Homeಚಳವಳಿ'Prisonor No. 626710 is present' ಸಾಕ್ಷ್ಯ ಚಿತ್ರ | 'ನಿನ್ನೆಯ ಸಂಜೆ ಉಮರ್‌ ಜೊತೆ...'

‘Prisonor No. 626710 is present’ ಸಾಕ್ಷ್ಯ ಚಿತ್ರ | ‘ನಿನ್ನೆಯ ಸಂಜೆ ಉಮರ್‌ ಜೊತೆ…’

- Advertisement -
- Advertisement -

ನಿನ್ನೆ ಬೆಂಗಳೂರಿನ ಆಶಿರ್ವಾದ್‌ ಕೇಂದ್ರದಲ್ಲಿ Prisonor No. 626710 is present ಎಂಬ ಸಾಕ್ಷ್ಯ ಚಿತ್ರದ ಪ್ರದರ್ಶನ ಏರ್ಪಾಡಾಗಿತ್ತು. 6.30ಕ್ಕೆ ಪ್ರದರ್ಶನ ಎಂದು ಹಾಕಲಾಗಿತ್ತು. 6.15ಕ್ಕೇ ಹಾಲ್‌ ಫುಲ್‌ ಆಗಿತ್ತು. ಆದರೂ ಸಿನಿಮಾ ಶುರುವಾದದ್ದು 6.45ಕ್ಕೆ. ಬಂದವರನ್ನು ಕೂರಿಸಲು ಫಾದರ್‌ ಅರುಣ್‌ ಲೂಯಿಸ್ ಪೇಚಾಡುತ್ತಿದ್ದರು. ಸುಮಾರು ಜನ ನೆಲದ ಮೇಲೆಯೇ ಕೂತರು. ಕೂರಲೂ ಜಾಗವಿಲ್ಲ. ಹಾಗೂ ಹೀಗೂ ಮಾಡಿ ಚಿತ್ರವನ್ನು ಚಾಲು ಮಾಡಲಾಯಿತು.ಉಮರ್ ಖಾಲಿದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನೀವು ಈ ವಿಡಿಯೋ ನೋಡುತ್ತಿದ್ದೀರೆಂದರೆ ನಾನು ಬಂಧನವಾಗಿದ್ದೇನೆ ಎಂದೇ ಅರ್ಥ” ಎಂಬ ಉಮರ್‌ ನ ಮಾತಿನೊಂದಿಗೆ ಸಾಕ್ಷ್ಯ ಚಿತ್ರ ಪ್ರಾರಂಭವಾಯಿತು. ತನ್ನ ಬಂಧನವನ್ನು ನಿರೀಕ್ಷಿಸಿದ್ದ ಉಮರ್‌ ಮೊದಲೇ ರೆಕಾರ್ಡ್‌ ಮಾಡಿದ್ದ ವಿಡಿಯೋ ಅದು. ಸ್ವಯಂ ಉಮರ್‌, ಅವರ ಬಾಳ ಸಂಗಾತಿ ಜೋಸ್ನ ಹಾಗೂ ಅವರ ಮತ್ತೊಬ್ಬ ಮಿತ್ರನ ಮಾತುಗಳನ್ನು ನಿರೂಪಣೆಯಾಗಿ ಹೆಣೆಯಲಾಗಿದೆ.

ಇದನ್ನೂ ಓದಿ: ವಿಚಾರಣೆಯಿಲ್ಲದೆ ನಾಲ್ಕು ವರ್ಷಗಳಿಂದ ಜೈಲಿನಲ್ಲಿರುವ ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್

