Homeಕರ್ನಾಟಕಸ್ಯಾಂಡಲ್‌ವುಡ್‌ನಲ್ಲಿ ಮಹಿಳಾ ಸುರಕ್ಷಾ ಸಮಿತಿ ರಚನೆಗೆ ಸಿಎಂಗೆ ಪತ್ರ ಬರೆದ ನಟಿ ಸಂಜನಾ ಗಲ್ರಾನಿ

ಸ್ಯಾಂಡಲ್‌ವುಡ್‌ನಲ್ಲಿ ಮಹಿಳಾ ಸುರಕ್ಷಾ ಸಮಿತಿ ರಚನೆಗೆ ಸಿಎಂಗೆ ಪತ್ರ ಬರೆದ ನಟಿ ಸಂಜನಾ ಗಲ್ರಾನಿ

- Advertisement -
- Advertisement -

ಕನ್ನಡ ಚಿತ್ರರಂಗದಲ್ಲಿ ಮಹಿಳಾ ನಟರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ತೆಡೆಯಲು ‘ಆಂತರಿಕ ಸಮಿತಿ’ಗೆ ಚಿತ್ರನಿರ್ಮಾಪಕರು ಮತ್ತು ನಟರು ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ನಟಿ ಸಂಜನಾ ಗಲ್ರಾನಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ‘ಮಹಿಳೆಯರಿಗೆಂದೆ ಹೊಸ ಸಮಿತಿ ರಚನೆ’ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.ಸ್ಯಾಂಡಲ್‌ವುಡ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಿಎಂ ಅವರಿಗೆ ಬರೆದಿರುವ ಪತ್ರದಲ್ಲಿ, ಸಂಜನಾ ಗಲ್ರಾನಿ ಫೌಂಡೇಶನ್‌ ಮೂಲಕ, ಚಲನಚಿತ್ರೋದ್ಯಮದಲ್ಲಿ ಮಹಿಳಾ ಶೋಷಣೆಯನ್ನು ತಡೆಗಟ್ಟಲು ಕಡ್ಡಾಯವಾಗಿ ತೆಗೆದುಕೊಳ್ಳಬೇಕಾದ ಕೆಲವು ಪ್ರಮುಖ ಸುರಕ್ಷತಾ ಕ್ರಮಗಳನ್ನು ಪ್ರಾರಂಭಿಸಲು ಮತ್ತು ಮಹಿಳೆಯ ಹೊಸ ಸಮಿತಿ ರಚನೆಗೆ ವಿನಂತಿಸುತ್ತೇವೆ ಎಂದು ಅವರು ಹೇಳಿದ್ದಾರೆ. ಜೊತೆಗೆ ಸರ್ಕಾರದ ಮಟ್ಟದಲ್ಲೂ ಕನ್ನಡ ಚಿತ್ರರಂಗದ ಮಹಿಳಾ ಕಲಾವಿದರಿಗೆ ವಿಶೇಷ ಅನುದಾನ ಹಾಗೂ ‘ಸ್ಯಾಂಡಲ್‌ವುಡ್ ವುಮೆನ್ ಆರ್ಟಿಸ್ಟ್‌ ಅಸೋಸಿಯೇಷನ್(SWSS) ರಚನೆಯಾದರೆ ಸರ್ಕಾರದ ಮಟ್ಟದಲ್ಲಿ ಅದಕ್ಕೆ ಮಾನ್ಯತೆ ನೀಡಬೇಕು ಎಂದು ಕೇಳಿಕೊಂಡಿದ್ದಾರೆ.

“ಚಿತ್ರರಂಗದ ಮಹಿಳೆಯರ ನೇತೃತ್ವದಲ್ಲಿ ಮಹಿಳಾ ಕಲಾವಿದರ ಸಂಘದ ವಿಭಾಗವನ್ನು ರಚಿಸಬೇಕು ಮತ್ತು ಪ್ರಸ್ತುತ ಇರುವ ಕಲಾವಿದರ ಸಂಘದ ವಿಸ್ತರಣೆಯಾಗಿ ಮಹಿಳಾ ನಟಿಯರಿಗೆ ಮೂಲಭೂತಹಕ್ಕುಗಳ ಬಗ್ಗೆ ಶಿಕ್ಷಣ ನೀಡಲು ಅದು ಸಕ್ರಿಯವಾಗಿರಬೇಕು” ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

ಇದನ್ನೂಓದಿ: ಸಿನಿಮಾ ಸೆಟ್‌ನಲ್ಲಿ ‘ಆಂತರಿಕ ಸಮಿತಿ’ ಬೇಡವೆಂದ ಕನ್ನಡ ಚಲನಚಿತ್ರ ನಿರ್ಮಾಪಕರು!

