HomeUncategorizedಆರ್‌ಜಿ ಕರ್ ಬಿಕ್ಕಟ್ಟು ಪರಿಹರಿಸಲು ಕಿರಿಯ ವೈದ್ಯರಿಗೆ 'ಅಂತಿಮ' ಆಹ್ವಾನ ನೀಡಿದ ಸಿಎಂ ಮಮತಾ ಬ್ಯಾನರ್ಜಿ!

ಆರ್‌ಜಿ ಕರ್ ಬಿಕ್ಕಟ್ಟು ಪರಿಹರಿಸಲು ಕಿರಿಯ ವೈದ್ಯರಿಗೆ ‘ಅಂತಿಮ’ ಆಹ್ವಾನ ನೀಡಿದ ಸಿಎಂ ಮಮತಾ ಬ್ಯಾನರ್ಜಿ!

- Advertisement -
- Advertisement -

ಪ್ರತಿಭಟನಾನಿರತ ವೈದ್ಯರೊಂದಿಗೆ ಎರಡು ಬಾರಿ ನಡೆದ ಮಾತುಕತೆ ವಿಫಲಗೊಂಡ ನಂತರವೂ, ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಪಶ್ಚಿಮ ಬಂಗಾಳ ಸರ್ಕಾರವು ಮತ್ತೊಮ್ಮೆ ವೈದ್ಯರನ್ನು ಸಂಪರ್ಕಿಸಿದೆ. ಮುಖ್ಯ ಕಾರ್ಯದರ್ಶಿ ಮನೋಜ್ ಪಂಥ್ ಅವರು ಕಿರಿಯ ವೈದ್ಯರಿಗೆ ಇಮೇಲ್ ಕಳುಹಿಸಿದ್ದು, “ಸಭೆಗೆ ಇದು ಸರ್ಕಾರದ ಕಡೆಯಿಂದ ಅಂತಿಮ ಪ್ರಯತ್ನವಾಗಿದೆ” ಎಂದು ತಿಳಿಸಿದ್ದಾರೆ. ಕಾಳಿಘಾಟ್‌ನಲ್ಲಿರುವ ಮುಖ್ಯಮಂತ್ರಿ ನಿವಾಸದಲ್ಲಿ ಸಂಜೆ 5 ಗಂಟೆಗೆ ಸಭೆ ನಿಗದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆದರೆ ಸಭೆಯನ್ನು ವೀಡಿಯೊಗ್ರಾಫ್ ಮಾಡಲು ಅಥವಾ ಲೈವ್-ಸ್ಟ್ರೀಮ್ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯ ಕಾರ್ಯದರ್ಶಿ ಪತ್ರದಲ್ಲಿ ಸೂಚಿಸಿದ್ದಾರೆ. ಇದೇ ಕಾರಣಕ್ಕೆ ಹಿಂದಿನ ಸಭೆಗಳು ರದ್ದಾಗಿದ್ದವು.

“ಇದು ಐದನೇ ಮತ್ತು ಕೊನೆಯ ಬಾರಿಗೆ ಮಾನ್ಯ ಮುಖ್ಯಮಂತ್ರಿಗಳು ಮತ್ತು ನಿಮ್ಮ ಪ್ರತಿನಿಧಿಗಳ ನಡುವಿನ ಸಭೆಗಾಗಿ ನಾವು ನಿಮ್ಮನ್ನು ಸಂಪರ್ಕಿಸುತ್ತಿದ್ದೇವೆ. ಹಿಂದಿನ ದಿನದ ನಮ್ಮ ಚರ್ಚೆಗೆ ಅನುಗುಣವಾಗಿ, ನಾವು ಮತ್ತೊಮ್ಮೆ ಮಾನ್ಯ ಮುಖ್ಯಮಂತ್ರಿಗಳೊಂದಿಗಿನ ಸಭೆಗೆ ನಿಮ್ಮನ್ನು ಆಹ್ವಾನಿಸುತ್ತಿದ್ದೇವೆ. ಅವರು ಕಾಳಿಘಾಟ್ ನಿವಾಸದಲ್ಲಿ ಮುಕ್ತ ಮನಸ್ಸಿನಿಂದ ಚರ್ಚೆ ನಡೆಸಲಿದ್ದಾರೆ” ಎಂದು ಪತ್ರದಲ್ಲಿ ಆಹ್ವಾನಿಸಲಾಗಿದೆ.

