Homeಕರ್ನಾಟಕಬಾಗಲಕೋಟೆ: ದೇಗುಲ ಪ್ರವೇಶಿಸಿದ ದಲಿತ ಯುವಕನನ್ನು ಕಂಬಕ್ಕೆ ಕಟ್ಟಿ ಥಳಿಸಿದ ಸವರ್ಣೀಯರು

ಬಾಗಲಕೋಟೆ: ದೇಗುಲ ಪ್ರವೇಶಿಸಿದ ದಲಿತ ಯುವಕನನ್ನು ಕಂಬಕ್ಕೆ ಕಟ್ಟಿ ಥಳಿಸಿದ ಸವರ್ಣೀಯರು

- Advertisement -
- Advertisement -

ದೇವಾಲಯ ಪ್ರವೇಶ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದದಲ್ಲಿ ಪರಿಶಿಷ್ಟ ಸಮುದಾಯದ (ಎಸ್‌ಸಿ) ಯುವಕನ್ನು ಪ್ರಬಲ ಜಾತಿ ಗುಂಪು ಕಂಬಕ್ಕೆ ಕಟ್ಟಿ ಥಳಿಸಿರುವ ಘಟನೆ ಬಾಗಲಕೋಟೆ ಜಿಲ್ಲೆ ಬದಾಮಿ ತಾಲ್ಲೂಕಿನಲ್ಲಿ ಸಂಭವಿಸಿದೆ.

ಯುವಕನನ್ನು ಕಂಬಕ್ಕೆ ಕಟ್ಟಿ ಥಳಿಸಿದ್ದೂ ಅಲ್ಲದೆ ದಲಿತ ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ ಹಾಕಿದ್ದು; ತಾಲೂಕಿನ ಉಗಲವಾಟ ಗ್ರಾಮದಲ್ಲಿ ಇತ್ತೀಚೆಗೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಗ್ರಾಮದ 21 ಜನರ ವಿರುದ್ಧ ಎಫ್‌ಐಆ‌ರ್ ದಾಖಲಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಅಮರನಾಥ ರೆಡ್ಡಿ ಶನಿವಾರ ಗ್ರಾಮಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಅರ್ಜುನ್ ಮಾದರ ಎಂಬ 28 ವರ್ಷದ ಯುವಕ ಥಳಿತಕ್ಕೊಳಗಾಗಿದ್ದು, ಈ ಸಂಬಂಧ ಮುದ್ದಿನಗೌಡ ದ್ಯಾಮನಗೌಡ ಸತ್ಯನ್ನವರ, ಮಂಜುನಾಥ ಲೆಂಕೇಶ ಮೂಲಿಮನಿ, ತುಳಸಿಗೇರಪ್ಪ ಕಾಮಪ್ಪ ತಳವಾರ ಸೇರಿದಂತೆ 21 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಸೆ.10ರಂದು ಅರ್ಜುನ್, ತನ್ನದೇ ಗ್ರಾಮದ ದ್ಯಾಮವ್ವ ಗುಡಿಯ ಒಳಗೆ ಹೋಗಿ ದೇವರಿಗೆ ನಮಸ್ಕಾರ ಮಾಡಿದ್ದಾನೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಕೆಲ ಪ್ರಬಲ ಜಾತಿ ಗುಂಪು, “ನೀನು ದಲಿತ ಸಮುದಾಯದವನು.. ಗುಡಿಯ ಒಳಗೆ ಹೋಗಿ ನಮಸ್ಕಾರ ಮಾಡಿದ್ದು ಯಾಕೆ”  ಎಂದು ಆತನೊಂದಿಗೆ ವಾಗ್ವಾದ ನಡೆಸಿದ್ದಾರೆ. ಸಾಲದ್ದಕ್ಕೆ, ಆತನ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

“20ಕ್ಕೂ ಅಧಿಕ ಜನರು ಸೇರಿ ಆತನನ್ನು ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿ, ಜಾತಿ ನಿಂದನೆ ಮಾಡಿದ್ದಾರೆ” ಎಂದು ಹಲ್ಲೆಗೊಳಗಾದ ವ್ಯಕ್ತಿ ಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಘಟನೆ ಸಂಬಂಧ 21 ಆರೋಪಿಗಳ ವಿರುದ್ದ ಪ್ರಕರಣ ಕೇಸ್ ದಾಖಲಿಸಿದ್ದಾರೆ. ಘಟನೆ ನಂತರ ಬಾಗಲಕೋಟೆ ಎಸ್‌ಪಿ ಅಮರನಾಥ ರೆಡ್ಡಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಷಯ ತಿಳಿದ ಜಿಲ್ಲೆಯ ಹಲವು ದಲಿತ ಮುಖಂಡರು ಉಗಲವಾಟ ಗ್ರಾಮಕ್ಕೆ ಆಗಮಿಸಿ, ಅಲ್ಲಿನ ದಲಿತ ಮುಖಂಡರ ಜೊತೆ ಚರ್ಚೆ ನಡೆಸಿದ್ದಾರೆ. ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಅವರು, ಘಟನೆ ಖಂಡಿಸಿ ಬಾಗಲಕೋಟೆ ಜಿಲ್ಲಾಡಳಿತ ಭವನಕ್ಕೆ ಪಾದಯಾತ್ರೆ ನಡೆಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ನಿಲ್ಲದ ದಲಿತರ ಮೇಲಿನ ದೌರ್ಜನ್ಯ:

ಇತ್ತೀಚಿನ ದಿನಗಳಲ್ಲಿ ಉತ್ತರ ಕರ್ನಾಟಕದಲ್ಲಿ ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿವೆ. ಕಳೆದ ತಿಂಗಳು, ದಲಿತ ಯುವಕನೊಬ್ಬ ತನಗೆ ಕ್ಷೌರ ಮಾಡಲು ಒತ್ತಾಯಿಸಿದ ನಂತರ, ಮಾತಿಗೆ ಮಾತು ಬೆಳೆದು ಕ್ಷೌರಿಕ ಕೊಲೆ ಮಾಡಿರುವ ಘಟನೆ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ನಡೆದಿತ್ತು. ಯಮನೂರಪ್ಪ ಬಂಡಿಹಾಳ (23) ಕೊಲೆಯಾದ ಮೃತ ದಲಿತ ಯುವಕನಾಗಿದ್ದಾನೆ.

