Homeಕರ್ನಾಟಕರಾಜ್ಯದಾದ್ಯಂತ ಭರ್ತಿಯಾಗದ 2000 ಸರ್ಕಾರಿ ವೈದ್ಯರ ಹುದ್ದೆ; ಗ್ರಾಮೀಣ ಭಾಗದ ಆರೋಗ್ಯ ಬಿಕ್ಕಟ್ಟಿನಲ್ಲಿ!

ರಾಜ್ಯದಾದ್ಯಂತ ಭರ್ತಿಯಾಗದ 2000 ಸರ್ಕಾರಿ ವೈದ್ಯರ ಹುದ್ದೆ; ಗ್ರಾಮೀಣ ಭಾಗದ ಆರೋಗ್ಯ ಬಿಕ್ಕಟ್ಟಿನಲ್ಲಿ!

- Advertisement -
- Advertisement -

ರಾಜ್ಯಾದ್ಯಂತ ಸುಮಾರು 2000 ಸರ್ಕಾರಿ ವೈದ್ಯರ ಹುದ್ದೆಗಳು ಭರ್ತಿಯಾಗದೆ ಹಾಗೆ ಬಿದ್ದಿವೆ ಎಂದು TNIE ವರದಿ ಶನಿವಾರ ಹೇಳಿವೆ. ಇದರಿಂದಾಗಿ ರಾಜ್ಯದ ಗ್ರಾಮೀಣ ಪ್ರದೇಶಗಳ ಸರ್ಕಾರಿ ಆಸ್ಪತ್ರೆಗಳು ತೀವ್ರ ಬಿಕ್ಕಟ್ಟಿಗೆ ಸಿಲುಕಿವೆ ಎಂದು ವರದಿ ಉಲ್ಲೇಖಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವಿಶೇಷ ವೈದ್ಯಕೀಯ ಅಧಿಕಾರಿಗಳು ಮತ್ತು ಇತರರು ಸೇರಿದಂತೆ 744 ತಜ್ಞರು, 613 ಸಾಮಾನ್ಯ ಕರ್ತವ್ಯ ವೈದ್ಯಕೀಯ ಅಧಿಕಾರಿಗಳು ಮತ್ತು 558 ವೈದ್ಯಕೀಯ ವೃತ್ತಿಪರರ ಕೊರತೆಯಿದೆ ಎಂದು ಜೂನ್‌ವರೆಗಿನ ಅಂಕಿ ಅಂಶಗಳು ಸೂಚಿಸುತ್ತದೆ ಎಂದು ವರದಿ ಉಲ್ಲೇಖಿಸಿದೆ. ದಂತ ವೈದ್ಯಕೀಯ ವಿಭಾಗದಲ್ಲಿಯೂ ಒಟ್ಟು 425 ಮಂಜೂರಾದ ಹುದ್ದೆಗಳಲ್ಲಿ 25 ಹುದ್ದೆಗಳು ಖಾಲಿ ಇವೆ ಎಂದು ಅವರು ಹೇಳಿದೆ.

ಖಾಲಿ ಇರುವ 1,940 ಹುದ್ದೆಗಳನ್ನು ಭರ್ತಿ ಮಾಡಲು ಕೆಲಸ ಮಾಡುತ್ತಿರುವುದಾಗಿ ಆರೋಗ್ಯ ಆಯುಕ್ತ ಶಿವಕುಮಾರ್ ಕೆಬಿ ಹೇಳಿದ್ದಾಗಿ ವರದಿ ತಿಳಿಸಿದೆ. “ಆದರೆ, ಸರ್ಕಾರಿ ಆಸ್ಪತ್ರೆಯ ವೈದ್ಯರ ಪಾತ್ರಗಳು, ಜವಾಬ್ದಾರಿಗಳು ಮತ್ತು ಕೆಲಸದ ನೀತಿಗಳನ್ನು ವ್ಯಾಖ್ಯಾನಿಸುವ ಸ್ಪಷ್ಟ ನೀತಿಗಳ ಕೊರತೆ ಇದಕ್ಕೆ ಸಹಾಯ ಮಾಡುತ್ತಿಲ್ಲ” ಅವರು ವಿಷಾದಿಸಿದ್ದಾರೆ.

ವೈದ್ಯಕೀಯ ಕಾಲೇಜುಗಳಲ್ಲಿ ಹುದ್ದೆಗಳನ್ನು ಭರ್ತಿ ಮಾಡಲು ಪ್ರಯತ್ನಗಳು ನಡೆಯುತ್ತಿದ್ದರೂ, ಸಾರ್ವಜನಿಕ ವಲಯಕ್ಕೆ ಅಭ್ಯರ್ಥಿಗಳನ್ನು ಆಕರ್ಷಿಸುವುದು ಸವಾಲಾಗಿ ಪರಿಣಮಿಸಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ ಎಂದು ವರದಿ ಹೇಳಿದೆ. ಗ್ರಾಮೀಣ ಆರೋಗ್ಯ ಕೇಂದ್ರಗಳಲ್ಲಿನ ವೈದ್ಯರು ಸಾಮಾನ್ಯವಾಗಿ ಆರೋಗ್ಯ ಶ್ರುಶ್ರೋಷಕರು ಮತ್ತು ನಿರ್ವಾಹಕರ ದ್ವಿಪಾತ್ರಗಳನ್ನು ನಿರ್ವಹಿಸಬೇಕಾಗುತ್ತದೆ ಎಂದು ಅಧಿಕಾರಿ ಹೇಳಿದ್ದಾರೆ.