ಇತರ ಚಲನಚಿತ್ರೋದ್ಯಮಗಳಲ್ಲಿ ನಡೆಯುತ್ತಿರುವ ಮಹಿಳಾ ಶೋಷಣೆಯ ಪ್ರಸಂಗಗಳ ಸರಣಿಯನ್ನು ಗಮನಿಸಿ, “ನಮ್ಮ ಕನ್ನಡ ಚಿತ್ರೋದ್ಯಮ” ದಲ್ಲಿ ಪ್ರಶಾಂತತೆಯನ್ನು ಕಾಪಾಡಿಕೊಳ್ಳುವ ಅಗತ್ಯವಿದ್ದು, ನಮ್ಮ ಚಿತ್ರೋದ್ಯಮ ಯಾವುದೇ ಮುಜುಗರದ ಪರಿಸ್ಥಿತಿಯಿಂದ ಮತ್ತು ಭವಿಷ್ಯದಲ್ಲಿ ಅಂತಹ ಯಾವುದೇ ಕಪ್ಪು ಚುಕ್ಕೆಗಳಿಂದ ರಕ್ಷಿಸಲು ನಿಮ್ಮೆಲ್ಲರ ಸಹಕಾರ ಅಗತ್ಯವಿದೆ ಎಂದು ಮುಖ್ಯಮಂತ್ರಿಗೆ ಬರೆದ ಪತ್ರದಲ್ಲಿ ಸಂಜನಾ ಹೇಳಿದ್ದಾರೆ.

ಕನ್ನಡ ಚಿತ್ರರಂಗದ ಮಹಿಳಾ ಸಂಘ ರಚನೆಯಾದರೆ ಅದಕ್ಕೆ ಕೆಲವು ನಿಯಮಗಳನ್ನು ಕೂಡಾ ಸಂಜನಾ ಅವರು ಪ್ರಸ್ತಾಪಸಿದ್ದಾರೆ. “ಪ್ರತಿಯೊಬ್ಬ ಹೊಸ ನಟ ಮತ್ತು ನಟಿಯರು ತಮ್ಮ ಮೊದಲ ಚಿತ್ರಕ್ಕೆ ಸಹಿ ಹಾಕಿದ೦ತೆಯೇ ಕಲಾವಿದರ ಸಂಘಕ್ಕೆ ಕಡ್ಡಾಯವಾಗಿ ನೋಂದಾಯಿಸಿಕೊಳ್ಳುಬೇಕು. ಅವರಿಗೆ ಕನ್ನಡ ಚಿತ್ರರಂಗದ ನೋಂದಾಯಿತ ಕಲಾವಿದರಾಗಿ ತಮ್ಮ ವಿಶಿಷ್ಟ ಗುರುತಿನ ಸಂಖ್ಯೆಯನ್ನು ನೀಡಬೇಕು” ಎಂದು ಅವರು ಹೇಳಿದ್ದಾರೆ.

“ಚಿತ್ರಕ್ಕೆ ಸಹಿ ಮಾಡುವ ಪ್ರತಿಯೊಬ್ಬ ಕಲಾವಿದರು ಕಲಾವಿದರ ಸಂಘಕ್ಕೆ ಬ೦ದು ಸೈನ್‌ ಅಪ್‌ ಮಾಡವುದು ಮತ್ತು SWAA ಕಮಿಟಿ ನಿಯಮ ಪುಸ್ತಕವನ್ನು ನೀಡಿ ಅವರಿಗೆ ಕರ್ತವ್ಯ, ಬಾಧ್ಯತೆ ಗಳನ್ನು ತಿಳಿ ಹೇಳಬೇಕು. ಇದರಿಂದಾಗಿ ಪ್ರತಿಯೊಬ್ಬ ಮಹಿಳೆಯೂ SWAAಯಿಂದ ನಟಿಯಾಗಿ ಅವಳ ಸಾಮಾಜಿಕ ಹಕ್ಕುಗಳು ಮತ್ತು ಬಾಧ್ಯತ್ಯೆಗಳ ಬಗ್ಗೆ ತಿಳಿದುಕೊಳ್ಳಬಹುದು” ಎಂದು ಹೇಳಿದ್ದಾರೆ.

ಇದನ್ನೂಓದಿ: ಬೆಂಗಳೂರು | ನಡುರಸ್ತೆಯಲ್ಲಿ ಯುವಕನ್ನು ಬೆತ್ತಲೆಗೊಳಿಸಿದ ರೌಡಿ ಶೀಟರ್!

