Homeಚಳವಳಿ'Prisonor No. 626710 is present' ಸಾಕ್ಷ್ಯ ಚಿತ್ರ | 'ನಿನ್ನೆಯ ಸಂಜೆ ಉಮರ್‌ ಜೊತೆ...'

‘Prisonor No. 626710 is present’ ಸಾಕ್ಷ್ಯ ಚಿತ್ರ | ‘ನಿನ್ನೆಯ ಸಂಜೆ ಉಮರ್‌ ಜೊತೆ…’

- Advertisement -
- Advertisement -

ನಿನ್ನೆ ಬೆಂಗಳೂರಿನ ಆಶಿರ್ವಾದ್‌ ಕೇಂದ್ರದಲ್ಲಿ Prisonor No. 626710 is present ಎಂಬ ಸಾಕ್ಷ್ಯ ಚಿತ್ರದ ಪ್ರದರ್ಶನ ಏರ್ಪಾಡಾಗಿತ್ತು. 6.30ಕ್ಕೆ ಪ್ರದರ್ಶನ ಎಂದು ಹಾಕಲಾಗಿತ್ತು. 6.15ಕ್ಕೇ ಹಾಲ್‌ ಫುಲ್‌ ಆಗಿತ್ತು. ಆದರೂ ಸಿನಿಮಾ ಶುರುವಾದದ್ದು 6.45ಕ್ಕೆ. ಬಂದವರನ್ನು ಕೂರಿಸಲು ಫಾದರ್‌ ಅರುಣ್‌ ಲೂಯಿಸ್ ಪೇಚಾಡುತ್ತಿದ್ದರು. ಸುಮಾರು ಜನ ನೆಲದ ಮೇಲೆಯೇ ಕೂತರು. ಕೂರಲೂ ಜಾಗವಿಲ್ಲ. ಹಾಗೂ ಹೀಗೂ ಮಾಡಿ ಚಿತ್ರವನ್ನು ಚಾಲು ಮಾಡಲಾಯಿತು.ಉಮರ್ ಖಾಲಿದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ನೀವು ಈ ವಿಡಿಯೋ ನೋಡುತ್ತಿದ್ದೀರೆಂದರೆ ನಾನು ಬಂಧನವಾಗಿದ್ದೇನೆ ಎಂದೇ ಅರ್ಥ” ಎಂಬ ಉಮರ್‌ ನ ಮಾತಿನೊಂದಿಗೆ ಸಾಕ್ಷ್ಯ ಚಿತ್ರ ಪ್ರಾರಂಭವಾಯಿತು. ತನ್ನ ಬಂಧನವನ್ನು ನಿರೀಕ್ಷಿಸಿದ್ದ ಉಮರ್‌ ಮೊದಲೇ ರೆಕಾರ್ಡ್‌ ಮಾಡಿದ್ದ ವಿಡಿಯೋ ಅದು. ಸ್ವಯಂ ಉಮರ್‌, ಅವರ ಬಾಳ ಸಂಗಾತಿ ಜೋಸ್ನ ಹಾಗೂ ಅವರ ಮತ್ತೊಬ್ಬ ಮಿತ್ರನ ಮಾತುಗಳನ್ನು ನಿರೂಪಣೆಯಾಗಿ ಹೆಣೆಯಲಾಗಿದೆ.

ಇದನ್ನೂ ಓದಿ: ವಿಚಾರಣೆಯಿಲ್ಲದೆ ನಾಲ್ಕು ವರ್ಷಗಳಿಂದ ಜೈಲಿನಲ್ಲಿರುವ ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್

