Homeಕರ್ನಾಟಕಸುಗ್ರೀವಾಜ್ಞೆ ಮೂಲಕ ಒಳ ಮೀಸಲಾತಿ ಜಾರಿಗೆ 'ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ' ಆಗ್ರಹ

ಸುಗ್ರೀವಾಜ್ಞೆ ಮೂಲಕ ಒಳ ಮೀಸಲಾತಿ ಜಾರಿಗೆ ‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ’ ಆಗ್ರಹ

- Advertisement -
- Advertisement -

ಕಾಂಗ್ರೆಸ್ ಸರ್ಕಾರ ಸಾಮಾಜಿಕ ನ್ಯಾಯದ ಪರವಾಗಿರುವುದೇ ಆದರೆ, ನಾಳಿನ ಕಲಬುರಗಿ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿಗೆ ತಾತ್ವಿಕವಾಗಿ ಒಪ್ಪಿಕೊಳ್ಳಬೇಕು’ ಎಂದು ದಲಿತ ಸಂಘರ್ಷ ಸಮಿತಿ (ಡಿಎಸ್‌ಎಸ್‌) ಹಿರಿಯ ನಾಯಕ ಆರ್. ಮೋಹನ್ ರಾಜ್ ಒತ್ತಾಯಿಸಿದರು.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ನಡೆದ ಹಕ್ಕೊತ್ತಾಯ ಸಭೆಯಲ್ಲಿ ಮಾತನಾಡಿದ ಅವರು, “ಬಾಬಾ ಸಾಹೇಬ್ ಅಂಬೇಡ್ಕರ್ ಕೂಡ ನಮ್ಮ ಪಾಲನ್ನು ನಮಗೆ ಕೊಡಿ ಎಂದು ಪ್ರತಿಪಾದಿಸಿದ್ದರು” ಎಂದರು.

ಕಾಂಗ್ರೆಸ್ ಸರ್ಕಾರ ಎಸ್‌.ಎಂ ಕೃಷ್ಣ ಅವಧಿಯಲ್ಲಿ ಆಯೋಗ ರಚಿಸಿದೆ. ಕಳೆದ ಮೂವತ್ತು ವರ್ಷಗಳಿಂದ ಚಳವಳಿ ಮಾಡುತ್ತಿದ್ದರೂ ನಮ್ಮ ಬೇಡಿಕೆ ಈಡೇರಿಲ್ಲ.  ಜನಸಂಖ್ಯೆ ಆಧಾರದಲ್ಲಿ ಪಾಲು ಸಿಗಬೇಕು ಎಂಬುವುದು ಕಾನ್ಶಿರಾಮ್ ಆಶಯವಾಗಿತ್ತು. ಎಲ್ಲಾ ಸಮುದಾಯಗಳು ಮೇಲೆ ಬರಬೇಕು ಎಂಬುವುದು ಬಹುಜನ ಚಳವಳಿಯ ಆಶಯವೂ ಹೌದು ಎಂದು ಹೇಳಿದರು.

ಕಾಂಗ್ರೆಸ್ ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆ ಈಡೇರಿಸಿಲ್ಲ. ಈ ಸರ್ಕಾರ ಬರೀ ಸುಳ್ಳುಗಳನ್ನೇ ಹೇಳುತ್ತಿದೆ. ಪರಿಶಿಷ್ಟರ ನಿಧಿಯನ್ನು ಗ್ಯಾರಂಟಿಗಳಿಗೆ ಬಳಸಿದ್ದಾರೆ. ಸಾಮಾಜಿಕ ನ್ಯಾಯದಲ್ಲಿ ಅಹಿಂದ ಹೋರಾಟಗಾರರೆಂದು ಹೇಳುತ್ತಿರುವ ಸಿದ್ದರಾಮಯ್ಯ ಅವರಿಗೆ ಈ ಸಮುದಾಯದ ಬಗ್ಗೆ ಬದ್ಧತೆ ಇದ್ದರೆ ನಾಳಿನ ಸಭೆಯಲ್ಲಿ ಒಳಮೀಸಲಾತಿಗೆ ಅಂಗೀಕಾರ ನೀಡಬೇಕು  ಎಂದು ಆಗ್ರಹಿಸಿದರು.

