Homeಮುಖಪುಟ2024ರ ಲೋಕಸಭೆ ಚುನಾವಣೆಗೂ ಮುನ್ನ ವಿಪಕ್ಷದ ನಾಯಕರಿಂದ ಪ್ರಧಾನಿ ಹುದ್ದೆ ಆಫರ್: ಗಡ್ಕರಿ

2024ರ ಲೋಕಸಭೆ ಚುನಾವಣೆಗೂ ಮುನ್ನ ವಿಪಕ್ಷದ ನಾಯಕರಿಂದ ಪ್ರಧಾನಿ ಹುದ್ದೆ ಆಫರ್: ಗಡ್ಕರಿ

- Advertisement -
- Advertisement -

2024ರ ಲೋಕಸಭೆ ಚುನಾವಣೆಗೂ ಮುನ್ನ ವಿರೋಧ ಪಕ್ಷದ ಹಿರಿಯ ನಾಯಕರೊಬ್ಬರು ತಮಗೆ ಪ್ರಧಾನಿ ಹುದ್ದೆಯನ್ನು ನೀಡುವುದಾಗಿ ಆಮಿಷವೊಡ್ಡಿದ್ದರು ಎಂದು ಕೇಂದ್ರ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಆದರೆ, ಈ ಪ್ರಸ್ತಾಪವು ತನ್ನ ನಂಬಿಕೆಗೆ ವಿರುದ್ಧವಾಗಿದೆ ಎಂದು ತಾನು ತಿರಸ್ಕರಿಸಿದ್ದಾಗಿ ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನಾಗ್ಪುರದಲ್ಲಿ ನಡೆದ ಪತ್ರಿಕೋದ್ಯಮ ಪ್ರಶಸ್ತಿ ಸಮಾರಂಭದಲ್ಲಿ ಮಾತನಾಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ, “ವಿರೋಧ ಪಕ್ಷದ ಹಿರಿಯ ನಾಯಕರೊಬ್ಬರು ಪ್ರಧಾನಿ ಹುದ್ದೆಯ ಪ್ರಸ್ತಾಪದೊಂದಿಗೆ ನನ್ನನ್ನು ಸಂಪರ್ಕಿಸಿದರು. ನಾನು ಒಪ್ಪಿಗೆ ನೀಡಿದರೆ, ಅವರು ನನನಗೆ ಪ್ರಧಾನಿ ಹುದ್ದೆ ಸಿಗುವಂತೆ ಕೆಲಸ ಮಾಡುವುದಾಗಿ ನನಗೆ ತಿಳಿಸಿದ್ದರು” ಎಂದು ಹೇಳಿದ್ದಾರೆ.

“ನಾನು ತಕ್ಷಣ ಈ ಪ್ರಸ್ತಾಪವನ್ನು ತಿರಸ್ಕರಿಸಿದೆ. ನಾನು ಆ ನಾಯಕನಿಗೆ ಸ್ಪಷ್ಟವಾಗಿ, ನಾನು ತತ್ವ ಸಿದ್ಧಾಂತವನ್ನು ನಂಬುವ ವ್ಯಕ್ತಿ ಎಂದು ಹೇಳಿದ್ದೆ. ನಾನು ಯಾವಾಗಲೂ ತತ್ವ ಸಿದ್ದಾತಗಳ ಮೇಲೆ ಕೆಲಸ ಮಾಡಿದ್ದೇನೆ ಮತ್ತು ಬದುಕಿದ್ದೇನೆ. ನಾನು ಎಂದಿಗೂ ದೇಶದ ಪ್ರಧಾನಿಯಾಗುವ ಮಹತ್ವಾಕಾಂಕ್ಷೆಯನ್ನು ಹೊಂದಿರಲಿಲ್ಲ ಎಂದು ನಾನು ಸ್ಪಷ್ಟಪಡಿಸಿದೆ. ಆದ್ದರಿಂದ, ಈ ಯಾವುದೇ ಪ್ರಸ್ತಾಪವನ್ನು ಒಪ್ಪಿಕೊಳ್ಳುವ ಪ್ರಶ್ನೆಯೇ ಇಲ್ಲ. ನಾನು ಪಾಲನೆ ಮಾಡಿಕೊಂಡು ಬರುತ್ತಿರುವ ತತ್ವ ಸಿದ್ದಾಂತ ಗಳ ಮೇಲೆ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಅವರಿಗೆ ಹೇಳಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೊಪ್ಪಳ | ಮಾದಿಗ ಯುವಕನನ್ನು ಕಂಬಕ್ಕೆ ಕಟ್ಟಿ ಮಾರಣಾಂತಿಕ ಹಲ್ಲೆ : ಪ್ರಕರಣ ದಾಖಲು