ಇದನ್ನೂಓದಿ: ಬಾಗಲಕೋಟೆ: ದೇಗುಲ ಪ್ರವೇಶಿಸಿದ ದಲಿತ ಯುವಕನನ್ನು ಕಂಬಕ್ಕೆ ಕಟ್ಟಿ ಥಳಿಸಿದ ಸವರ್ಣೀಯರು

ಏತನ್ಮಧ್ಯೆ, ಪಶ್ಚಿಮ ಬಂಗಾಳದ ಕಿರಿಯ ವೈದ್ಯರು ಸೋಮವಾರ ಕೂಡಾ ತಮ್ಮ ಮುಷ್ಕರವನ್ನು ಮುಂದುವರೆಸಿದ್ದಾರೆ. ವೈದ್ಯರ ಪ್ರತಿಭಟನೆಯು ಎಂಟನೇ ದಿನಕ್ಕೆ ಕಾಲಿಟ್ಟಿದ್ದು, ತಮ್ಮ ಕೆಲಸ ತೊರೆದು ನಡೆಸುತ್ತಿರುವ 36 ನೇ ದಿನದ ಮುಷ್ಕರವನ್ನು ಆರೋಗ್ಯ ಇಲಾಖೆಯ ಪ್ರಧಾನ ಕಛೇರಿಯಾದ ಸ್ವಾಸ್ಥ್ಯ ಭವನದ ಹೊರಗೆ ತಮ್ಮ ಧರಣಿ ನಡೆಸುವ ಮೂಲಕ ಮುಂದುವರೆಸಿದ್ದಾರೆ. ಅವರು ತಮ್ಮ ಬೇಡಿಕೆಗಳಾದ ಕೋಲ್ಕತ್ತಾ ಪೊಲೀಸ್ ಕಮಿಷನರ್ ಮತ್ತು ಹಿರಿಯ ರಾಜ್ಯ ಆರೋಗ್ಯ ಅಧಿಕಾರಿಗಳನ್ನು ವಜಾಗೊಳಿಸುವವರೆಗೂ ಮುಂದುವರಿಯುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

ನಮ್ಮ ಬೇಡಿಕೆಗಳು ಈಡೇರುವವರೆಗೂ ಮುಷ್ಕರ ಮುಂದುವರಿಸುತ್ತೇವೆ. ರಾಜ್ಯ ಸರಕಾರ ಬಿಕ್ಕಟ್ಟನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಧರಣಿ ನಿರತ ಕಿರಿಯ ವೈದ್ಯರೊಬ್ಬರು ತಿಳಿಸಿದ್ದಾರೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶನಿವಾರ ಪ್ರತಿಭಟನಾ ಸ್ಥಳಕ್ಕೆ ದಿಢೀರ್ ಭೇಟಿ ನೀಡಿ ವೈದ್ಯರಿಗೆ ಅವರ ಸಮಸ್ಯೆಗಳನ್ನು ಪರಿಹರಿಸುವುದಾಗಿ ಭರವಸೆ ನೀಡಿದ್ದಾರೆ.

ಆಗಸ್ಟ್ 9 ರಂದು ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‌ನಿಂದ ಸ್ನಾತಕೋತ್ತರ ಮಹಿಳಾ ವೈದ್ಯರ ಶವ ಪತ್ತೆಯಾಗಿತ್ತು. ಅವರನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎಂದು ವರದಿಯಾಗಿದೆ. ಕಲ್ಕತ್ತಾ ಹೈಕೋರ್ಟ್ ಆದೇಶದ ಮೇರೆಗೆ ಕೇಂದ್ರೀಯ ತನಿಖಾ ದಳ (ಸಿಬಿಐ) ಮಹಿಳಾ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯ ತನಿಖೆ ನಡೆಸುತ್ತಿದೆ.