ಈ ಹಿಂದೆ ವಿರೋಧಿಸುತ್ತಿದ್ದ ಸಮುದಾಯ ಇಂದು ಒಗ್ಗಟ್ಟಾಗಿದೆ. ಸಣ್ಣ ಪ್ರಮಾಣದಲ್ಲಿ ವಿರೋಧ ಇದೆ. ಸುಳ್ಳು ಜಾತಿ ಪ್ರಮಾಣಪತ್ರ ಪಡೆದುಕೊಳ್ಳುತ್ತಿರುವ ಸಮುದಾಯ ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದೆ. ಅವರ ಸಂಖ್ಯೆ ಕೇವಲ ಶೇ. 1ರಷ್ಟಿದೆ. ಅವರ ವಿರುದ್ಧ ಸರ್ಕಾರ ಕ್ರಮ ತೆಗೆದುಕೊಂಡು ಒಳ ಮೀಸಲಾತಿ ಜಾರಿ ಮಾಡಬೇಕು. ಸುಪ್ರೀಂ ಕೋರ್ಟ್ ಮತ್ತು ಸಂವಿಧಾನಕ್ಕೆ ತಲೆಬಾಗಬೇಕು ಎಂದರು.

ಚಿಂತಕ ಶಿವಸುಂದರ್ ಮಾತನಾಡಿ, ಸರ್ಕಾರ ಕೈಗೆ ಸಿಕ್ಕಿದ್ದನ್ನು ತಪ್ಪಿಸಿಕೊಳ್ಳುತ್ತಿದೆ. ಇದನ್ನು ನಾವು ದಕ್ಕಿಸಿಕೊಳ್ಳಬೇಕು. ನಾಳಿನ ಸಭೆಯಲ್ಲಿ ಈ ವಿಚಾರ ಪ್ರಸ್ತಾಪ ಆಗದಿದ್ದರೆ ಏನು ಮಾಡಬೇಕು ಎಂದು ಯೋಚಿಸಬೇಕು. ಇದು ಸಾಮಾಜಿಕ ನ್ಯಾಯದ ಪ್ರಶ್ನೆ. ಎಲ್ಲರೂ ಇದಕ್ಕೆ ಬೆಂಬಲ ಸೂಚಿಸಬೇಕು. ನಾವೆಲ್ಲರೂ ಜೊತೆಯಲ್ಲಿರೋಣ ಎಂದರು.

ಹೋರಾಟಗಾರ ನೂರ್ ಶ್ರೀಧರ್ ಮಾತನಾಡಿ, ಸುಪ್ರೀಂ ಕೋರ್ಟ್‌ ಆದೇಶ ನೀಡಿದೆ ಎಂಬುವುದು ಮಾತ್ರವಲ್ಲ. ಕೋರ್ಟ್‌ ಇತ್ತೀಚಿನ ದಿನಗಳಲ್ಲಿ ಜನಪರ ತೀರ್ಪು ನೀಡಿಲ್ಲ. ಅದರ, ನಡುವೆ ಈ ತೀರ್ಪು ಬಂದಿರುವುದು ಮುಖ್ಯ. ನಾನು ಕಂಡ ವಿಶಿಷ್ಟ ಆಂದೋಲನ ಇದಾಗಿದೆ. ಸತತ ಮೂರು ದಶಕಗಳ ಹೋರಾಟದಲ್ಲಿ ಇತರೆ ಸಮುದಾಯವನ್ನು ಒಪ್ಪಿಕೊಂಡು ಹೋರಾಟ ಮಾಡುತ್ತಾ ಬಂದಿರುವುದು ದೊಡ್ಡ ವಿಷಯ. ದಲಿತ ಚಳವಳ ನಿರಂತರವಾಗಿ ನಡೆದು ಬರುತ್ತಿರುವಾಗ ದುಷ್ಟ ಶಕ್ತಿಗಳ ನಡುವೆ ಹೋರಾಟ ಮಾಡಿದೆ. ಯಾವ ಸಂಚಿಗೂ ಬಲಿಯಾಗದೆ ಸಮುದಾಯವನ್ನು ಉಳಿಸಿಕೊಳ್ಳುವ ಕೆಲಸದ ಜೊತೆಗೆ, ವಿಚಾರ ಒಪ್ಪದ ಎಲ್ಲರನ್ನೂ ಮನವೊಲಿಸಿದೆ. ಈ ಹೋರಾಟಕ್ಕೆ ಬಹಳಷ್ಟು ಮಹತ್ವ ಇದೆ. ಇಡೀ ಸಮುದಾಯವನ್ನು ಒಪ್ಪಿಸಿದ್ದು ಬಹಳ ದೊಡ್ಡ ಜಯ ಎಂದು ಹೇಳಿದರು.