ಯಮನೂರಪ್ಪ ಕ್ಷೌರ ಮಾಡಿಸಿಕೊಳ್ಳಲು ಸೆಲೂನ್‌ಗೆ ಹೋಗಿದ್ದ ಈ ವೇಳೆ ಸೆಲೂನ್ ಮಾಲೀಕ ಮುದುಕಪ್ಪ ಅಂದಪ್ಪ ಹಡಪದ ಅವರು, ‘ನೀನು ದಲಿತ. ಹಾಗಾಗಿ, ನಾವು ಕ್ಷೌರ ಮಾಡುವುದಿಲ್ಲ’ ಎಂದು ಹೇಳಿದ್ದಾನೆ. ಇದನ್ನ ಯುವಕ ಪ್ರಶ್ನಿಸಿದ್ದು, ಮಾತಿಗೆ ಮಾತು ಬೆಳೆದು ಮುದುಕಪ್ಪ ಹಡಪದ ಕೈಯ್ಯಲ್ಲಿದ್ದ ಕತ್ತರಿಯಿಂದ ಯಮನೂರಪ್ಪ ಹೊಟ್ಟೆಗೆ ಚುಚ್ಚಿ ಕೊಲೆ ಮಾಡಿದ್ದಾನೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದರು.

ಮತ್ತೊಂದು ಪ್ರಕರಣದಲ್ಲಿ, ದಲಿತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಯುವಕನ ಮೇಲೆ ದೂರು ನೀಡಿದ ಕಾರಣಕ್ಕಾಗಿ, ಇಡೀ ಗ್ರಾಮದ ಪರಿಶಿಷ್ಟ ಸಮುದಾಯದ ಜನರಿಗೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಮೂರ್ನಾಲ್ಕು ದಿನಗಳ ಹಿಂದಷ್ಟೇ ಬೆಳಕಿಗೆ ಬಂದಿತ್ತು.

“14 ವರ್ಷದ ದಲಿತ ಸಮುದಾಯದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಸಂಧಾನಕ್ಕೆ ಒಪ್ಪದ ಕುಟುಂಬ ಮತ್ತು ದಲಿತ ಕುಟುಂಬಗಳಿಗೆ ಸವರ್ಣೀಯರು ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಬಪ್ಪರಗಾ ‌ಗ್ರಾಮದಲ್ಲಿ ನಡೆದಿದೆ. ತಮ್ಮ ಮಾತಿನಂತೆ ಸಂಧಾನಕ್ಕೆ ಒಪ್ಪದೆ ದೂರು ನೀಡಿದರು ಎಂಬ ಕಾರಣಕ್ಕೆ ದಲಿತ ಕುಟುಂಬವನ್ನು ಬಹಿಷ್ಕರಿಸಿರುವ ಸವರ್ಣೀಯರು, ಗ್ರಾಮದ ಅಂಗಡಿಗಳಲ್ಲಿ ದಿನಸಿ ಸಾಮಗ್ರಿ ನೀಡದಂತೆ ಷರತ್ತು ವಿಧಿಸಿದ್ದಾರೆ. ಈ ಸಾಮಾಜಿಕ ಬಹಿಷ್ಕಾರದಿಂದಾಗಿ ಗ್ರಾಮದ ದಲಿತ ಸಮುದಾಯದ ಮಕ್ಕಳಿಗೆ ಅಗತ್ಯವಿರುವ ಪೆನ್ನು, ನೋಟುಬುಕ್ ಮತ್ತು ದೈನಂದಿನ ದಿನಸಿ ಸಾಮಗ್ರಿ ಸಿಗದೆ ಹಲವು ಕುಟುಂಬಗಳು ಪರದಾಡುತ್ತಿವೆ. ಗ್ರಾಮದಲ್ಲಿ ಕಡಿಮೆ ಸಂಖ್ಯೆಯಲ್ಲಿರುವ ದಲಿತರು, ಇದೀಗ ಸಾಮಾಜಿಕ ಬಹಿಷ್ಕಾರದಿಂದಾಗಿ ಆತಂಕದಲ್ಲಿ ದಿನ ಕಳೆಯುತ್ತಿದ್ದಾರೆ.

ಇದೀಗ ದೇವಸ್ಥಾನ ಪ್ರವೇಶಿಸಿದ ಎಂಬ ಕಾರಣಕ್ಕೆ ದಲಿತ ಯುವಕನಿಗೆ ಸವರ್ಣೀಯರು ಥಳಿಸಿದ್ದು, ತಿಂಗಳಲ್ಲಿ ಬೆಳಕಿಗೆ ಬಂದ ಮೂರನೇ ದಲಿತ ದೌರ್ಜನ್ಯ ಪ್ರಕರಣ ಇದಾಗಿದೆ.

ಇದನ್ನೂ ಓದಿ; ಯಾದಗಿರಿ| ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದವನ ಮೇಲೆ ದೂರು ದಾಖಲಿಸಿದ ಪೋಷಕರು; ಸಂಧಾನಕ್ಕೆ ಒಪ್ಪದ ದಲಿತ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...