ವಿಡಿಯೊ ನೋಡಿ: ಒಕ್ಕೂಟ ವ್ಯವಸ್ಥೆ ಮಣ್ಣು ಮುಕ್ಕಿದೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ಮೀನಾಕ್ಷಿ ಬಾಳಿ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೇವನಹಳ್ಳಿ| ‘ಷರತ್ತುಗಳಿಲ್ಲದೆ ಭೂಸ್ವಾಧೀನ ಕೈಬಿಡಿ..’; ಚನ್ನರಾಯಪಟ್ಟಣ ರೈತರ ಆಗ್ರಹ

ದೇವನಹಳ್ಳಿಯ 13 ಗ್ರಾಮಗಳ 1,777 ಎಕರೆ ಭೂಸ್ವಾಧೀನ ಪ್ರಕ್ರಿಯೆಗೆ ರೈತರು ಮತ್ತು ಸಂಘಟನೆಗಳ ತೀವ್ರ ಪ್ರತಿರೋಧದ ನಂತರ ಸರ್ಕಾರವು ಜುಲೈ, 15, 2025 ರಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಭೂಸ್ವಾಧೀನವನ್ನು ಸಂಪೂರ್ಣವಾಗಿ...

ಹೈದರಾಬಾದ್| ರದ್ದಾದ ನೋಟುಗಳ ದುರುಪಯೋಗ; ಅಂಚೆ ಸಿಬ್ಬಂದಿಗೆ 2 ವರ್ಷ ಜೈಲು ಶಿಕ್ಷೆ

ನೋಟು ರದ್ದತಿಯ ಸಂದರ್ಭದಲ್ಲಿ 27.27 ಲಕ್ಷ ರೂ.ಗಳನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ವಿಶೇಷ ಸಿಬಿಐ ನ್ಯಾಯಾಲಯವು ಅಂಚೆ ಇಲಾಖೆಯ ಇಬ್ಬರು ಅಧಿಕಾರಿಗಳಿಗೆ ತಲಾ 65,000 ರೂ.ಗಳ ದಂಡದೊಂದಿಗೆ ಎರಡು ವರ್ಷಗಳ ಕಠಿಣ ಜೈಲು...

ಮಹಿಳೆ ಮತ ಚಲಾಯಿಸುವಾಗ ಮತಗಟ್ಟೆ ಪ್ರವೇಶಿಸಿದ ಶಾಸಕ : ತನಿಖೆಗೆ ಆದೇಶ

ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯಲ್ಲಿ ಮಂಗಳವಾರ (ಡಿ.2) ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಸಂದರ್ಭದಲ್ಲಿ ಮಹಿಳೆಯೊಬ್ಬರು ಮತ ಚಲಾಯಿಸುತ್ತಿದ್ದಾಗ ಶಿವಸೇನಾ ಶಾಸಕ ಸಂತೋಷ್ ಬಂಗಾರ್ ಮತಗಟ್ಟೆಗೆ ಪ್ರವೇಶಿಸುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದ್ದು, ಈ ಕುರಿತು ಚುನಾವಣಾ...

