Homeಮುಖಪುಟಜಮ್ಮು ಕಾಶ್ಮೀರ | ವಿಧಾನಸಭೆ ಚುನಾವಣೆ ಮತದಾನ ಆರಂಭ

ಜಮ್ಮು ಕಾಶ್ಮೀರ | ವಿಧಾನಸಭೆ ಚುನಾವಣೆ ಮತದಾನ ಆರಂಭ

- Advertisement -
- Advertisement -

ಜಮ್ಮು ಕಾಶ್ಮೀರದಲ್ಲಿ ಬುಧವಾರ ವಿಧಾನಸಭೆ ಚುನಾವಣೆಗೆ ಮತದಾನ ಪ್ರಾರಂಭವಾಗಿದ್ದು, ರಾಜ್ಯದಲ್ಲಿ 370ನೇ ವಿಧಿಯನ್ನು ರದ್ದುಪಡಿಸಿದ ನಂತರ ನಡೆಯುತ್ತಿರುವ ಮೊದಲ ವಿಧಾನಸಭಾ ಚುನಾವಣೆ ಇದಾಗಿದೆ. 370ನೇ ವಿಧಿ ರದ್ದು ಮಾಡಿ ರಾಜ್ಯವನ್ನು ಜಮ್ಮು ಕಾಶ್ಮೀರ ಮತ್ತು ಲಡಾಕ್‌ ಎಂದು 2 ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಮಾಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಏಳು ಜಿಲ್ಲೆಗಳಲ್ಲಿ ಹರಡಿರುವ 24 ಕ್ಷೇತ್ರಗಳಲ್ಲಿ ಇಂದು ಬಿಗಿಯಾದ ಭದ್ರತಾ ವ್ಯವಸ್ಥೆಗಳ ನಡುವೆ 1 ನೇ ಹಂತದಲ್ಲಿ ಮತದಾನ ನಡೆಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜೊತೆಗೆ ಜಮ್ಮು ಕಾಶ್ಮೀರವು ಕೇಂದ್ರಾಡಳಿತ ಪ್ರದೇಶ ಎಂದು ಆದ ನಂತರ ನಡೆಯುತ್ತಿರುವ ಮೊದಲ ವಿಧಾನಸಭಾ ಚುನಾವಣೆಯಾಗಿದ್ದು, ಕಳೆದ 10 ವರ್ಷಗಳಲ್ಲಿ ವಿಧಾನಸಭಾ ಚುನಾವಣೆ ಇಲ್ಲಿ ನಡೆದಿಲ್ಲ.

ಭದ್ರತೆ ಸೇರಿದಂತೆ ಎಲ್ಲ ವ್ಯವಸ್ಥೆಗಳು ಜಾರಿಯಲ್ಲಿದ್ದು, ಜಮ್ಮು ಕಾಶ್ಮೀರದ 24 ವಿಧಾನಸಭಾ ಕ್ಷೇತ್ರಗಳಲ್ಲಿ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯದಲ್ಲಿ ಮೂರು ಹಂತದ ಚುನಾವಣೆಯ ಮೊದಲ ಹಂತ ಇದಾಗಿದ್ದು, ಪಿರ್ ಪಂಜಾಲ್ ಪರ್ವತ ಶ್ರೇಣಿಯ ಎರಡೂ ಬದಿಯಲ್ಲಿರುವ ಜಮ್ಮು ಕಾಶ್ಮೀರದ ಏಳು ಜಿಲ್ಲೆಗಳು ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಮತದಾನ ಮಾಡುತ್ತಿದ್ದಾರೆ.

ಇದನ್ನೂಓದಿ: ಪ್ರತಿಭಟನಾ ನಿರತ ವೈದ್ಯರ ಬೇಡಿಕೆಗೆ ಮಣಿದ ಮಮತಾ ಸರ್ಕಾರ!

ಜಮ್ಮು ಪ್ರದೇಶದ ಮೂರು ಜಿಲ್ಲೆಗಳಲ್ಲಿ ಎಂಟು ಮತ್ತು ಕಾಶ್ಮೀರ ಕಣಿವೆಯ ನಾಲ್ಕು ಜಿಲ್ಲೆಗಳ 16 – 24 ವಿಧಾನಸಭಾ ಕ್ಷೇತ್ರಗಳಿಗೆ ಸ್ಪರ್ಧಿಸುತ್ತಿರುವ 90 ಸ್ವತಂತ್ರ ಅಭ್ಯರ್ಥಿಗಳು ಸೇರಿದಂತೆ 219 ಅಭ್ಯರ್ಥಿಗಳ ಭವಿಷ್ಯವನ್ನು 23 ಲಕ್ಷಕ್ಕೂ ಹೆಚ್ಚು ಮತದಾರರು ಇಂದು ನಿರ್ಧರಿಸಲಿದ್ದಾರೆ.

ಚುನಾವಣಾ ಆಯೋಗದ (EC) ಪ್ರಕಾರ, 11,76,462 ಪುರುಷರು, 11,51,058 ಮಹಿಳೆಯರು ಮತ್ತು 60 ತೃತೀಯಲಿಂಗಿ ಮತದಾರರನ್ನು ಒಳಗೊಂಡಂತೆ ಒಟ್ಟು 23,27,580 ಮತದಾರರು ಹಂತ 1 ರಲ್ಲಿ ಮತ ಚಲಾಯಿಸಲು ಅರ್ಹರಾಗಿದ್ದಾರೆ.