ಎರಡನಡೇ ಸಾಧನೆ ಕರ್ನಾಟಕದ ಎಲ್ಲಾ ಜನಪರ ಚಿಂತಕರು ಮತ್ತು ಸಂಘಟನೆಗಳನ್ನು ಈ ಹೋರಾಟಕ್ಕೆ ಒಪ್ಪಿಸಿದ್ದು. ಮೂರನೇ ಜಯ ಎಲ್ಲಾ ವಿರೋಧ ಪಕ್ಷಗಳು ಇದನ್ನು ಒಪ್ಪಿಕೊಳ್ಳಬೇಕಾಯಿತು. ನಾಲ್ಕನೆಯದ್ದಾಗಿ ನ್ಯಾಯಾಲಯವೂ ಕೂಡ ತೀರ್ಪು ನೀಡಿ ಬೆಂಬಲ ನೀಡಿದೆ. ಕಾಂಗ್ರೆಸ್ ಪಕ್ಷ ಎಂದರೆ ದ್ವಂದ್ವಗಳ ಪಕ್ಷ. ಅಲ್ಲಿ ಎಲ್ಲರೂ ಒಪ್ಪುತ್ತಾರೆ ಎಂಬುವುದು ಅನುಮಾನ. ಇದು ಜಾರಿಯಾಗಬಾರದು ಎಂಬ ಗುಂಪು ಕೆಲಸ ಮಾಡುತ್ತಿರುತ್ತದೆ. ಭಿನ್ನಾಪ್ರಾಯ ಬಂದಾಗ ಅವರು ಏನು ಮಾಡುತ್ತಾರೆ ಎನ್ನುವುದು ಮುಖ್ಯ ಎಂದರು.

ಅಡ್ಡಗೋಡೆ ಮೇಲೆ ದೀಪು ಇಡುವ ತೀರ್ಮಾಣ ನಾಳೆ ಬಂದರೂ ಬರಬಹುದು. ನಾಳೆ ಎಂದು ಕಾಯಿಸುವ ಆಪಾಯವೂ ಇದೆ. ಒಂದು ವೇಳೆ ಹಾಗಾದರೆ ನಾಡಿದ್ದು ಏನು ಎಂಬುವುದು ನಮ್ಮೆಲ್ಲರ ಮುಂದಿರುವ ಪ್ರಶ್ನೆ. ದಯವಿಟ್ಟೂ ಯಾವುದೇ ಗ್ಯಾಪ್ ಕೊಡಬಾರದು ಎಂಬುವುದು ಸಮಿತಿಗೆ ನನ್ನ ಸಲಹೆ. ಸರ್ಕಾರ ತೀರ್ಮಾಣ ಬರದಿದ್ದರೆ ನಾಡಿದ್ದರಿಂದ ಹೋರಾಟ ಮಾಡಬೇಕು. ಇಲ್ಲಿಯವರೆಗೆ ಮಾಡಿರುವ ಜನ ಹೋರಾಟದಿಂದಲೇ ತೀರ್ಪು ಕೂಡ ಬಂದಿರುವುದು. ಇದರ ಅಂತಿಮ ಫಲಿತಾಂಶ ಕೂಡ ಹೋರಾಟದಿಂದಲೇ ಆಗಬೇಕು ಎಂದು ಹೇಳಿದರು.