ತಮಗೆ ಪ್ರಧಾನಿ ಹುದ್ದೆಯ ಭರವಸೆ ನೀಡಿದ ವಿಪಕ್ಷ ನಾಯಕ ಯಾರು ಎಂಬ ಬಗ್ಗೆ ಗಡ್ಕರಿ ಅವರು ಹೇಳಿಲ್ಲ. ಜೊತೆಗೆ ಈ ಘಟನೆಯ ಬಗ್ಗೆ ಹೆಚ್ಚಿನ ವಿವರಗಳನ್ನು ಅವರು ಹಂಚಿಕೊಳ್ಳಲಿಲ್ಲ. ಆದರೆ ಬಿಜೆಪಿಯ ಅನೇಕ ನಾಯಕರಿಗೆ ಇದು ಆಶ್ಚರ್ಯವನ್ನುಂಟು ಮಾಡಿದೆ ಎಂದು ವರದಿಯಾಗಿದೆ. ಗಡ್ಕರಿ ಅವರು ಮೂಲ ಆರೆಸ್ಸೆಸ್-ಬಿಜೆಪಿಗನಾಗಿದ್ದರೂ, ಅವರಿಗೆ ಕಾಂಗ್ರೆಸ್ ಸೇರಿದಂತೆ ಎಲ್ಲಾ ಪಕ್ಷಗಳ ನಾಯಕರೊಂದಿಗೆ ಸೌಹಾರ್ದ ಸಂಬಂಧವಿದೆ. ಮಹಾರಾಷ್ಟ್ರದಲ್ಲಿ ಶಿವಸೇನಾ (ಯುಬಿಟಿ) ಅಧ್ಯಕ್ಷ ಉದ್ಧವ್ ಠಾಕ್ರೆ ಮತ್ತು ಎನ್‌ಸಿಪಿ (ಎಸ್‌ಪಿ) ಅಧ್ಯಕ್ಷ ಶರದ್ ಪವಾರ್ ಇಬ್ಬರೊಂದಿಗೆ ಉತ್ತಮ ಅವರು ಸಂಬಂಧ ಹೊಂದಿದ್ದಾರೆ.

ಸಾಮಾನ್ಯವಾಗಿ ಪವಾರ್ ಮತ್ತು ಗಡ್ಕರಿ, ಎರಡು ಸೈದ್ಧಾಂತಿಕವಾಗಿ ವಿಭಿನ್ನ ಪಕ್ಷಗಳನ್ನು ಪ್ರತಿನಿಧಿಸುತ್ತಿದ್ದರೂ, ಸಾಮಾಜಿಕ ಕಾರ್ಯಕ್ರಮಗಳಲ್ಲಿ ವೇದಿಕೆ ಹಂಚಿಕೊಂಡು ಹಲವು ಭಾರಿ ಪರಸ್ಪರ ಹೊಗಳಿಕೊಂಡಿದ್ದಾರೆ.

ಕಮ್ಯುನಿಸ್ಟ್ ನಾಯಕ ಎ ಬಿ ಬರ್ಧನ್ ಅವರೊಂದಿಗಿನ ತಮ್ಮ ದೀರ್ಘಕಾಲದ ಸ್ನೇಹವನ್ನು ಪುನರುಚ್ಚರಿಸಿದ ಗಡ್ಕರಿ, “ನನ್ನ ಸ್ನೇಹ ಮತ್ತು ಬರ್ಧನ್ ಬಗ್ಗೆ ನನಗೆ ಆಗಾಗ್ಗೆ ಕೇಳಲಾಗುತ್ತದೆ. ಅವರ ಪಕ್ಷಕ್ಕೆ ಅವರ ಬದ್ಧತೆ ಮತ್ತು ವಿಶ್ವಾಸ ನನಗೆ ಇಷ್ಟವಾಯಿತು. ಅದು ರಾಜಕೀಯವಾಗಲಿ ಅಥವಾ ಯಾವುದೇ ವೃತ್ತಿಯಾಗಲಿ ತತ್ವ ಸಿದ್ದಾಂತ ಮುಖ್ಯವಾದುದು” ಎಂದು ಹೇಳಿದ್ದಾರೆ.