“18 ರಿಂದ 19 ವರ್ಷ ವಯಸ್ಸಿನ 1.23 ಲಕ್ಷ ಯುವಕರು, 28,309 ವಿಕಲಾಂಗ ವ್ಯಕ್ತಿಗಳು (PwDs) ಮತ್ತು 85 ವರ್ಷಕ್ಕಿಂತ ಮೇಲ್ಪಟ್ಟ 15,774 ಹಿರಿಯ ಮತದಾರರು ಸಹ ಮೊದಲ ಹಂತದಲ್ಲಿ ತಮ್ಮ ಹಕ್ಕು ಚಲಾಯಿಸಲು ಅರ್ಹರಾಗಿದ್ದಾರೆ” ಎಂದು EC ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

3,276 ಮತಗಟ್ಟೆಗಳಲ್ಲಿ ಒಟ್ಟು 14,000 ಮತಗಟ್ಟೆ ಸಿಬ್ಬಂದಿ ಪ್ರಕ್ರಿಯೆಯ ಮೇಲ್ವಿಚಾರಣೆ ನಡೆಸಲಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಇದನ್ನೂಓದಿ: ಅಕ್ಟೋಬರ್ 1 ರವರೆಗೆ ದೇಶದಾದ್ಯಂತ ಬುಲ್ಡೋಜರ್ ದಾಳಿ ನಿಲ್ಲಿಸಿ: ಸುಪ್ರೀಂಕೋರ್ಟ್ ಆದೇಶ

“302 ನಗರ ಮತಗಟ್ಟೆಗಳು ಮತ್ತು 2,974 ಗ್ರಾಮೀಣ ಮತಗಟ್ಟೆಗಳಿವೆ. ಪ್ರತಿ ಮತಗಟ್ಟೆಯಲ್ಲಿ ಅಧ್ಯಕ್ಷರು ಸೇರಿದಂತೆ ನಾಲ್ವರು ಚುನಾವಣಾ ಸಿಬ್ಬಂದಿಯನ್ನು ನಿಯೋಜಿಸಲಾಗುವುದು. ಒಟ್ಟು 14,000 ಕ್ಕೂ ಹೆಚ್ಚು ಚುನಾವಣಾ ಸಿಬ್ಬಂದಿಯನ್ನು 1 ನೇ ಹಂತದ ಚುನಾವಣೆಗೆ ಕರ್ತವ್ಯಕ್ಕೆ ನಿಯೋಜಿಸಲಾಗುವುದು.” ಅವರು ಹೇಳಿದ್ದಾರೆ.

ಭದ್ರತಾ ವ್ಯವಸ್ಥೆಗಳಲ್ಲಿ ಕೇಂದ್ರ ಸಶಸ್ತ್ರ ಅರೆಸೇನಾ ಪಡೆ (ಸಿಎಪಿಎಫ್), ಜಮ್ಮು ಕಾಶ್ಮೀರ ಸಶಸ್ತ್ರ ಪೊಲೀಸ್ ಮತ್ತು ಜಮ್ಮು ಕಾಶ್ಮೀರ ಪೊಲೀಸರ ಬಹು ಹಂತದ ಪಡೆಗಳು ಇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾಶ್ಮೀರದ ಪ್ರಮುಖ ಅಭ್ಯರ್ಥಿಗಳ ಪೈಕಿ ಬುಧವಾರದಂದು ಸಿಪಿಐ (ಎಂ)ನ ಮೊಹಮ್ಮದ್ ಯೂಸುಫ್ ತರಿಗಾಮಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಗುಲಾಮ್ ಅಹ್ಮದ್ ಮಿರ್, ನ್ಯಾಷನಲ್ ಕಾನ್ಫರೆನ್ಸ್‌ನ ಸಕೀನಾ ಇಟೂ ಮತ್ತು ಪಿಡಿಪಿಯ ಸರ್ತಾಜ್ ಮದ್ನಿ ಮತ್ತು ಅಬ್ದುಲ್ ರೆಹಮಾನ್ ವೀರಿ ಅವರ ಭವಿಷ್ಯ ಇಂದು ನಿರ್ಧಾರವಾಗಲಿದೆ. ಶ್ರೀಗುಫ್ವಾರಾ-ಬಿಜ್‌ಬೆಹರಾದಿಂದ ಸ್ಪರ್ಧಿಸುತ್ತಿರುವ ಪಿಡಿಪಿಯ ಇಲ್ತಿಜಾ ಮುಫ್ತಿ ಮತ್ತು ಪುಲ್ವಾಮಾದಿಂದ ಪಕ್ಷದ ಯುವ ನಾಯಕ ವಹೀದ್ ಪಾರಾ ಕೂಡ ಮೊದಲ ಹಂತದ ಮತದಾನದ ಕಣದಲ್ಲಿದ್ದಾರೆ.

ಮತದಾನ ಸಂಜೆ 6 ಗಂಟೆಗೆ ಮುಕ್ತಾಯಗೊಳ್ಳಲಿದೆ. ಇನ್ನೆರಡು ಹಂತಗಳು ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1 ರಂದು ನಡೆಯುತ್ತಿದ್ದು, ಅಕ್ಟೋಬರ್ 8 ರಂದು ಮತ ಎಣಿಕೆ ನಡೆಯಲಿದೆ.

ವಿಡಿಯೊ ನೋಡಿ: ಗದ್ದರ್ ಪ್ರಥಮ ಪರಿನಿಬ್ಬಾಣ: ಗದ್ದರ್‌ ಜೊತೆಗಿನ ಒಡನಾಟದ ನೆನಪು ಹಂಚಿಕೊಂಡ ಪಿಚ್ಚಳ್ಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...