ಮುಂದಿನ ಹೋರಾಟ ಸಮುದಾಯದ ಮೇಲೆ ಮಾತ್ರ ಬೀಳದೆ ಎಲ್ಲಾ ಜನಪರ ಸಂಘಟನೆಗಳ ಜವಾಬ್ದಾರಿ ಆಗಬೇಕು. ಗೆಲುವು ಸಿಗುವವರೆಗೂ ಜೊತೆಯಲ್ಲಿದ್ದು ಹೋರಾಟ ಮಾಡೋಣ. ಮೂರು ದಶಕಗಳ ಹೋರಾಟಕ್ಕೆ ಗೆಲುವು ಸಿಗಬೇಕು. ಆದರೆ, ಗೆಲುವು ತಡವಾಗಬಾರದು. ಗೆಲುವು ಸಿಗದಿದ್ದರೆ ನಾಡಿದ್ದರಿಂದ ಮತ್ತೆ ಹೋರಾಟ ಮಾಡೋಣ.

ಮಾರಸಂದ್ರ ಮುನಿಯಪ್ಪ ಮಾತನಾಡಿ, ಮೊದಲ ಸಚಿವ ಸಂಪುಟ ಸಭೆಯಲ್ಲೇ ಒಳ ಮೀಸಲಾತಿ ಜಾರಿ ಮಾಡುತ್ತೇವೆ ಎಂದು ಚಿತ್ರದುರ್ಗದ ಸಮಾವೇಶದಲ್ಲಿ ಸಿದ್ದರಾಮಯ್ಯ ಚುನಾವಣೆಗೂ ಮುಂಚೆ ಹೇಳಿದ್ದರು. ಬಿಜೆಪಿ ಕೂಡ ಕೇಂದ್ರಕ್ಕೆ ಪತ್ರ ಬರೆದು ನಮ್ಮನ್ನು ಯಾಮಾರಿಸಿತ್ತು. ರಾಜ್ಯದ ಮೂರು ಪಕ್ಷಗಳು ಏನೂ ಮಾಡಿಲ್ಲ. ಸುಪ್ರೀಂ ಕೋರ್ಟ್‌ ಮಾತ್ರ ತೀರ್ಪು ನೀಡಿದೆ. ತೀರ್ಪು ನೀಡಿ ಇಷ್ಟು ದಿನವಾದರೂ ಜಾರಿಗೆ ಮೀನಾಮೇಶ ಎಣಿಸುತ್ತಿರುವುದು ಏಕೆ? ಹೊಲೆಯರು, ಲಂಬಾಣಿ, ಭೋವಿಗಳು ವಿರೊಧ ಮಾಡುತ್ತಿಲ್ಲ. ಇಷ್ಟಿದ್ದರೂ ವಿಳಂಬ ಏಕೆ? ಸಾಯೋವರೆಗೂ ನಾವು ಹೋರಾಟ ಮಾಡಬೇಕು. ಸಾಯೋವರೆಗೂ ಕುಸ್ತಿ ಅಭ್ಯಾಸ ಮಾಡಿದರೆ ಕುಸ್ತಿ ಮಾಡುವುದು ಯಾವಾಗ? ಆಂದ್ರ, ಕರ್ನಾಟಕದಲ್ಲಿ ಈ ಹೋರಾಟದಲ್ಲಿ ಹಲವರು ಸತ್ತಿದ್ದಾರೆ. ನಾವು ಶತಾಯಗತಾಯ ಪ್ರಯತ್ನ ಮಾಡಿದರೂ ಬಿಎಸ್‌ಪಿಯಿಂದ ಏನನ್ನೂ ಮಾಡಲು ಸಾಧ್ಯವಾಗಿಲ್ಲ. ಸುಪ್ರೀಂ ರ್ಕೋರ್ಟ್‌ ತೀರ್ಪನ್ನು ಮಾಯಾವತಿ ವಿರೋಧಿಸಿದ್ದಾರೆ. ನಾವು ಅವರನ್ನು ಭೇಟಿ ಮಾಡಿ ಮನವರಿಕೆ ಮಾಡಲು ಲಕ್ನೋಗೆ ತೆರಳಿದರೂ ಅವರ ಭೇಟಿಗೆ ಸಾಧ್ಯವಾಗಲಿಲ್ಲ. ನಮಗೆ ಎಲ್ಲಾ ಜಿಲ್ಲೆಗಳ ಕಾರ್ಯಕರ್ತರಿಂದ ವಿರೋಧ ಬಂದಿತ್ತು. ಉತ್ತರ ಭಾರತದ ಚಮ್ಮಾರರು ಮೀಸಲಾತಿ ಪಡೆದುಕೊಂಡಿದ್ದಾರೆ. ಸಣ್ಣಪುಟ್ಟ ಜಾತಿಗಳಿಗೆ ಮೀಸಲಾತಿ ಸಿಗುವುದು ಅವರಿಗೆ ಇಷ್ಟವಿಲ್ಲ. ಉತ್ತರ ಮತ್ತು ದಕ್ಷಿಣ ಭಾರತದ ವಿವಾದಗಳೇ ಬೇರೆ ಬೇರೆ. ಇದನ್ನು ಅವರಿಗೆ ನಾವು ಮನವರಿಗೆ ಮಾಡಿದರೂ ಅವರಿಗೆ ಅರ್ಥವಾಗಿಲ್ಲ. ಮಾಯಾವತಿ ನಿಲುವು ವಿರೋಧಿಸಿ ನಾವು ರಾಜೀನಾಮೆ ನೀಡಿದ್ದೇವೆ. 25 ಜಿಲ್ಲೆಗಳ ಜಿಲ್ಲಾಧ್ಯಕ್ಷರೂ ರಾಜೀನಾಮೆ ನೀಡಿದ್ದಾರೆ ಎಂದು ವಿವರಿಸಿದರು.