ಅಸ್ಸಾಂ| ಕಾರು ಸಹಿತ ಮುಳುಗುತ್ತಿದ್ದ ಏಳು ಜೀವಗಳ ರಕ್ಷಣೆ; ಮಸೀದಿ ಧ್ವನಿವರ್ಧಕದ ಮೂಲಕ ಗ್ರಾಮಸ್ಥರನ್ನು ಎಚ್ಚರಿಸಿದ ಇಮಾಮ್

ನೀರಿನಲ್ಲಿ ಮುಳುಗುತ್ತಿರುವ ವಾಹನದಲ್ಲಿ ಸಿಲುಕಿದ್ದ ಏಳು ಜನರನ್ನು ರಕ್ಷಿಸಲು ಮುಂಜಾನೆ ಮಸೀದಿ ಮೈಕ್‌ ಬಳಸಿ ಇಡೀ ಗ್ರಾಮವನ್ನು ಎಚ್ಚರಿಸಿದ ಅಸ್ಸಾಂನ ಮುಸ್ಲಿಂ ಧರ್ಮಗುರು ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ. ಅಸ್ಸಾಂನ ಶ್ರೀಭೂಮಿ ಜಿಲ್ಲೆಯಲ್ಲಿ ಮಂಗಳವಾರ ಮುಂಜಾನೆ...

ಪ್ರತಿಪಕ್ಷಗಳ ಪ್ರತಿಭಟನೆಗೆ ಮಣಿದ ಕೇಂದ್ರ : ಡಿ.9ರಂದು ಸಂಸತ್ತಿನಲ್ಲಿ ಎಸ್‌ಐಆರ್ ಚರ್ಚೆ

ಸಂಸತ್ತಿನ ಉಭಯ ಸದನಗಳಲ್ಲಿ ಎರಡು ದಿನಗಳಿಂದ ಪ್ರತಿಪಕ್ಷಗಳು ನಡೆಸಿದ ತೀವ್ರ ಪ್ರತಿಭಟನೆಗೆ ಕೇಂದ್ರ ಸರ್ಕಾರ ಮಣಿದಿದೆ. ಡಿಸೆಂಬರ್ 9ರಂದು ಚುನಾವಣಾ ಸುಧಾರಣೆಗಳು ಎಂಬ ವಿಷಯದ ಅಡಿಯಲ್ಲಿ ಎಸ್‌ಐಆರ್ ಕುರಿತು ಚರ್ಚೆ ನಡೆಸಲು ಒಪ್ಪಿಕೊಂಡಿದೆ. ವರದಿಗಳ...

‘ಸಂಚಾರ್ ಸಾಥಿ ಆ್ಯಪ್’ ಕಡ್ಡಾಯವಲ್ಲ, ಅಳಿಸಬಹುದು: ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಸ್ಪಷ್ಟನೆ  

‘ಸಂಚಾರ್ ಸಾಥಿ’ ಅಪ್ಲಿಕೇಶನ್ ಅನ್ನು ಸಕ್ರಿಯಗೊಳಿಸುವುದು ಕಡ್ಡಾಯವಲ್ಲ, ನಿಮಗೆ ಬೇಡವೆಂದಾಗ ಅದನ್ನು ಅಳಿಸಬಹುದು ಎಂದು ದೂರ ಸಂಪರ್ಕ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮಂಗಳವಾರ ಸ್ಪಷ್ಟನೆ ನೀಡಿದ್ದಾರೆ.  ನವೆಂಬರ್ 28 ರಂದು, ಟೆಲಿಕಾಂ ಇಲಾಖೆ ಭಾರತದಲ್ಲಿ...

ಉತ್ತರ ಪ್ರದೇಶ| ಊಟದ ಕೌಂಟರ್‌ನಲ್ಲಿ ‘ಬೀಫ್‌ ಕರಿ’ ಲೇಬಲ್‌’; ಮದುವೆ ಆರತಕ್ಷತೆ ಅಸ್ತವ್ಯಸ್ತ

ಉತ್ತರ ಪ್ರದೇಶದ ಅಲಿಘರ್‌ನ ಸಿವಿಲ್ ಲೈನ್ಸ್ ಪ್ರದೇಶದಲ್ಲಿ ಭಾನುವಾರ ರಾತ್ರಿ ನಡೆದ ವಿವಾಹದ ಆರತಕ್ಷತೆಯಲ್ಲಿ ಇಬ್ಬರು ಅತಿಥಿಗಳು, ಆಹಾರ ಕೌಂಟರ್‌ನಲ್ಲಿ ಬರೆದಿದ್ದ 'ಬೀಫ್‌ ಕರಿ' ಎಂಬ ಲೇಬಲ್‌ಗೆ ಆಕ್ಷೇಪ ವ್ಯಕ್ತಪಡಿಸಿದ ನಂತರ ಸಮಾರಂಭ...

