟಾಚಾರ ಹಾಗೂ ವಿವಿಧ ಅಕ್ರಮಗಳ ನಿಷ್ಪಕ್ಷಪಾತ ತನಿಖೆ ನಡೆಯುವಂತಾಗಲು ಬೇಕಾದ ಎಲ್ಲಾ ಪ್ರಯತ್ನಗಳನ್ನು ನಾವು ಮಾಡುತ್ತೇವೆ.

ಕೇಂದ್ರೀಕರಣದ ಪ್ರಯತ್ನಗಳನ್ನು ಹಿಂದೆ ಕಾಂಗ್ರೆಸ್‌ ಸೇರಿದಂತೆ ಹಲವು ರಾಜಕೀಯ ಪಕ್ಷಗಳ ಆಡಳಿತದ ಸಂದರ್ಭದಲ್ಲಿ ಮಾಡಲಾಗಿದೆ; ಅವೆಲ್ಲವನ್ನೂ ನಾವು ನೆನಪಿನಲ್ಲಿಟ್ಟಿದ್ದೇವೆ. ಆದರೆ, 2014ರಿಂದ ಈಚೆಗೆ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಪಕ್ಷವು ಕೇಂದ್ರೀಕರಣವನ್ನು ತೀವ್ರಗೊಳಿಸಿದ್ದಲ್ಲದೇ ಎಲ್ಲಾ ಮೇರೆಗಳನ್ನು ದಾಟಿ ನಿರ್ಲಜ್ಜವಾಗಿ ಮುಂದುವರೆದಿದೆ. ಇದನ್ನು ಎದುರಿಸಿ ನಿಲ್ಲಲು, ದೇಶದ ಎಲ್ಲಾ ರಾಜ್ಯಗಳ ಪ್ರಜಾತಂತ್ರವಾದಿ ಜನತೆ, ರಾಜಕೀಯ ಪಕ್ಷಗಳು, ವಿಶೇಷವಾಗಿ ವಿದ್ಯಾರ್ಥಿ ಯುವ ಜನರನ್ನು ಒಳಗೊಂಡು ರಾಷ್ಟ್ರೀಯ ಅಭಿಯಾನವನ್ನು ರೂಪಿಸಲು ಈ ಸಭೆ ನಿರ್ಣಯಿಸುತ್ತಿದೆ.

‘ಒಕ್ಕೂಟ’ ಸರ್ಕಾರದ ಒಕ್ಕೂಟ ತತ್ವ ವಿರೋಧಿ ನೀತಿಯ ಕುರಿತು, ಅದರ ಪರಿಣಾಮಗಳ ಕುರಿತು ಅರಿವು ಮೂಡಿಸಲು ಮುಂದಿನ ಒಂದು ತಿಂಗಳಲ್ಲಿ ಎಲ್ಲಾ ಜಿಲ್ಲೆಗಳಲ್ಲೂ ಜಾಗೃತಿ ಸಭೆಗಳನ್ನು ನಡೆಸುವುದು.

ನವೆಂಬರ್‌ ತಿಂಗಳಿನಲ್ಲಿ ಈ ವಿಚಾರವನ್ನೇ ಕೇಂದ್ರಬಿಂದುವಾಗಿಟ್ಟುಕೊಂಡು ಬೃಹತ್‌ ಸಮಾವೇಶವನ್ನು ಸಂಘಟಿಸುವುದು.

ವಿವಿಧ ರಾಜ್ಯಗಳ ಸಮಾನ ಮನಸ್ಕರನ್ನು ಸಂಪರ್ಕಿಸಿ ದೇಶ ಮಟ್ಟದಲ್ಲಿ ಕೇಂದ್ರದ ರಾಜ್ಯ ವಿರೋಧಿ ಧೋರಣೆ ವಿರುದ್ಧ ದನಿ ಎತ್ತಲು ದೆಹಲಿಯಲ್ಲಿ ಅಖಿಲ ಭಾರತ ಮಟ್ಟದ ಪ್ರತಿಭಟನಾ ಸಭೆಯೊಂದನ್ನು ಆಯೋಜಿಸುವುದು.