ಇದನ್ನೂಓದಿ: ದೆಹಲಿ ಮುಂದಿನ ಮುಖ್ಯಮಂತ್ರಿ ಯಾರು? | ಸಿಸೋಡಿಯಾರತ್ತ ಎಲ್ಲರ ಚಿತ್ತ!

“ಗ್ರಾಮೀಣ ಭಾಗದ ವೈದ್ಯರು ವಿವಿಧ ಆರೋಗ್ಯ ಕಾರ್ಯಕ್ರಮಗಳನ್ನು ನಿರ್ವಹಿಸುವ ಹೆಚ್ಚುವರಿ ಒತ್ತಡವನ್ನು ಎದುರಿಸುತ್ತಾರೆ. ಇದು ರೋಗಿಗಳ ಆರೈಕೆಯಿಂದ ಕ್ಲಿನಿಕಲ್ ಅಲ್ಲದ ಆಡಳಿತಾತ್ಮಕ ಕಾರ್ಯಗಳಿಗೆ ವೈದ್ಯರ ಗಮನವನ್ನು ತಿರುಗಿಸುತ್ತದೆ. ಇದು ರೋಗಿಗಳ ಆರೈಕೆಯ ಮೇಲೆ ಪರಿಣಾಮ ಬೀರುವುದಲ್ಲದೆ, ಗ್ರಾಮೀಣ ಪ್ರದೇಶಗಳಲ್ಲಿ ವೈದ್ಯರಾಗಿ ಹುದ್ದೆಗಳನ್ನು ವಹಿಸಿಕೊಳ್ಳುವುದನ್ನು ನಿರುತ್ಸಾಹಗೊಳಿಸುತ್ತದೆ. ಜೊತೆಗೆ ಈ ಒತ್ತಡ ಅವರ ವೈದ್ಯಕೀಯ ಕೌಶಲ್ಯಗಳನ್ನು ನಿರಾಕರಿಸುತ್ತದೆ ಎಂದು ಹಲವಾರು ವೈದ್ಯರು ಭಾವಿಸುತ್ತಾರೆ” ಎಂದು ಅಧಿಕಾರಿ ಹೇಳಿದ್ದಾರೆ.

ವೈದ್ಯಕೀಯ ವೃತ್ತಿಪರರ ಆಸಕ್ತಿಯ ಕೊರತೆಯ ಕಾರಣಕ್ಕೆ ತಾತ್ಕಾಲಿಕವಾಗಿ ಈ ಅಂತರವನ್ನು ತುಂಬಲು ಅಲ್ಪಾವಧಿಯ ನೇಮಕಾತಿಯನ್ನು ಮಾಡಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಬೆಂಗಳೂರಿನ ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿನ ವೈದ್ಯರು, ನಿರ್ದಿಷ್ಟವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಅವರು ಎದುರಿಸುತ್ತಿರುವ ಸವಾಲುಗಳು ಆಡಳಿತಾತ್ಮಕ ಹೊರೆಯನ್ನು ಮೀರಿವೆ. ಗ್ರಾಮೀಣ ಪ್ರದೇಶಗಳಲ್ಲಿ ಸಾಕಷ್ಟು ಸೌಲಭ್ಯಗಳ ಕೊರತೆ, ಕಳಪೆ ಮೂಲಸೌಕರ್ಯ ಮತ್ತು ಸಿಬ್ಬಂದಿ ಕೊರತೆಯು ಹೆಚ್ಚಿನ ಅಪಾಯದ ವಾತಾವರಣವನ್ನು ಸೃಷ್ಟಿಸುತ್ತದೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಹಿರಿಯ ವೈದ್ಯರೊಬ್ಬರು ಮಾತನಾಡಿ, ಹಲವು ಗ್ರಾಮೀಣ ಆರೋಗ್ಯ ಕೇಂದ್ರಗಳು ಸೀಮಿತ ಸಂಪನ್ಮೂಲಗಳೊಂದಿಗೆ ಕಾರ್ಯನಿರ್ವಹಿಸುತ್ತಿದ್ದು, ಗುಣಮಟ್ಟದ ಸೇವೆ ನೀಡುವುದು ಕಷ್ಟಕರವಾಗಿದೆ. ಸಿಬ್ಬಂದಿ ವಾಸಿಸುವ ಕ್ವಾರ್ಟರ್ಸ್‌ಗಳು ಸಾಮಾನ್ಯವಾಗಿ ಕೆಳದರ್ಜೆಯದ್ದಾಗಿರುತ್ತವೆ. ಮೂಲಭೂತ ಸೌಕರ್ಯಗಳ ಲಭ್ಯತೆ ಮತ್ತು ಅವರ ಮಕ್ಕಳಿಗೆ ಉತ್ತಮ ಶಾಲೆಗಳ ಲಭ್ಯತೆ ಸೀಮಿತವಾಗಿರುತ್ತದೆ. ಈ ಕಾರಣಕ್ಕಾಗಿ ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಸಲ್ಲಿಸಲು ವೈದ್ಯರಲ್ಲಿ ಹಿಂಜರಿಯುತ್ತಾರೆ ಎಂದು ವೈದ್ಯರು ತಿಳಿಸಿದ್ದಾರೆ.

ವಿಡಿಯೊ ನೋಡಿ: ಒಕ್ಕೂಟ ವ್ಯವಸ್ಥೆ ಮಣ್ಣು ಮುಕ್ಕಿದೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ಮೀನಾಕ್ಷಿ ಬಾಳಿ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...