ಮಧ್ಯದಲ್ಲಿ 2016 ರಿಂದ 2020ರ ನಡುವೆ ಜೆ ಎನ್‌ ಯು ಹಾಗೂ ದೆಹಲಿಯಲ್ಲಿ ನಡೆದ ಘಟನಾವಳಿಗಳನ್ನು ಹಿನ್ನೆಲೆಯಾಗಿ ಸಮರ್ಥ ರೀತಿಯಲ್ಲಿ ಬಳಸಲಾಗಿದೆ. ಸಿನೆಮಾ ಉಮರ್‌ ಬಗ್ಗೆ ಮಾತನಾಡಿದರೂ ಅದು ಹೇಳುವುದು ಈ ದೇಶದ ದುರಂತ ಕಥೆಯನ್ನು. ಬಹಳ ಸರಳವಾಗಿ, ನೇರವಾಗಿ, ಕಣ್ಣಿಗೆ ಕಟ್ಟುವ ವಿಡಿಯೋ ತುಣುಕುಗಳ ಮೂಲಕ ಹಾಗೂ ಹೃದಯ ಕಲಕುವ ವಾಸ್ತವಗಳ ಮೂಲಕ ನಿರ್ದೇಶಕ ಲಲಿತ್‌ ವಾಚಾನಿ ಅವರು ಚಿತ್ರವನ್ನು ಕಟ್ಟಿಕೊಡುವ ಪರಿ simple but super.

ಸಿನಿಮಾ ಮುಗಿದ ಮೇಲೆ ಸಂವಾದದ ಆರಂಭಿಕ ಮಾತುಗಳನ್ನಾಡಲು ನನ್ನನ್ನು ಕರೆದರು. ಉಮರ್‌ ಅವರನ್ನು ಹತ್ತಿರದಿಂದ ಬಲ್ಲವನು ಎಂಬ ಕಾರಣಕ್ಕೆ. ಮನದಾಳದಿಂದ ಉಮರ್‌ ಗೆ ಕ್ಷಮೆ ಕೇಳಿದೆ. ಉಮರ್‌ ಬಿಡುಗಡೆಗೆ ಇಷ್ಟು ವರ್ಷವಾದರೂ ನಾವು ಗಟ್ಟಿ ದನಿ ಎತ್ತಲಿಲ್ಲವಲ್ಲಾ ಎಂಬ ಕೊರಗು ಕಾಡುತ್ತಿತ್ತು. ನನ್ನದು ಮಾತ್ರವಲ್ಲ ಬಂದವರೆಲ್ಲರ ಮನಸ್ಸುಗಳೂ ಉಮರ್‌ ಬಿಡುಗಡೆಗೆ ಏನಾದರೂ ಮಾಡಬೇಕು ಎಂದು ಒತ್ತಾಯಿಸುತ್ತಿದ್ದವು.

ಭಾಗವಹಿಸಿದವರಲ್ಲಿ ಬಹುತೇಕ ಯುವ ಮುಖಗಳು. ಅ ಮುಖಗಳಲ್ಲಿ ಒಂದು ಕಾಳಜಿ ಇತ್ತು, ಹೊಳಪಿತ್ತು. ಸಂವಾದದ ಭಾಗವಾಗಿ ಹಲವರು ಯುವ ಮಿತ್ರರು ಬಹಳ ಚೆನ್ನಾಗಿ ಮಾತನಾಡಿದರು. ಮರ ಸಂಸ್ಥೆಯ ರಾಮ್‌ ಅರ್ಥಪೂರ್ಣ ಮಾತುಗಳ ಮೂಲಕ ಸಭೆಯನ್ನು ಸಮಾರೋಪಗೊಳಿಸಿದರು. ಸಭೆ ಮುಗಿದರೂ ಅನೇಕರಿಗೆ ಹೊರಡುವ ಮನಸ್ಸಿರಲಿಲ್ಲ. ಅಲ್ಲಲ್ಲೆ ಗುಂಪಾಗಿ ನಿಂತು, ಕುಳಿತು, ಮಾತಿನಲ್ಲಿ ತಲ್ಲೀನರಾಗಿದ್ದರು. ಕಳಕಳಿಯ ಮನಸ್ಸುಗಳ ಕಲರವದ ಮಾತಾವರಣ ಎಲ್ಲರನ್ನು ಹಿಡಿದಿಟ್ಟುಕೊಂಡಿತ್ತು ಅನಿಸುತ್ತೆ.