‘ಸಂಚಾರ್ ಸಾಥಿ’ ಆ್ಯಪ್ ಕಡ್ಡಾಯ | ಕೇಂದ್ರದ ಆದೇಶ ವಿರೋಧಿಸಲು ಮುಂದಾದ ಆ್ಯಪಲ್ : ವರದಿ

ಸ್ಮಾರ್ಟ್‌ಫೋನ್ ತಯಾರಕರು ಎಲ್ಲಾ ಹೊಸ ಮೊಬೈಲ್‌ ಫೋನ್‌ಗಳಲ್ಲಿ ಸರ್ಕಾರಿ ಸ್ವಾಮ್ಯದ 'ಸಂಚಾರ್ ಸಾಥಿ' ಆ್ಯಪ್ ಪ್ರಿ ಇನ್‌ಸ್ಟಾಲ್ (Pre-Install) ಮಾಡಬೇಕು ಮತ್ತು ಬಳಕೆದಾರರು ಅದನ್ನು ಡಿಲಿಟ್ ಮಾಡದಂತೆ ನೋಡಿಕೊಳ್ಳಬೇಕು ಎಂಬ ಕೇಂದ್ರ ಸರ್ಕಾರದ...

ಬಾಂಗ್ಲಾದೇಶಿಗರು ಎಂಬ ಆರೋಪ : ಬಂಗಾಳದ ನಾಲ್ವರು ಮುಸ್ಲಿಂ ವ್ಯಾಪಾರಿಗಳಿಗೆ ಒಡಿಶಾ ತೊರೆಯಲು 72 ಗಂಟೆಗಳ ಗಡುವು

ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ನಾಲ್ವರು ಮುಸ್ಲಿಂ ವ್ಯಾಪಾರಿಗಳನ್ನು ಬಾಂಗ್ಲಾದೇಶಿಯರು ಮತ್ತು ರೋಹಿಂಗ್ಯಾ ವಲಸಿಗರು ಎಂದು ಆರೋಪಿಸಿ ಒಡಿಶಾದ ನಯಾಗಢವನ್ನು ತೊರೆಯಲು 72 ಗಂಟೆಗಳ ಗಡುವು ನೀಡಲಾಗಿದೆ ಎಂದು ದಿ ಟೆಲಿಗ್ರಾಫ್ ಮಂಗಳವಾರ...

‘ನಮ್ಮಲ್ಲಿ ಭಿನ್ನಾಭಿಪ್ರಾಯಗಳಿಲ್ಲ, ಒಗ್ಗಟ್ಟಿನಿಂದ ಇದ್ದೇವೆ: ನಾನು, ಡಿ.ಕೆ. ಶಿವಕುಮಾರ್ ಸಹೋದರರಿದ್ದಂತೆ’: ಸಿಎಂ ಸಿದ್ದರಾಮಯ್ಯ

‘ನಾನು ಹಾಗೂ ಉಪಮುಖ್ಯಮಂತ್ರಿಗಳು ಸಹೋದರರಿದ್ದಂತೆ, ಒಂದೇ ಪಕ್ಷದಲ್ಲಿದ್ದು, ಒಂದೇ ಸಿದ್ಧಾಂತ ನಂಬಿಕೊಂಡಿದ್ದೇವೆ, 2028ರ ಚುನಾವಣೆಯಲ್ಲಿಯೂ ಒಟ್ಟಿಗೆ ಕೆಲಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ಡಿಸೆಂಬರ್ 2, ಮಂಗಳವಾರ ಉಪಮುಖ್ಯಮಂತ್ರಿ...