“ಹೊಸದಾಗಿ ಸ್ಥಾಪಿಸಲಾದ SWAA ಯಾವುದೇ ಸಮಯದಲ್ಲಿ ನಟಿಯರು ಎದುರಿಸುವ ಯಾವುದೇ ಸಮಸ್ಯೆಗಳನ್ನು ಪರಿಹರಿಸಲು ಸುಲಭವಾಗಿ ಲಭ್ಯವಿರಬೇಕು. ಅಲ್ಲದೆ, ಎಲ್ಲಾ ನಿಯಮಗಳನ್ನು ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ನಿಯಮ ಪುಸ್ತಕದ ರೂಪದಲ್ಲಿ ಲಿಖಿತವಾಗಿ ನೀಡಬೇಕು. ಕಲಾವಿದರ ಸಂಘದಲ್ಲಿ ನಟರ ನೋಂದಣೆಗೆ ಸಂಬಂಧಿಸಿದ ನಿಯಮ ಪುಸ್ತಕವನ್ನು ಹಸ್ತಾಂತರಿಸುವುದು SWAA ಜವಾಬ್ದಾರಿಯಾಗಿರಬೇಕು.” ಎಂದು ಸಲಹೆ ನೀಡಿದ್ದಾರೆ.ಸ್ಯಾಂಡಲ್‌ವುಡ್‌

SWAAಗೆ ಇರಬೇಕಾದ ನಿಯಮಗಳ ಬಗ್ಗೆ ಕೂಡಾ ಅವರು ಸಲಹೆ ನೀಡಿದ್ದು, “ರಾತ್ರಿ ಅಥವಾ ಹಗಲಿನ ಶೂಟಿಂಗ್‌ ಸಮಯದಲ್ಲಿ ನಟಿಯರು ತಮ್ಮ ಕುಟುಂಬದ ಒಬ್ಬ ವ್ಯಕ್ತಿಯನ್ನು ಯಾವುದೇ ಸ್ಥಳೀಯ ಅಥವಾ ಹೊರಗಿನ ಶೂಟಿಂಗ್‌ ಸ್ಥಳಕ್ಕೆ ಜೊತೆಯಲ್ಲಿ ಕರೆದೊಯ್ಯುವುದನ್ನು ಕಡ್ಡಾಯಗೊಳಿಸಬೇಕು. ಜೊತೆಗೆ ಈ ಕುಟುಂಬದ ಸದಸ್ಯರಿಗೆ ಸಾರಿಗೆ ಶುಲ್ಕವನ್ನು ಒದಗಿಸಬೇಕು.” ಎಂದು ಅವರು ಹೇಳಿದ್ದಾರೆ.

“ನಟಿಯರಿಗೆ ಶೂಟಿಂಗ್‌ ಸ್ಥಳದಲ್ಲಿ ತಮ್ಮ ಬಟ್ಟೆಗಳನ್ನು ಬದಲಾಯಿಸಲು ಕಾರವಾನ್‌ನಂತಹ ಖಾಸಗಿ ಸ್ಥಳವನ್ನು ಒದಗಿಸಬೇಕು ಅಥವಾ ಮಹಿಳಾ ಕಲಾವಿದರಿಗೆ ಮೂಲಭೂತ ಸೌಕರ್ಯಕ್ಕಾಗಿ ಕನಿಷ್ಠ ವೈಯಕ್ತಿಕ ಕೊಠಡಿಯನ್ನು ಒದಗಿಸಬೇಕು.” ಎಂದು ಅವರು ಆಗ್ರಹಿಸಿದ್ದಾರೆ.

ಸಂಜನಾ ಗಲ್ರಾನಿ ಅವರು ಮುಖ್ಯಮಂತ್ರಿ ಅವರಿಗೆ ಬರೆದ ಪತ್ರದ ಮೂಲಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌, ಗೃಹ ಸಚಿವ ಜಿ. ಪರಮೇಶ್ವರ್‌, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್‌, ಡಿಜಿಐಜಿ ಅಲೋಕ್‌ ಮೋಹನ್‌, ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್‌ ಬಣಕಾರ್‌, ನಿರ್ದೇಶಕರ ಸಂಘದ ಅಧ್ಯಕ್ಷ ಎನ್‌ ಆರ್‌ ಕೆ ವಿಶ್ವನಾಥ್‌, ಕಲಾವಿದರ ಸಂಘದ ಅಧ್ಯಕ್ಷ/ ಕಾರ್ಯದರ್ಶಿ – ರಾಕ್ಲೈನ್‌ ವೆಂಕಟೇಶ್‌, ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್‌ ಎಂ ಸುರೇಶ್‌ ಸೇರಿದಂತೆ ಚಿತರಂಗಕ್ಕೆ ಸಂಬಂಧಪಟ್ಟವರೆಲ್ಲರಿಗೂ ವ್ಯವಸ್ಥೆಯಲ್ಲಿ ಬದಲಾವಣೆ ಮತ್ತು ಮಹಿಳಾ ರಕ್ಷಣೆಗೆ ಮನವಿ ಮಾಡಿದ್ದಾರೆ.

ವಿಡಿಯೊ ನೋಡಿ: ಗೌರಿ ನೆನಪು ಕಾರ್ಯಕ್ರಮದಲ್ಲಿ ರಾಮಕುಮಾರ್ ಅವರ ಮಾತುಗಳು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...