ವಿಡಿಯೊ ನೋಡಿ: ಒಕ್ಕೂಟ ವ್ಯವಸ್ಥೆ ಮಣ್ಣು ಮುಕ್ಕಿದೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ಮೀನಾಕ್ಷಿ ಬಾಳಿ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...

ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?  

ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ (ಏ.14)...

ಆಟೋ ಪರ್ಮಿಟ್‌ಗಳಿಗೆ ಮರಾಠಿ ಭಾಷೆ ಕಡ್ಡಾಯ ನಿಯಮ; ಆರ್‌ಟಿಒ ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಕಳವಳಕಾರಿ ಬೆಳವಣಿಗೆಯಲ್ಲಿ, ಆಟೋ-ರಿಕ್ಷಾ ಪರ್ಮಿಟ್ ಪರಿಶೀಲನೆಗೆ ಮರಾಠಿ ಜ್ಞಾನವನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ವಿರೋಧ ವ್ಯಕ್ತವಾಗಿದ್ದು, ಇದರಲ್ಲಿ ಬಿಷ್ಣೋಯ್ ಗ್ಯಾಂಗ್ ಭಾಗಿಯಾಗಿದೆ ಎಂದು ಆರೋಪಿಸಲಾಗಿದೆ. ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಅಧಿಕಾರಿ...

‘ನಾನು ಪ್ರೀತಿಯಲ್ಲಿ ನಂಬಿಕೆ ಇಡುತ್ತೇನೆ, ಬುಲ್ಡೋಜರ್‌ ರಾಜಕೀಯದಲ್ಲಿ ಅಲ್ಲ’: ಯುಪಿ ಮಾದರಿ ವಿವಾದದ ನಡುವೆ ಯೋಗಿ ವಿರುದ್ಧ ಮಮತಾ ದಾಳಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ದಾಳಿ ನಡೆಸಿದ್ದಾರೆ. ಅವರು ಬುಲ್ಡೋಜರ್ ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ ಎಂದು ಹೇಳಿದ್ದಾರೆ ಮತ್ತು ಉತ್ತರ ಪ್ರದೇಶದಲ್ಲಿ...

ಬಿಹಾರ| ಸಿಎಂ ಹುದ್ದೆಗೆ ರಾಜೀನಾಮೆ ನೀಡಲು ಅಣಿಯಾದ ನಿತೀಶ್ ಕುಮಾರ್ : ಸಂಪುಟ ವಿಸರ್ಜನೆಗೆ ಶಿಫಾರಸು

ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಕಸರತ್ತು ತೀವ್ರಗೊಂಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಅಣಿಯಾಗಿದ್ದು, ಅದಕ್ಕೂ ಮೊದಲು ಸಚಿವ ಸಂಪುಟ ವಿಸರ್ಜಿಸಲು ಅವರು ಶಿಫಾರಸು ಮಾಡಿದ್ದಾರೆ....

‘ರಾತ್ರೋರಾತ್ರಿ ಒಪ್ಪಂದ ಸಾಧ್ಯವಿಲ್ಲ’: ಪಶ್ಚಿಮ ಏಷ್ಯಾ ಯುದ್ಧದ ಕುರಿತು ನಿರಂತರ ಮಾತುಕತೆಗೆ ವಿಶ್ವಸಂಸ್ಥೆ ಒತ್ತಾಯ

ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಅವರು ಅಮೆರಿಕ ಮತ್ತು ಇರಾನ್ ನಡುವೆ ನಿರಂತರ ರಾಜತಾಂತ್ರಿಕ ಮಾತುಕತೆಗೆ ಕರೆ ನೀಡಿದ್ದಾರೆ. "ಒಂದು ಒಪ್ಪಂದವನ್ನು ರಾತ್ರೋರಾತ್ರಿ ತಲುಪಲು ಸಾಧ್ಯವಿಲ್ಲ" ಎಂದು ಒತ್ತಿ ಹೇಳಿದ ಅವರು ಪಶ್ಚಿಮ...