ರಾಜ್ಯದ ಅಸ್ಮಿತೆ, ಹಕ್ಕು ಹಾಗೂ ಪಾಲಿನ ರಕ್ಷಣೆಗಾಗಿ ರಾಜ್ಯ ಸರ್ಕಾರವೂ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿ ರಾಜ್ಯವ್ಯಾಪಿಯಾಗಿ ಹಕ್ಕೊತ್ತಾಯ ಸಲ್ಲಿಸುವುದು.

ಇದೇ ಸಂದರ್ಭದಲ್ಲಿ ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್‌ ಅವರ ಬಿಡುಗಡೆಗೆ ಸಭೆ ಆಗ್ರಹಿಸಿತು. ದೆಹಲಿ ದಂಗೆಗಳಿಗೆ ಕಾರಣ ಎಂಬ ಆಧಾರ ರಹಿತ ಸುಳ್ಳು ಆರೋಪದ ಮೇಲೆ ಖಾಲಿದ್ ಅವರನ್ನು ಬಂಧಿಸಿ ಇಂದಿಗೆ 4 ವರ್ಷಗಳಾಗುತ್ತಿವೆ. ವಿನಾಕಾರಣ ಬೇಲ್‌ ಸಹ ನೀಡದೆ ಕೊಳೆಸುತ್ತಿರುವುದಲ್ಲದೆ, ಕನಿಷ್ಟ ವಿಚಾರಣೆಯನ್ನೂ ಪ್ರಾರಂಭಿಸದೆ ಅವರ ಪ್ರಜಾತಾಂತ್ರಿಕ ಹಕ್ಕನ್ನು ದಮನ ಮಾಡಲಾಗುತ್ತಿದೆ. ಈ ಸಂಚಿನಲ್ಲಿ ಒಕ್ಕೂಟ ಸರ್ಕಾರದ ಗೃಹ ಮಂತ್ರಾಲಯವು ನೇರವಾಗಿ ಭಾಗಿಯಾಗಿದೆ. ಅನ್ಯಾಯಗಳ ವಿರುದ್ಧ ದನಿ ಎತ್ತಿದವರನ್ನು ಈ ರೀತಿ ದಮನ ಮಾಡುವುದನ್ನು ಈ ಸಭೆ ತೀವ್ರವಾಗಿ ಖಂಡಿಸುತ್ತದೆ. ಉಮರ್‌ ಖಾಲಿದ್‌ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಸಭೆ ಒತ್ತಾಯಿಸಿದೆ.

ನ್ಯಾಯಮೂರ್ತಿ ಗೋಪಾಲಗೌಡ ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಶಿವರಾಯಪ್ಪ
ಜೋಗಿನ ಪ್ರಸ್ತಾವನೆ ಮಂಡಿಸಿದರು. ಜೆ.ಎಂ ವೀರಸಂಗಯ್ಯ ಸಭೆಯ ನಿರ್ವಹಣೆ ಮಾಡಿದರು. ಬಿ.ಟಿ ಲಲಿತಾ ನಾಯಕ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಎ.ನಾರಾಯಣ ಹಾಗೂ
ಡಾ.ಬಂಜಗೆರೆ ಜಯಪ್ರಕಾಶ್ ಮಾತನಾಡಿದರು. ಕೆ.ಷರೀಫಾ ನಿರ್ಣಯಗಳನ್ನು ಮಂಡಿಸಿದರು.

ಇದನ್ನೂ ಓದಿ : ಜೀವ ಬೆದರಿಕೆ, ಜಾತಿ ನಿಂದನೆ ಆರೋಪ : ಬಿಜೆಪಿ ಶಾಸಕ ಮುನಿರತ್ನ ವಿರುದ್ದ ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...