ಮಧ್ಯದಲ್ಲಿ 2016 ರಿಂದ 2020ರ ನಡುವೆ ಜೆ ಎನ್‌ ಯು ಹಾಗೂ ದೆಹಲಿಯಲ್ಲಿ ನಡೆದ ಘಟನಾವಳಿಗಳನ್ನು ಹಿನ್ನೆಲೆಯಾಗಿ ಸಮರ್ಥ ರೀತಿಯಲ್ಲಿ ಬಳಸಲಾಗಿದೆ. ಸಿನೆಮಾ ಉಮರ್‌ ಬಗ್ಗೆ ಮಾತನಾಡಿದರೂ ಅದು ಹೇಳುವುದು ಈ ದೇಶದ ದುರಂತ ಕಥೆಯನ್ನು. ಬಹಳ ಸರಳವಾಗಿ, ನೇರವಾಗಿ, ಕಣ್ಣಿಗೆ ಕಟ್ಟುವ ವಿಡಿಯೋ ತುಣುಕುಗಳ ಮೂಲಕ ಹಾಗೂ ಹೃದಯ ಕಲಕುವ ವಾಸ್ತವಗಳ ಮೂಲಕ ನಿರ್ದೇಶಕ ಲಲಿತ್‌ ವಾಚಾನಿ ಅವರು ಚಿತ್ರವನ್ನು ಕಟ್ಟಿಕೊಡುವ ಪರಿ simple but super.

ಸಿನಿಮಾ ಮುಗಿದ ಮೇಲೆ ಸಂವಾದದ ಆರಂಭಿಕ ಮಾತುಗಳನ್ನಾಡಲು ನನ್ನನ್ನು ಕರೆದರು. ಉಮರ್‌ ಅವರನ್ನು ಹತ್ತಿರದಿಂದ ಬಲ್ಲವನು ಎಂಬ ಕಾರಣಕ್ಕೆ. ಮನದಾಳದಿಂದ ಉಮರ್‌ ಗೆ ಕ್ಷಮೆ ಕೇಳಿದೆ. ಉಮರ್‌ ಬಿಡುಗಡೆಗೆ ಇಷ್ಟು ವರ್ಷವಾದರೂ ನಾವು ಗಟ್ಟಿ ದನಿ ಎತ್ತಲಿಲ್ಲವಲ್ಲಾ ಎಂಬ ಕೊರಗು ಕಾಡುತ್ತಿತ್ತು. ನನ್ನದು ಮಾತ್ರವಲ್ಲ ಬಂದವರೆಲ್ಲರ ಮನಸ್ಸುಗಳೂ ಉಮರ್‌ ಬಿಡುಗಡೆಗೆ ಏನಾದರೂ ಮಾಡಬೇಕು ಎಂದು ಒತ್ತಾಯಿಸುತ್ತಿದ್ದವು.

ಭಾಗವಹಿಸಿದವರಲ್ಲಿ ಬಹುತೇಕ ಯುವ ಮುಖಗಳು. ಅ ಮುಖಗಳಲ್ಲಿ ಒಂದು ಕಾಳಜಿ ಇತ್ತು, ಹೊಳಪಿತ್ತು. ಸಂವಾದದ ಭಾಗವಾಗಿ ಹಲವರು ಯುವ ಮಿತ್ರರು ಬಹಳ ಚೆನ್ನಾಗಿ ಮಾತನಾಡಿದರು. ಮರ ಸಂಸ್ಥೆಯ ರಾಮ್‌ ಅರ್ಥಪೂರ್ಣ ಮಾತುಗಳ ಮೂಲಕ ಸಭೆಯನ್ನು ಸಮಾರೋಪಗೊಳಿಸಿದರು. ಸಭೆ ಮುಗಿದರೂ ಅನೇಕರಿಗೆ ಹೊರಡುವ ಮನಸ್ಸಿರಲಿಲ್ಲ. ಅಲ್ಲಲ್ಲೆ ಗುಂಪಾಗಿ ನಿಂತು, ಕುಳಿತು, ಮಾತಿನಲ್ಲಿ ತಲ್ಲೀನರಾಗಿದ್ದರು. ಕಳಕಳಿಯ ಮನಸ್ಸುಗಳ ಕಲರವದ ಮಾತಾವರಣ ಎಲ್ಲರನ್ನು ಹಿಡಿದಿಟ್ಟುಕೊಂಡಿತ್ತು ಅನಿಸುತ್ತೆ.