ನಾವು ಹೀಗೆ ಹೋರಾಟ ಮಾಡಿದರೆ ಸಾಕಾಗುವುದಿಲ್ಲ. ಎಲ್ಲಾ ಮಂತ್ರಿಗಳು ಮತ್ತು ಶಾಸಕರ ಮನೆ ಮುಂದೆ, ಅವರ ಕ್ಷೇತ್ರಗಳಲ್ಲೇ ಕುತ್ತಿಗೆ ಹಿಡಿದು ಕೇಳಬೇಕು. ಅವರು ಈ ಸಮಸ್ಯೆ ನಮ್ಮದಲ್ಲ ಎಂದು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಬೆಂಬಲ ನೀಡದಿದ್ದರೆ ನಾವು ಸುಮ್ಮನಿರಲ್ಲ ಎಂದು ಗಟ್ಟಿ ಧ್ವನಿಯಲ್ಲಿ ಕೇಳಬೇಕು. ಮಾತಿಗೆ ತಪ್ಪಲ್ಲ ಎನ್ನುವ ಸಿದ್ದರಾಮಯ್ಯ ಈಗ ಮಾತು ತಪ್ಪುತ್ತಿದ್ದಾರೆ. ಶಾಸಕರು, ಸಚಿವರು ಮನೆ ಮುಂದೆ ಹೋರಾಟ ಹಮ್ಮಿಕೊಳ್ಳಬೇಕು. ಇದಕ್ಕೆ ಬಿಎಸ್‌ಪಿಯಿಂದ ಹೊರ ಬಂದಿರುವ ನಮ್ಮೆಲ್ಲ ಬೆಂಬಲವೂ ಇದೆ. ನಾಳೆ ಸಚಿವ ಸಂಪುಟ ಸಭೆಯಲ್ಲಿ ಮೀಸಲಾತಿಗೆ ಅಂಗೀಕಾರ ನೀಡಬಹುದು ಎಂಬ ವಿಶ್ವಾಸ ಇಲ್ಲ. ಇದಕ್ಕೆ ಸಮಿತಿ ರಚಿಸುವ ಸಾಧ್ಯತೆ ಇದೆ ಎಂದರು.

ಇದನ್ನೂ ಓದಿ : ಕಲಬುರಗಿಯಲ್ಲಿ ವಿಶೇಷ ಸಂಪುಟ ಸಭೆ ನಡೆಸಲಿರುವ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....