ಇದನ್ನೂಓದಿ: ಉಮರ್ ಖಾಲಿದ್ ಜಾಮೀನು ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ

ಯುವಜನರ ನಡುವೆ ಹಿರಿಯ ಹೋರಾಟಗಾರರೂ ಇದ್ದರು. ಯುವಜನರಿಗೆ ಮಾತನಾಡಲು ಬಿಟ್ಟು ಅವರು ಸುಮ್ಮನೆ ಕೂತು ಆಲಿಸುತ್ತಿದ್ದರು. ಒಂದು ರೀತಿಯಲ್ಲಿ ಆನಂದಿಸುತ್ತಿದ್ದರು. ಪ್ರಸಿದ್ಧ ರಂಗ ಕರ್ಮಿ ರಘುನಂದನ್ ಅವರು ವಿರೋಧ ಪಕ್ಷಗಳಾವುವೂ ಕೋರೆಗಾಂವ್‌ ಆರೋಪಿಗಳ ಬಗ್ಗೆಯಾಗಲೀ, ಉಮರ್‌ ಬಗ್ಗೆಯಾಗಲೀ ಮಾತನಾಡುತ್ತಿಲ್ಲ. ಎಲ್ಲಿ ತಮ್ಮನ್ನೂ ಭಯೋತ್ಪಾದಕರ ಬೆಂಬಲಿಗರು ಎಂದು ದೂಷಿಸಲಾಗುತ್ತೋ ಎಂಬ ಭಯ ಅವರಿಗೆ. ಆದರೆ ಈ ಪಕ್ಷಗಳೂ ಸಹ ಮಾತನಾಡಲೇಬಾಕಾದಂತಹ ವಾತಾವರಣವನ್ನು ಹಾಗೂ ಒತ್ತಡವನ್ನು ನಾವು ಸೃಷ್ಟಿಸಬೇಕು ಎಂದು ಸಲಹೆ ಮಾಡಿದರು.

ಸ್ಕ್ರೀನಿಂಗ್‌ ಹಾಗೂ ಸಂವಾದ ಎರಡನ್ನೂ ಮುಗಿಸಿಕೊಂಡು ಹೊರಟೆ. ಆದರೂ ಎರಡೂ ಹಿಂಬಾಲಿಸುತ್ತಲೇ ಬಂದವು. ಈಗಲೂ ಮನದ ಮೂಲೆಯಲ್ಲಿ ಗಟ್ಟಿಯಾಗಿ ಕೂತಿವೆ. ಏನು ಮಾಡುತ್ತೀರಿ ಎಂದು ಕೇಳುತ್ತಿವೆ. ಉತ್ತರ ಕಂಡುಕೊಳ್ಳಲೇಬೇಕು, ನಾವೆಲ್ಲರೂ ಕೂಡಿ.

ಮುಗಿಸುವ ಮುನ್ನ ಒಂದು ಮಾತು. ಈ ಸಾಕ್ಷ್ಯ ಚಿತ್ರ ತಾವು ನೋಡಲೇಬೇಕು. ಸಾಧ್ಯವಾದಷ್ಟು ನೀವಿರುವ ಕಡೆಗಳಲ್ಲಿ ಸ್ಕ್ರೀನಿಂಗ್‌ ಏರ್ಪಡಿಸಿ ಸಮಾನ ಮನಸ್ಕರ ಜೊತೆ ನೋಡಿ. ಆಗದಿದ್ದರೆ ವ್ಯಕ್ತಿಗತವಾಗಿಯಾದರೂ ನೋಡಿ. ಚಿತ್ರದ ಲಿಂಕ್‌ ಬೇಕಿದ್ದಲ್ಲಿ ನಿಸಾರ್‌ [8056035809] ಅವರನ್ನು ಸಂಪರ್ಕಿಸಿ.

ಉಮರ್‌ ಬಳಿ ಮತ್ತೊಮ್ಮೆ ಕ್ಷಮೆ ಕೋರುತ್ತಾ.

ವಿಡಿಯೊನೋಡಿ: ಕಟ್ಟುತ್ತೇವಾ ನಾವು ಜಾತಿ ಇಲ್ಲದ ಭೀತಿ ಇಲ್ಲದ ನಾಡ ಕಟ್ಟುತ್ತೇವೆ; ಹಾಡು ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...