ಇದನ್ನೂಓದಿ: ಉಮರ್ ಖಾಲಿದ್ ಜಾಮೀನು ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ

ಯುವಜನರ ನಡುವೆ ಹಿರಿಯ ಹೋರಾಟಗಾರರೂ ಇದ್ದರು. ಯುವಜನರಿಗೆ ಮಾತನಾಡಲು ಬಿಟ್ಟು ಅವರು ಸುಮ್ಮನೆ ಕೂತು ಆಲಿಸುತ್ತಿದ್ದರು. ಒಂದು ರೀತಿಯಲ್ಲಿ ಆನಂದಿಸುತ್ತಿದ್ದರು. ಪ್ರಸಿದ್ಧ ರಂಗ ಕರ್ಮಿ ರಘುನಂದನ್ ಅವರು ವಿರೋಧ ಪಕ್ಷಗಳಾವುವೂ ಕೋರೆಗಾಂವ್‌ ಆರೋಪಿಗಳ ಬಗ್ಗೆಯಾಗಲೀ, ಉಮರ್‌ ಬಗ್ಗೆಯಾಗಲೀ ಮಾತನಾಡುತ್ತಿಲ್ಲ. ಎಲ್ಲಿ ತಮ್ಮನ್ನೂ ಭಯೋತ್ಪಾದಕರ ಬೆಂಬಲಿಗರು ಎಂದು ದೂಷಿಸಲಾಗುತ್ತೋ ಎಂಬ ಭಯ ಅವರಿಗೆ. ಆದರೆ ಈ ಪಕ್ಷಗಳೂ ಸಹ ಮಾತನಾಡಲೇಬಾಕಾದಂತಹ ವಾತಾವರಣವನ್ನು ಹಾಗೂ ಒತ್ತಡವನ್ನು ನಾವು ಸೃಷ್ಟಿಸಬೇಕು ಎಂದು ಸಲಹೆ ಮಾಡಿದರು.

ಸ್ಕ್ರೀನಿಂಗ್‌ ಹಾಗೂ ಸಂವಾದ ಎರಡನ್ನೂ ಮುಗಿಸಿಕೊಂಡು ಹೊರಟೆ. ಆದರೂ ಎರಡೂ ಹಿಂಬಾಲಿಸುತ್ತಲೇ ಬಂದವು. ಈಗಲೂ ಮನದ ಮೂಲೆಯಲ್ಲಿ ಗಟ್ಟಿಯಾಗಿ ಕೂತಿವೆ. ಏನು ಮಾಡುತ್ತೀರಿ ಎಂದು ಕೇಳುತ್ತಿವೆ. ಉತ್ತರ ಕಂಡುಕೊಳ್ಳಲೇಬೇಕು, ನಾವೆಲ್ಲರೂ ಕೂಡಿ.

ಮುಗಿಸುವ ಮುನ್ನ ಒಂದು ಮಾತು. ಈ ಸಾಕ್ಷ್ಯ ಚಿತ್ರ ತಾವು ನೋಡಲೇಬೇಕು. ಸಾಧ್ಯವಾದಷ್ಟು ನೀವಿರುವ ಕಡೆಗಳಲ್ಲಿ ಸ್ಕ್ರೀನಿಂಗ್‌ ಏರ್ಪಡಿಸಿ ಸಮಾನ ಮನಸ್ಕರ ಜೊತೆ ನೋಡಿ. ಆಗದಿದ್ದರೆ ವ್ಯಕ್ತಿಗತವಾಗಿಯಾದರೂ ನೋಡಿ. ಚಿತ್ರದ ಲಿಂಕ್‌ ಬೇಕಿದ್ದಲ್ಲಿ ನಿಸಾರ್‌ [8056035809] ಅವರನ್ನು ಸಂಪರ್ಕಿಸಿ.

ಉಮರ್‌ ಬಳಿ ಮತ್ತೊಮ್ಮೆ ಕ್ಷಮೆ ಕೋರುತ್ತಾ.

ವಿಡಿಯೊನೋಡಿ: ಕಟ್ಟುತ್ತೇವಾ ನಾವು ಜಾತಿ ಇಲ್ಲದ ಭೀತಿ ಇಲ್ಲದ ನಾಡ ಕಟ್ಟುತ್ತೇವೆ; ಹಾಡು ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...